ಬೆಂಗಳೂರು: ಪಹಲ್ಗಾಮ್ ಉಗ್ರರ ದಾಳಿಗೆ (Pahalgam Terror Attack) ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರ ಯಾವುದೇ ನಿರ್ಣಯ ತೆಗೆದುಕೊಂಡರೂ ನನ್ನ ಸಂಪೂರ್ಣ ಬೆಂಬಲ ಇರಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H D Devegowda) ಹೇಳಿದರು.
ಪಹಲ್ಗಾಮ್ ಘಟನೆಗೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಶ್ಮೀರ ಘಟನೆ ಬಗ್ಗೆ ಕೇಂದ್ರ ಸರ್ಕಾರ ನಿರ್ಣಯ ತೆಗೆದುಕೊಂಡಿದೆ. ಮೊದಲ ಬಾರಿಗೆ ಪ್ರವಾಸಿಗರ ಮೇಲೆ ಉಗ್ರರು ದಾಳಿ ಮಾಡಿದ್ದಾರೆ. ಪಾಕಿಸ್ತಾನದ (Pakistan) ಬೆಂಬಲದಿಂದ ಮಾಡಿದ್ದಾರೆ ಎಂಬ ಮಾಹಿತಿ ಕೇಂದ್ರದ ಬಳಿ ಇದೆ. ಇಡೀ ದೇಶದ ಎಲ್ಲಾ 140 ಕೋಟಿ ಜನರು ಈ ವಿಷಯದಲ್ಲಿ ಕೇಂದ್ರ ಸರ್ಕಾರ ಹಾಗೂ ಮೋದಿ ಅವರ ನೇತೃತ್ವದಲ್ಲಿ ಯಾವ ಕ್ರಮ ತೆಗೆದುಕೊಳ್ಳುತ್ತಾರೋ ಅದಕ್ಕೆ ಎಲ್ಲರೂ ಬೆಂಬಲ ಕೊಡಬೇಕು. ಒಂದೇ ಧ್ವನಿಯಲ್ಲಿ ಬೆಂಬಲ ಕೊಡಬೇಕು ಎಂದರು. ಇದನ್ನೂ ಓದಿ: Pahalgam Terrorist Attack | ನಾಳೆ ಮೋದಿ ನೇತೃತ್ವದಲ್ಲಿ 2ನೇ ಸುತ್ತಿನ ಹೈವೋಲ್ಟೇಜ್ ಸಭೆ
ನಾನು ರಾಜಕೀಯ ಪಕ್ಷದ ನಾಯಕ, ಎನ್ಡಿಎ ಮುಖಂಡನಾಗಿ ಹೇಳುತ್ತೇನೆ. ನಾನು ಪಕ್ಷದ ಅಧ್ಯಕ್ಷನಾಗಿ ಹೇಳುತ್ತೇನೆ. ಕೇಂದ್ರದ ಎಲ್ಲಾ ನಿರ್ಣಯಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ. ಈ ವಿಷಯದಲ್ಲಿ ತೆಗೆದುಕೊಳ್ಳುವ ಎಲ್ಲಾ ನಿರ್ಣಯಕ್ಕೆ ನಮ್ಮ ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಏ.20ರಂದೇ ನಡೆಯಬೇಕಿದ್ದ ಪಹಲ್ಗಾಮ್ ದಾಳಿ 2 ದಿನ ತಡವಾಗಿದ್ದೇಕೆ? – NIA ತನಿಖೆಯಲ್ಲಿ ರೋಚಕ ಅಂಶ
ಪ್ರಧಾನಿ ಮೋದಿ (Narendra Modi) ಅವರೇನು ನನಗೆ ಕರೆ ಮಾಡಿಲ್ಲ. ಮಾಡೋ ಅವಶ್ಯಕತೆಯೂ ಇಲ್ಲ. ಅವಶ್ಯಕತೆ ಬಿದ್ದರೆ ನಾನೇ ಮೋದಿ ಅವರಿಗೆ ಪತ್ರ ಬರೆಯುತ್ತೇನೆ. ನಾನು ಅನೇಕ ಸಮಯದಲ್ಲಿ ಪತ್ರಗಳನ್ನು ಬರೆದಿದ್ದೇನೆ. ಮುಂದೆಯೂ ಬರೆಯುತ್ತೇನೆ. ನನಗೆ ಅನ್ನಿಸಿದ್ದನ್ನ ಆತಂಕ ಇಲ್ಲದೇ ಹೇಳುತ್ತೇನೆ. ಮೋದಿ ಹಾಗೂ ನನ್ನ ಸಂಬಂಧ ಇಂದು-ನಾಳೆ ಅಂತ ಅಲ್ಲ. ನನ್ನ ಜೀವನದ ಕೊನೆ ಘಟ್ಟದಲ್ಲಿ ಈ ನಿರ್ಣಯ ಮಾಡಿದ್ದೇನೆ ಎಂದು ಹೇಳಿದರು.
ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ತಡೆ ಹಿಡಿದಿರುವ ವಿಚಾರ ಮತ್ತು ಯುದ್ಧ ಆಗಬೇಕು ಎಂಬ ಒತ್ತಡಗಳ ವಿಚಾರವಾಗಿ ಪ್ರತಿಕ್ರಿಯಿಸಿದರು. ಯುದ್ದ ಮಾಡಬೇಕು ಅನ್ನುವ ಸನ್ನಿವೇಶದ ಬಗ್ಗೆ ನಮ್ಮ ದೇಶದ ಪ್ರಧಾನಿಗಳು ತೀರ್ಮಾನ ಮಾಡ್ತಾರೆ. ಇಡೀ ರಾಷ್ಟ್ರದ ನಾಯಕತ್ವ ಅಲ್ಲ. ವಿಶ್ವದಲ್ಲಿ ಮೋದಿ ಅವರಿಗೆ ಗೌರವ ಇದೆ. ವಿಶ್ವದ ಅನೇಕ ನಾಯಕರು ಈ ಘಟನೆ ಖಂಡಿಸಿದ್ದಾರೆ. ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಟ್ರಂಪ್ ಕೂಡಾ ಮೊದಲ ಬಾರಿಗೆ ರಿಯಾಕ್ಟ್ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಪಹಲ್ಗಾಮ್ಗೆ ಹೋಗಿದ್ರೆ ಜಮೀರ್, ಖಾದರ್ ಬಿಟ್ಟು ಸಿದ್ದರಾಮಯ್ಯಗೆ ಗುಂಡು ಹೊಡೆಯುತ್ತಿದ್ರು: ಮುತಾಲಿಕ್
ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಬಲ ಕೊಡುವ ಅನೇಕ ರಾಷ್ಟ್ರಗಳು ತಮ್ಮ ಭಾವನೆ ವ್ಯಕ್ತಪಡಿಸಿದ್ದಾರೆ. ಮುಂದೆ ಏನಾಗಬಹುದು ಅನ್ನೋ ಬಗ್ಗೆ ನಾನು ಈಗ ಹೇಳೋಕೆ ಆಗುವುದಿಲ್ಲ. ಆದರೆ ಪ್ರಧಾನಮಂತ್ರಿಗಳು ತೆಗೆದುಕೊಳ್ಳುವ ಆಯಾ ಸನ್ನಿವೇಶಕ್ಕೆ ತಕ್ಕಂತೆ ಏನು ನಿರ್ಣಯ ತೆಗೆದುಕೊಳ್ಳುತ್ತಾರೆ. ಅದಕ್ಕೆ ಇಡೀ ರಾಷ್ಟ್ರದ ಜನತೆ ಬೆಂಬಲ ಕೊಡಬೇಕು. ನಾನು ಒಬ್ಬ ಮಾತ್ರ ಅಲ್ಲ. ಎಲ್ಲರೂ ಬೆಂಬಲ ಕೊಡಬೇಕು. ಇದರಲ್ಲಿ ಯಾರು ರಾಜಕೀಯ ಮಾಡಬಾರದು. ಪ್ರಧಾನಿಗಳು ತೆಗೆದುಕೊಳ್ಳೋ ನಿರ್ಧಾರಕ್ಕೆ ನಾವೆಲ್ಲರೂ ಒಗ್ಗಟ್ಟಿನಿಂದ ಸಹಕಾರ ಕೊಡಬೇಕು. ಇಂತಹ ಘಟನೆ ಮುಂದೆ ನಡೆಯಬಾರದು. ಕೃತ್ಯ ಮಾಡಿರೋರನ್ನ ಪತ್ತೆ ಹಚ್ಚಿ ಅವರಿಗೆ ಶಿಕ್ಷೆ ಕೊಡೋವರೆಗೂ, ಯಾರು ಇದರ ಹಿಂದೆ ಇದ್ದಾರೆ ಅವರಿಗೂ ಶಿಕ್ಷೆ ಕೊಡೋಕೆ ಪ್ರಧಾನಿಗಳು ತೆಗೆದುಕೊಳ್ಳೋ ನಿರ್ಣಯಕ್ಕೆ, ರಕ್ಷಣಾ ಹಾಗೂ ಗೃಹ ಸಚಿವರು ತೆಗೆದುಕೊಳ್ಳೋ ನಿರ್ಧಾರಕ್ಕೆ ನಾವು, ನಮ್ಮ ಪಕ್ಷ ಬದ್ಧರಾಗಿ ಇದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿ ಜೊತೆಗೆ ನಾವಿದ್ದೇವೆ, ಪಾಕ್ ವಿರುದ್ಧ ಇಂದಿರಾ ಗಾಂಧಿಯಂತೆ ಕ್ರಮ ಕೈಗೊಳ್ಳಬೇಕು: ಎಂ.ಬಿ ಪಾಟೀಲ್
ಘಟನೆ ಬಗ್ಗೆ ರಾಜ್ಯ ಕಾಂಗ್ರೆಸ್ ನಾಯಕರು ರಾಜಕೀಯ ಮಾಡ್ತಿರೋ ವಿಚಾರಕ್ಕೆ ಮಾತನಾಡಿದ ಅವರು, ಈಗಾಗಲೇ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರು ಘಟನೆ ಬಗ್ಗೆ ಯಾವುದೇ ಕೊಂಕು ಇಲ್ಲದೇ ಪ್ರಧಾನಿಗಳ ಜೊತೆ ನಿಲ್ಲೋದಾಗಿ ಹೇಳಿದ್ದಾರೆ. ಖರ್ಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು. ಅವರು ಹಿರಿಯ ಮುಖಂಡರು, ಅನುಭವದಿಂದ ಹೇಳಿದ್ದಾರೆ. ಕಾಂಗ್ರೆಸ್ ವರಿಷ್ಠರು ಮಾತಾಡಿರೋ ಮಾತಿಗೆ ಮಾತ್ರ ಬೆಲೆ ಹೆಚ್ಚು. ಇದಕ್ಕಿಂತ ಹೆಚ್ಚು ನಾನೇನೂ ಹೇಳೋದಿಲ್ಲ. ಕಾಂಗ್ರೆಸ್ನ ಸಹಕಾರ ಇದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರ ಮಾತಿಗೆ ಬೆಲೆ ಇಲ್ಲ ಅಂತ ಪರೋಕ್ಷವಾಗಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟರು.