Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಲಂ ಬೋರ್ಡ್ ಮನೆ ನಿರ್ಮಾಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ – ತಹಶೀಲ್ದಾರ್ ವರದಿಯಲ್ಲಿ ಬಯಲಾಯ್ತು ಕರ್ಮಕಾಂಡ‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸ್ಲಂ ಬೋರ್ಡ್ ಮನೆ ನಿರ್ಮಾಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ – ತಹಶೀಲ್ದಾರ್ ವರದಿಯಲ್ಲಿ ಬಯಲಾಯ್ತು ಕರ್ಮಕಾಂಡ‌

Districts

ಸ್ಲಂ ಬೋರ್ಡ್ ಮನೆ ನಿರ್ಮಾಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ – ತಹಶೀಲ್ದಾರ್ ವರದಿಯಲ್ಲಿ ಬಯಲಾಯ್ತು ಕರ್ಮಕಾಂಡ‌

Public TV
Last updated: June 30, 2025 7:53 pm
Public TV
Share
2 Min Read
Haveri Corruption in slum board house construction
SHARE

ಹಾವೇರಿ: ಕೊಳಗೇರಿ ನಿವಾಸಿಗಳಿಗೆ ಕಳೆದ ಎರಡು ವರ್ಷಗಳಿಂದ ಸ್ಲಂ ಬೋರ್ಡ್‌ನಿಂದ (Slum Board) ಮನೆಗಳನ್ನು ನಿರ್ಮಿಸಲಾಗುತ್ತಿದೆ. ಅದರೆ ಸ್ಲಂ ಬೋರ್ಡ್‌ನ ಅಧಿಕಾರಿಗಳ ಮತ್ತು ಗುತ್ತಿಗೆದಾರ ಹಣದಾಹದಿಂದ ಮನೆಗಳು ಅರ್ಧಕ್ಕೆ ನಿಂತಿದ್ದು, ಫಲಾನುಭವಿಗಳು ಕಣ್ಣೀರು ಹಾಕುತ್ತಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಒಂದು ಸ್ವಂತ ಸೂರು ಇರಬೇಕು ಎನ್ನುವ ಕನಸು ಇರುತ್ತೆ. ಈ ಕನಸು ನನಸು ಮಾಡಲು ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಮುಂದಾಗಿತ್ತು. ಆದರೆ ಅಧಿಕಾರಿಗಳ ಹಣದಾಹದಿಂದ ಆ ಕನಸು ನುಚ್ಚುನೂರಾಗಿದೆ.

Haveri Corruption in slum board house construction 1

ಶಿಗ್ಗಾಂವಿ (Shiggaon) ತಾಲೂಕಿನ ಬಂಕಾಪುರದಲ್ಲಿ (Bankapura) ಹಿಂದೆ ಸ್ಲಂ ಬೋರ್ಡ್‌ನಿಂದ ಮನೆ ಮಂಜುರಾಗಿತ್ತು. ಆದರೆ ಗುತ್ತಿಗೆದಾರ ಅರ್ಧ ಮನೆ ನಿರ್ಮಾಣ ಮಾಡಿ ನಾಪತ್ತೆ ಆಗಿದ್ದಾನೆ. ಹೀಗಾಗಿ ಜನರೇ ಹಣ ಹಾಕಿ ಮನೆ ನಿರ್ಮಾಣ ಮಾಡಿಕೊಳ್ಳಲು ಮುಂದಾಗಿದ್ದಾರೆ. ಸರ್ಕಾರದಿಂದ ಮನೆ ನಿರ್ಮಾಣ ಮಾಡಲು ಪ್ರತಿ ಮನೆಗಳಿಗೆ 7 ಲಕ್ಷದ 20 ಸಾವಿರ ರೂ. ಹಣ ಬಿಡುಗಡೆ ಮಾಡಿದೆ. ಅದರೆ ಸ್ಲಂ ಬೋರ್ಡ್ ಅಧಿಕಾರಿಗಳು ಮತ್ತು ಗುತ್ತಿಗೆದಾರರ 50% ರಷ್ಟು ಜಲ್ಲಿಕಲ್ಲು, ಕಬ್ಬಿಣ ಮತ್ತು ಸಿಮೆಂಟ್ ನೀಡಿ ಕೈತೊಳೆದುಕೊಂಡಿದ್ದಾರೆ. ಇದನ್ನೂ ಓದಿ: ಹುಕ್ಕೇರಿಯಲ್ಲಿ ಗೋರಕ್ಷಕರ ಮೇಲೆ ಹಲ್ಲೆ ಪ್ರಕರಣ – ಶ್ರೀರಾಮಸೇನೆ ಕಾರ್ಯಕರ್ತರ ವಿರುದ್ಧ FIR

ಬಂಕಾಪುರ ಪಟ್ಟಣದಲ್ಲಿಯೇ 27.76 ಕೋಟಿ ರೂ. ವೆಚ್ಚದಲ್ಲಿ 454 ಮನೆಗಳ ಮಂಜೂರು ಮಾಡಲಾಗಿದೆ. ಸರಿಯಾದ ಮೂಲಭೂತ ಸೌಕರ್ಯಗಳ ಕೊರತೆ ದೂರು ನೀಡಿದ ಹಿನ್ನಲೆ ಸವಣೂರು ಉಪವಿಭಾಗಾಧಿಕಾರಿ ನೇತೃತ್ವದಲ್ಲಿ 7 ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಜಿಲ್ಲಾಡಳಿತಕ್ಕೆ ವರದಿಯ ನೀಡಲಾಗಿದೆ. ಮನೆಯ ನಿರ್ಮಾಣಕ್ಕಾಗಿ ಇಟ್ಟಿಗೆ ಸಿಮೆಂಟ್, ಕಬ್ಬಿಣವನ್ನು 50% ಮಾತ್ರ ನೀಡಿದ್ದಾರೆ. ಮನೆ ಕಟ್ಟಿದ ಕಾರ್ಮಿಕರ ಕೂಲಿಯನ್ನೂ ನೀಡಿಲ್ಲ ಎಂದು ಫಲಾನುಭವಿಗಳು ಆಕ್ರೋಶ ಹೊರಹಾಕಿದ್ದಾರೆ. ಕಳಪೆ ಗುಣಮಟ್ಟದ ವಸ್ತುಗಳ ಬಳಕೆ ಮಾಡಿದ್ದರಿಂದ ಮನೆಗಳು ಮಳೆಯಿಂದ ಸೋರುತ್ತಿವೆ. ಮನೆಯಲ್ಲಿದ್ದವರ ಬಂಗಾರ ಮಾರಾಟ ಮಾಡಿ ಮನೆ ಕಟ್ಟಲು ಹಾಕಿದರೂ ಮನೆ ಮುಕ್ತಾಯ ಆಗಿಲ್ಲ ಎಂದು ಜನ ಬೇಸರ ಹೊರಹಾಕಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ 43 ಕೋಟಿ ರೂ. ವೆಚ್ಚದಲ್ಲಿ 696 ಮನೆಗಳು ಮಂಜೂರು, ಶಿಗ್ಗಾಂವಿ 46 ಕೋಟಿಯಲ್ಲಿ 850 ಮನೆಗಳು ಮಂಜೂರಾಗಿವೆ. ಕಳೆದ ಎರಡು ವರ್ಷಗಳಿಂದ 20% ರಷ್ಟು ಮನೆಗಳು ಮಾತ್ರ ಪೂರ್ಣಗೊಂಡಿದ್ದು, ಇನ್ನೂ 60% ಮನೆಗಳು ಪ್ರಗತಿ ಹಂತದಲ್ಲಿವೆ. ಸ್ಥಳ ಪರಿಶೀಲನೆ ವೇಳೆ 50% ರಷ್ಟು ಮಾತ್ರ ಮನೆಗಳಿವೆ. ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲ ಹಾಗೂ ಮನೆಯ ನಿರ್ಮಾಣ ಮಾಡಿದ ಲೇಬರ್ ಹಣ ಬಿಡುಗಡೆ ಮಾಡಿಲ್ಲ ಎಂಬುದನ್ನು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಕೆಲವು ಫಲಾನುಭವಿಗಳಿಗೆ ಬಂಗಾರ ಮಾರಾಟ ಮಾಡಿ ಮನೆಯನ್ನ‌ ಕಟ್ಟಿಸಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವು ಫಲಾನುಭವಿಗಳು ಜಮೀನು ಅಡವಿಟ್ಟು ಮನೆ ನಿರ್ಮಾಣ ಮಾಡಿಕೊಳ್ಳುತ್ತಿದ್ದಾರೆ. ಈ ವರದಿಯನ್ನು ಸ್ಲಂ ಬೋರ್ಡ್ ಕೇಂದ್ರ ಕಚೇರಿಗೆ ಕಳಿಸಲಾಗಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ದಾನಮ್ಮನವರ್ ಹೇಳಿದ್ದಾರೆ.

ಸ್ಲಂ ಬೋರ್ಡ್‌ನಿಂದ ಸರ್ಕಾರ ಬಡವರಿಗೆ ಕೋಟ್ಯಂತರ ರೂ. ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಲು ಮುಂದಾಗಿತ್ತು. ಆದರೆ ಅಧಿಕಾರಿಗಳ ಮತ್ತು ಗುತ್ತಿಗೆದಾರ ಹಣದಾಹದಿಂದ ಫಲಾನುಭವಿಗಳಿಗೆ ಇದು ನೆರವೇರಿಲ್ಲ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡು, ಉಳಿದ ಅನುದಾನ ಬಿಡುಗಡೆ ಮಾಡಿ ಮನೆಗಳನ್ನ ಪೂರ್ಣಗೊಳಸಬೇಕು ಎಂದು ಫಲಾನುಭವಿಗಳು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಹಲವು ಮಹಿಳೆಯರ ಜೊತೆ ಅಫೇರ್‌ ಇಟ್ಕೊಂಡಿದ್ದ – ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ

TAGGED:corruptionhaveriShiggaonSlum Board
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Mojtaba Khamenei 1
Latest

ಹಾರ್ಮುಜ್‌ ಜಲಸಂಧಿ ಮಾರ್ಗ ಓಪನ್‌ ಮಾಡಲ್ಲ: ಇರಾನ್‌ ಸರ್ವೋಚ್ಚ ನಾಯಕ ಮೊಜ್ತಬಾ ಮೊದಲ ಸಂದೇಶ

Public TV
By Public TV
24 minutes ago
Terror Funding Case Shabir Shah
Court

ಉಗ್ರರಿಗೆ ಹಣಕಾಸು ನೆರವು ಕೇಸ್ – ಪ್ರತ್ಯೇಕತಾವಾದಿ ನಾಯಕ ಶಬ್ಬೀರ್ ಶಾಗೆ ಜಾಮೀನು

Public TV
By Public TV
42 minutes ago
Ballari Accident
Bellary

ಭೀಕರ ರಸ್ತೆ ಅಪಘಾತ – ಅಜ್ಜ, ಮೊಮ್ಮಗಳು ದಾರುಣ ಸಾವು

Public TV
By Public TV
56 minutes ago
WORK FROM HOME 2
Bengaluru City

ಐಟಿ ಬಿಟಿ ವಲಯಕ್ಕೂ ಗ್ಯಾಸ್‌ ಅಭಾವದ ಬಿಸಿ – ಪರಿಸ್ಥಿತಿ ಕೈಮೀರಿದ್ರೇ ವರ್ಕ್ ಫ್ರಂ ಹೋಮ್‌ಗೆ ಚಿಂತನೆ?

Public TV
By Public TV
1 hour ago
LPG
Bengaluru City

ಬೆಂಗಳೂರಲ್ಲಿ LPG ದಾಸ್ತಾನು ಕೊರತೆ ಇಲ್ಲ: ಡಿಸಿ ಸ್ಪಷ್ಟನೆ

Public TV
By Public TV
2 hours ago
HDK 1
Bengaluru City

ಹೆಚ್‌ಡಿಕೆ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಫ್‌ಐಆರ್‌ – ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆದಾರರ ನೇಮಕಕ್ಕೆ ಹೈಕೋರ್ಟ್‌ ಸೂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?