ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ವರದಾ ನದಿಗೆ (Varada River) ಬಿದ್ದಿದ್ದ ಟ್ರ್ಯಾಕ್ಟರನ್ನು ಕ್ರೇನ್ ಮೂಲಕ ಮೇಲೆತ್ತುವ ಕಾರ್ಯ ಮಾಡಲಾಗಿದೆ.
ಹಾವೇರಿ (Haveri) ತಾಲೂಕಿನ ಮರಡೂರು ಗ್ರಾಮದಲ್ಲಿರುವ ವರದಾ ನದಿಗೆ ಮಂಗಳವಾರ ಟ್ರ್ಯಾಕ್ಟರ್ ಬಿದ್ದಿತ್ತು. ಈ ಟ್ರ್ಯಾಕ್ಟರ್ ಕ್ರೇನ್ ಮೂಲಕ ಈಜುತಜ್ಞರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಸಹಾಯದಿಂದ ಮೇಲೆತ್ತಲಾಗಿದೆ. ಇದನ್ನೂ ಓದಿ: ಮನೆ ಬಳಿಯೇ ಸೈಲೆಂಟಾಗಿ ನಿಂತಿದ್ದ ಕಾಡಾನೆ – ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ!
ಗ್ರಾಮದ ಸುರೇಶ ದೊಡ್ಡಗೌಡರ ಎಂಬುವರಿಗೆ ಸೇರಿದ ಟ್ರ್ಯಾಕ್ಟರ್ ಜಮೀನಿನಿಂದ ಮೆಣಸಿನಕಾಯಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿತ್ತು. ಟ್ರ್ಯಾಕ್ಟರ್ನಲ್ಲಿದ್ದ ಮೂವರನ್ನ ಸ್ಥಳೀಯರು ರಕ್ಷಣೆ ಮಾಡಿದ್ದರು.
ಇದೀಗ ಸತತ 5 ಗಂಟೆಗಳ ಕಾರ್ಯಚರಣೆ ನಡೆಸಿ ಟ್ರ್ಯಾಕ್ಟರ್ ಮೇಲೆತ್ತಲಾಗಿದೆ. ವರದಾ ನದಿಗೆ ಇರುವ ಬ್ರಿಜ್ಡ್ ಕಂ ಬ್ಯಾರೇಜ್ಗೆ ತಡೆಗೋಡೆ ನಿರ್ಮಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.