Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಗಿಮಿಕ್ ಮಾಡೋದನ್ನು ಬಿಟ್ಟು ಡಿಕೆಶಿ ಜೈಲಿಗೆ ಯಾಕೆ ಹೋದ್ರು ಅನ್ನೋದನ್ನು ತಿಳಿಸಲಿ: ಎಸ್‍ಟಿಎಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿದ್ದರಾಮಯ್ಯ ಗಿಮಿಕ್ ಮಾಡೋದನ್ನು ಬಿಟ್ಟು ಡಿಕೆಶಿ ಜೈಲಿಗೆ ಯಾಕೆ ಹೋದ್ರು ಅನ್ನೋದನ್ನು ತಿಳಿಸಲಿ: ಎಸ್‍ಟಿಎಸ್

Districts

ಸಿದ್ದರಾಮಯ್ಯ ಗಿಮಿಕ್ ಮಾಡೋದನ್ನು ಬಿಟ್ಟು ಡಿಕೆಶಿ ಜೈಲಿಗೆ ಯಾಕೆ ಹೋದ್ರು ಅನ್ನೋದನ್ನು ತಿಳಿಸಲಿ: ಎಸ್‍ಟಿಎಸ್

Public TV
Last updated: October 20, 2021 7:30 pm
Public TV
Share
3 Min Read
ST SOMASHEKHAR
SHARE

ಹಾನಗಲ್(ಹಾವೇರಿ): ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅಪಪ್ರಚಾರ ಮಾಡುವುದನ್ನು ಬಿಟ್ಟು ಡಿ.ಕೆ ಶಿವಕುಮಾರ್ ಜೈಲಿಗೆ ಯಾಕೆ ಹೋದರು..? ಐಟಿ ದಾಳಿ ಯಾಕೆ ಆಯಿತು..? ಎಂಬುದನ್ನು ಜನತೆಗೆ ತಿಳಿಸಲಿ ಎಂದು ಸಚಿವ ಎಸ್.ಟಿ.ಸೋಮಶೇಖರ್ ಸವಾಲೆಸೆದರು.

ಹಾನಗಲ್ ನಲ್ಲಿ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಯಡಿಯೂರಪ್ಪ ಅವರು ಭ್ರಷ್ಟಾಚಾರ ಮಾಡಿದ್ದಾರೆ ಎಂದಾದರೆ ಲೋಕಾಯುಕ್ತ ಇದೆ, ಐಟಿ ಇದೆ. ಲಿಖಿತವಾಗಿ ದೂರು ಕೊಡಲಿ, ಆದರೆ ಯಾವ ದೂರು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.

HVR 1

ಸೋಲುವುದು ಗೊತ್ತಾಗುತ್ತಿದ್ದಂತೆ ಈ ರೀತಿ ಗಿಮಿಕ್ ಮಾಡ್ತಾರೆ. ಗೃಹ ಸಚಿವರಾಗಿ, ನೀರಾವರಿ ಸಚಿವರಾಗಿ ಈಗ ಮುಖ್ಯಮಂತ್ರಿ ಆಗಿರುವ ಬಸವರಾಜ ಬೊಮ್ಮಾಯಿ ಅವರ ಮೇಲೆ ಯಾವುದಾದರೂ ಆರೋಪವಿದೆಯೇ ಜನರಿಗೆ ಒಳ್ಳೆಯ ಕೆಲಸ ಮಾಡಬೇಕೆಂದು ಬಂದಿದ್ದಾರೆ. ಮೋದಿ ಅವರಿಗೆ ವಿಶ್ವದಲ್ಲಿ ಒಳ್ಳೆ ಹೆಸರಿದೆ. ಭಾರತಕ್ಕೆ ಹೆಸರು ತಂದುಕೊಟ್ಟವರು ಎಂದರು.

ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಹಣ ಹಂಚಿಕೆ ಮಾಡಲಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಚುನಾವಣೆಯಲ್ಲಿ ಬಿಜೆಪಿ ಹಣ ಹಂಚುವ ಕೆಲಸ ಮಾಡಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಪ್ರಕಾರ ಮತಯಾಚಿಸುತ್ತೇವೆ ಹೊರತು ಮತದಾರರಿಗೆ ಹಣ ಹಂಚುವ ಕೆಲಸ ಮಾಡಿಲ್ಲ. ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಒಬ್ಬರಿಗೊಬ್ಬರಿಗೆ ಬಗೆಹರಿಯುತ್ತಿಲ್ಲ. ಅವರದ್ದು ಬಗೆಹರಿಸಿಕೊಳ್ಳಲು ಹೊಸ ಹೊಸದನ್ನು ಹುಡುಕುತ್ತಾರೆ ಎಂದು ಹೇಳಿದರು.

HVR 2

ಹಾನಗಲ್ ಕ್ಷೇತ್ರದಲ್ಲಿ ಸಿ.ಎಂ.ಉದಾಸಿ ಅವರು ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಹಲವು ಹೊಸ ಹೊಸ ಕಾರ್ಯಕ್ರಮಗಳನ್ನು ಮಾಡಲು ಹುಮ್ಮಸ್ಸು ಹೊಂದಿದ್ದಾರೆ. ಪಕ್ಷದ ಪರ ಮನೆಮನೆ ಪ್ರಚಾರ ಮಾಡಲಾಗುವುದು. ಮುಖ್ಯಮಂತ್ರಿಗಳು ಮತ್ತು ಸಚಿವ ಬಿ.ಸಿ.ಪಾಟೀಲ್ ಅವರು ಇದೇ ಜಿಲ್ಲೆಯವರಾದ್ದರಿಂದ ಬಿಜೆಪಿ ಗೆಲುವು ಸಾಧಿಸಲಿದೆ. ಜನರು ಸಹ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದು ಅದನ್ನು ಮುಖ್ಯಮಂತ್ರಿಗಳು ಈಡೇರಿಸಲಿದ್ದಾರೆ ಎಂದು ಭರವಸೆ ನೀಡಿದರು.

ಇದೇ ವೇಳೆ ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಲ್ಲಿ ಜಿಲ್ಲೆಯ ಎಲ್ಲರಿಗೂ ಸಾಲ ನೀಡದೆ ಕೇವಲ ಎರಡು ಮೂರು ಕ್ಷೇತ್ರದವರಿಗಷ್ಟೇ ಸಾಲ ನೀಡುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಈ ಕುರಿತು ಸಭೆ ಕೂಡ ಮಾಡಲಾಗಿದೆ. ಕೋಲಾರ ಡಿಸಿಸಿ ಬ್ಯಾಂಕಿಗೆ ನೋಟಿಸ್ ನೀಡಿ ಕ್ರಮಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು. ಇದನ್ನೂ ಓದಿ: ಬಿಜೆಪಿ ಸಾಧನೆ ಶೂನ್ಯ, ಅವಹೇಳನಕಾರಿ ಮಾತಾಡ್ತಿದ್ದಾರೆ: ಡಿಕೆಶಿ ಕಿಡಿ

STS e1628229763613

ತುಮಕೂರು ಡಿಸಿಸಿ ಬ್ಯಾಂಕ್ ನಲ್ಲಿ ಕೂಡ ಸರಿಯಾಗಿ ಸಾಲ ಕೊಡುತ್ತಿಲ್ಲ ಎಂದು ದೂರು ಬಂದಿದ್ದು ತನಿಖೆ ಮಾಡಲಾಗುತ್ತಿದೆ. ಉಳಿದಂತೆ 19 ಡಿಸಿಸಿ ಬ್ಯಾಂಕ್ ಗಳು ಅಲ್ಪಾವಧಿ, ದೀರ್ಘಾವಧಿ ಸಾಲ ನೀಡುತ್ತಿವೆ. ಎಸ್ ಸಿ, ಎಸ್ ಟಿ, ಒಬಿಸಿ ಸೇರಿದಂತೆ ಎಲ್ಲಾ ಜನಾಂಗದವರಿಗೆ ಸಾಲ ನೀಡಬೇಕೆಂದು ಹೇಳಲಾಗಿದೆ. 20,810 ಕೋಟಿ ರೂ. ಕೃಷಿ ಸಾಲವನ್ನು 30.86 ಲಕ್ಷ ರೈತರಿಗೆ ವಿತರಿಸುವ ಗುರಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.  ಇದನ್ನೂ ಓದಿ: ಕಟೀಲ್ ಆರೋಪಕ್ಕೆ ಸುಬ್ರಮಣಿಯನ್ ಸ್ವಾಮಿ ಹೇಳಿಕೆ ಸಾಕ್ಷ್ಯ ನೀಡಿದ ಬಿಜೆಪಿ

ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಹಾನಗಲ್, ಆಡರು ಸೇರಿದಂತೆ ನಾನಾಕಡೆ ಶಿವರಾಜ ಸಜ್ಜನ ಪರವಾಗಿ ಪ್ರಚಾರದಲ್ಲಿ ತೊಡಗಿಕೊಂಡು ಮತಯಾಚಿಸಿದರು. ಹಿರೆಹುಳ್ಳಾಳ ಗ್ರಾಮ ಪಂಚಾಯತ್ ನ ತಮರಿಕೊಪ್ಪ, ಬಾಳಂಬೀಡ ಗ್ರಾಮದಲ್ಲಿ ಮುಖಂಡರ ಸಭೆ ನಡೆಸಿದರು. ಇದಕ್ಕೂ ಮುನ್ನ ವಿರಕ್ತಮಠಕ್ಕೆ ಭೇಟಿ ನೀಡಿ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮೀಜಿ, ಮುತ್ತಿನಕಂತಿ ಮಠ, ಶಿವಬಸವ ಮಹಾಸ್ವಾಮೀಜಿಗಳನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಬ್ಯಾಡಗಿ ಶಾಸಕರು, ಯುವ ರಾಜ್ಯಾಧ್ಯಕ್ಷರಾದ ಶ್ರೀ ಸಂದೀಪ್ ಕುಮಾರ್ ಕೆ.ಸಿ. ಹಾಗೂ ಪ್ರಮುಖ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.

TAGGED:by electionHanagalhaveriPublic TVST somashekharಉಪಚುನಾವಣೆಎಸ್ ಟಿ ಸೋಮಶೇಖರ್ಪಬ್ಲಿಕ್ ಟಿವಿಹಾನಗಲ್ಹಾವೇರಿ
Share This Article
Facebook Whatsapp Whatsapp Telegram

Cinema news

kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood

You Might Also Like

Sandeep Pathak BJP MP
Crime

ಆಪ್ ತೊರೆದು ಬಿಜೆಪಿ ಸೇರಿದ ಸಂಸದ ಸಂದೀಪ್ ಪಾಠಕ್‌ಗೆ ಶಾಕ್ – ಪಂಜಾಬ್‌ನ 2 ಜಿಲ್ಲೆಗಳಲ್ಲಿ ಜಾಮೀನು ರಹಿತ FIR

Public TV
By Public TV
4 minutes ago
Extremely Severe Alert
Latest

ಮೊಬೈಲ್‌ಗಳಲ್ಲಿ ಮೊಳಗಿದ ‘ಎಮರ್ಜೆನ್ಸಿ’ ಸೈರನ್‌ – ಫೋನ್‌ಗೆ ಬಂದ ಆಪತ್ಕಾಲ ಎಚ್ಚರಿಕೆ ಏನು?

Public TV
By Public TV
18 minutes ago
Nelamangala Hit And Run Death
Bengaluru City

ಹಿಟ್ & ರನ್‌ಗೆ ಬೈಕ್ ಸವಾರ ಸಾವು – ಸಿಸಿಟಿವಿಯಲ್ಲಿ ದೃಶ್ಯ ಸೆರೆ

Public TV
By Public TV
22 minutes ago
husband commits suicide after being harassed by wife in uttara kannada dandeli
Crime

ಅನೈತಿಕ ಸಂಬಂಧದ ಬಗ್ಗೆ ಪತ್ನಿಯ ಓಪನ್ ಟಾಕ್ – ಬೇಸತ್ತು ನೇಣಿಗೆ ಕೊರಳೊಡ್ಡಿದ ಪತಿ

Public TV
By Public TV
29 minutes ago
Eshwar Khandre
Bengaluru City

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು: ಈಶ್ವರ್ ಖಂಡ್ರೆ

Public TV
By Public TV
31 minutes ago
Mandya KRS Youth Missing
Districts

ಕೆಆರ್‌ಎಸ್‌ನಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಮಗುಚಿದ ದೋಣಿ – ಯುವಕ ನಾಪತ್ತೆ

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?