Public TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos

Archives

  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025

Categories

  • 31 Districts
  • Advertisement
  • Astrology
  • Automobile
  • Ayodhya Ram Mandir
  • Ayodhya Updates
  • Bagalkot
  • BELAKU
  • Belgaum
  • Bellary
  • Bengaluru City
  • Bengaluru Rural
  • Bidar
  • Big Bulletin
  • Bollywood
  • Chamarajanagar
  • Chikkaballapur
  • Chikkamagaluru
  • Chitradurga
  • Cinema
  • Column
  • Corona
  • Court
  • Cricket
  • Crime
  • Dakshina Kannada
  • Davanagere
  • Delhi Election 2025
  • Dharwad
  • Dina Bhavishya
  • Districts
  • Education
  • Election News
  • Entertainment Videos
  • Explainer
  • Fashion
  • Featured
  • Food
  • Gadag
  • Hassan
  • Haveri
  • Health
  • Kalaburagi
  • Karnataka
  • Karnataka Budget 2022
  • Karnataka Budget 2023
  • Karnataka Budget 2024
  • Karnataka Election
  • Karnataka Election 2023
  • Kodagu
  • Kolar
  • Koppal
  • Latest
  • Main Post
  • Mandya
  • Monsoon
  • Most Shared
  • Mysuru
  • National
  • National
  • News Videos
  • Non Veg
  • Other Sports
  • Out of the box
  • Photos
  • Political News
  • Public Hero
  • Raichur
  • Ramanagara
  • Rameshwaram Cafe
  • Sandalwood
  • Shivamogga
  • Smartphones
  • South cinema
  • Special
  • Sports
  • States
  • Stories
  • Tech
  • Telangana
  • Telecom
  • Top Stories
  • Travel
  • Tumakuru
  • TV Shows
  • Udupi
  • Uncategorized
  • Uttara Kannada
  • Veg
  • Videos
  • Vijayapura
  • World
  • Yadgir
  • ಆತ್ಮಹತ್ಯೆ
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Latest

ಹಾಸನಾಂಬಾ ಉತ್ಸವ ವಿಐಪಿ ಸಂಪ್ರದಾಯಕ್ಕೆ ಬ್ರೇಕ್, ಜನಸ್ನೇಹಿ ಉತ್ಸವಕ್ಕೆ ಅಂಕಿತ: ಕೃಷ್ಣ ಬೈರೇಗೌಡ

Public TV
Last updated: October 6, 2025 11:18 pm
Public TV
Share
3 Min Read
Krishna Byre Gowda
SHARE

 – ಅ.9ರಿಂದ 23ರ ವರೆಗೆ ಹಾಸನಾಂಬೆ ಉತ್ಸವ – 25 ಲಕ್ಷ ಭಕ್ತರ ಆಗಮನ ನಿರೀಕ್ಷೆ

ಬೆಂಗಳೂರು: ಅಕ್ಟೋಬರ್ 9ರಿಂದ ಅಕ್ಟೋಬರ್ 23ರವರೆಗೆ ಹಾಸನಂಬೆ ಉತ್ಸವ ನಡೆಯಲಿದೆ. ಹಾಸನಾಂಬಾ ಉತ್ಸವದಲ್ಲಿ (Hassanamba Jatre) ಪ್ರಸ್ತುತ ವರ್ಷದಿಂದ ವಿಐಪಿ ಸಂಪ್ರದಾಯಕ್ಕೆ ಬ್ರೇಕ್ ನೀಡಿ ಜನಸ್ನೇಹಿ ಉತ್ಸವಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ತಿಳಿಸಿದರು.

ವಿಕಾಸಸೌಧದಲ್ಲಿ ಸೋಮವಾರ ಹಾಸನ (Hassan) ಜಿಲ್ಲೆಯ ಶಾಸಕರು ಸಂಸದರು ಹಾಗೂ ಅಧಿಕಾರಿಗಳು ಜೊತೆ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಹಾಸನಾಂಬಾ ಉತ್ಸವದಲ್ಲಿ ವಿಐಪಿ ಸಂಸ್ಕೃತಿಯಿಂದ ಸ್ಥಳೀಯರು ಬೇಸತ್ತಿದ್ದು, ಈ ವರ್ಷದಿಂದ ಈ ಸಂಸ್ಕೃತಿಕ ತಿಲಾಂಜಲಿ ಹಾಡಲಾಗುವುದು. ಅಲ್ಲದೇ ಜನಸ್ನೇಹಿ ಹಾಸನಾಂಬಾ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ವಿಶೇಷ ಪ್ಯಾಕೇಜ್ – ಬೆಂಗಳೂರಿಂದ 2016 ರೂ., ಮೈಸೂರಿಂದ 1250 ರೂ.

hasanamba temple hassan

ಕಳೆದ ವರ್ಷ ಹಾಸನದಲ್ಲಿ ವಿಐಪಿಗಳ ಎಸ್ಕಾರ್ಟ್‌ಗಳದ್ದೇ ಸದ್ದು ಹೆಚ್ಚಾಗಿತ್ತು. ಆದರೆ, ಈ ವರ್ಷ ಇದಕ್ಕೆ ಅವಕಾಶ ನೀಡಲಾಗುವುದಿಲ್ಲ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಮಾಜಿ ಪ್ರಧಾನಿಗಳಿಗೆ ಮಾತ್ರ ಎಸ್ಕಾರ್ಟ್ ವ್ಯವಸ್ಥೆ ನೀಡಲಾಗುವುದುಎಂದು ಮಾಹಿತಿ ನೀಡಿದರು.

ಮುಂದುವರೆದು, ಶಾಸಕರು, ಸಚಿವರು ನ್ಯಾಯಾಧೀಶರು, ಕ್ರೀಡಾಪಟುಗಳು, ಸಿನಿಮಾ ತಾರೆಯರು ಸೇರಿದಂತೆ ಉಳಿದ ಗಣ್ಯ ವ್ಯಕ್ತಿಗಳು ತಾವು ದೇವಾಲಯಕ್ಕೆ ಭೇಟಿ ನೀಡುವ ಬಗ್ಗೆ ಇ-ಮೇಲ್ ಅಥವಾ ಫೋನ್ ಕರೆಗಳ ಮೂಲಕ ಮೊದಲೇ ತಿಳಿಸಬೇಕು. ಮಾಹಿತಿ ನೀಡುವ ಗಣ್ಯವ್ಯಕ್ತಿಗಳನ್ನು ಜಿಲ್ಲಾಡಳಿತ ಏರ್ಪಡಿಸಿರುವ ವಾಹನದಲ್ಲಿ ದೇವಾಲಯಕ್ಕೆ ಕರೆತಂದು ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಗಣ್ಯ ವ್ಯಕ್ತಿಗಳಿಗೆ ತಮ್ಮ ಕುಟುಂಬದ ನಾಲ್ಕು ಜನ ಸದಸ್ಯರನ್ನು ಜೊತೆಗೆ ಕರೆತರಲು ಅವಕಾಶ ನೀಡಲಾಗಿದೆ. ಆದರೆ, ಯಾವುದೇ ಖಾಸಗಿ ವಾಹನಗಳ ಮೂಲಕ ದೇವಾಲಯಕ್ಕೆ ಆಗಮಿಸಲು ಅವಕಾಶ ಇಲ್ಲ ಎಂದು ಅವರು ತಿಳಿಸಿದರು.

hassanamba

ಇದಲ್ಲದೆ, 1000 ರೂ. ಹಾಗೂ 300 ರೂ. ಬೆಲೆಯ ಪಾಸ್‌ಗಳನ್ನೂ ವಿತರಿಸಲಾಗುವುದು. ಪಾಸ್ ಪಡೆದವರಿಗೆ ದೇವರ ದರ್ಶನದ ಜೊತೆಗೆ ಪ್ರಸಾದವನ್ನೂ ನೀಡಲಾಗುವುದು. ಒಂದು ಪಾಸ್‌ಗೆ ಒಬ್ಬರಿಗೆ ಮಾತ್ರ ಅವಕಾಶ ಇರಲಿದೆ. ಎಸ್ಕಾರ್ಟ್‌ನಲ್ಲಿ ಆಗಮಿಸುವವರಿಗೆ ಬೆಳಗ್ಗೆ 10:30 ರಿಂದ 12:30ರ ವರೆಗೆ ಅವಕಾಶ ಇರಲಿದೆ. ಪಾಸ್ ಪಡೆದವರಿಗೆ ಬೆಳಗ್ಗೆ 7:30 ರಿಂದ 10ರ ನಡುವೆ ಪ್ರವೇಶ ನೀಡಲಾಗುವುದು. ಒಂದು ದಿನಕ್ಕೆ 1000 ಪಾಸ್‌ಗಳನ್ನು ಮಾತ್ರ ವಿತರಿಸಲಿದ್ದು, ಸಮಯ ಮೀರಿ ಬಂದವರಿಗೆ ಅವಕಾಶ ಇರುವುದಿಲ್ಲ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ದೇವಾಲಯಕ್ಕೆ ಭೇಟಿ ನೀಡುವವರ ಸಂಖ್ಯೆ ಗಣನೀಯ ಹೆಚ್ಚಳ:
ಹಾಸನಾಂಬಾ ದೇವಾಲಯಕ್ಕೆ 2021 ರಲ್ಲಿ 1ಲಕ್ಷ ಜನ ಮಾತ್ರ ಭೇಟಿ ನೀಡಿದ್ದರು. ಆದರೆ, 2022 ರಲ್ಲಿ 3 ಲಕ್ಷ ಹಾಗೂ 2023 ರಲ್ಲಿ 6 ಲಕ್ಷ ಜನ ಭೇಟಿ ನೀಡಿದ್ದಾರೆ.

ಕಳೆದ ವರ್ಷ 20 ಲಕ್ಷ ಜನ ಭೇಟಿ ನೀಡಿದ್ದಾರೆ. ಹೀಗಾಗಿ ಈ ವರ್ಷ 25ಲಕ್ಷ ಜನ ದೇವಿಯ ದರ್ಶನಕ್ಕೆ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಎಲ್ಲಾ ಇಲಾಖೆಯನ್ನೂ ಒಳಗೊಂಡು ಸುಗಮ ತಯಾರಿಗೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದೆ.

ಈ ಬಾರಿ ಇರಲಿದೆ ಸಾಂಸ್ಕೃತಿಕ ಕಾರ್ಯಕ್ರಮ
ಅಕ್ಟೋಬರ್ 9 ರಿಂದಲೇ ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ಇರಲಿವೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಮೂರು ವೇದಿಕೆ ಸಿದ್ಧಪಡಿಸಲಾಗಿದ್ದು, ಒಂದು ವೇದಿಕೆಯಲ್ಲಿ ಜಾನಪದ ಜಾತ್ರೆ ನಡೆಸಲಾಗುವುದು. ಈ ವೇದಿಕೆಯಲ್ಲಿ ನಾಡಿನ ನಾನಾ ಭಾಗದ ಜಾನಪದ ಕಲಾವಿದರು ಆಗಮಿಸಿ ನೃತ್ಯ ಪ್ರದರ್ಶಿಸಲಿದ್ದಾರೆ. ಜಾನಪದವನ್ನು ಉಳಿಸಿ ಬೆಳೆಸುವ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಯೋಜನೆ ಹಮ್ಮಿಕೊಳ್ಳಲಾಗಿದೆ. ಉಳಿದ ಎರಡು ವೇದಿಕೆಯಲ್ಲಿ ಸ್ಥಳೀಯ ಯುವಕ-ಯುವತಿಯರು ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಭಕ್ತಾದಿಗಳಿಗೆ ಈ ವರ್ಷ ನೂತನ ಅನುಭವವಾಗಲಿದೆ.

ಇದರ ಜೊತೆಗೆ ಹೆಲಿ ಟೂರಿಸಂ, ಫಲಪುಷ್ಪ ಪ್ರದರ್ಶನವೂ ಇರಲಿದೆ. ಸ್ತ್ರಿ ಶಕ್ತಿ ಸಂಘಗಳಿಂದ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನೂ ಏರ್ಪಡಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ಜೊತೆಗೆ ಮಾತನಾಡಿದ್ದು ಹಾಸನಾಂಭ ಟೂರ್ ಪ್ಯಾಕೇಜ್ ಸಹ ಆರಂಭಿಸುವ ಯೋಚನೆ ಇದೆ ಎಂದರು.

ಭದ್ರತೆಗೆ ಒತ್ತು:
ಜನ ಸಂದಣಿ ನಿಯತ್ರಿಸುವ ಸಲುವಾಗಿ 2000 ಪೊಲೀಸರನ್ನು ನೇಮಕ ಮಾಡಲಾಗಿದೆ. 280ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಸಲಾಗಿದೆ. ಡ್ರೋನ್ ಕ್ಯಾಮೆರಾ ಸಹ ಬಳಕೆಯಲ್ಲಿದ್ದು, ಎಲ್ಲವಕ್ಕೂ ಎಐ ತಂತ್ರಜ್ಞಾನ ಬಳಸಲಾಗಿದೆ. ಸ್ಥಳದಲ್ಲೇ ಕಂಟ್ರೋಲ್ ರೂಂ ನಿರ್ಮಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯಲು ಆಸ್ಪದ ನೀಡಲಾಗುವುದಿಲ್ಲ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಅ.9 ರಿಂದ 23ರವರೆಗೆ ಹಾಸನಾಂಬೆ ಜಾತ್ರೆ – ಈ ಬಾರಿ ವಿಐಪಿ, ವಿವಿಐಪಿ ಪಾಸ್ ಇರಲ್ಲ

TAGGED:hassanHassanamba Jatrekrishna byre gowda
Share This Article
Facebook Whatsapp Whatsapp Telegram

Cinema news

Bhageera Movie
ಒಂದು ವರ್ಷದ ಸಂಭ್ರಮದಲ್ಲಿ ಬಘೀರ
Cinema Latest Sandalwood Top Stories
Shilpa Shetty
ಶಿಲ್ಪಾ ಶೆಟ್ಟಿ ತಾಯಿ ದಿಢೀರ್ ಆಸ್ಪತ್ರೆಗೆ ದಾಖಲು – ಅಂಥದ್ದೇನಾಯ್ತು?
Cinema Bollywood Latest Top Stories
Love and war 1
ಟಾಕ್ಸಿಕ್ ಕಾರಣದಿಂದ ಬನ್ಸಾಲಿ ನಿರ್ದೇಶನದ ಸಿನಿಮಾ ರಿಲೀಸ್ ಡೇಟ್ ಮುಂದಕ್ಕೆ
Cinema Bollywood Latest Top Stories
Rishab Shetty Kantara Chapter 1 Rukmini Vasanth
ಕಾಂತಾರ ಹೊಸ ದಾಖಲೆ – ಕರ್ನಾಟಕದಲ್ಲೇ 250 ಕೋಟಿ ಗಡಿ ದಾಟಿದ ಕಲೆಕ್ಷನ್‌!
Cinema Latest Sandalwood Top Stories

You Might Also Like

DK Shivakumar 5
Bengaluru City

ಸೋನಿಯಾ ಗಾಂಧಿ‌ ಹುದ್ದೆಯನ್ನೇ ಬಿಟ್ಟುಕೊಟ್ಟರು – ನವೆಂಬರ್‌ ಕ್ರಾಂತಿ ಹೊತ್ತಲ್ಲೇ ಡಿಕೆಶಿ ತ್ಯಾಗದ ಮಾತು

Public TV
By Public TV
4 minutes ago
siddaramaiah basava metro
Districts

ರಾಜ್ಯದ ವಿಶ್ವವಿದ್ಯಾಲಯಗಳಿಗೆ ಬಸವಣ್ಣ, ನಾಲ್ವಡಿ, ದೇವರಾಜ ಅರಸು ಹೆಸರಿಡಲು ಸರ್ಕಾರ ಚಿಂತನೆ

Public TV
By Public TV
39 minutes ago
Hindu activist suhas shetty brutally murdered in Bajpe Mangaluru
Districts

ರೌಡಿಶೀಟರ್‌ ಸುಹಾಸ್ ಶೆಟ್ಟಿ ಹತ್ಯೆ ಕೇಸ್; 11 ಆರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌

Public TV
By Public TV
49 minutes ago
Priyank Kharge
Kalaburagi

ಆರ್‌ಎಸ್‌ಎಸ್‌ನವರು ಬಡ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡ್ತಿದ್ದಾರೆ: ಪ್ರಿಯಾಂಕ್ ಖರ್ಗೆ

Public TV
By Public TV
2 hours ago
DK Shivakumar 11
Bengaluru City

`ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ’ – ಶಾಸಕನ ಮಗನಿಗೆ ತನ್ನದೇ ಹೆಸರಿಟ್ಟು ನಾಮಕರಣ ನೆರವೇರಿಸಿದ ಡಿಕೆಶಿ

Public TV
By Public TV
3 hours ago
Mandya Madrasa
Mandya

ಶ್ರೀರಂಗಪಟ್ಟಣದ ಪುರಾತತ್ವ ಇಲಾಖೆಯ ಜಾಮೀಯಾ ಮಸೀದಿಯಲ್ಲಿ ಮದರಸ; ಕ್ರಮಕ್ಕೆ ಬಜರಂಗದಳ ಆಗ್ರಹ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
Welcome Back!

Sign in to your account

Username or Email Address
Password

Lost your password?