ಹಾವೇರಿ: ಕಚೇರಿ ಒಳಗಡೆ ಹೋಗಿ ಬರುವಷ್ಟರಲ್ಲಿ ಕಾರಿನಲ್ಲಿದ್ದ ಹಣ ಎಗರಿಸಿದ ಚೋರರು ಪರಾರಿಯಾದ ಘಟನೆ ಹಾವೇರಿ ನಗರದ ಹಳೆ ಜಿಲ್ಲಾ ಪಂಚಾಯ್ತಿ ಕಚೇರಿ ಆವರಣದಲ್ಲಿ ನಡೆದಿದೆ.
ಗುತ್ತಿಗೆದಾರ ರಾಜಶೇಖರ್ ಮಾದರ ಎಂಬುವರಿಗೆ ಸೇರಿದ ಕಾರಿನ ಗ್ಲಾಸ್ ಒಡೆದು ಕಳ್ಳತನ ಮಾಡಿರುವ ಕಳ್ಳರು, ಕಾರಿನಲ್ಲಿದ್ದ 80 ಸಾವಿರ ರುಪಾಯಿ ಹಣ ದೋಚಿ ಪರಾರಿಯಾಗಿದ್ದಾರೆ.
ರಾಜಶೇಖರ್ ಬ್ಯಾಂಕ್ ಆಫ್ ಬರೋಡಾದಲ್ಲಿ 2 ಲಕ್ಷ ರೂಪಾಯಿ ಡ್ರಾ ಮಾಡಿಕೊಂಡು ಒಬ್ಬರಿಗೆ 1.20 ಲಕ್ಷ ಇಪ್ಪತ್ತು ಸಾವಿರ ನೀಡಿ ಉಳಿದ ಹಣವನ್ನು ಕಾರಿನಲ್ಲಿ ಇಟ್ಟುಕೊಂಡಿದ್ದರು. ಜಿಲ್ಲಾಪಂಚಾಯಿತ್ ಕಟ್ಟಡಕ್ಕೆ ಆಗಮಿಸಿದ ಬಳಿಕ ಕೆಲಸಕ್ಕೆ ಎಂದು ಒಳ ಪ್ರವೇಶಿಸಿದ್ದಾರೆ.
ಈ ವೇಳೆ ಕೆಮಿಕಲ್ ಬಳಸಿ ಕಾರಿನ ಗ್ಲಾಸ್ ಒಡೆದ ಕಳ್ಳರು ಹಾಡಹಗಲೇ ಹಣ ದೋಚಿ ಪರಾರಿಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಾವೇರಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾವೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ನಗರದಲ್ಲಿರೋ ಸಿಸಿಟಿವಿ ಸರಿಪಡಿಸಬೇಕು. ಇಲ್ಲ ಎಂದರೆ ಈ ರೀತಿಯ ಪ್ರಕರಣಗಳು ಹೆಚ್ಚಾಗುತ್ತವೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.