Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಹಾವೇರಿ ಹಿಂದೂ ಯುವತಿ ಹತ್ಯೆ ಕೇಸ್ – ಮೂವರು ಆರೋಪಿಗಳು ಅರೆಸ್ಟ್

Public TV
Last updated: March 14, 2025 11:15 pm
Public TV
Share
4 Min Read
haveri love jihad
SHARE

– ರಾಜ್ಯದಲ್ಲಿ ಲವ್ ಜಿಹಾದ್ ಜಾಲ ಸಕ್ರಿಯವಾಗಿದೆ; ಬೊಮ್ಮಾಯಿ ಕಿಡಿ

ಹಾವೇರಿ: ಹಿಂದೂ ಯುವತಿ ಸ್ವಾತಿ ಹತ್ಯೆ ಪ್ರಕರಣ ದೊಡ್ಡ ಸಂಚಲನ ಸೃಷ್ಟಿಸುತ್ತಲೇ ಪೊಲೀಸರ ತನಿಖೆ ಮತ್ತಷ್ಟು ತೀವ್ರಗೊಂಡಿದೆ. ಕೊಲೆ ಮಾಡಿ ಎಸ್ಕೇಪ್ ಆಗಿರುವ ಮತ್ತಿಬ್ಬರು ಆರೋಪಿಗಳನ್ನ ಪತ್ತೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೊದಲು ಅಪರಿಚಿತ ಶವ ಸಿಕ್ಕಿರುವುದಾಗಿ ತನಿಖೆ ಆರಂಭಿಸಿದ್ದ ಪೊಲೀಸರಿಗೆ ಅದು ಸ್ವಾಭಾವಿಕ ಸಾವಲ್ಲ ಕೊಲೆ ಎಂದು ಗೊತ್ತಾಗಿದೆ. ಯು.ಡಿ.ಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಹಲಗೇರಿ ಪೊಲೀಸ್ ಠಾಣೆ ಪೊಲೀಸರು ಒಬ್ಬ ಆರೋಪಿಯನ್ನು ಪತ್ತೆ ಮಾಡಿದ್ದರು. ನಯಾಜ್ ಎಂಬ ಮುಸ್ಲಿಂ ಯುವಕನೇ ಸ್ವಾತಿ ಹತ್ಯೆಯ ಪ್ರಮುಖ ಆರೋಪಿಯಾಗಿದ್ದಾನೆ. ಇದನ್ನೂ ಓದಿ: ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿಗೆ ಸಂಪುಟ ಒಪ್ಪಿಗೆ – 1 ಕೋಟಿವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ

ಸ್ವಾತಿ ಜೊತೆ ಲವ್‌ನಲ್ಲಿದ್ದ ಎನ್ನಲಾದ ನಯಾಜ್ ಮತ್ತಿಬ್ಬರು ಸ್ನೇಹಿತರ ಜೊತೆ ಸೇರಿ ಸ್ವಾತಿ ಕೊಲೆ ಮಾಡಿದ್ದ. ಸದ್ಯ ನಯಾಜ್‌ನನ್ನು ಬಂಧಿಸಿ ತನಿಖೆ ಆರಂಭಿಸಿದ್ದ ಪೊಲೀಸರು, ಆತನ ಮತ್ತಿಬ್ಬರು ಸ್ನೇಹಿತರಾದ ವಿನಯ್ ಹಾಗೂ ದುರ್ಗಾಚಾರಿ ಪತ್ತೆ ಹಚ್ಚಿ ಬಂಧನ ಮಾಡುವಲ್ಲಿ ಯಶಸ್ವಿಯಾಗಿದರು. ಚಿತ್ರದುರ್ಗದ ಬಳಿ ವಿನಾಯಕ್ ಮತ್ತು ದುರ್ಗಾಚಾರಿಯನ್ನ ಪೊಲೀಸರು ಬಂಧಿಸಿದ್ದರು. ಆದರೀಗ ಈ ಪ್ರಕರಣವು ಹೊಸ ಆಯಾಮ ಪಡೆದುಕೊಂಡಿದೆ. ಇದನ್ನೂ ಓದಿ: ಪಾಕ್ ಮಸೀದಿಯಲ್ಲಿ ಬಾಂಬ್ ಸ್ಫೋಟ – ನಾಲ್ವರಿಗೆ ಗಾಯ

ಈ ಬಗ್ಗೆ ಹಾವೇರಿ ಎಸ್ಪಿ ಭೇಟಿ ಮಾಡಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ. ಸ್ವಾತಿ ಹತ್ಯೆ ಲವ್ ಜಿಹಾದ್. ಇದಕ್ಕಾಗಿ ಮುಸ್ಲಿಂ ಯುವಕರಿಗೆ ಟ್ರೇನಿಂಗ್ ಕೊಡುತ್ತಿದ್ದಾರೆ. ದುಡ್ಡು ಬೈಕ್, ಕೊಟ್ಟು ಹಿಂದೂ ಯುವತಿಯರನ್ನು ಪಟಾಯಿಸಲು ತರಬೇತಿ ನೀಡಲಾಗ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೇಂದ್ರದ 2 ಸಾವಿರ ಕೋಟಿ ಕಳೆದುಕೊಂಡರೂ ನಾವು ನಮ್ಮ ಸಿದ್ಧಾಂತದಲ್ಲಿ ರಾಜಿಯಾಗಲ್ಲ: ತಮಿಳುನಾಡು

ಸಂಸದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೂಡಾ ಸ್ವಾತಿ ಹತ್ಯೆ ಕುರಿತು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವಾತಿ ಎಂಬ ಯುವತಿಯನ್ನು ವಂಚಿಸಿ ಹತ್ಯೆ ಮಾಡಿರುವ ಘಟನೆ ಖಂಡನೀಯವಾಗಿದೆ. ರಾಜ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ಸಕ್ರಿಯವಾಗಿದ್ದು, ಪೊಲೀಸರ ಭಯ ಇಲ್ಲದಿರುವುದೇ ಇಂತಹ ಪ್ರಕರಣಗಳು ಹೆಚ್ಚಾಗಲು ಕಾರಣ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: 2ನೇ ಏರ್‌ಪೋರ್ಟ್‌ ನಿರ್ಮಾಣಕ್ಕೆ ತಮಿಳುನಾಡು ಸರ್ಕಾರಕ್ಕೆ ಗ್ರೀನ್‌ ಸಿಗ್ನಲ್‌ – ಹೊಸೂರು ಬಳಿ 2 ಸ್ಥಳ ಫೈನಲ್‌

ರಾಜ್ಯದಲ್ಲಿ @INCKarnataka ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ.

ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಹಿರೇಮಠ ಅವಳ ಬರ್ಬರ ಕೊಲೆಯ ನೋವು ಮಾಸುವ ಮುನ್ನ ಈಗ…

— Basavaraj S Bommai (@BSBommai) March 14, 2025

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ. ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಹಿರೇಮಠ ಅವಳ ಬರ್ಬರ ಕೊಲೆಯ ನೋವು ಮಾಸುವ ಮುನ್ನ ಈಗ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಎನ್ನುವ ಯುವತಿಯ ಕೊಲೆಯಾಗಿದ್ದು, ಇದೂ ಕೂಡ ಲವ್ ಜಿಹಾದ್ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈ ಘಟನೆ ನಡೆದು ಒಂದು ವಾರ ಕಳೆದರೂ ಪ್ರಕರಣದಲ್ಲಿ ಬಂಧಿತನಾಗಿರುವ ನಯಾಜ್ ಎನ್ನುವ ಪ್ರಮುಖ ಆರೋಪಿಯ ರಕ್ಷಣೆಗೆ ದೊಡ್ಡ ಮಟ್ಟದ ಕಸರತ್ತು ನಡೆದಂತೆ ಕಾಣಿಸುತ್ತದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದಿಂದ 1402 ಕೋಟಿ ರೂ.ಚೆಕ್ ಹಸ್ತಾಂತರ

ಸ್ವಾತಿಯನ್ನು ಪ್ರೀತಿಸುವ ನಾಟಕವಾಡಿ ಅನ್ಯ ಧರ್ಮದವಳೆಂದು ತಿರಸ್ಕರಿಸಿ ತನ್ನ ಧರ್ಮದ ಬೇರೆ ಯುವತಿಯ ಜೊತೆ ಮದುವೆ ಮಾಡಿಕೊಳ್ಳಲು ತೀರ್ಮಾನಿಸಿದ್ದನ್ನು ಪ್ರಶ್ನಿಸಿರುವುದಕ್ಕೆ ಸ್ವಾತಿಯ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ಇದೆ. ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುವುದರಿಂದ ಮಾತ್ರ ಇಂತಹ ಪ್ರಕರಣಗಳಿಗೆ ತಡೆ ಒಡ್ಡಬಹುದಾಗಿದೆ. ಇದರ ಬಗ್ಗೆ ಪೊಲೀಸರು ನಿಷ್ಠುರವಾಗಿ ಅಪರಾಧಿಗಳನ್ನು ಹಿಡಿದು ಅದರ ಹಿಂದೆ ಇರುವ ಶಕ್ತಿಗಳನ್ನು ಕಡಿವಾಣ ಹಾಕುವುದು ಅತ್ಯಂತ ಅವಶ್ಯ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿರೋದು ಸಿದ್ದರಾಮಯ್ಯನ ಸರ್ಕಾರ… ನಿಮ್ಮಪ್ಪನ ಸರ್ಕಾರ ಅಲ್ಲ – ಬಿಜೆಪಿ ಕಾರ್ಯಕರ್ತರ ವಿರುದ್ಧ ರೊಚ್ಚಿಗೆದ್ದ ಪ್ರದೀಪ್‌ ಈಶ್ವರ್‌

ಆದರೆ, ಇಂತಹ ಪ್ರಕರಣಗಳಲ್ಲಿ ಅಧಿಕಾರಿಗಳು ಗಾಂಭಿರ್ಯತೆಯಿಂದ ತೆಗೆದುಕೊಳ್ಳದೇ ಕೆಲವೇ ದಿನಗಳಲ್ಲಿ ಮರೆತು ಹೋಗುವುದು ಅತ್ಯಂತ ಖಂಡನೀಯ. ಹೆಣ್ಣು ಮಕ್ಕಳ ಕುಟುಂಬ, ಬಂಧುಗಳು ಮತ್ತು ಸಮಾಜ ಅತ್ಯಂತ ನೋವು ಪಡುವ ಈ ಘಟನೆಯಲ್ಲಿ ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಮತ್ತು ನ್ಯಾಯ ದೊರಕಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನೂ ಮಾಜಿ ಸಚಿವ ಬಿಸಿ ಪಾಟೀಲ್ ಅವರು ಮಾಸೂರು ಗ್ರಾಮದ ಮೃತ ಸ್ವಾತಿ ಮನೆಗೆ ಭೇಟಿ ನೀಡಿದರು. ಆಕೆಯ ತಾಯಿಗೆ ಸಾಂತ್ವನ ಹೇಳಿ, ಪ್ರಕರಣದ ಮಾಹಿತಿ ಪಡೆದರು. ಪ್ರಕರಣದಲ್ಲಿ ಯಾರೇ ಭಾಗಿಯಾದರೂ ಬಂಧನ ಮಾಡಿ ಶಿಕ್ಷೆ ಕೊಡಿಸುವಂತೆ ಒತ್ತಾಯ ಮಾಡಿದ್ದಾರೆ. ಇದನ್ನೂ ಓದಿ: ಶಾಸಕರಿಗೆ ಡಿನ್ನರ್‌ – ಡಿಕೆಶಿ ಜೊತೆ ಮೂವರು ಸಚಿವರು ಮುನಿಸು?

ಮೃತ ಸ್ವಾತಿ ರಾಣೆಬೆನ್ನೂರಿನ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ಸ್ವಾತಿಗೆ ಹೋರಿ ಬೆದರಿಸೋ ಸ್ಪರ್ಧೆಯ ಕ್ರೇಜ್ ಇತ್ತು. ಕೊಲೆ ಮಾಡಿದ ನಯಾಜ್, ದುರ್ಗಾಚಾರಿ, ವಿನಯ್ ಕೂಡಾ ಹೋರಿ ಹಬ್ಬದ ಕ್ರೇಜ್ ಇಟ್ಟುಕೊಂಡಿದ್ದರು. ಹೋರಿ ಬೆದರಿಸೋ ಸ್ಪರ್ಧೆಯೊಂದರಲ್ಲಿ ಪರಿಚಯವಾಗಿದ್ದ ಮೂವರ ಜೊತೆ ಸ್ವಾತಿ ಗೆಳೆತನ ಬೆಳೆಸಿಕೊಂಡಿದ್ದಳು. ಈಗ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು, ಪ್ರಕರಣವು ಸುಖ್ಯಾಂತ ಕಂಡಿದೆ.

TAGGED:Basavaraj Bommaicrimehaveripramod muthalikranebennuruಕ್ರೈಂಪ್ರಮೋದ್ ಮುತಾಲಿಕ್ಬಸವರಾಜ್ ಬೊಮ್ಮಾಯಿರಾಣೇಬೆನ್ನೂರುಹಾವೇರಿ
Share This Article
Facebook Whatsapp Whatsapp Telegram

You Might Also Like

Lakshmi Nivasa Shweta
Bengaluru City

ʻಲಕ್ಷ್ಮೀ ನಿವಾಸʼದಿಂದ ಹೊರನಡೆದ ಶ್ವೇತಾ

Public TV
By Public TV
6 minutes ago
BR Patil
Districts

ಸರ್ಕಾರದ ಬುಡಕ್ಕೆ ಮತ್ತೊಂದು ಭ್ರಷ್ಟಾಚಾರ ಬಾಂಬ್‌; ಜಮೀರ್ ಪಿಎ – ಬಿ.ಆರ್ ಪಾಟೀಲ್‌ರದ್ದು ಎನ್ನಲಾದ ಆಡಿಯೋ ವೈರಲ್‌

Public TV
By Public TV
27 minutes ago
RSS leader UG Radha and Dakshina Kannada SP Arun Kumar
Dakshina Kannada

RSS ಮುಖಂಡನ ಮನೆ ಮೇಲೆ ಮಧ್ಯರಾತ್ರಿ ದಾಳಿ – ಕಾರಣ ಕೇಳಿ ದ.ಕ. ಎಸ್‌ಪಿಗೆ ಹೈಕೋರ್ಟ್‌ ನೋಟಿಸ್‌

Public TV
By Public TV
31 minutes ago
Mangaluru Car Accident
Crime

ಮಂಗಳೂರು | ಕಾರು ಅಪಘಾತದಲ್ಲಿ `ಕೈ’ ಮುಖಂಡ ಸೇರಿ ಇಬ್ಬರು ದುರ್ಮರಣ

Public TV
By Public TV
49 minutes ago
Ballary Tigress
Bellary

ಕಮಲಾಪುರದ ಅಟಲ್‌ಜೀ ಮೃಗಾಲಯದ ಹೆಣ್ಣು ಹುಲಿ ದೇವಿ ಸಾವು

Public TV
By Public TV
54 minutes ago
Chakravarti Sulibele
Districts

ರಾಜಕೀಯ ಮಾತಾಡ್ಬಾರದು ಅಂತ ಯಾವಾಗಿನಿಂದ ಜಾರಿಯಾಗಿದೆ? – ನೋಟಿಸ್‌ಗೆ ಚಕ್ರವರ್ತಿ ಸೂಲಿಬೆಲೆ ಕಿಡಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?