Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

ಸಿದ್ದರಾಮಯ್ಯನಿಂದ ನನಗೂ, ಹೆಗಡೆಗೂ ಗಲಾಟೆಯಾಗಿತ್ತು: ಹೆಚ್‍ಡಿಡಿ

Public TV
Last updated: March 16, 2024 8:18 am
Public TV
Share
3 Min Read
hd devegowda 2
SHARE

-ಮೋದಿ ದೇಶದ ಸರ್ವೋಚ್ಚ ನಾಯಕ

ಚಿಕ್ಕಮಗಳೂರು: ಸಿದ್ದರಾಮಯ್ಯ (Siddaramaiah) ಯಾರನ್ನ ಮಂತ್ರಿ ಮಾಡಿದ್ದ? ನನ್ನ ಅಭಿಮಾನಿ ಕೆ.ಎಂ ಕೃಷ್ಣಮೂರ್ತಿಯನ್ನೂ ಮಂತ್ರಿ ಮಾಡಲಿಲ್ಲ. ಸ್ವಜಾತಿಯವರನ್ನೇ ಬೆಳೆಯಲು ಬಿಡಲಿಲ್ಲ ಎಂದು ಸಿಎಂ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (H. D Deve Gowda) ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಕಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಒಡನಾಡಿಗಳನ್ನು ಸಿದ್ದರಾಮಯ್ಯ ಮಂತ್ರಿ ಮಾಡಲಿಲ್ಲ. ಈ ಮಾತನ್ನು, ಇವತ್ತು ಹೇಳುತ್ತೇನೆ ನಾಳೆಯೂ ಹೇಳುತ್ತೇನೆ. ಸಿದ್ದರಾಮಯ್ಯನನ್ನೇ ಕೇಳಿ ಎಂದು ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಮೋದಿ ರಣಕಹಳೆ – ಇಂದು ಖರ್ಗೆ ಕೋಟೆಗೆ ನಮೋ ಎಂಟ್ರಿ

ಸಿದ್ದರಾಮಯ್ಯ ಮೋಸ ಮಾಡುತ್ತಾರೆ. ಮಂತ್ರಿ ಮಾಡಬೇಡ ಎಂದು ಹೆಗಡೆಯವರು ಹೇಳಿದ್ದರು. ಈ ವಿಚಾರಕ್ಕೆ ಹೆಗಡೆ ಮತ್ತು ನನಗೂ ಹೋರಾಟ ಆಯಿತು. ವಾಲ್ಮೀಕಿ ಸಮುದಾಯದ ತಿಪ್ಪೇಸ್ವಾಮಿ ಅವರನ್ನು ಮಂತ್ರಿ ಮಾಡುವಂತೆ ಮನೆಯ ಒಳಗೆ ಕೂರಿಸಿಕೊಂಡು ನನಗೆ ಹೇಳಿದ್ದರು. ಹಿಂದುಳಿದ ವರ್ಗದವರನ್ನೇ ಮಾಡುವುದಾದರೆ ತಿಪ್ಪೇಸ್ವಾಮಿ ಮಾಡು, ಸಿದ್ದರಾಮಯ್ಯನ ಮಾಡಬೇಡ ಎಂದಿದ್ದರು. ನಾನು ಸುಳ್ಳನ್ನು ಹೇಳಿ ಪಾಪದ ಕೆಲಸ ಮಾಡುವುದಿಲ್ಲ. ನನಗೆ ಮಂಡಿ ನೋವಿದೆ. ಆದರೆ ಜ್ಞಾಪಕ ಶಕ್ತಿ ಹಾಗೆ ಉಳಿದಿದೆ ಎಂದಿದ್ದಾರೆ.

ಮೋದಿ (Narendra Modi) ದೇಶದ ಸರ್ವೋಚ್ಚ ನಾಯಕ. ಅವರ ಸಮಾನವಾಗಿ ಯಾವ ನಾಯಕರು ದೇಶದಲ್ಲಿ ಇಲ್ಲ. ಎನ್‍ಡಿಎ ಕೂಟದಲ್ಲಿ ಮೋದಿ ಸಮಕ್ಕೆ ಯಾರು ಇಲ್ಲ. ಒಂದೊಂದು ಚಾನೆಲ್‍ನಲ್ಲಿ ಒಂದೊಂದು ಸಮೀಕ್ಷೆ ಬರುತ್ತಿದೆ. ಇದಕ್ಕೆಲ್ಲ ಯಾರು ತಲೆಕೆಡಿಸಿಕೊಳ್ಳಬೇಕಿಲ್ಲ. ಮೋದಿ ಮತ್ತೆ ಈ ದೇಶದ ಪ್ರಧಾನಿಯಾಗುತ್ತಾರೆ. ರಾಹುಲ್ ಗಾಂಧಿ ಅಧಿಕಾರಕ್ಕೆ ಬಂದರೆ ಸಾಲ ಮನ್ನಾ ಮಾಡುತ್ತೇನೆ ಎಂದಿದ್ದಾರೆ. ಹಿಂದೆಯೇ ಕುಮಾರಸ್ವಾಮಿ (HD Kumaraswamy) ಸಾಲ ಮನ್ನಾ ಮಾಡಿದ್ದರು. 26 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದ್ದು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ. ಹಾಸನ ಕ್ಷೇತ್ರದ ಜನರು ನನ್ನ ಗೆಲ್ಲಿಸಿದ್ದಾರೆ ಅವರ ಋಣ ತೀರಿಸಬೇಕು ಎಂದಿದ್ದಾರೆ.

ಇದೇ ವೇಳೆ, ಸಿಎಂ ಸಿದ್ದರಾಮಯ್ಯ ಆಪ್ತ ಶಾಸಕ ಜಿ.ಹೆಚ್ ಶ್ರೀನಿವಾಸ್ ಅಳಿಯ ಚೇತನ್ ಕೆಂಪರಾಜು ಜೆಡಿಎಸ್‍ಗೆ ಸೇರ್ಪಡೆಗೊಂಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಮ್ಮ ಕುಟುಂಬ ಜೆಡಿಎಸ್ ಹಾಗೂ ಕಾಂಗ್ರೆಸ್ಸಿನ ಜೊತೆ ಗುರುತಿಸಿಕೊಂಡಿತ್ತು. ನಮ್ಮ ದೊಡ್ಡಪ್ಪ ದಿವಂಗತ ಮಾಜಿ ಶಾಸಕ ಕೆ.ಎಂ ಕೃಷ್ಣಮೂರ್ತಿ, ನಮ್ಮ ಅಪ್ಪ ಕೆ.ಎಂ. ಕೆಂಪರಾಜು ಸಿದ್ದರಾಮಯ್ಯ ಒಟ್ಟಿಗಿದ್ದರು. ದೊಡ್ಡಪ್ಪ, ನಮ್ಮಪ್ಪ ನಿಧನವಾದ ನಂತರ ನಮಗೆ ರಾಜಕೀಯ ನೆಲೆ ಇಲ್ಲದಂತಾಗಿತ್ತು. ನಮ್ಮನ್ನು ಗುರುತಿಸಿದ ಪ್ರಜ್ವಲ್ ರೇವಣ್ಣ ರಾಜಕೀಯ ಸ್ಥಾನಮಾನ ಕೊಡುವ ಭರವಸೆ ಕೊಟ್ಟಿದ್ದಾರೆ. ರಾಜಕೀಯ ಹಿತೈಷಿಗಳು, ಕಡೂರಿನ ಜನರ ಸಲಹೆಯಂತೆ ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿಕೊಂಡು ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಬಲಿಸಿದ್ದೇನೆ. ನಾನು ಶಾಸಕ ಶ್ರೀನಿವಾಸ ಅವರ ಅಳಿಯ ಎನ್ನುವುದಕ್ಕಿಂತ ಕಡೂರು ಕ್ಷೇತ್ರದ ಮಗ ಎಂದಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರದ ಗೆಲುವಿಗೆ ದೇವೇಗೌಡರು ರಣತಂತ್ರ ಹೆಣೆಯಲು ಆರಂಭಿಸಿದ್ದಾರೆ. ಬಿಜೆಪಿ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ನಿವಾಸಕ್ಕೆ ಪುತ್ರ ಹೆಚ್.ಡಿ.ರೇವಣ್ಣ, ಮೊಮ್ಮಗ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ವೈ.ಎಸ್.ವಿ ದತ್ತರೊಂದಿಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಕಡೂರಿನಲ್ಲಿ ಮೊದಲು ಜೆಡಿಎಸ್ ಕಾರ್ಯಕರ್ತರು ಸಭೆ ನಡೆಸಿ ಸಂಸದ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ನಡೆಸಿದರು. ಬಳಿಕ ಕಡೂರಿನ ಬಿಜೆಪಿ ಪಕ್ಷದ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ನಿವಾಸಕ್ಕೆ ತೆರಳಿದರು. ಅಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲ್ ಧರಿಸಿ ದೊಡ್ಡಗೌಡರನ್ನು ಸ್ವಾಗತಿಸಿದರು. ಇದನ್ನೂ ಓದಿ: ಬಾಂಡ್‌ ಬರುವ ಮೊದಲು ಚುನಾವಣೆಗೆ ಫಂಡಿಂಗ್‌ ಹೇಗೆ ನಡೆಯುತ್ತಿತ್ತು – ದೇಶದ ಜನತೆಗೆ ಅಮಿತ್‌ ಶಾ ಪ್ರಶ್ನೆ

TAGGED:General Elections 2024H.D.Deve Gowdahd kumaraswamyjdsnarendra modisiddaramaiahಕುಮಾರಸ್ವಾಮಿಸಿದ್ದರಾಮಯ್ಯಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema Updates

TAAPSEE PANNU 2
ಮುಂಬೈನಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿಸಿದ ತಾಪ್ಸಿ ಪನ್ನು- ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
3 hours ago
prashanth neel
ಜ್ಯೂ.ಎನ್‌ಟಿಆರ್ ಹುಟ್ಟುಹಬ್ಬದಂದು ಪ್ರಶಾಂತ್ ನೀಲ್ ಜೊತೆಗಿನ ಚಿತ್ರದಿಂದ ಅಪ್‌ಡೇಟ್ ಸಿಗಲ್ಲ, ಯಾಕೆ?
4 hours ago
sreeleela 1
ಬಾಲಿವುಡ್ ಚಿತ್ರಕ್ಕಾಗಿ ಸಂಭಾವನೆ ಇಳಿಸಿಕೊಂಡ್ರಾ ‘ಕಿಸ್ಸಿಕ್’ ಬೆಡಗಿ?
4 hours ago
shamanth gowda 1 1
ಹಸೆಮಣೆ ಏರಿದ ‘ಬಿಗ್ ಬಾಸ್’ ಖ್ಯಾತಿಯ ಶಮಂತ್ ಗೌಡ
6 hours ago

You Might Also Like

Punjab 3
Cricket

ಯಶಸ್ವಿ, ವೈಭವ್‌ ಹೋರಾಟ ವ್ಯರ್ಥ, ಪಂಜಾಬ್‌ಗೆ 10 ರನ್‌ ರೋಚಕ ಜಯ – ಪ್ಲೇ ಆಫ್‌ಗೆ ಇನ್ನೂ ಹತ್ತಿರ!

Public TV
By Public TV
6 minutes ago
RCB Rain chinnaswamy stadium bengaluru
Cricket

ಭಾರೀ ಮಳೆಯಿಂದ ಪಂದ್ಯ ರದ್ದು – ನಿರಾಸೆಗೊಂಡಿದ್ದ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಆರ್‌ಸಿಬಿ!

Public TV
By Public TV
11 minutes ago
R Ashok 5
Chikkamagaluru

ಕಾಂಗ್ರೆಸ್ ಬಿದ್ದು ಹೋಗುವ ನುಗ್ಗೆ ಮರ: ಆರ್.ಅಶೋಕ್ ಲೇವಡಿ

Public TV
By Public TV
50 minutes ago
Lashkar terrorist
Latest

2006ರಲ್ಲಿ RSS ಕಚೇರಿ ಮೇಲಿನ ದಾಳಿಯ ಪ್ರಮುಖ ಸಂಚುಕೋರ, ಲಷ್ಕರ್ ಉಗ್ರ ಪಾಕ್‌ನಲ್ಲಿ ಹತ್ಯೆ

Public TV
By Public TV
54 minutes ago
Zameers comment on Kumaraswamy wrong says Priyank Kharge
Bengaluru City

ಆಪರೇಷನ್ ಸಿಂಧೂರ ಬಗ್ಗೆ ಸರಿಯಾದ ಮಾಹಿತಿ ಕೊಟ್ಟಿಲ್ಲ – ಸಂಸತ್ ಅಧಿವೇಶನ ಕರೆಯಲು ಪ್ರಿಯಾಂಕ್ ಖರ್ಗೆ ಒತ್ತಾಯ

Public TV
By Public TV
1 hour ago
Nusraat Faria 1
Crime

ಮುಜೀಬ್ ಬಯೋಪಿಕ್‌ನಲ್ಲಿ ಶೇಖ್ ಹಸೀನಾ ಪಾತ್ರದಲ್ಲಿ ನಟಿಸಿದ್ದ ಬಾಂಗ್ಲಾ ನಟಿ ಅರೆಸ್ಟ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?