Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ವಿರುದ್ಧದ ಮುಡಾ ಕೇಸ್‌ನಲ್ಲಿ ಯಾವುದೇ ಹುರುಳಿಲ್ಲ ಅಂತ ಕಾನೂನು ತಜ್ಞರೇ ಹೇಳಿದ್ದಾರೆ: ಸಚಿವ ಮಹದೇವಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ವಿರುದ್ಧದ ಮುಡಾ ಕೇಸ್‌ನಲ್ಲಿ ಯಾವುದೇ ಹುರುಳಿಲ್ಲ ಅಂತ ಕಾನೂನು ತಜ್ಞರೇ ಹೇಳಿದ್ದಾರೆ: ಸಚಿವ ಮಹದೇವಪ್ಪ

Bengaluru City

ಸಿಎಂ ವಿರುದ್ಧದ ಮುಡಾ ಕೇಸ್‌ನಲ್ಲಿ ಯಾವುದೇ ಹುರುಳಿಲ್ಲ ಅಂತ ಕಾನೂನು ತಜ್ಞರೇ ಹೇಳಿದ್ದಾರೆ: ಸಚಿವ ಮಹದೇವಪ್ಪ

Public TV
Last updated: August 25, 2024 7:16 pm
Public TV
Share
3 Min Read
SIDDARAMAIAH HC MAHADEVAPPA
SHARE

ಬೆಂಗಳೂರು: ಸಿಎಂ ವಿರುದ್ಧದ ಮುಡಾ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂದು ಸಾಕಷ್ಟು ಕಾನೂನು ತಜ್ಞರು (Legal Experts) ಹೇಳಿದ್ದಾರೆಂದು ಸಚಿವ ಹೆಚ್‌.ಸಿ ಮಹದೇವಪ್ಪ (HC Mahadevappa) ಹೇಳಿದ್ದಾರೆ.

ಬೆಂಗಳೂರಿನಲ್ಲಿ (Bengaluru ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ಗೆ ನಮ್ಮ ಸಿಎಂ, ಕೆಪಿಸಿಸಿ ಅಧ್ಯಕರು ಪ್ರತ್ಯೇಕವಾಗಿ ಭೇಟಿಯಾಗಿ ವಿವರಿಸಿದ್ದಾರೆ. ರಾಜಭವನ ದುರ್ಬಳಕೆ ಮಾಡಿಕೊಳ್ಳುವ ಜೆಡಿಎಸ್-ಬಿಜೆಪಿ (BJP-JDS) ಹುನ್ನಾರ ಹೈಕಮಾಂಡ್‌ಗೆ ಅರ್ಥವಾಗಿದೆ. ಯಾವುದೇ ಹೋರಾಟ ಮಾಡಲು ಹಿಂಜರಿಯಬಾರದು ಎಂದು ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: `ಕೈʼ ನಾಯಕರು ಕುಮಾರಣ್ಣನನ್ನ ಹೇಗೆ ಕಟ್ಟಿ ಹಾಕ್ಬೇಕು ಅಂತ ದೆಹಲಿಯಲ್ಲಿ ಚರ್ಚಿಸಿದ್ದಾರೆ: ನಿಖಿಲ್‌ ಕಿಡಿ

MUDA 1

ನಮ್ಮ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಇಡೀ ಶಾಸಕರು, ಮಂತ್ರಿಮಂಡಲ, ಹೈಕಮಾಂಡ್ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದೆ. ಹೀಗಿರುವಾಗ ನಾಯಕತ್ವ ಬದಲಾವಣೆ ಪ್ರಶ್ನೆ ಎಲ್ಲಿಂದ ಬಂತು? ಜೆಡಿಎಸ್-ಬಿಜೆಪಿ ಷಡ್ಯಂತ್ರ ಭಗ್ನಗೊಳಿಸಲು ಒಗ್ಗಟ್ಟಾಗಿ ನಿಂತಿದ್ದೇವೆ ಎಂದು ಅಬ್ಬರಿಸಿದ್ದಾರೆ.

ಇನ್ನೂ ಸಿಎಂ ಆರೋಗ್ಯಕರವಾಗಿದ್ದಾರೆ, ನಿತ್ಯ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಆಯಾಸವಾಗುವುದಿಲ್ಲ. ಖರ್ಗೆ ನಾಯಕತ್ವದಲ್ಲೇ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ಸುರ್ಜೇವಾಲ ಸಮ್ಮುಖದಲ್ಲೇ ನಾಯಕತ್ವದ ಬದಲಾವಣೆ ಇಲ್ಲ ಎಂದಾಗ ಇದೆಕ್ಕೆಲ್ಲಾ ಅಂತ್ಯ ಇಲ್ವ? ಸಿದ್ದರಾಮಯ್ಯ ಮತ್ತು ನನ್ನ ಐಡಿಯಾಲಜಿ ಒಂದೇ ಅಲ್ವಾ? ನಾನು ಇವತ್ತು, ನಿನ್ನೆ ಅವರ ಪರವಾಗಿ ನಿಂತಿಲ್ಲ, ಬಹಳ ವರ್ಷಗಳಿಂದ ಅವರ ಪರವಾಗಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಕಾರ್ಕಳ ಅತ್ಯಾಚಾರ ಕೇಸ್‌; ಇದೊಂದು ಹೇಯಕೃತ್ಯ, ಸಂತ್ರಸ್ತೆಗೆ ಜಿಲ್ಲಾಡಳಿತದಿಂದ ನೆರವು – ಲಕ್ಷ್ಮಿ ಹೆಬ್ಬಾಳ್ಕರ್‌

Muda Scam have MUDA officials tampered the letter written by CM Siddaramaiahs wife Parvathi 1

ಸಾಕಷ್ಟು ಕಾನೂನು ತಜ್ಞರು ಹೇಳಿದ್ದಾರೆ ಸಿಎಂ ವಿರುದ್ಧದ ಮೂಡಾ ಕೇಸ್‌ನಲ್ಲಿ (MUDA Case) ಯಾವುದೇ ಹುರುಳಿಲ್ಲ ಅಂತ. ಸಾಕಷ್ಟು ಕೇಸ್ ರಾಜ್ಯಪಾಲರ ಮುಂದೆ ಇದೆ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ, ನಿರಾಣಿ ಕೇಸ್‌ಗಳು ಇವೆ. ಅವುಗಳನ್ನು ಬಿಟ್ಟು ಸಿದ್ದರಾಮಯ್ಯರ ಕೇಸ್ ಮಾತ್ರ ಯಾಕೆ? ರಾಜ್ಯಪಾಲರು ರಾಷ್ಟ್ರಪತಿಗಳ ಪ್ರತಿನಿಧಿ. ಸಂವಿಧಾನದ ಮೇಲೆ ಕೆಲಸ ಮಾಡುವವರು. ಬೆಳಗ್ಗೆ ದೂರು ಕೊಟ್ರೆ ಸಂಜೆ ನೋಟಿಸ್‌ ಕೊಟ್ಟಿದ್ದಾರೆ. ಹಳೇ ಪ್ರಕರಣ ಬಿಟ್ಟು ಸಿದ್ದರಾಮಯ್ಯಗೆ ಮಾತ್ರ ನೋಟಿಸ್‌ ಕೊಟ್ಟಿದ್ದಾರೆ. ಇದನ್ನ ‌ನೋಡಿದ್ರೆ ಏನ್ ಅನಿಸುತ್ತೆ ಅಂತ ಗೊತ್ತಾಗುತ್ತೆ? ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

11 ವಿಧೇಯಕ ವಾಪಸ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಹಲವು ಮಹತ್ವದ ಬಿಲ್‌ಗಳು ವಾಪಸ್ ಬಂದಿವೆ. ಇಷ್ಟು ಬಿಲ್ ವಾಪಸ್ ಬಂದ್ರೆ ಹೇಗೆ? ಯಾವ ರಾಜ್ಯಪಾಲರು ಕೂಡ ಇಷ್ಟು ಬಿಲ್ ವಾಪಸ್‌ ಕಳುಹಿಸಿರಲಿಲ್ಲ ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: T20 World Cup | ಪಾಕ್ ತಂಡಕ್ಕೆ 22ರ ತರುಣಿ ಫಾತಿಮಾ ಸನಾ ನಾಯಕಿ!

ಇದೇ ಸಂದರ್ಭದಲ್ಲಿ ದಲಿತ ಸಿಎಂ ವಿಚಾರದ ಬಗ್ಗೆಯೂ ಮಾತನಾಡಿದ ಸಚಿವ ಹೆಚ್.ಸಿ ಮಹಾದೇವಪ್ಪ, ಪ್ರತಿಯೊಂದು ಸಮುದಾಯಕ್ಕೆ ಅವಕಾಶ ಸಿಗಬೇಕು. ಆದ್ರೆ ಅದಕ್ಕೆ ಕಾಲ ಬರಬೇಕು. ಈಗ ಸಿಎಂ ಇದ್ದಾರೆ, ಇನ್ನೊಬ್ಬ ಸಿಎಂ ಅವಶ್ಯಕತೆ ಇಲ್ಲ ಎಂದರಲ್ಲದೇ ಆಪರೇಷನ್ ಕಮಲಕ್ಕಾಗಿ, ಕಾಂಗ್ರೆಸ್ ಶಾಸಕರಿಗೆ ಆಮಿಷ ನೀಡುತ್ತಿರುವುದು ಹೊಸ ವಿಚಾರ ಅಲ್ಲ. ಬಿಜೆಪಿಗೆ ಯಾವತ್ತು ಜನರು ಮ್ಯಾಂಡೇಟ್ ಕೊಟ್ಟಿಲ್ಲ. ಸರ್ಕಾರವನ್ನು ಅತಂತ್ರ ಮಾಡಲು ಹೊರಟಿದ್ದಾರೆ. ಹಿಂದೆ ‌ಬೊಮ್ಮಾಯಿ‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಕೊಟ್ಟಿದೆ. ಬಿಜೆಪಿ ಆಪರೇಷನ್ ಮಾಡಿ ಸರ್ಕಾರ ಮಾಡಿತ್ತು. ಬಿಜೆಪಿ ಸರ್ಕಾರ ಸಕ್ಸಸ್ ಆಗಿಲ್ಲ. ಹಗರಣದಲ್ಲಿ ಬಿಜೆಪಿ ಸರ್ಕಾರ ಸಿಲುಕಿತು. ಮತ್ತೆ ಹಳೇ ಚಾಳಿ ಬಿಜೆಪಿಗರು ಮುಂದುವರಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ದಸರಾ ಉದ್ಘಾಟನೆ ಬಗ್ಗೆ ಮಾತನಾಡಿ, ದಸರಾ ಉದ್ಘಾಟಕರ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಯಾರು ಮಾಡಬೇಕು ಅನ್ನೋದನ್ನ ಸಿಎಂ ನಿರ್ಧಾರ ಮಾಡ್ತಾರೆ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ಓವರ್‌ ಕಾನ್ಫಿಡೆನ್ಸ್‌ನಿಂದ‌ ಪಾಕ್‌ಗೆ ತವರಿನಲ್ಲೇ ಹೀನಾಯ ಸೋಲು – ಬಾಂಗ್ಲಾಕ್ಕೆ 10 ವಿಕೆಟ್‌ಗಳ ಭರ್ಜರಿ ಗೆಲುವು!

TAGGED:bjpcongressH.C. MahadevappajdsMUDA Casesiddaramaiahಕಾನೂನು ತಜ್ಞರುಮುಡಾ ಕೇಸ್‌ಸಿದ್ದರಾಮಯ್ಯಹೆಚ್.ಸಿ.ಮಹದೇವಪ್ಪ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

two people die after drinking spirit one in critical condition two detained in koppal
Crime

ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ

Public TV
By Public TV
3 hours ago
Sri Lanka
Cricket

T20 World Cup: ಐರ್ಲೆಂಡ್‌ ವಿರುದ್ಧ ಶ್ರೀಲಂಕಾಗೆ 20 ರನ್‌ಗಳ ಗೆಲುವು

Public TV
By Public TV
3 hours ago
Narges Mohammadi
Latest

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಇರಾನ್‌

Public TV
By Public TV
4 hours ago
Banavar Car Accident
Crime

ಬಾಣಾವರ | ಮೂರು ಕಾರುಗಳ‌ ನಡುವೆ ಸರಣಿ‌‌ ಅಪಘಾತ – ಇಬ್ಬರ ಸಾವು‌, ಐವರಿಗೆ ಗಾಯ

Public TV
By Public TV
4 hours ago
Nagalakshmi Choudhary
Davanagere

ʻಕೈʼ ಮುಖಂಡನ ಪುತ್ರರಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ – ಕಾನೂನು ಎಲ್ಲರಿಗೂ ಒಂದೇ, ಶಿಕ್ಷೆ ಆಗುತ್ತೆ: ನಾಗಲಕ್ಷ್ಮೀ ಚೌಧರಿ

Public TV
By Public TV
5 hours ago
bidar bike accident three died
Bidar

ಬೀದರ್| ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?