ರಾಮನಗರ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ವಿರುದ್ಧ ಭೂ ಒತ್ತುವರಿ (Land Encroachment) ಆರೋಪ ಹಿನ್ನೆಲೆ ಎರಡನೇ ದಿನವೂ ಸರ್ವೇ (Survey) ಕಾರ್ಯ ಮುಂದುವರಿದಿದೆ.
ಇಂದು ಬಿಡದಿಯ ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ ತೋಟವನ್ನು ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ಮಾಡಿದ್ದಾರೆ. ರೆವೆನ್ಯೂ ಇನ್ಸ್ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಸರ್ವೇ ಕಾರ್ಯ ನಡೆಯುತ್ತಿದ್ದು, ಕುಮಾರಸ್ವಾಮಿ ತೋಟ ಹಾಗೂ ಸುತ್ತಮುತ್ತಲಿನ ಜಮೀನುಗಳನ್ನೂ ಸರ್ವೇ ಮಾಡಲಾಗಿದೆ. ಆಧುನಿಕ ಸರ್ವೇ ಉಪಕರಣಗಳ ಮೂಲಕ ಸರ್ವೇ ಕಾರ್ಯ ನಡೆಸಿ ಜಮೀನಿನ ಮೂಲ ಮಾಲೀಕರನ್ನೂ ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಲಾಗಿದೆ. ಇದನ್ನೂ ಓದಿ: ಚಾಮರಾಜನಗರ: ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿ
Advertisement
Advertisement
ಕಂದಾಯ ಇಲಾಖೆ ಅಧಿಕಾರಿಗಳ ಸರ್ವೆ ಕಾರ್ಯಕ್ಕೆ ಜಮೀನಿನ ಮೂಲ ಮಾಲೀಕರು ಆಕ್ರೋಶ ಹೊರಹಾಕಿದ್ದಾರೆ. ಸರಿಯಾದ ರೀತಿಯಲ್ಲಿ ಸರ್ವೇ ಮಾಡುತ್ತಿಲ್ಲ. ಬೇಕಾಬಿಟ್ಟಿ ಸರ್ವೆ ಮಾಡುತ್ತಿದ್ದಾರೆ. ನೋಟಿಸ್ ಕೊಟ್ಟು ಮೂಲ ಮಾಲೀಕರನ್ನು ಸ್ಥಳಕ್ಕೆ ಕರೆಸಿದ್ದಾರೆ. ಆದರೆ ಕುಮಾರಸ್ವಾಮಿ ಅವರ ತೋಟದ ಒಳಗೆ ಸರ್ವೇ ಮಾಡುವಾಗ ನಮ್ಮನ್ನು ಒಳಗೆ ಬಿಟ್ಟಿಲ್ಲ ಎಂದು ಸರ್ವೇ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಿಂಧೆ ನೇತೃತ್ವದ ಶಿವಸೇನೆಯ 20 ಶಾಸಕರ Y-ಭದ್ರತೆ ವಾಪಸ್ ಪಡೆದ ಫಡ್ನವಿಸ್
Advertisement