Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಹಾಡಹಗಲೇ ವ್ಯಕ್ತಿಯ ಬರ್ಬರ ಹತ್ಯೆ – ಸಹೋದರಿ ಪ್ರೀತಿಸಿ ಮದುವೆಯಾಗಿದ್ದಕ್ಕೆ ದ್ವೇಷ

Public TV
Last updated: April 11, 2023 10:50 pm
Public TV
Share
3 Min Read
MURDER copy
SHARE

ರಾಮನಗರ: ಪ್ರೀತಿಸಿ ಮದುವೆಯಾದರು ಎಂಬ ಒಂದೇ ಕಾರಣಕ್ಕೆ ಬಾವನನ್ನೇ ಬಾಮೈದ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆಗೈದಿರುವ (Murder) ಘಟನೆ ರಾಮನಗರ (Ramanagara) ತಾಲೂಕಿನ ಕೆಜಿ ಹೊಸಹಳ್ಳಿ (K.G.Hosahalli) ಗ್ರಾಮದಲ್ಲಿ ನಡೆದಿದೆ.

ಕೆಜಿ ಹೊಸಹಳ್ಳಿ ಗ್ರಾಮದ ಅಶ್ವತ್ಥ್ ಗೌಡ(28) ಕೊಲೆಯಾದ ದುರ್ದೈವಿ. ಕೆಜಿ ಹೊಸಳ್ಳಿ ಗ್ರಾಮದ ಅಶ್ವತ್ಥ್ ಗೌಡ ಹಾಗೂ ಚನ್ನಪಟ್ಟಣ (Channapatna) ನಗರದ ಮಹದೇಶ್ವರ ಬಡಾವಣೆಯ ಸಹನಾ, ದೂರದ ಸಂಬಂಧಿಗಳು. ಅಲ್ಲದೇ ಒಂದೇ ಜಾತಿಯವರಾಗಿದ್ದರು. ಹೀಗಾಗಿ ಕಳೆದ ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯ (Love) ವಿಚಾರ ಎರಡೂ ಕುಟುಂಬದವರಿಗೂ ಗೊತ್ತಿತ್ತು. ವಿರೋಧದ ನಡುವೆ ಕಳೆದ ಎರಡು ತಿಂಗಳ ಹಿಂದೆ ಅಶ್ವತ್ಥ್ ಹಾಗೂ ಸಹನಾ ಧರ್ಮಸ್ಥಳದಲ್ಲಿ ಮದುವೆಯಾಗಿದ್ದರು. ನಂತರ ಇಬ್ಬರೂ ಕೂಡ ಕೆಜಿ ಹೊಸಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದರು. ಇದನ್ನೂ ಓದಿ: 4 ವರ್ಷದ ಪ್ರೀತಿಗೆ ಎಳ್ಳುನೀರು- ರೊಚ್ಚಿಗೆದ್ದು ಅಪ್ರಾಪ್ತ ಪ್ರಿಯತಮೆಗೆ ಚಾಕು ಇರಿದ! 

MURDER

ಮಂಗಳವಾರ ರಾಮನಗರದಲ್ಲಿ ಬೀಗರ ಔತಣಕೂಟಕ್ಕೆ ಹೋಗಿ ವಾಪಸ್ ಬರುವ ವೇಳೆ ಕೆಜಿ ಹೊಸಹಳ್ಳಿ ಗ್ರಾಮದಲ್ಲಿ ಅಶ್ವತ್ಥ್ ಮನೆಯಿಂದ ಕೂಗಳತೆ ದೂರದಲ್ಲಿ ಹಿಪ್ಪುನೇರಳೆ ಗಿಡಗಳ ಮಧ್ಯದಲ್ಲಿ ಹೊಂಚು ಹಾಕಿ ಕುಳಿತಿದ್ದ ಸಹನಾಳ ಸಹೋದರ ಭರತ್ ಮತ್ತು ಗ್ಯಾಂಗ್ ಏಕಾಏಕಿ ದಾಳಿ (Attack) ನಡೆಸಿದೆ. ರಾಮನಗರದಿಂದ ಬರುವುದನ್ನೇ ಕಾದು ಬೈಕ್‌ನಲ್ಲಿ ಹಿಂದಿನಿಂದ ಬಂದು ಮೊದಲಿಗೆ ಸಹನಾಳನ್ನು ತಳ್ಳಿದ್ದಾರೆ. ಇದರಿಂದಾಗಿ ಆಕೆ ಕೆಳಗೆ ಬಿದ್ದಿದ್ದಾಳೆ. ನಂತರ ಅಶ್ವತ್ಥ್ ಮೇಲೆ ದಾಳಿ ನಡೆಸಲು ಮುಂದಾಗಿದ್ದಾರೆ.

ಸ್ವಲ್ಪ ದೂರಕ್ಕೆ ಅಶ್ವತ್ಥ್ ಓಡಿ ಹೋಗಿದ್ದಾನೆ. ನೆಲಕ್ಕೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ಕೊಚ್ಚಿದ್ದಾರೆ. ಅನಂತರ ಅಲ್ಲೇ ಇದ್ದ ಸೈಜ್‌ಗಲ್ಲನ್ನು ಆತನ ತಲೆಮೇಲೆ ಎತ್ತಿ ಹಾಕಿದ್ದಾರೆ. ಹೀಗಾಗಿ ಅಶ್ವತ್ಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಲ್ಲದೇ ಬಿಡಿಸಲು ಹೋದ ಸಹನಾ ಮೇಲೂ ಕೂಡ ದಾಳಿ ಮಾಡಿದ್ದಾರೆ. ಗ್ರಾಮಸ್ಥರು ಬರುತ್ತಿದ್ದಂತೆ ಎರಡು ಬೈಕ್‌ಗಳಲ್ಲಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಬೀದಿ ನಾಯಿಗಳ ದಾಳಿ – ಅಪ್ರಾಪ್ತ ಬಾಲಕ ಮೃತ್ಯು 

CRIME 1

ಆರೋಪಿ ಭರತ್ ಸಹನಾಳಿಗೆ ಮಲತಾಯಿ ಮಗ. ಭರತ್‌ನ ತಾಯಿ ತೀರಿ ಹೋದ ನಂತರ ಆತನ ತಂದೆ ಸಹನಾಳ ತಾಯಿಯನ್ನು ಮದುವೆಯಾಗಿದ್ದರು. ಇವರು ಸಾಕಷ್ಟು ಸಿರಿವಂತರಾಗಿದ್ದರು. ಚನ್ನಪಟ್ಟಣದಲ್ಲಿ ಕಾರು ವಾಷಿಂಗ್ ಸೆಂಟರ್ ಸಹಾ ಇದೆ. ಆದರೆ ಭರತ್‌ಗೆ ಮೊದಲಿನಿಂದಲೂ ಸಹನಾಳ ಮೇಲೆ ದ್ವೇಷವಿತ್ತು. ಸಹನಾ ಮತ್ತು ಅಶ್ವತ್ಥ್ ಮದುವೆಯಾಗಲು ಕೂಡ ಭರತ್‌ನ ವಿರೋಧವಿತ್ತು. ಹೀಗಾಗಿ ಚನ್ನಪಟ್ಟಣ ಠಾಣೆಯಲ್ಲಿ ದೂರು ಸಹಾ ನೀಡಿದ್ದ. ಪೊಲೀಸರ ಮುಂದೆ ಹೇಳಿಕೆ ಸಹಾ ಕೊಟ್ಟಿದ್ದರು. ರಾಜಿ ಪಂಚಾಯತಿ ಕೂಡ ನಡೆದಿತ್ತು.

ಸಹನಾ ನನಗೆ ನಿಮ್ಮ ಆಸ್ತಿ ಬೇಡವೆಂದು ಬರೆದುಕೊಟ್ಟಿದ್ದಳು. ಆದರೂ ಸಹಾ ಆಸ್ತಿ (Property) ಎಲ್ಲಿ ಕೈತಪ್ಪುತ್ತದೆಯೋ ಎಂದು ಪ್ಲಾನ್ ಮಾಡಿದ ಭರತ್ ತನ್ನ ಜೊತೆ ಇಬ್ಬರನ್ನು ಕರೆದುಕೊಂಡು ಬಂದು ಅಶ್ವತ್ಥ್ ಮೇಲೆ ದಾಳಿ ಮಾಡಿ ಕೊಲೆಗೈದಿದ್ದಾನೆ. ಅಶ್ವತ್ಥ್‌ನ ಚಲನವಲನಗಳ ಬಗ್ಗೆ ಕಳೆದ ಹಲವು ದಿನಗಳಿಂದ ಮಾಹಿತಿ ಪಡೆದಿದ್ದಾನೆ. ಅಲ್ಲದೇ ಮಂಗಳವಾರ ರಾಮನಗರಕ್ಕೆ ಹೋಗಿರುವುದು ಮತ್ತು ಬರುವ ಸಮಯವನ್ನು ತಿಳಿದುಕೊಂಡು ಅಶ್ವತ್ಥ್‌ನ ಮನೆಯ ಸಮೀಪವೇ ಹತ್ಯೆ ಮಾಡಿದ್ದಾನೆ. ಹತ್ಯೆಗೂ ಕೆಲವೇ ದೂರದಲ್ಲಿ ಅಶ್ವತ್ಥ್‌ನ ತಂದೆ ತಾಯಿ ಸಹಾ ಬರುತ್ತಿದ್ದರು. ಒಟ್ಟಿಗೆ ಬಂದಿದ್ದರೆ ಅಟ್ಯಾಕ್ ಮಾಡುವುದು ಕಷ್ಟವಾಗುತ್ತಿತ್ತು. ಆದರೆ ಇಬ್ಬರು ಎನ್‌ಫೀಲ್ಡ್ ಬೈಕ್‌ನಲ್ಲಿ ಬರುತ್ತಿರುವುದನ್ನು ಮಾಹಿತಿ ಪಡೆದು ಏಕಾಏಕಿ ದಾಳಿ ನಡೆಸಿ ಕೊಲೆಗೈದಿದ್ದಾನೆ. ಇದನ್ನೂ ಓದಿ: ಸ್ಕ್ರೂಡ್ರೈವರ್‌ನಲ್ಲಿ ಪತ್ನಿಯ ಕತ್ತು, ಎದೆಗೆ ಚುಚ್ಚಿ ಕೊಲೆಗೆ ಮುಂದಾದ ಪತಿ! 

CRIME

ಕೊಲೆ ವಿಚಾರ ತಿಳಿಯುತ್ತಿದ್ದಂತೆ ಇಡೀ ಗ್ರಾಮದ ಜನರೇ ಸ್ಥಳದಲ್ಲಿ ನೆರೆದಿದ್ದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಆರೋಪಿಗಳಿಗೆ ಸಹಾಯ ಮಾಡಿದವರನ್ನು ಸ್ಥಳಕ್ಕೆ ಕರೆಸಿ ಎಂದು ಮೃತದೇಹವನ್ನು ಎತ್ತಲು ಬಿಡದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸಮಾಧಾನ ಪಡಿಸಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ದಾಳಿಯಲ್ಲಿ ಗಾಯಗೊಂಡಿರುವ ಸಹನಾ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ (Distrcit Hospital) ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ನಂತರ ಕೊಲೆ ಮಾಡಿದ ಭರತ್ ಸೇರಿ ಮೂವರು ಆರೋಪಿಗಳನ್ನು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ. ಒಟ್ಟಾರೆಯಾಗಿ ಸಹೋದರಿ ಪ್ರೀತಿಸಿ ಮದುವೆಯಾದಳು. ಆಸ್ತಿ ನನಗೆ ಸಿಗುವುದಿಲ್ಲ ಎಂಬ ಕಾರಣಕ್ಕೆ ತನ್ನ ಬಾವನನ್ನೇ ಭೀಕರವಾಗಿ ಹತ್ಯೆ ಮಾಡಿ ತಂಗಿಯ ಬಾಳನ್ನು ಕತ್ತಲೆಗೆ ನೂಕಿದ್ದಾನೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಆರೋಪ- IAS ಅಧಿಕಾರಿ ವಿರುದ್ಧ ಪತ್ನಿಯಿಂದ ದೂರು

TAGGED:lovemarriageMurderpropertyramanagaraಆಸ್ತಿಕೊಲೆಪ್ರೇಮರಾಮನಗರವಿವಾಹ
Share This Article
Facebook Whatsapp Whatsapp Telegram

You Might Also Like

Sruthi Hariharan Doora Theera Yaana
Cinema

‘ದೂರ ತೀರ ಯಾನ’ ಚಿತ್ರದಲ್ಲಿ ಶ್ರುತಿ ಹರಿಹರನ್ ಗೆಸ್ಟ್

Public TV
By Public TV
3 minutes ago
International Space Station 2
Latest

ಡಾಕಿಂಗ್‌ ನಂತರದ ಪ್ರಕ್ರಿಯೆ ಶುರು – ಸಂಜೆ 6 ಗಂಟೆ ವೇಳೆಗೆ ಬಾಹ್ಯಾಕಾಶ ನಿಲ್ದಾಣದೊಳಕ್ಕೆ ಅಧಿಕೃತ ಎಂಟ್ರಿ

Public TV
By Public TV
36 minutes ago
Chinnaswamy Stampede IPS Officer Dayanand
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಐಪಿಎಸ್ ಅಧಿಕಾರಿ ದಯಾನಂದ್ ವಿಚಾರಣೆಗೆ ಹಾಜರು

Public TV
By Public TV
40 minutes ago
black box 2
Latest

Ahmedabad Plane Crash | ಬ್ಲ್ಯಾಕ್‌ ಬಾಕ್ಸ್ ಡೌನ್‌ಲೋಡ್ ಪ್ರಕ್ರಿಯೆ ಪೂರ್ಣ, ವಿಶ್ಲೇಷಣೆ ಶುರು – ವಿಮಾನಯಾನ ಸಚಿವಾಲಯ

Public TV
By Public TV
42 minutes ago
mangaluru man killed his mother
Crime

ಮಂಗಳೂರು| ಹೆತ್ತ ತಾಯಿಯನ್ನೇ ಕೊಲೆಗೈದು ಸುಟ್ಟು ಹಾಕಿದ ಪಾಪಿ ಮಗ

Public TV
By Public TV
57 minutes ago
nvidia
Latest

ಮೈಕ್ರೋಸಾಫ್ಟ್‌ ಹಿಂದಿಕ್ಕಿ ವಿಶ್ವದ ಮೌಲ್ಯಯುತ ಕಂಪನಿಯಾದ ಎನ್‌ವಿಡಿಯಾ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?