Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ವರ್ಷಾಚರಣೆಗೆ ಸಿಂಗಾಪುರಕ್ಕೆ ಹಾರಿದ ಹೆಚ್‍ಡಿಕೆ ಕುಟುಂಬ- ಇತ್ತ ಸಿಎಂ ವಿರುದ್ಧ ಎಚ್‍ಡಿಡಿ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೊಸ ವರ್ಷಾಚರಣೆಗೆ ಸಿಂಗಾಪುರಕ್ಕೆ ಹಾರಿದ ಹೆಚ್‍ಡಿಕೆ ಕುಟುಂಬ- ಇತ್ತ ಸಿಎಂ ವಿರುದ್ಧ ಎಚ್‍ಡಿಡಿ ವಾಗ್ದಾಳಿ

Bengaluru City

ಹೊಸ ವರ್ಷಾಚರಣೆಗೆ ಸಿಂಗಾಪುರಕ್ಕೆ ಹಾರಿದ ಹೆಚ್‍ಡಿಕೆ ಕುಟುಂಬ- ಇತ್ತ ಸಿಎಂ ವಿರುದ್ಧ ಎಚ್‍ಡಿಡಿ ವಾಗ್ದಾಳಿ

Public TV
Last updated: December 30, 2017 5:10 pm
Public TV
Share
3 Min Read
hdd hd kumaraswamy
SHARE

ಬೆಂಗಳೂರು: ಹೊಸ ವರ್ಷದ ಆಚರಣೆ ಮಾಡುವ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರ ಕುಟುಂಬ ಸಿಂಗಾಪುರಕ್ಕೆ ಪ್ರವಾಸ ಬೆಳೆಸಿದೆ.

ಕುಮಾರಸ್ವಾಮಿ ಅವರಿಗೆ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಹಾಗೂ ಶಾಸಕ ಸಾ.ರಾ ಮಹೇಶ್ ಸಾಥ್ ನೀಡಿದ್ದಾರೆ. ಪ್ರತಿ ವರ್ಷದಂತೆ ಕುಮಾರಸ್ವಾಮಿ ಕುಟುಂಬ ಈ ವರ್ಷವೂ ಸಿಂಗಾಪುರಕ್ಕೆ ತೆರಳಿದ್ದು, ಹೊಸ ವರ್ಷ ಆಚರಣೆಯ ನಂತರ ಜನವರಿ 2 ಕ್ಕೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

hdk anita kumaraswamy 1

ಇತ್ತ ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಅಯ್ಯೋ ಯಾವ ಮುಖ್ಯಮಂತ್ರಿಯೂ ಇವರ ರೀತಿ ಮಾಡಿಲ್ಲ. ಏನ್ ಕಿರೀಟ, ಕತ್ತಿ, ಗುರಾಣಿ ಹಿಡಿದುಕೊಳ್ಳುತ್ತಿದ್ದಾರೆ. ಇವರೊಬ್ಬರೇ ನವ ಕರ್ನಾಟಕ ನಿರ್ಮಾಣ ಮಾಡುವವರು. ಇಷ್ಟು ದಿನ ಎಲ್ಲಿ ಹೋಗಿದ್ದರು ಎಂದು ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯ ಅವರು ಅಭಿವೃದ್ಧಿ ಮಾಡಿದ್ದೇನೆ ಎಂದು ಹೇಳುವ ಭರದಲ್ಲಿ, ಹಿಂದಿನವರು ಸಾಧನೆ ಮಾಡಿಲ್ಲ ಎಂದು ಜರಿದಿದ್ದಾರೆ. ಈ ವೇಳೆ ನನ್ನ ಹೆಸರನ್ನೂ ಪ್ರಸ್ತಾಪಿಸಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿ ಎಷ್ಟು ಕೆಲಸ ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಸರ್ಕಾರಿ ಹಣದಿಂದ ದುಂದುವೆಚ್ಚ ಮಾಡಿ ಪ್ರವಾಸ ಮಾಡುತ್ತಾರೆ. ನವ ಕರ್ನಾಟಕ ನಿರ್ಮಾಣ ಮಾಡುವುದಕ್ಕೆ ಇವರೊಬ್ಬರೇ ಹುಟ್ಟಿದ್ದು, ಎಲ್ಲವು ಜನರಿಗೆ ಗೊತ್ತಾಗುತ್ತದೆ. ಬಿರುಸಿನ ಮಾತು ಸ್ವಲ್ಪ ಕಡಿಮೆ ಮಾಡಬೇಕು, ಇಲ್ಲವಾದರೆ ಅದಕ್ಕೆ ಪ್ರತಿಯಾಗಿ ಬಿರುಸಿನ ಪ್ರತಿಕ್ರಿಯೆ ಕೊಡುವ ಶಕ್ತಿ ನಮಗೂ ಇದೆ ಎಂದರು.

BNG HDD

ಕಾಂಗ್ರೆಸ್ ಭಿನ್ನಾಭಿಪ್ರಾಯ: ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರು ಒಂದು ಪ್ರವಾಸ ಮಾಡಿದರೆ, ಸಿಎಂ ಅವರು ಒಂದು ಪ್ರವಾಸ ಮಾಡುತ್ತಾರೆ. ಆದರೆ ನಮ್ಮದು ಹಾಗಲ್ಲ. ಕುಮಾರಸ್ವಾಮಿ ನಾನು ಇಬ್ಬರು ಪ್ರವಾಸ ಮಾಡುತ್ತೇವೆ. ಕಾಂಗ್ರೆಸ್ ಪ್ರವಾಸ ಸಭೆಗೆ ಎಷ್ಟು ಜನ ಸೇರಿದ್ದಾರೆ ಅಂತಾ ನೋಡಿದ್ದೇನೆ. ಅವರದ್ದು ಸರ್ಕಾರಿ ಕಾರ್ಯಕ್ರಮವೋ, ಪ್ರಚಾರ ಕಾರ್ಯಕ್ರಮವೋ ಗೊತ್ತಾಗುತ್ತಿಲ್ಲ. ಕಳೆದ ಬಾರಿ 120 ಸ್ಥಾನ ಗೆಲ್ಲಲು ಕಾರಣ ಏನು? ಎಂಬುವುದು ತಿಳಿದಿದೆ. ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನೇ ಸಿಎಂ ಎಂದು ಘೋಷಣೆ ಮಾಡಿ ರಾಹುಲ್ ಗಾಂಧಿ ಗೆದ್ದು ಬರಲಿ ನೋಡೋಣ ಎಂದು ಸಿಎಂ ವಿರುದ್ಧ ಕಿಡಿಕಾರಿದರು.

ಜನವರಿ ಬಳಿಕ ಕುಮಾರಸ್ವಾಮಿ ರಾಜ್ಯ ಪ್ರವಾಸ ಮಾಡುತ್ತಾರೆ. ಇನ್ನೊಂದು ದಿಕ್ಕಿನಲ್ಲಿ ನಾನು ಪ್ರವಾಸ ಮಾಡುತ್ತೇನೆ. ಯಡಿಯೂರಪ್ಪ, ಕುಮಾರಸ್ವಾಮಿ ಸಿಎಂ ಆಗಲ್ಲ ಎಂದು ಅಹಂನಿಂದ ಹೇಳುತ್ತಾರೆ. ಹಾಗಾಂತ ಅವರ ಹಣೆಮೇಲೆ ಬರೆದಿದ್ದಾರಾ? ಸ್ವಲ್ಪ ದಿನ ತಡೆದುಕೊಳ್ಳಿ, ಎಲ್ಲವನ್ನು ಗಮನಿಸುತ್ತಿದ್ದೇನೆ. ತಾಳ್ಮೆ ನನಗೂ ಇದೆ. ತಾಳ್ಮೆ ಮೀರಿದಾಗ ಏನಾಗುತ್ತೆ ನೋಡೋಣ. ಬೇಲ್ ತೆಗೆದುಕೊಂಡವರೆಲ್ಲ ಸಿಎಂ ಆಗೋಕೆ ಸಾಧ್ಯ ಎಂದು ಸಿಎಂ ಪ್ರಶ್ನಿಸುತ್ತಾರೆ. ಆದರೆ ಇದೇ ಸಿದ್ದರಾಮಯ್ಯ ಅವರು ಆಪರೇಷನ್ ಕಮಲದಲ್ಲಿ ಏನು ಮಾಡಿದ್ದರು. ಯಡಿಯೂರಪ್ಪ ಸಿಎಂ ಇದ್ದಾಗ ವಿಪಕ್ಷದಲ್ಲಿ ಕುಳಿತ ಸಿದ್ದರಾಮಯ್ಯ ಏನ್ ಮಾಡಿದ್ದರು ಅಂತಾ ಪ್ರಶ್ನೆ ಮಾಡಿದರು.

ಯಾರ ಬಗ್ಗೆಯೂ ಲಘುವಾಗಿ ಮಾತನಾಡಲ್ಲ: ನಾನು ಪ್ರಧಾನಿ ಮೋದಿ ಬಗ್ಗೆ ಲಘುವಾಗಿ ಮಾತನಾಡಿಲ್ಲ. ಮುಂದೆಯೂ ಮಾತನಾಡಲ್ಲ. ಹಾಗೆಯೇ ನಾನು ರಾಹುಲ್ ಗಾಂಧಿ, ಸೋನಿಯಾಗಾಂಧಿ ಯಾರ ಬಗ್ಗೆಯೂ ಲಘುವಾಗಿ ಮಾತಾನಾಡಿಲ್ಲ, ಮಾತನಾಡಲ್ಲ ಎಂದರು.

ನಮ್ಮ ಕೈಯಲ್ಲಿ ಅಧಿಕಾರ ಇಲ್ಲ. ಅದರೂ ರಾಜ್ಯದ ಎಲ್ಲಾ ಕಡೆಯೂ ಪ್ರವಾಸ ಮಾಡುತ್ತೇವೆ. ನಮಗೆ ಹೋರಾಟ ಮಾಡೋ ಕೆಚ್ಚಿದೆ. ಆದರೆ ಪರಮೇಶ್ವರ್ ಅವರಿಗೆ ಅಧಿಕಾರ ಇಲ್ಲದಿರಬಹುದು, ಕಾಂಗ್ರೆಸ್ ಸರ್ಕಾರದ ಬೆಂಬಲ, ಸಿಬಿಐ ಬೆಂಬಲವಿದೆ. ಈ ಹಿಂದೆ ಸಿದ್ದರಾಮಯ್ಯ ಅವರನ್ನ ಕರೆದುಕೊಂಡು ಹೋದ ತಕ್ಷಣ ಜೆಡಿಎಸ್ ಮುಗೀತು ಅಂದುಕೊಂಡಿದ್ದರು. ಆದರೆ ಅಮೇಲೆ ಏನಾಯಿತು ಎಂದು ಪ್ರಶ್ನಿಸಿದರು.

ಮಹದಾಯಿ ಹೋರಾಟಕ್ಕೆ ಸಿದ್ದ: ರಾಜ್ಯದ ನಾಯಕರ ಜೊತೆ ಪರಸ್ಪರ ದೋಷಾರೋಪದಿಂದ ಮಹದಾಯಿ ಏನಾಯಿತು. ನದಿಗೆ ಕಟ್ಟಿರುವ ತಡೆಗೋಡೆಯ ರಕ್ಷಣೆ ಜವಾಬ್ದಾರಿ ಕರ್ನಾಟಕ ಸರ್ಕಾರದ್ದು ಅದು ಈಗಲೂ ಹಾಗೆ ಮುಂದುವರೆಯುತ್ತೆ ಎಂದು ಭಾವಿಸಿದ್ದೇನೆ. ಅವಶ್ಯಕತೆ ಇದ್ದರೆ ಮಹದಾಯಿ ಹೋರಟಕ್ಕಾಗಿ ನಾನು ಮತ್ತೆ ಪ್ರಧಾನಿ ಅವರನ್ನ ಭೇಟಿ ಮಾಡುತ್ತೇನೆ. ಆದರೆ ಈ ವೇಳೆ ತನಗೆ ಫೋಟೋ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ. ಇದರಲ್ಲಿ ರಾಜಕೀಯ ಇಲ್ಲ ಎಂದು ಸ್ಪಷ್ಟಪಡಿಸಿದರು.

https://www.youtube.com/watch?v=AGeBU4rObUc

hdk anita kumaraswamy 5

nikhil gowda

hdk bday 1

TAGGED:bengaluruformer Prime Minister Deve Gowdahd kumaraswamyPublic TVSingaporeTourಎಚ್‍ಡಿ ಕುಮಾರಸ್ವಾಮಿಪಬ್ಲಿಕ್ ಟಿವಿಪ್ರವಾಸಬೆಂಗಳೂರುಮಾಜಿ ಪ್ರಧಾನಿ ದೇವೇಗೌಡಸಿಂಗಾಪುರ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

suresh kumar help
Bengaluru City

ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೇ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ – ನೊಂದ ಕುಟುಂಬಕ್ಕೆ ಶಾಸಕ ಸುರೇಶ್ ಕುಮಾರ್ ನೆರವು

Public TV
By Public TV
11 minutes ago
Chitradurga Ganja Arrest
Chitradurga

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಬಂಧನ

Public TV
By Public TV
27 minutes ago
Germany Gurdwara
Latest

ಜರ್ಮನಿಯ ಗುರುದ್ವಾರದಲ್ಲಿ ಬಂದೂಕು, ಕಿರ್ಪಾನ್‌, ಪೆಪ್ಪರ್‌ ಸ್ಪ್ರೇ ಹಿಡಿದು ಘರ್ಷಣೆ – 11 ಮಂದಿಗೆ ಗಾಯ

Public TV
By Public TV
50 minutes ago
Nelamangala KTM Bike Theft
Bengaluru City

ಸಾಲ ಮಾಡಿ ತೆಗೆದುಕೊಂಡಿದ್ದ KTM ಬೈಕ್ ಕಳ್ಳತನ

Public TV
By Public TV
1 hour ago
US student
Latest

ನಮ್ಮ ಕಾಲೇಜಿನ ಮೇಲೆ ಬಾಂಬ್‌ ಹಾಕಿ: ನೆತನ್ಯಾಹುಗೆ ಕೇಳಿಕೊಂಡು ಪೋಸ್ಟ್‌ ಹಾಕಿದ್ದ ವಿದ್ಯಾರ್ಥಿನಿ ಬಂಧನ

Public TV
By Public TV
1 hour ago
Iran America War
Latest

ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ – ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಎಂದ ಇರಾನ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?