Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Districts

ಈ ಸರ್ಕಾರ ತೆಗೆಯೋವರೆಗೆ ಮನೆಯಲ್ಲಿ ಮಲಗಲ್ಲ – ಗುಡುಗಿದ ಗೌಡರು

Public TV
Last updated: November 9, 2024 6:38 pm
Public TV
Share
3 Min Read
HD Devegowda 1
SHARE

– ಸಿದ್ದರಾಮಯ್ಯನನ್ನ ಹಣಕಾಸು ಮಂತ್ರಿ ಮಾಡಿದ್ದಕ್ಕೆ ರಾಜ್ಯವನ್ನ ಈ ಸ್ಥಿತಿಗೆ ತಂದಿದ್ದಾರೆಂದು ಬೇಸರ

ರಾಮನಗರ: ರಾಜ್ಯದಲ್ಲಿ ಇನ್ನು 15 ತಿಂಗಳಲ್ಲಿ ಗ್ಯಾರಂಟಿಗಳು (Congress Guarantee) ಸ್ಥಗಿತಗೊಳ್ಳುತ್ತವೆ. ಗೃಹಲಕ್ಷ್ಮಿಯ ಹಣ ಈಗ ಚನ್ನಪಟ್ಟಣದ ಜನರಿಗೆ ಹಂಚಿಕೆ ಮಾಡುತ್ತಿದ್ದಾರೆ. ಇವರಿಗೆ ತಿಂದು ತಿಂದು ತೇಗಿ ತೇಗಿ ಅಜೀರ್ಣ ಆಗಿದೆ. ವಾಲ್ಮೀಕಿ ನಿಗಮದ ಹಣ ತೆಲಂಗಾಣ ಚುನಾವಣೆಗೆ ಬಳಕೆ ಮಾಡಿದ್ರು. ಈ ಸರ್ಕಾರ ತೆಗೆಯೋವರೆಗೂ ನಾನು ಮನೆಯಲ್ಲಿ ಮಲಗಲ್ಲ ಎಂದು ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ (HD DeveGowda) ಅವರು ಶಪಥ ಮಾಡಿದರು.

ಚನ್ನಪಟ್ಟಣದಲ್ಲಿ (Channapatna) ಮೊಮ್ಮಗನ ಪರ ಮಾಜಿ ಪ್ರಧಾನಿ ದೇವೇಗೌಡರು ಇಂದೂ ಸಹ ಭರ್ಜರಿ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಹುಟ್ಟೂರಾದ ಚಕ್ಕೆರೆ ಗ್ರಾಮದಲ್ಲಿ ಗೌಡರು ಮತಬೇಟೆ ನಡೆಸಿದ್ದಾರೆ. ಚಕ್ಕೆರೆ ಗ್ರಾಮಕ್ಕೆ ದೇವೇಗೌಡರು ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಅದ್ಧೂರಿ ಸ್ವಾಗತ ಕೋರಿದರು. ವಾದ್ಯ, ಪೂರ್ಣಕುಂಭದೊಂದಿಗೆ ಹೂಮಳೆ ಸುರಿಸಿ ಬರಮಾಡಿಕೊಂಡರು. ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ನಿಖಿಲ್‌ (Nikhil Kumaraswamy) ಪರ ಮತಯಾಚನೆ ನಡೆಸಿದ ದೇವೇಗೌಡರು, ಕಾಂಗ್ರೆಸ್‌ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಚಕ್ಕೆರೆ ಗ್ರಾಮಕ್ಕೆ ನಾನು ಮೊದಲ ಬಾರಿಗೆ ಬರ್ತಿದ್ದೇನೆ. ನಿಖಿಲ್ ಕುಮಾರಸ್ವಾಮಿ ಎರಡು ಬಾರಿ ಸೋತಿದ್ದಾರೆ. ನಿಖಿಲ್ ಇನ್ಮುಂದೆ ಚುನಾವಣೆಗೆ ನಿಲ್ಲೋದಿಲ್ಲ ಅಂದರು. ಅಲ್ಲಿವರೆಗೂ ಕಾಂಗ್ರೆಸ್ ಅಭ್ಯರ್ಥಿ ಯಾರು ಅನ್ನೋ ಗುಟ್ಟು ಯಾರಿಗೂ ಬಿಟ್ಟಿಕೊಡಲಿಲ್ಲ? ನಿಖಿಲ್ ಚುನಾವಣೆಗೆ ನಿಲ್ಲುತ್ತಾರೆ ಅಂತ ಅವರು ಕನಸುಮನಸಿನಲ್ಲೂ ಅಂದುಕೊಂಡಿರಲಿಲ್ಲ. ಈಗಾಗಲೇ 18 ಸಭೆ ನಾನು ಮಾಡಿದ್ದೇನೆ. ನಿಖಿಲ್ ಕುಮಾರಸ್ವಾಮಿ ನೆಪದಲ್ಲಿ ನಿಮ್ಮನ್ನ ನೋಡೋ ಪುಣ್ಯ ಸಿಕ್ಕಿದೆ. 1973 ರಲ್ಲಿ ವಿಪಕ್ಷ ನಾಯಕನಾಗಿ ದೇವರಾಜ್ ಅರಸು ವಿರುದ್ಧ ಹೋರಾಟ ಮಾಡಿದ್ದೆ. ಅಂದು ಸೊಪ್ಪು ಸಾರು ಮಾಡಿದ ರೀತಿ ಇವತ್ತು ಸೊಪ್ಪು ಸಾರು ಸಿಗ್ತಿಲ್ಲ ಎಂದು ಹಳೆ ನೆನಪುಗಳನ್ನ ಮೆಲುಕುಹಾಕಿದರು. ಇದನ್ನೂ ಓದಿ: ಯೋಗ ಶಿಕ್ಷಕಿ ಕಿಡ್ನ್ಯಾಪ್‌ ಕೇಸ್: ಘಟನೆ ಬಳಿಕ ಟೆಂಪಲ್ ರನ್ ನಡೆಸಿದ್ದ ಆರೋಪಿಗಳು ಅರೆಸ್ಟ್

ದೇವೇಗೌಡ ಮೊಮ್ಮಗನನ್ನ ಗೆಲ್ಲಿಸೋಕೆ ಇಲ್ಲಿಗೆ ಬಂದಿಲ್ಲ. ಈ ರಾಜ್ಯದಲ್ಲಿ ಇನ್ನೂ 15 ತಿಂಗಳಲ್ಲಿ 5 ಗ್ಯಾರಂಟಿಗಳೂ ಸ್ಥಗಿತವಾಗಲಿದೆ. ನನ್ನ ಮಗ ʻಪಂಚರತ್ನʼ ಕಾರ್ಯಕ್ರಮ ಇಟ್ಟುಕೊಂಡಿದ್ದ. ಗ್ಯಾರಂಟಿಗೂ ʻಪಂಚರತ್ನʼಕ್ಕೂ ಎಲ್ಲಿಯ ಸಂಬಂಧ? 5 ಗ್ಯಾರಂಟಿಯಲ್ಲಿ 1 ಗ್ಯಾರಂಟಿ ಮುಗಿದು ಹೋಗಿದೆ. ಗೃಹಲಕ್ಷ್ಮಿ ಹಣ ಈಗ ಚನ್ನಪಟ್ಟಣದ ಜನರಿಗೆ ಹಂಚಿಕೆ ಮಾಡುತ್ತಿದ್ದಾರೆ. ಇವರಿಗೆ ತಿಂದು ತಿಂದು ತೇಗಿ ತೇಗಿ ಅಜೀರ್ಣ ಆಗಿದೆ. ವಾಲ್ಮೀಕಿ ನಿಗಮದ ಹಣ ತೆಲಂಗಾಣ ಚುನಾವಣೆಗೆ ಬಳಕೆ ಮಾಡಿದ್ರು. ಈ ಸರ್ಕಾರ ತೆಗೆಯೋವರೆಗೂ ನಾನು ಮನೆಯಲ್ಲಿ ಮಲಗಲ್ಲ ಎಂದು ಶಪಥ ಮಾಡಿದರು. ಇದನ್ನೂ ಓದಿ: ಟ್ರಂಪ್‌ಗೆ `ಎಕ್ಸ್‌’ನಲ್ಲಿ ಪಾಕ್ ಪ್ರಧಾನಿ ಅಭಿನಂದನೆ – ಬ್ಯಾನ್ ಮಾಡಿದ್ದ ಸೋಶಿಯಲ್‌ ಮೀಡಿಯಾ ವೇದಿಕೆ ಬಳಸಿದ್ದಕ್ಕೆ ಜನರ ಆಕ್ಷೇಪ

ಕುಮಾರಸ್ವಾಮಿ ಮೇಲೆ ಕೇಸ್ ಹಾಕಿಸ್ತಾರೆ. ನಾನು ರೈತನ ಮಗನಾಗಿ ಹುಟ್ಟಿದ್ದೇನೆ. ಎಂತವರನ್ನ ಎದುರಿಸಿದ್ದೇನೆ. ಕುಮಾರಸ್ವಾಮಿ ಮೇಲೆ ಕೇಸ್ ಹಾಕ್ತಿರಾ. ಇದಕ್ಕೆ ನಾವು ಹೆದರೊಲ್ಲ. ನಾನು ಯಡಿಯೂರಪ್ಪ ಈ ಸರ್ಕಾರ ತೆಗೆಯೋವರೆಗೂ ನಿರಂತರವಾಗಿ ಕೆಲಸ ಮಾಡ್ತೀವಿ. ಸಾವಿರಾರು ಮಕ್ಕಳಿಗೆ ಕೆಲಸ ಕೊಡ್ತೀವಿ ಅಂತ ಕುಮಾರಸ್ವಾಮಿ ಜಾಗ ಕೇಳಿದ್ರೆ ಒಬ್ಬ ಮಂತ್ರಿ ಕೊಡೊಲ್ಲ ಅಂತಾನೆ. ಕುಮಾರಸ್ವಾಮಿ ತನ್ನ ಮಗನಿಗೆ ಜಾಗ ಕೇಳಿಲ್ಲ. ಜನರಿಗಾಗಿ ಕೇಳಿದರು, ಆದ್ರೂ ಕೊಡೊಲ್ಲ ಅಂತಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: `ಭಾಗ್ಯಲಕ್ಷ್ಮಿ’ ಯೋಜನೆಗೆ ಹಣ ಕೊಡಲಾರದಷ್ಟೂ ಸರ್ಕಾರ ದಿವಾಳಿಯಾಗಿದೆ: ಬಿಎಸ್‌ವೈ ಕಿಡಿ

ನನ್ನ ಮೊಮ್ಮಗ ವಿಧಾನಸಭೆಗೆ ಆಯ್ಕೆ ಆಗೋದು ನೂರಕ್ಕೆ ನೂರು ಸತ್ಯ. ಸಿದ್ದರಾಮಯ್ಯ ನಿನ್ನನ್ನ ಹಣಕಾಸು ಮಂತ್ರಿ ಮಾಡಿದ್ದೆ. ಇವತ್ತು ಈ ರಾಜ್ಯವನ್ನು ಇಂತಹ ಪರಿಸ್ಥಿತಿಗೆ ತಂದಿದ್ದೀಯಪ್ಪ ನಿನಗೆ ನಮಸ್ಕಾರ. ಡಿಕೆಶಿ ಚುನಾವಣೆಗೆ ಜನರ ಹಣ ಕಳಿಸ್ತಿದ್ದಾರೆ. ಇದರ ವಿರುದ್ಧ ಹೋರಾಟ ಮಾಡ್ತೀನಿ. ಈ ಉಸಿರು ಇರೋವರೆಗೂ ನಾನು ಹೋರಾಟ ಮಾಡ್ತೀನಿ ಎಂದು ಗುಡುಗಿದರು.

TAGGED:Channapatna By ElectionHD Devegowdanikhil kumaraswamysiddaramaiahಚನ್ನಪಟ್ಟಣ ಉಪಚುನಾವಣೆನಿಖಿಲ್ ಕುಮಾರಸ್ವಾಮಿಸಿದ್ದರಾಮಯ್ಯಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema Updates

upendra
ಕುಟುಂಬ ಸಮೇತ ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಉಪೇಂದ್ರ
2 hours ago
rakesh poojary
‘ಕಾಂತಾರ ಚಾಪ್ಟರ್ 1’ ಸಿನಿಮಾ ಶೂಟಿಂಗ್ ಮುಗಿಸಿಕೊಟ್ಟಿದ್ದ ರಾಕೇಶ್ ಪೂಜಾರಿ
2 hours ago
Actor Vishal 1
Transgender Beauty Contest | ವೇದಿಕೆಯಲ್ಲೇ ಪ್ರಜ್ಞೆ ತಪ್ಪಿದ ನಟ ವಿಶಾಲ್
2 hours ago
rakesh pooojary rakshitha
ಮೃದು ಸ್ವಭಾವದ ವ್ಯಕ್ತಿತ್ವ ನಿನ್ನದು – ರಾಕೇಶ್ ಪೂಜಾರಿ ನಿಧನಕ್ಕೆ ರಕ್ಷಿತಾ ಸಂತಾಪ
3 hours ago

You Might Also Like

Delhi Airport
Latest

ಭಾರತ-ಪಾಕ್‌ ಉದ್ವಿಗ್ನತೆಯಿಂದ ಬಂದ್‌ ಆಗಿದ್ದ 32 ಏರ್‌ಪೋರ್ಟ್‌ಗಳು ಮತ್ತೆ ಕಾರ್ಯಾರಂಭ

Public TV
By Public TV
20 minutes ago
Pakistan Terrorist Funeral
Latest

ಲಷ್ಕರ್ ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನಾಧಿಕಾರಿಗಳು ಭಾಗಿ – ಭಾರತ ತೀವ್ರ ಆಕ್ಷೇಪ

Public TV
By Public TV
30 minutes ago
08 NEWS
Latest

ಭಾರತ-ಪಾಕ್ ʻಕದನ-ವಿರಾಮʼ ಮಾತುಕತೆ – ಇಂದು ಎರಡೂ ದೇಶಗಳ ಡಿಜಿಎಂಒಗಳ ಸಭೆ

Public TV
By Public TV
1 hour ago
Accident
Bengaluru City

ಭೀಕರ ಅಪಘಾತ – ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸ್ತಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
1 hour ago
balochistan liberation army
Latest

ಯುದ್ಧ ಭೀತಿ ನಡುವೆ ಮತ್ತೊಂದು ಶಾಕ್‌ – ಪಾಕಿಸ್ತಾನದ 51 ಸ್ಥಳಗಳ ಮೇಲೆ ಬಲೂಚ್‌ ಹೋರಾಟಗಾರರಿಂದ ದಾಳಿ

Public TV
By Public TV
2 hours ago
ISRO
Bengaluru City

ಉಗ್ರರ ಸಂಹಾರಕ್ಕೆ ಭಾರತೀಯ ಸೇನೆಗೆ ನೆರವಾಗಿದ್ದು ಬೆಂಗಳೂರಿನ ʻಇಸ್ರೋʼ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?