ಹಾವೇರಿಯಲ್ಲಿ ವರುಣನ ಆರ್ಭಟ – ಹಲವು ಕಡೆ ರಸ್ತೆ ಸಂಚಾರ ಸ್ಥಗಿತ

Public TV
1 Min Read
hvr

ಹಾವೇರಿ: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಜಿಲ್ಲೆಯಲ್ಲಿನ ವರದಾ, ಧರ್ಮಾ ಮತ್ತು ಕುಮುದ್ವತಿ ನದಿಗಳು ತುಂಬಿ ಹರಿಯುತ್ತಿವೆ.

ನದಿಗಳು ತುಂಬಿ ಹರಿಯುತ್ತಿದ್ದರಿಂದ ಕರ್ಜಗಿ-ಕಲಕೋಟಿ, ದೇವಗಿರಿ-ಕಳಸೂರು, ನಾಗನೂರು-ಕೂಡಲ, ಮಾಸೂರು-ಶಿಕಾರಿಪುರ, ಹಾನಗಲ್-ಬಂಕಾಪುರ ಸೇರಿದಂತೆ ಹಲವು ರಸ್ತೆಗಳ ಸಂಪರ್ಕ ಕಡಿತಗೊಂಡಿವೆ.

hvr 2

ಶಿಗ್ಗಾಂವಿ ತಾಲೂಕಿನ ನಾಗನೂರು ಕೆರೆ ತುಂಬಿ ಕೋಡಿ ಬಿದ್ದಿದ್ದರಿಂದ ಕೆರೆ ನೀರು ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರ ಮೇಲೆ ಹರಿಯುತ್ತಿದೆ. ಇದರಿಂದ ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಅಲ್ಲದೇ ಜಿಲ್ಲೆಯ ಹಲವೆಡೆ ಕೆರೆ ಮತ್ತು ನದಿಗಳ ನೀರು ರೈತರ ಜಮೀನುಗಳಿಗೆ ನುಗ್ಗಿದ್ದು, ಸಾವಿರಾರು ಎಕರೆ ಜಲಾವೃತಗೊಂಡಿದೆ. ರೈತರ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ, ಮೆಣಸಿನಕಾಯಿ, ಶೇಂಗಾ, ಹತ್ತಿ ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿವೆ.

Share This Article
Leave a Comment

Leave a Reply

Your email address will not be published. Required fields are marked *