Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಂಡನ್‍ನಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣಗೆ ಭುಜದ ಶಸ್ತ್ರ ಚಿಕಿತ್ಸೆ ಯಶಸ್ವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲಂಡನ್‍ನಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣಗೆ ಭುಜದ ಶಸ್ತ್ರ ಚಿಕಿತ್ಸೆ ಯಶಸ್ವಿ

Bengaluru City

ಲಂಡನ್‍ನಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣಗೆ ಭುಜದ ಶಸ್ತ್ರ ಚಿಕಿತ್ಸೆ ಯಶಸ್ವಿ

Public TV
Last updated: July 11, 2019 10:51 pm
Public TV
Share
3 Min Read
shivaraj kumar still
SHARE

– ಶಿವಸೈನ್ಯ ಬಳಗದಿಂದ ಶಿವಣ್ಣನ ಹುಟ್ಟುಹಬ್ಬ ಆಚರಣೆ

ಬೆಂಗಳೂರು: ಲಂಡನ್‍ನಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಭುಜದ ನೋವಿನ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.

ಶಿವಣ್ಣ ಅವರು ಕಳೆದ ಆರು ತಿಂಗಳಿನಿಂದ ಭುಜದ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಕೆಲ ದಿನಗಳ ಹಿಂದೆಯಷ್ಟೇ ಶಸ್ತ್ರ ಚಿಕಿತ್ಸೆಗಾಗಿ ಲಂಡನ್‍ಗೆ ತೆರಳಿದ್ದರು. ಹುಟ್ಟುಹಬ್ಬದ ಮುನ್ನಾದಿನವೇ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಶಿವಣ್ಣ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿ ನಿವೇದಿತಾ ಕೂಡ ಲಂಡನ್‍ಗೆ ತೆರಳಿದ್ದಾರೆ. ಪುನೀತ್ ರಾಜಕುಮಾರ್ ಅವರು ಅಣ್ಣನ ಆರೋಗ್ಯ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

SHIVARAJKUMAR KCC

ಡಾ.ಶಿವರಾಜ್ ಕುಮಾರ್ ಆರೋಗ್ಯವಾಗಿದ್ದಾರೆ. ವೈದ್ಯರು ಒಂದು ತಿಂಗಳು ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ಆಪ್ತ ಹಾಗೂ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಟ್ವೀಟ್ ಮಾಡಿದ್ದಾರೆ.

ಜುಲೈ 12 ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಜನ್ಮದಿನ. ಶಿವಣ್ಣನ ಹುಟ್ಟುಹಬ್ಬಕ್ಕೆ ಅಭಿಮಾನಿಗಳು, ಕುಟುಂಬದವರು ಮತ್ತು ಹೆಸರಾಂತ ನಿರ್ದೇಶಕರು ನಿರ್ಮಾಪಕರು ಆಪ್ತರೆಲ್ಲರೂ ಸಜ್ಜಾಗಿದ್ದು, ವಿಶೇಷವಾಗಿ ಶಿವರಾಜ್ ಕುಮಾರ್ ಅವರ ಅಭಿಮಾನದ ಹೆಮ್ಮೆಯ ತಂಡ ಶಿವಸೈನ್ಯದ ಬಳಗ ಹಲವಾರು ಮಹೋನ್ನತ ಕಾರ್ಯಗಳ ಮೂಲಕ ಜನ್ಮದಿನ ಆಚರಿಸಲು ಮುಂದಾಗುತ್ತಿದೆ.

shivarajkumar 1

ಹುಟ್ಟುಹಬ್ಬದಂದು 11 ಗಂಟೆಗೆ ಅಣ್ಣಾವ್ರ ಪುಣ್ಯ ಭೂಮಿಯಲ್ಲಿ ರಾಘವೇಂದ್ರ ರಾಜ್ ಕುಮಾರ್ ಅವರು ಕೇಕ್ ಕತ್ತರಿಸಿ, ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ಆಚರಣೆಗೆ ಮೆರಗು ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಶಿವಣ್ಣ ಅವರಿಗೋಸ್ಕರ ಡೆಡಿಕೇಟ್ ಮಾಡಲು ಶಿವಸೈನ್ಯದವರು ಸಿದ್ಧ ಮಾಡಿರುವ ಮಹಾನ್ ಕಲಾವಿದ ಹಾಡನ್ನು, ನಿರ್ಮಾಪಕರು ಮತ್ತು ಅಣ್ಣಾವ್ರ ಕುಟುಂಬದ ಆಪ್ತರಾದ ಕೆ.ಪಿ.ಶ್ರೀಕಾಂತ್ ಅವರು ಬಿಡುಗಡೆಗೊಳಿಸಲಿದ್ದಾರೆ.

ಶಿವಣ್ಣ ಮತ್ತು ಪುನೀತ್ ರಾಜ್ ಕುಮಾರ್ ಅವರು ಇಬ್ಬರೂ ಸಹ ಲಂಡನ್‍ನಲ್ಲಿ ಇದ್ದಾರೆ. ಹೀಗಾಗಿ ಶುಕ್ರವಾರ ಮಧ್ಯಾಹ್ನ 1:00 ಕ್ಕೆ ಅಭಿಮಾನಿಗಳೊಂದಿಗೆ ಮಾತನಾಡಲು ಅಣ್ಣಾವ್ರ ಪುಣ್ಯಭೂಮಿಯಲ್ಲಿ ಎಲ್‍ಇಡಿ ಸ್ಕ್ರೀನ್ ಮುಖಾಂತರ ವಿಡಿಯೋ ಮೂಲಕ ಬರಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಅನ್ನದಾನ ಸಹ ಏರ್ಪಡಿಸಲಾಗಿದ್ದು, ಸಂತೃಪ್ತಿಯ ಹುಟ್ಟಹಬ್ಬಕ್ಕೆ ಸಾಕ್ಷಿಯಾಗಲಿದೆ.

tmk shivarajkumar 3

ಪಬ್ಲಿಕ್ ಟಿವಿ ಜೊತೆ ಜೂನ್ 24ರಂದು ಮಾತನಾಡಿದ್ದ ಶಿವರಾಜ್‍ಕುಮಾರ್ ಅವರು, ಹುಟ್ಟುಹಬ್ಬ ದಿನ ನನ್ನ ಶಸ್ತ್ರಚಿಕಿತ್ಸೆ ಇದೆ. ನನಗೆ ಭುಜದ ನೋವು ಆಗಾಗ ಕಾಣಿಸುತ್ತಿದೆ. ಹಾಗಾಗಿ ನಾನು ಶಸ್ತ್ರಚಿಕಿತ್ಸೆಗೆ ಹೋಗಬೇಕಾಗುತ್ತೆ. ಹುಟ್ಟುಹಬ್ಬ ನಂತರ ಹೋಗೋಣ ಎಂದುಕೊಂಡೆ. ಆದರೆ ನನಗೆ ಬೇರೆ ದಿನ ಅಪಾಯಿಂಟ್‍ಮೆಂಟ್ ಸಿಗಲಿಲ್ಲ. ಇದನ್ನು ಮಿಸ್ ಮಾಡಿದ್ರೆ ಆಗಸ್ಟ್ ವರೆಗೂ ಕಾಯಬೇಕು. ಹೀಗಾಗಿ ನಾನು ಲಂಡನ್‍ಗೆ ಹೋಗಲೇಬೇಕು ಎಂದಿದ್ದರು.

ಆಗಸ್ಟ್ ವರೆಗೂ ಕಾಯಬೇಕೆಂದರೆ ನೋವು ಜಾಸ್ತಿ ಆಗುತ್ತೆ. ಆಗ ನನ್ನ ಸಮಸ್ಯೆ ಜಾಸ್ತಿ ಆಗುತ್ತದೆ. ಅಭಿಮಾನಿಗಳಿಗೆ ಈ ಬಗ್ಗೆ ಗೊತ್ತು. ಅವರು ಕೂಡ ಆರೋಗ್ಯ ಮುಖ್ಯ ಹೋಗಿ ಬನ್ನಿ ಎಂದು ಹೇಳಿದ್ದಾರೆ. ನಾನು ಕೂಡ ನನ್ನ ಹುಟ್ಟುಹಬ್ಬವನ್ನು ಮಿಸ್ ಮಾಡಿಕೊಳ್ಳುತ್ತೇನೆ. ಏಕೆಂದರೆ ಅವರು ನನ್ನ ಹುಟ್ಟುಹಬ್ಬವನ್ನು ಹೇಗೆ ಸಂಭ್ರಮದಿಂದ ಆಚರಿಸುತ್ತಾರೋ, ನನಗೂ ಹಾಗೇ ಅವರ ಹುಟ್ಟುಹಬ್ಬ ಆಚರಿಸುವುದು ಸಂಭ್ರಮನೇ. ಅವರು ಮಿಸ್ ಮಾಡಿಕೊಂಡರೆ ನಾನು ಡಬಲ್ ಮಿಸ್ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದರು.

shivaraj kumar

ನನ್ನ ಹುಟ್ಟುಹಬ್ಬಕ್ಕೆ ಸ್ವಲ್ಪ ರೇಗಾಟ, ಪ್ರೀತಿ, ಊಟ ಇರುತ್ತೆ. ಎಲ್ಲರೂ ಹಾಗೂ ಚಿತ್ರರಂಗದ ಸದಸ್ಯರು ಬಂದು ಶುಭಾಶಯ ತಿಳಿಸುತ್ತಾರೆ. ನಾನು ಇಲ್ಲಿ ಇಲ್ಲ ಎಂದರು ಅಭಿಮಾನಿಗಳು ಹುಟ್ಟುಹಬ್ಬವನ್ನು ಆಚರಿಸುತ್ತಾರೆ. ಹಾಗಾಗಿ ನಾನು ಲಂಡನ್‍ನಿಂದ ಹಿಂತಿರುಗಿ ಬಂದ ನಂತರ ಒಂದು ಗೆಟ್- ಟು-ಗೆದರ್ ಮಾಡುತ್ತೇನೆ ಎಂದು ನಟ ಶಿವರಾಜ್‍ಕುಮಾರ್ ತಿಳಿಸಿದ್ದರು.

ನನಗೆ ಭುಜದ ನೋವಿದೆ. ನನಗೆ ಚಿಕಿತ್ಸೆ ನೀಡಿದ್ದ ವೈದ್ಯರೇ ಶಾರೂಕ್ ಖಾನ್ ಹಾಗೂ ಎಸ್. ಎಂ ಕೃಷ್ಣ ಅವರಿಗೂ ಚಿಕಿತ್ಸೆ ನೀಡುತ್ತಿದ್ದಾರೆ. ಸರ್ಜರಿ ಮಾಡಿದ ಬಳಿಕ ನಾಲ್ಕು ತಿಂಗಳು ಆಯಕ್ಷನ್ ಸೀನ್ ಮಾಡಬಾರದು. ನಾಲ್ಕು ತಿಂಗಳ ಮೇಲೆಯೇ ಆ್ಯಕ್ಷನ್ ಸೀನ್ ಮಾಡಲಿದ್ದೇನೆ. ಚಿಕ್ಕ ಪುಟ್ಟ ಆ್ಯಕ್ಷನ್ ಸೀನ್ ಮಾಡಬಹುದು. ಬಳಿಕ `ಭಜರಂಗಿ- 2′ ಚಿತ್ರದಲ್ಲಿ ಸಾಕಷ್ಟು ಆಯಕ್ಷನ್ ಸೀನ್ ಇದೆ. ಆ ಚಿತ್ರೀಕರಣದಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಶಿವರಾಜ್‍ಕುಮಾರ್ ಹೇಳಿದ್ದರು.

TAGGED:bengalurubirthdayHatrick HeroPublic TVshiva sainyashivaraj kumarಅಭಿಮಾನಿಗಳುಪಬ್ಲಿಕ್ ಟಿವಿಶಿವರಾಜ್ ಕುಮಾರ್ಶಿವಸೈನ್ಯಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

congress leader
Chikkaballapur

ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಕಾಂಗ್ರೆಸ್ ಮುಖಂಡರ ದರ್ಪ- ರಾಜೀವ್ ಗೌಡ ಬಳಿಕ ಮತ್ತೋರ್ವನ ಗೂಂಡಾಗಿರಿ

Public TV
By Public TV
3 minutes ago
01
Big Bulletin

ಬಿಗ್‌ ಬುಲೆಟಿನ್‌ 06 February 2026 ಭಾಗ- 1

Public TV
By Public TV
17 minutes ago
02 1
Big Bulletin

ಬಿಗ್‌ ಬುಲೆಟಿನ್‌ 06 February 2026 ಭಾಗ- 2

Public TV
By Public TV
20 minutes ago
03 1
Big Bulletin

ಬಿಗ್‌ ಬುಲೆಟಿನ್‌ 06 February 2026 ಭಾಗ- 3

Public TV
By Public TV
22 minutes ago
G.Parameshwar 1
Districts

ಬೇಲೂರು ಠಾಣೆಗೆ ದಿಢೀರ್ ಭೇಟಿ, ಪಾಕ್‌, ಅಫ್ಘಾನ್‌ನಿಂದ ಬಂದವ್ರನ್ನ ಹೇಗೆ ಹಿಡಿತೀರಿ – ಪೊಲೀಸರಿಗೆ ಪರಂ ಪ್ರಶ್ನೆ!

Public TV
By Public TV
39 minutes ago
g parameshwara 2
Chikkamagaluru

5 ವರ್ಷ ಸಿದ್ದರಾಮಯ್ಯ ಯಾಕೆ ಸಿಎಂ ಆಗಿರಬಾರದು: ಪರಮೇಶ್ವರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?