Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Election News

Haveri-Gadag Lok Sabha 2024: ಬಿಜೆಪಿ v/s ಕಾಂಗ್ರೆಸ್‌ – ಗೆಲುವು ಯಾರಿಗೆ?

Public TV
Last updated: March 16, 2024 7:34 pm
Public TV
Share
4 Min Read
Haveri Main
SHARE

– ಮಾಜಿ ಸಿಎಂ ವಿರುದ್ಧ ‘ಕೈ’ ನಾಯಕ ಆನಂದಸ್ವಾಮಿ ಕಣಕ್ಕೆ
– ಉತ್ತರ ಕರ್ನಾಟಕ ಜಿಲ್ಲೆಗಳ ಹೆಬ್ಬಾಗಿಲು ಪ್ರವೇಶಿಸೋದು ಯಾರು?

ಹಾವೇರಿ/ಗದಗ: ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಹಾವೇರಿ ಹೆಬ್ಬಾಗಿಲಿದ್ದಂತೆ. ಮುಂಬರುವ ಲೋಕಸಭಾ ಚುನಾವಣೆಗೆ ಹಾವೇರಿ-ಗದಗ (Haveri-Gadag) ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಸ್ಪರ್ಧೆಗೆ ಇಳಿದಿರುವುದು ಕುತೂಹಲ ಮೂಡಿಸಿದೆ. ಇದು ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದೆ. ಕಾಂಗ್ರೆಸ್‌ಗೆ ಅಸ್ತಿತ್ವದ ಪ್ರಶ್ನೆಯಾಗಿದೆ. ಹ್ಯಾಟ್ರಿಕ್ ಗೆಲುವು ದಾಖಲಿಸಿರುವ ಬಿಜೆಪಿ ಈ ಬಾರಿ ಬದಲಾವಣೆಯೊಂದಿಗೆ ‘ಲೋಕ’ ಸಮರಕ್ಕೆ ಧುಮುಕಿದೆ.

ಶಿವಕುಮಾರ್ ಉದಾಸಿ ಅವರ ಹ್ಯಾಟ್ರಿಕ್ ಗೆಲುವಿನೊಂದಿಗೆ ಹಾವೇರಿ-ಗದಗ ಕ್ಷೇತ್ರದಲ್ಲಿ ಬಿಜೆಪಿ ಭದ್ರ ನೆಲೆ ಸ್ಥಾಪಿಸಿತ್ತು. ಆದರೆ ಬರುವ ಚುನಾವಣೆಗೆ ಕ್ಷೇತ್ರದಿಂದ ಸ್ಪರ್ಧಿಸಲು ಉದಾಸಿ ಹಿಂದೇಟು ಹಾಕಿದ್ದರು. ವಿಷಯ ತಿಳಿಯುತ್ತಿದ್ದಂತೆ ಪಕ್ಷದಿಂದ ಅನೇಕ ಟಿಕೆಟ್ ಆಕಾಂಕ್ಷಿಗಳು ಹುಟ್ಟಿಕೊಂಡಿದ್ದರು. ಅವರಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರ ಪುತ್ರ ಕೆ.ಇ.ಕಾಂತೇಶ್ ಪ್ರಮುಖರು. ಇವರ ಜೊತೆ ಡಾ. ಮಹೇಶ ನಾಲವಾಡ, ಶಶಿಧರ ನಾಗರಾಜಪ್ಪ ಕೂಡ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ ಇರ‍್ಯಾರಿಗೂ ಮಣೆ ಹಾಕದೇ ಹೈಕಮಾಂಡ್ ಮಾಜಿ ಸಿಎಂ ಹಾಗೂ ಹಾಲಿ ಶಾಸಕ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಟಿಕೆಟ್ ನೀಡಿದೆ. ತಂದೆ ಎಸ್.ಆರ್.ಬೊಮ್ಮಾಯಿಯಂತೆಯೇ ಪುತ್ರ ಬಸವರಾಜ ಬೊಮ್ಮಾಯಿ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆತರುವ ನಿಟ್ಟಿನಲ್ಲಿ ಹೈಕಮಾಂಡ್ ಕೆಲಸ ಮಾಡಿದೆ. ಇವರಿಗೆ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್‌ನಿಂದ ಆನಂದಸ್ವಾಮಿ ಗಡ್ಡದ್ದೇವರ ಮಠ ಟಿಕೆಟ್ ಗಿಟ್ಟಿಸಿದ್ದಾರೆ. ಆನಂದಸ್ವಾಮಿ ಮತ್ತು ಬೊಮ್ಮಾಯಿ ನಡುವೆ ನೇರ ಹಣಾಹಣಿ ಏರ್ಪಟ್ಟಿರುವುದರಿಂದ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿದೆ. ಇದನ್ನೂ ಓದಿ: Dharwad Lok Sabha 2024: ಬಿಜೆಪಿ ನಾಗಾಲೋಟಕ್ಕೆ ಕಡಿವಾಣ ಹಾಕುತ್ತಾ ‘ಕೈ’?

Haveri Gadag Inside

ಕ್ಷೇತ್ರ ಪರಿಚಯ
ಗದಗ ಜಿಲ್ಲೆಯ ಕೆಲವು ವಿಧಾನಸಭಾ ಕ್ಷೇತ್ರಗಳನ್ನು ಸೇರಿಸಿಕೊಂಡು ಹಾವೇರಿ-ಗದಗ ಲೋಕಸಭಾ ಕ್ಷೇತ್ರ ರಚನೆಯಾಗಿದೆ. 2008 ರಲ್ಲಿ ಗದಗ ಜಿಲ್ಲೆಯ ಮೂರು ಮತ್ತು ಹಾವೇರಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳು ಸೇರಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರ ರಚನೆಗೊಂಡಿದೆ. 2009 ರಲ್ಲಿ ಕ್ಷೇತ್ರವು ಸಾರ್ವತ್ರಿಕ ಚುನಾವಣೆಗೆ ಸಾಕ್ಷಿಯಾಯಿತು. ಮೊದಲ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿವಕುಮಾರ್ ಉದಾಸಿ ಜಯಗಳಿಸಿದ್ದರು. ಅಲ್ಲಿಂದೀಚೆಗೆ ಸತತ ಮೂರು ಬಾರಿ (2009, 2014, 2019) ಬಿಜೆಪಿ ಗೆಲುವು ಸಾಧಿಸಿ ಭದ್ರಕೋಟೆಯಾಗಿಸಿಕೊಂಡಿದೆ.

ವಿಧಾನಸಭಾ ಕ್ಷೇತ್ರಗಳೆಷ್ಟು?
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಹಾವೇರಿ ಜಿಲ್ಲೆಯ 5 ತಾಲ್ಲೂಕು ಹಾಗೂ ಗದಗ ಜಿಲ್ಲೆಯ ಮೂರು ತಾಲ್ಲೂಕುಗಳು ಬರುತ್ತಿವೆ. ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಹಾವೇರಿ, ಹಾನಗಲ್, ಬ್ಯಾಡಗಿ, ಹಿರೇಕೆರೂರು-ರಟ್ಟಿಹಳ್ಳಿ, ರಾಣೇಬೆನ್ನೂರು, ಗದಗ, ರೋಣ, ಶಿರಹಟ್ಟಿ. ಇದನ್ನೂ ಓದಿ: Hassan Lok Sabha 2024: ದೊಡ್ಡಗೌಡ್ರ ಭದ್ರಕೋಟೆ ಭೇದಿಸಲು ಕಾಂಗ್ರೆಸ್‌ ಕಸರತ್ತು!

haveri gadag lok sabha

ಮತದಾರರು ಎಷ್ಟು?
ಹಾವೇರಿ ಲೋಕಸಭಾ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 17,58,021 ಇದೆ. ಮಹಿಳೆಯರು- 8,68,510 ಮತದಾರರು, ಪುರುಷರು- 8,89,421 ಹಾಗೂ ತೃತೀಯಲಿಂಗಿಗಳು- 90 ಮತದಾರರಿದ್ದಾರೆ.

ಕಳೆದ ಚುನಾವಣೆಯಲ್ಲಿ ಏನಾಗಿತ್ತು?
2019 ರಲ್ಲಿ ನಡೆದ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶಿವಕುಮಾರ ಉದಾಸಿ ಸ್ಪರ್ಧೆ ಮಾಡಿ ಗೆದ್ದಿದ್ದರು. ಉದಾಸಿ ಅವರು 6,83,660 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ಪಾಟೀಲ ವಿರುದ್ಧ 1,40,882 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಹೊಸ ಅಭ್ಯರ್ಥಿಯನ್ನ ಹಾಕಿದ್ದ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗ ಮಾಡಿದ್ದರು. ಇದನ್ನೂ ಓದಿ: Davanagere Lok Sabha 2024: ಬೆಣ್ಣೆ ನಗರಿನ ಕುಟುಂಬದ ಭದ್ರಕೋಟೆ ಮಾಡ್ತಾರಾ ಇಲ್ಲ ‘ಕೈ’ ಹಿಡೀತಾರಾ ಜನ?

ಕ್ಷೇತ್ರದಲ್ಲಿ ಪಾರುಪತ್ಯ
ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಸತತವಾಗಿ ಬಿಜೆಪಿ ಮೂರು ಬಾರಿ ಗೆಲವು ಸಾಧಿಸಿದೆ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸು, ಲಿಂಗಾಯತ ಮತಗಳು ಹೆಚ್ಚು ಇರೋ ಕಾರಣಕ್ಕಾಗಿ ಬಿಜೆಪಿ ಆಭ್ಯರ್ಥಿ ಶಿವಕುಮಾರ ಉದಾಸಿ 3 ಭಾರಿ ಗೆಲವು ಸಾಧಿಸಿದ್ದರು. ಈಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದರಲ್ಲಿ ಮಾತ್ರ ಬಿಜೆಪಿ ಗೆದ್ದಿದೆ. ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಗೆದ್ದಿದ್ದಾರೆ. ಹೀಗಾಗಿ ಈ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕ ಕ್ಷೇತ್ರಗಳು ಹೆಚ್ಚಾಗಿದ್ದರಿಂದ ಎರಡು ಪಕ್ಷಗಳು ತಮ್ಮದೆಯಾದ ಲೆಕ್ಕಚಾರವನ್ನ ಮಾಡುತ್ತಿವೆ.

Basavaraj Bommai 1

ಬಿಜೆಪಿ ಪ್ಲಸ್: ಹಾವೇರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರು ಭಾರಿ ಗೆದ್ದು ಬಿಜೆಪಿ ಭದ್ರಕೋಟೆ ಮಾಡಿಕೊಂಡಿರುವುದು, ಜಿಲ್ಲೆಯಲ್ಲಿ ಮೋದಿಗಿರುವ ಬಹುದೊಡ್ಡ ವರ್ಚಸ್ಸು, ಹಿಂದುತ್ವದ ಪರ ಸಂಘಟನೆ ಹಾಗೂ ದೊಡ್ಡ ಸಮುದಾಯದ ಒಗ್ಗಟ್ಟು, ಹಾವೇರಿ-ಗದಗ ಜಿಲ್ಲೆಯಲ್ಲೆ ಯಶಸ್ವಿ ರೈಲ್ವೆ ಕಾಮಗಾರಿ ಹಾಗೂ ಹೆದ್ದಾರಿ ಕಾಮಗಾರಿ ಕೆಲಸಗಳಾಗಿವೆ.
ಬಿಜೆಪಿ ಮೈನಸ್: ರಾಜ್ಯ ಬಿಜೆಪಿ ಸರ್ಕಾರವಿದ್ದಾಗ ಉತ್ತಮ ಕೆಲಸ ಮಾಡದಿರುವುದು, ಸಿಎಂ ಹಾಗೂ ಕೃಷಿ ಸಚಿವರಿದ್ದರೂ ಜಿಲ್ಲೆ ಅಭಿವೃದ್ಧಿಯಲ್ಲಿ ಹಿನ್ನಡೆ, ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ಬಿಜೆಪಿಯ ಹೀನಾಯ ಸೋಲು, ಪಕ್ಷದಲ್ಲಿ ಟಿಕೆಟ್ ಸಂಬಂಧ ಅಸಮಾಧಾನ, ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಪಾರುಪತ್ಯ ಸಾಧಿಸುತ್ತಿರುವುದು.

ಕಾಂಗ್ರೆಸ್ ಪ್ಲಸ್: ಕಾಂಗ್ರೆಸ್ ಪಕ್ಷ ಕೆಳಮಟ್ಟದಿಂದ ಜಿಲ್ಲೆಯಲ್ಲಿ ಪಾರುಪತ್ಯ ಸಾಧಿಸುತ್ತಿರುವುದು, ವಿಧಾನಸಭೆಯ ಚುನಾವಣೆಯಲ್ಲಿ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು, ಬಿಜೆಪಿಯ ದುರಾಡಳಿತವನ್ನು ಜನರಿಗೆ ತಲುಪಿಸಲು ಸಲೀಸಾದ ಮಾರ್ಗಗಳಿರುವುದು, ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ.
ಕಾಂಗ್ರೆಸ್ ಮೈನಸ್: ಮೂರು ಭಾರಿ ಹಾವೇರಿ ಲೋಕಸಭಾ ಚುನಾವಣೆಯಲ್ಲಿ ಸೋಲು, ಸೂಕ್ತವಾದ ಅಭ್ಯರ್ಥಿ ಕಾಂಗ್ರೆಸ್‌ಗೆ ಸಿಗದೆ ಇರುವುದು, ಜನರ ವೋಟನ್ನು ಮತಗಳನ್ನಾಗಿ ಮಾಡುವ ಪ್ರಭಾವಿ ನಾಯಕರು ಇಲ್ಲದಿರುವುದು, ಕಾಂಗ್ರೆಸ್ ಶಾಸಕರಿಗೆ ಸೂಕ್ತ ಸ್ಥಾನ ಸಿಗದ ಹಿನ್ನಲೆ ಅಸಮಾಧಾನ. ಇದನ್ನೂ ಓದಿ: Chikkodi Lok Sabha 2024: ‘ಕೈ’ ತಪ್ಪಿ ಹೋಗಿರುವ ಕ್ಷೇತ್ರವನ್ನು ಮರಳಿ ಪಡೆಯುತ್ತಾ? – ಮತ್ತೊಂದು ಗೆಲುವಿಗೆ ಬಿಜೆಪಿ ತಂತ್ರವೇನು?

ಯಾವ ಅವಧಿಯಲ್ಲಿ ಯಾವ ಪಕ್ಷ ಗೆದ್ದಿತ್ತು?
2009- ಶಿವಕುಮಾರ ಉದಾಸಿ (ಬಿಜೆಪಿ)- 87,920 ಮತಗಳ ಅಂತರ
2013- ಶಿವಕುಮಾರ ಉದಾಸಿ (ಬಿಜೆಪಿ)- 87,571
2019- ಶಿವಕುಮಾರ ಉದಾಸಿ (ಬಿಜೆಪಿ)- 1,40,882

ಜಾತಿವಾರು ಲೆಕ್ಕಾಚಾರ
ಲಿಂಗಾಯತ – 6,80,000
ಕುರುಬ – 2,70,000
ಪರಿಶಿಷ್ಟ ಜಾತಿ – 2,00,000
ಪಂಗಡ – 1,25,000
ಮುಸ್ಲಿಂ – 2,95,000
ಗಂಗಾಮತ – 50,000
ಬ್ರಾಹ್ಮಣ – 45,000
ಮರಾಠ – 45,000
ಇತರೆ – 1,50,000

TAGGED:Basavaraj BommaibjpcongressHaveri-Gadag Lok Sabha ElectionLok Sabha elections 2024
Share This Article
Facebook Whatsapp Whatsapp Telegram

Cinema Updates

prithwi bhat reception
ಪೋಷಕರ ವಿರೋಧದ ನಡುವೆಯೂ ಗಾಯಕಿ ಪೃಥ್ವಿ ಭಟ್‌ ಅದ್ದೂರಿ ರಿಸೆಪ್ಷನ್‌
33 minutes ago
pawan kalyan
ಆಪರೇಷನ್ ಸಿಂಧೂರದ ಬಗ್ಗೆ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ
1 hour ago
amid calls for boycott aamir khan productions changes display pic to indian flag internet calls it damage control
‘ಸಿತಾರೆ ಜಮೀನ್ ಪರ್’ ಗೆ ಬಾಯ್ಕಾಟ್‌ ಭಯ – ತ್ರಿವರ್ಣ ಧ್ವಜ ಡಿಪಿ ಹಾಕಿದ ಆಮೀರ್ ಖಾನ್!
15 hours ago
Rani Mukerji Shah Rukh Khan
ʻಕಿಂಗ್’ ಜೊತೆ ಮತ್ತೆ ಒಂದಾಗಲಿದ್ದಾರೆ ರಾಣಿ ಮುಖರ್ಜಿ!
16 hours ago

You Might Also Like

Mission Samudrayaan Matsya 6000
Latest

ಮತ್ಸ್ಯ 6000 – ಆಳ ಸಮುದ್ರದ ರಹಸ್ಯಗಳನ್ನು ಭೇದಿಸಲು ಭಾರತ ಸಜ್ಜು

Public TV
By Public TV
4 minutes ago
Kedarnath Helicopter crashes
Latest

ಕೇದಾರನಾಥದಲ್ಲಿ ಲ್ಯಾಂಡಿಂಗ್‌ ವೇಳೆ ಹೆಲಿಕಾಪ್ಟರ್ ಪತನ – ತಪ್ಪಿದ ಭಾರೀ ಅನಾಹುತ

Public TV
By Public TV
25 minutes ago
Shehbaz Sharif 1
Latest

ಪಾಕ್‌ ಪ್ರಧಾನಿ ನಿದ್ದೆಗೆಡಿಸಿದ ʻಆಪರೇಷನ್‌ ಸಿಂಧೂರʼ – ಶೆಹಬಾಜ್‌ಗೆ ಮಧ್ಯರಾತ್ರಿ ಕರೆ ಮಾಡಿದ್ಯಾರು?

Public TV
By Public TV
2 hours ago
Weather 1
Bengaluru City

ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ – RCB ಪಂದ್ಯಕ್ಕೂ ಅಡ್ಡಿ ಸಾಧ್ಯತೆ

Public TV
By Public TV
2 hours ago
Chinnaswamy Stadium 1
Bengaluru City

ಇಂದು RCB vs KKR ಪಂದ್ಯ – ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಬಾಂಬ್ ಸ್ಕ್ವಾಡ್‌ ಪರಿಶೀಲನೆ

Public TV
By Public TV
2 hours ago
Haryana Devendra Singh Arrested For Giving Information To Pakistan ISI
Crime

ಆಪರೇಷನ್‌ ಸಿಂಧೂರದ ಬಗ್ಗೆ ಪಾಕ್‌ಗೆ ಮಾಹಿತಿ ನೀಡುತ್ತಿದ್ದ ಹರಿಯಾಣದ ಯುವಕ ಅರೆಸ್ಟ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?