Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿಎಂ ಮೇಲೆ ಗಣಿ ಕಳಂಕ- 2 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಎಚ್‍ಡಿಕೆ ಆರೋಪ

Public TV
Last updated: January 13, 2018 1:58 pm
Public TV
Share
3 Min Read
HDK 7
SHARE

ಬೆಂಗಳೂರು: ಅಸೆಂಬ್ಲಿ ಎಲೆಕ್ಷನ್ ಹೊತ್ತಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಗಣಿ ಅಕ್ರಮದ ಆರೋಪ ಕೇಳಿ ಬಂದಿದೆ.

ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ, ಸರ್ಕಾರದ ಗಣಿ ಇಲಾಖೆಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಒಂದು ತಿಂಗಳಲ್ಲಿ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದಿದ್ದೆ. ಆ ಸಮಯ ಈಗ ಬಂದಿದೆ. ಭ್ರಷ್ಟಾಚಾರ ವಿಷಯದ ಬಗ್ಗೆ ಇತ್ತೀಚೆಗೆ ಮಾತನಾಡಲು, ಅಕ್ರಮಗಳ ಬಗ್ಗೆ ನಾವು ಎಷ್ಟು ದಾಖಲೆ ಕೊಟ್ಟರೂ ಹಾಗೂ ತಾರ್ಕಿಕ ಅಂತ್ಯ ಮುಟ್ಟಿಸಲು ಆಗುತ್ತಿಲ್ಲ ಅನ್ನೋ ಬೇಸರ ಇದೆ ಎಂದು ಹೇಳಿದ್ರು.

ಗಣಿ ಇಲಾಖೆ ಮಂತ್ರಿ ನೆಪ ಮಾತ್ರಕ್ಕೆ ಅಷ್ಟೇ. ಸಿಎಂ ಕಚೇರಿಯಲ್ಲೇ ಇಲಾಖೆ ನಿರ್ವಹಣೆ ಆಗುತ್ತಿದೆ. ರಾಮನ ಲೆಕ್ಕ ಕೃಷ್ಣನ ಲೆಕ್ಕ ಆಗುತ್ತಿರೋದು ಅಲ್ಲಿಂದಲೇ. ಗಣಿ ಮಂತ್ರಿ ವಿನಯ್ ಕುಲಕರ್ಣಿ ಅವರನ್ನ ಸಮಾಜ ಒಡೆಯುವ ಕೆಲಸಕ್ಕೆ ನೇಮಿಸಿದ್ದಾರೆ. ಸಿಎಂ ಧರ್ಮ ಪ್ರಚಾರಕ್ಕೆ ವಿನಯ್ ಕುಲಕರ್ಣಿ ಅವರನ್ನ ನೇಮಿಸಿದ್ದಾರೆ ಎಂದು ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ರು.

mnd cm 1

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕು ಬಳಿ ಸುಬ್ಬರಾಯನ ಹಳ್ಳಿ, ತಿಮ್ಮಪ್ಪನ ಗುಡಿ ಬಳಿ ಎಂ.ಎಂ. ಹಿಲ್ಸ್ ಗೆ ಗಣಿ ಗುತ್ತಿಗೆ ನೀಡಲಾಗಿದೆ. ಮುಚ್ಚಂಡಿ ಎಂಟರ್ ಪ್ರೈಸಸ್‍ನಿಂದ ಅಕ್ರಮ ನಡೆದಿದೆ. ಸಿದ್ದರಾಮಯ್ಯ ಅವರ ಸರ್ಕಾರ ಮೂರು ಕಂಪನಿಗಳಿಗೆ ರೈಸಿಂಗ್ ಕಾಂಟ್ರಾಕ್ಟ್ ನೀಡಿದ್ದಾರೆ. ಸುಬ್ಬರಾಯನ ಹಳ್ಳಿ ಬಳಿ 30 ಲಕ್ಷ ಮೆಟ್ರಿಕ್ ಟನ್ ಉತ್ಖನನ ಮಾಡಲು ಅವಕಾಶ ನೀಡಲಿದೆ. ಟೆಂಡರ್ ಕೊಡುವುದಕ್ಕೆ, ಅಗ್ರಿಮೆಂಟ್ ಮಾಡಿಕೊಳ್ಳುವುದಕ್ಕೆ ಮುಂಚೆ ಆ ಕಂಪನಿ ಮೈನಿಂಗ್ ಶುರು ಮಾಡಿದ್ದಾರೆ ಎಂದು ಹೇಳಿದ್ರು.

2014-15 ನೇ ಸಾಲಿನಲ್ಲೇ 2062 ಕೋಟಿ ರೂಪಾಯಿ ಅಕ್ರಮ ನಡೆದಿದೆ. ಈವರೆಗಿನ ಲೆಕ್ಕ ತೆಗೆದರೆ ಇದು ಇನ್ನೂ ದೊಡ್ಡ ಮೊತ್ತವಾಗಲಿದೆ. ಹೇಮಲತಾ ಎಂಬ ಅಧಿಕಾರಿ ಅಕ್ರಮದ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದರು. ಆದರೆ ತಕ್ಷಣ ಅವರನ್ನು ಎತ್ತಂಗಡಿ ಮಾಡಿದರು. ಮೂರು ವರ್ಷಗಳಲ್ಲಿ 8 ಜನ ಅಧಿಕಾರಿಗಳು ಬದಲಾಗಿದ್ದಾರೆ. ತುಷಾರ್ ಗಿರಿನಾಥ್ ಅವರ ಅವಧಿಯಲ್ಲೇ ಇಷ್ಟೆಲ್ಲ ಅಕ್ರಮ ನಡೆದಿದೆ. ಈ ಕಾರಣಕ್ಕಾಗಿಯೇ ತುಷಾರ್ ಅವರನ್ನು ಸಿಎಂ ಕಚೇರಿಯಲ್ಲಿ ಉಳಿಸಿಕೊಂಡಿದ್ದಾರೆ. ತೋರಿಕೆಗೆ ಅಕ್ರಮದ ತನಿಖೆಗೆ ಸಮಿತಿ ರಚಿಸುತ್ತಾರೆ. ಜೊತೆಗೆ ಹಿರಿಯ ಅಧಿಕಾರಿಗಳ ಸಮಿತಿ ರಚಿಸಿ, ಅಕ್ರಮ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ. ಅಷ್ಟೇ ಅಲ್ಲದೇ ಬಿಎಸ್‍ವೈ ಗೊತ್ತಾಗದೆ ಚೆಕ್ ಮೂಲಕ ಹಣ ಪಡೆದಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಬೇರೆ ಮಾರ್ಗದ ಮುಖಾಂತರ ವ್ಯವಹಾರ ನಡೆಸಿದ್ದರು ಎಂದು ಹೇಳಿದರು.

hdk

ಮುಚ್ಚಂಡಿ ಕಂಪನಿಯಿಂದ ಭಾರಿ ಅಕ್ರಮ ನಡೆದಿದ್ದು, 2014-15 ರಲ್ಲಿ ಅದಿರು ಉತ್ಪಾದನೆ ಮಾಡಿರುವುದು 22,90,715 ಮೆಟ್ರಿಕ್ ಟನ್. ಆದರೆ ವರದಿ ಮಾಡಿರುವುದು  13,94,715 ಮೆ. ಟನ್. ಇವುಗಳ ಬಗ್ಗೆ ಮಾಡಿದ ಮೈನ್ಸ್ ಪ್ರೊಡಕ್ಷನ್ ರಿಜಿಸ್ಟರ್ ದಾಖಲೆಗಳೇ ಮಾಯವಾಗಿದೆ. 2015-16 ರಲ್ಲಿ ರೈಸಿಂಗ್ ಕಾಂಟ್ರಾಕ್ಟರ್ ಕೂಡಾ ರಿಜಿಸ್ಟರ್ ಗೆ ಸಹಿ ಮಾಡಿಲ್ಲ. ಉಸ್ತುವಾರಿ ಅಧಿಕಾರಿ ಕೂಡಾ ಸಹಿ ಮಾಡಿಲ್ಲ. 2015-16 ರಲ್ಲಿ ಕೂಡಾ ಇಷ್ಟೇ ಪ್ರಮಾಣದ ಅಕ್ರಮ ನಡೆದಿದೆ. 2014 ರಿಂದ 17 ರವರೆಗೆ ಅಧಿಕೃತವಾಗಿ ಇಂಡಿಯನ್ ಬ್ಯೂರೋ ಆಫ್ ಮೈನ್ಸ್ ಗೆ 60,56,440 ಮೆ. ಟನ್ ಅದಿರನ್ನು ಗಣಿಗಾರಿಕೆ ಮಾಡಿದ ಬಗ್ಗೆ ವರದಿ ನೀಡಲಾಗಿದೆ. ಇದರ ಮೌಲ್ಯ ಟನ್‍ಗೆ ಮೂರು ಸಾವಿರದಂತೆ ಲೆಕ್ಕ ಹಾಕಿದರೂ 5,450 ಕೋಟಿ ಆಗುತ್ತದೆ. ಆದರೆ ಇದರ ಎರಡು ಪಟ್ಟು ಅಕ್ರಮ ನಡೆದಿದೆ. ಆದ್ದರಿಂದ ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.

ಮುಚ್ಚಂಡಿ ಸಂಸ್ಥೆಯ ಬಳಿ ಗಣಿಗಾರಿಕೆ ಯಂತ್ರಗಳೇ ಇರಲಿಲ್ಲ. ಮುಚ್ಚಂಡಿ ಹೆಸರಲ್ಲಿ ಸೌತ್ ವೆಸ್ಟ್ ಮೈನಿಂಗ್ ಕಾರ್ಪೊರೇಷನ್ ಕಂಪನಿ ಗಣಿಗಾರಿಕೆ ಮಾಡಿದೆ. ಯಡಿಯೂರಪ್ಪ ಅವರೊಂದಿಗೆ ಇದ್ದ ಸೌತ್‍ವೆಸ್ಟ್ ಮೈನಿಂಗ್ ಸಂಸ್ಥೆಯ ಸಂಬಂಧ ಈ ಸರ್ಕಾರದಲ್ಲೂ ಮುಂದುವರಿದೆ ಎಂದು ಹೇಳಿದ್ರು

ಈ ಕಂಪನಿಗಳ ಮಾಲೀಕರು ಯಾರು ಎಂದು ನನಗೆ ಗೊತ್ತಿಲ್ಲ. ನನಗೆ ದುಡ್ಡು ಕೊಡುವುದಕ್ಕೂ ಯಾರೂ ಬರೋದಿಲ್ಲ. ಆದರೆ ನನ್ನ ಮನೆಗೆ ಬರುವವರೆಲ್ಲಾ ನನ್ನ ಹತ್ತಿರವೇ ದುಡ್ಡು ಕಿತ್ತುಕೊಂಡು ಹೋಗುತ್ತಾರೆ. ರಾಜ್ಯದ ಆಸ್ತಿ ಹೊಡೆಯುವವರ ಬಳಿ ಕಿಕ್ ಬ್ಯಾಕ್ ಪಡೆಯುವ ವ್ಯಕ್ತಿ ನಾನಲ್ಲ. ರಾಜ್ಯದ ಆಸ್ತಿ ಉಳಿಯಬೇಕು. ಇವತ್ತೂ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯ ಮಂತ್ರಿಗಳು ರಾಜ್ಯದ ಜನರಿಗೆ ಯಾವ್ಯಾವುದೋ ಭಾಗ್ಯ ಕೊಟ್ಟಿದ್ದಾರಲ್ಲಾ ಹಾಗೆ ರೈತರಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದ್ದಾರೆ ಎಂದು ಸಿಎಂ ವಿರುದ್ಧ ಕಿಡಿ ಕಾರಿದರು.

HDK

HDK 1

HDK 6

HDK 3

HDK 4

HDK 5

 

TAGGED:Bangalorehdkillegal mainingPublic TVsiddaramaiahಗಣಿ ಅಕ್ರಮಪಬ್ಲಿಕ್ ಟಿವಿಬೆಂಗಳೂರುಸಿದ್ದರಾಮಯ್ಯಹೆಚ್‍ಡಿಕೆ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Shoba Karandlaje
ವಿಷ್ಣು ಸಮಾಧಿ ಸ್ಥಳವನ್ನು ಕಲಾಗ್ರಾಮವನ್ನಾಗಿ ಮಾಡಿ – ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Bengaluru City Cinema Karnataka Latest Sandalwood States Top Stories
upendra1
ವಿಷ್ಣು ಸರ್‌ ನನ್ನಂಥ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತ – ನಟ ಉಪೇಂದ್ರ
Cinema Latest Sandalwood Top Stories
the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood

You Might Also Like

Priyank Kharge 1
Latest

ಪ್ರಿಯಾಂಕ್ ಖರ್ಗೆ V/s ಆರ್‌.ಅಶೋಕ್‌ ಮಧ್ಯೆ ಟ್ವೀಟ್ ವಾರ್‌ – ವೈಯಕ್ತಿಕ ಮಟ್ಟಕ್ಕೆ ತಿರುಗಿದ ಫೈಟ್‌

Public TV
By Public TV
4 hours ago
01 3
Big Bulletin

ಬಿಗ್‌ ಬುಲೆಟಿನ್‌ 10 August 2025 ಭಾಗ-1

Public TV
By Public TV
4 hours ago
02 1
Big Bulletin

ಬಿಗ್‌ ಬುಲೆಟಿನ್‌ 10 August 2025 ಭಾಗ-2

Public TV
By Public TV
4 hours ago
Basanagouda Patil Yatnal
Districts

ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ: ಯತ್ನಾಳ್‌ ಘೋಷಣೆ

Public TV
By Public TV
4 hours ago
Public TV VidyaMandira
Bengaluru City

ವ್ಹೀಲ್‌ಚೇರ್‌ನಲ್ಲಿ ಪಬ್ಲಿಕ್‌ ಟಿವಿ ʻವಿದ್ಯಾಮಂದಿರʼಕ್ಕೆ ಬಂದು ಮಾಹಿತಿ ಪಡೆದ ವಿದ್ಯಾರ್ಥಿ

Public TV
By Public TV
5 hours ago
Kalaburagi 1
Bagalkot

ಕಾರು-ಬಸ್ ನಡ್ವೆ ಭೀಕರ ಅಪಘಾತ; ತಂದೆ-ಮಗ ಸ್ಥಳದಲ್ಲೇ ಸಾವು

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?