Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಕ್ಕರೆ ಸಾಹುಕಾರರ ಜೊತೆ ಸಿಎಂ 50:50 ಸಂಧಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಸಕ್ಕರೆ ಸಾಹುಕಾರರ ಜೊತೆ ಸಿಎಂ 50:50 ಸಂಧಾನ

Belgaum

ಸಕ್ಕರೆ ಸಾಹುಕಾರರ ಜೊತೆ ಸಿಎಂ 50:50 ಸಂಧಾನ

Public TV
Last updated: November 22, 2018 10:54 pm
Public TV
Share
3 Min Read
sugar factory owners HDK Meeting 5
SHARE

– ರೈತರಿಗೆ ಹೆಚ್ಚುವರಿ ಸಿಗಲಿದೆ 300 ರೂ.

ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ನಡೆಸಿದ ಸಂಧಾನ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಮುಂದಿಟ್ಟ 50:50 ಸೂತ್ರಕ್ಕೆ ಮಾಲೀಕರು ಒಪ್ಪಿಕೊಂಡಿದ್ದಾರೆ. ಈ ಮೂಲಕ ಕಬ್ಬು ಬೆಳೆದು ಕಣ್ಣೀರು ಸುರಿಸಿದ್ದ ರೈತರ ಕಣ್ಣೀರನ್ನು ಒರೆಸಲು ಸಿಎಂ ಕುಮಾರಸ್ವಾಮಿ ಮುಂದಾಗಿದ್ದಾರೆ.

ಸಂಧಾನ ಸಭೆಯ ನಿರ್ಣಯ:
ನ್ಯಾಯ ಹಾಗೂ ಲಾಭದಾಯಕ ಬೆಲೆಗಿಂತ (ಎಫ್.ಆರ್.ಪಿ) ಹೆಚ್ಚಿನ ಮೊತ್ತ ನೀಡುವ ಪ್ರಸ್ತಾವನೆಗೆ ಮಾಲೀಕರಿಂದ ವಿರೋಧ ವ್ಯಕ್ತವಾಯಿತು. ಬಳಿಕ ಎಫ್.ಆರ್.ಪಿ ದರವನ್ನು ಕೊಡುವುದಕ್ಕೆ ಒಪ್ಪಿಕೊಂಡರು. ಈಗ ಎಫ್.ಆರ್.ಪಿ ದರ 2,750 ರೂ. ಇದೆ. ಉಳಿದಂತೆ ಮಾಲೀಕರಿಂದ 150 ರೂ., ಸರ್ಕಾರದಿಂದ 150 ರೂ. ಸೇರಿ ಒಟ್ಟು 300 ರೂ. ಪ್ರೋತ್ಸಾಹಧನವಾಗಿ ನೀಡಲು ಸಭೆ ನಿರ್ಧಾರ ಕೈಗೊಳ್ಳಲಾಯಿತು. ಈ ಮೂಲಕ ರೈತರು ಪ್ರತಿ ಟನ್ ಕಬ್ಬಿಗೆ 3,050 ರೂ. ಪಡೆಯಲಿದ್ದಾರೆ.

sugar factory owners HDK Meeting 1

ಹೆಚ್ಚು ಬಾಕಿ ಉಳಿಸಿಕೊಂಡಿರುವ ಬಾಗಲಕೋಟೆ, ವಿಜಯಪುರ ಕಾರ್ಖಾನೆ ಮಾಲೀಕರು ಮುರುಗೇಶ್ ನಿರಾಣಿ, ಆನಂದ್ ನ್ಯಾಮಗೌಡ, ಎಸ್.ಆರ್ ಪಾಟೀಲ ಅವರು ತಕ್ಷಣ ಬಾಕಿ ಬಿಲ್ ಪಾವತಿ ಮಾಡಬೇಕು ಎಂದು ಸಿಎಂ ಕುಮಾರಸ್ವಾಮಿ ಸೂಚನೆ ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಮಾಲೀಕರು, ತಕ್ಷಣ ಪಾವತಿ ಕಷ್ಟ, ಹಂಗಾಮು ಒಳಗೆ ಕೊಡುತ್ತೇವೆ ಎಂದು ಭರವಸೆ ನೀಡಿದರು. ಇತ್ತ ಬೆಳಗಾವಿ ಸಕ್ಕರೆ ಕಾರ್ಖಾನೆ ಮಾಲೀಕರು 15 ದಿನ ಗಡುವು ಕೇಳಿದ್ದಾರೆ.

ಬರೀ ರೈತರ ವಾದ ಕೇಳಿದರೆ ನಮ್ಮದೂ ಸಮಸ್ಯೆ ಇದೆ. ಅದನ್ನು ಸ್ವಲ್ಪ ಕೇಳಿ ಎಂದು ಮಾಲೀಕರು ತಮ್ಮ ವಾದವನ್ನು ಸಿಎಂ ಕುಮಾರಸ್ವಾಮಿ ಅವರ ಮುಂದೆ ಮಂಡಿಸಿದ್ದಾರೆ.

sugar factory owners HDK Meeting 3

ಸಕ್ಕರೆ ಸಾಹುಕಾರರ ವಾದವೇನು?: ಎಫ್.ಆರ್.ಪಿ ದರದಲ್ಲಿ ಒಪ್ಪಂದ ಮಾಡಿಕೊಂಡಾಗ ಸಕ್ಕರೆ ದರ ಕೆಜಿಗೆ 35 ರಷ್ಟಿತ್ತು, ಈಗ 27ಕ್ಕೆ ಇಳಿದಿದೆ. ಟನ್‍ಗೆ 2,900 ರೂ. ಒಪ್ಪಂದ ಆಗಿದ್ದೂ ಲಾಭ ಬಂದ ಸಂದರ್ಭದಲ್ಲಿ 3,400 ರೂ. ನೀಡಿದ್ದೇವೆ. ಕಂಪೆನಿಗಳಿಂದ ವಿದ್ಯುತ್ ಖರೀದಿಯಲ್ಲಿ ಸರ್ಕಾರ ಮೋಸ ಮಾಡಿದೆ. ಪ್ರತಿ ಯೂನಿಟ್‍ಗೆ 5.87 ರೂ. ಒಪ್ಪಂದ ಮಾಡಿಕೊಂಡಿತ್ತು, ಈಗ 3.87 ರೂ. ನೀಡುತ್ತಿದೆ. ಮಹಾರಾಷ್ಟ್ರ, ಆಂಧ್ರಪ್ರದೇಶಗಳ ಕಾರ್ಖಾನೆಗಳು ಉತ್ತಮ ದರದಲ್ಲಿ ವಿದ್ಯುತ್ ಖರೀದಿಸುತ್ತಿವೆ ಎಂದು ಹೇಳಿದ್ದಾರೆ.

ಬರಗಾಲದಿಂದ ಕೇವಲ 8ರಿಂದ 10 ಲಕ್ಷ ಟನ್ ಕಬ್ಬು ಅರೆಯುತ್ತಿದ್ದೇವೆ. ಇದಕ್ಕೂ ಮೊದಲು 30 ರಿಂದ 40 ಲಕ್ಷ ಟನ್ ಕಬ್ಬು ಅರೆಯಲಾಗುತ್ತಿತ್ತು. ಇಥೆನಾಲ್‍ಗೆ ಕೇಂದ್ರ ಸರ್ಕಾರ ಸಬ್ಸಿಡಿ ಕೊಟ್ಟಿದೆ. ರಾಜ್ಯದಿಂದ ಯಾವುದೇ ಪ್ರೋತ್ಸಾಹ ಇಲ್ಲ. ನೆರೆ ರಾಜ್ಯಗಳು ಬಡ್ಡಿ ರಹಿತ ಸಾಲ ನೀಡಿ ಸಹಾಯಕ್ಕೆ ಬಂದಿವೆ, ರಾಜ್ಯದಲ್ಲಿ ಏನೂ ಆಗಿಲ್ಲ. 6-8 ತಿಂಗಳಾದ್ರೂ ಕಾರ್ಖಾನೆ ಖರೀದಿಸಿದ ವಿದ್ಯುತ್‍ಗೆ ಸರ್ಕಾರ ಹಣ ಪಾವತಿಸಿಲ್ಲ. 15 ದಿನದೊಳಗೆ ಪಾವತಿಸಿ ಅಂದರೆ ಹೇಗೆ? ಸರ್ಕಾರವೂ ಬಾಕಿಯನ್ನು 15 ದಿನದಲ್ಲಿ ಪಾವತಿಸಲಿ. 10 ತಿಂಗಳಾದರೂ ಹೈಲೆವೆಲ್ ಕಮಿಟಿ ಸಭೆ ನಡೆಸಿಲ್ಲ. ಕಾರ್ಖಾನೆಗಳಿಗೆ ಬೇಕಾದ ಕ್ಲಿಯರೆನ್ಸ್ ಸಿಕ್ಕಿಲ್ಲ ಎಂದು ಮಾಲೀಕರು ಸಿಎಂಗೆ ತಿಳಿಸಿದ್ದಾರೆ.

sugar factory owners HDK Meeting 4

ಸಭೆ ಬಳಿಕ ಮಾತನಾಡಿದ ಸಕ್ಕರೆ ಕಾರ್ಖಾನೆ ಮಾಲೀಕ ಬಾಲಚಂದ್ರ ಜಾರಕಿಹೊಳಿ, ಮೇಜರ್ ಸಮಸ್ಯೆ ಬಾಗಲಕೋಟೆಯದ್ದು. ನಾವು ಎಫ್.ಆರ್.ಪಿಗಿಂತ ಹೆಚ್ಚು ದರ ಕೊಟ್ಟಿದ್ದೇವೆ. ನಮ್ಮದು ಸಮಸ್ಯೆ ಇಲ್ಲ ಎಂದು ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಕೆಲವರು ಬಾಕಿ ಪಾವತಿಗೆ ಸಮಯ ಕೇಳಿದ್ದಾರೆ. ಎಲ್ಲ ಸರಿ ಹೋಗುತ್ತೆ ಅಂದ್ರು. ಆದರೆ ಸಭೆಯಲ್ಲಿ ನಡೆದ ಚರ್ಚೆ ವಿಷಯದಲ್ಲಿ ಗೊಂದಲವಿದೆ. ಕಬ್ಬಿನ ದರ ಹಾಗೂ ಬಾಕಿ ವಿಚಾರದಲ್ಲಿ ಸ್ಪಷ್ಟತೆಯಿಲ್ಲ. ಹೀಗಾಗಿ ಅಹೋರಾತ್ರಿ ಧರಣಿ, ಆಮರಣ ಉಪವಾಸ ಸತ್ಯಾಗ್ರಹ ಮುಂದುವರಿಸುತ್ತೇವೆ ಎಂದು ಬೆಳಗಾವಿಯಲ್ಲಿ ರೈತ ಸಂಘದ ಮುಖಂಡ ಚೂನಪ್ಪ ಪೂಜಾರಿ ಹೇಳಿದ್ದಾರೆ.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಶಾಸಕರಾಗಿರುವ ಸತೀಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಎಸ್.ಆರ್.ಪಾಟೀಲ್, ಶ್ರೀಮಂತ ಪಾಟೀಲ್, ಶಶಿಕಲಾ ಜೊಲ್ಲೆ, ಆನಂದ ನ್ಯಾಮಗೌಡ ಹಾಜರಿದ್ದರು.

sugar factory owners HDK Meeting 2

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED:Chife ministerhd kumaraswamymeetingOwnersprotestPublic TVsugarcane growersಕಬ್ಬು ಬೆಳೆಗಾರರುಪಬ್ಲಿಕ್ ಟಿವಿಪ್ರತಿಭಟನೆಮಾಲೀಕರುಸಭೆಸಿಎಂ ಎಚ್.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows
Ranya Rao 1
ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru City Cinema Court Districts Karnataka Latest Top Stories
Vijay Deverakonda
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌
Cinema Latest South cinema

You Might Also Like

Shubam gill
Cricket

ಟಿ20 ವಿಶ್ವಕಪ್‌ಗೆ ತಂಡ ಪ್ರಕಟ – ಗಿಲ್‌ ಔಟ್‌, ಅಕ್ಷರ್‌ ಪಟೇಲ್‌ಗೆ ಉಪನಾಯಕನ ಪಟ್ಟ

Public TV
By Public TV
39 seconds ago
teacher and Hotel worker die of heart attack in Hassan
Districts

ಹಾಸನ | ಹೃದಯಾಘಾತಕ್ಕೆ ಶಿಕ್ಷಕಿ ಸೇರಿ ಇಬ್ಬರು ಬಲಿ

Public TV
By Public TV
2 minutes ago
Byrati Basavaraj 1
Bengaluru City

ಬೈರತಿ ಬಸವರಾಜ್ ಬಂಧನಕ್ಕಾಗಿ 3 ವಿಶೇಷ ತಂಡ; ಪುಣೆಯಲ್ಲಿ ತಲೆ ಮರೆಸಿಕೊಂಡಿರೋ ಮಾಹಿತಿ ಲಭ್ಯ

Public TV
By Public TV
54 minutes ago
bushra bibi imran khan
Latest

Toshakhana Case | ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪತ್ನಿ ಬುಷ್ರಾ ಬಿಬಿಗೆ ತಲಾ 17 ವರ್ಷ ಜೈಲು

Public TV
By Public TV
1 hour ago
a bjp worker committed suicide by setting herself on fire in kalaburagi
Crime

ಕಲಬುರಗಿ | ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

Public TV
By Public TV
2 hours ago
DK Shivakumar 2 1
Bengaluru City

ಡಿಕೆಶಿ ನಿವಾಸಕ್ಕೆ ಹರಿದ್ವಾರದ ನಾಗ ಸಾಧುಗಳ ಭೇಟಿ – ಆಶೀರ್ವಾದ ಪಡೆದು ಡಿಸಿಎಂ ಹೇಳಿದ್ದೇನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?