Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಸಾಕಿರೋ ಗಿಣಿ ಅಲ್ಲ, ನನ್ನ ಬೆಳೆಸಿದ್ದು ರಾಮನಗರ ಜನ- ಸಿದ್ದುಗೆ ಹೆಚ್‍ಡಿಕೆ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿದ್ದರಾಮಯ್ಯ ಸಾಕಿರೋ ಗಿಣಿ ಅಲ್ಲ, ನನ್ನ ಬೆಳೆಸಿದ್ದು ರಾಮನಗರ ಜನ- ಸಿದ್ದುಗೆ ಹೆಚ್‍ಡಿಕೆ ತಿರುಗೇಟು

Districts

ಸಿದ್ದರಾಮಯ್ಯ ಸಾಕಿರೋ ಗಿಣಿ ಅಲ್ಲ, ನನ್ನ ಬೆಳೆಸಿದ್ದು ರಾಮನಗರ ಜನ- ಸಿದ್ದುಗೆ ಹೆಚ್‍ಡಿಕೆ ತಿರುಗೇಟು

Public TV
Last updated: September 24, 2019 1:38 pm
Public TV
Share
2 Min Read
hdk siddu
SHARE

ರಾಮನಗರ: ಸಿದ್ದರಾಮಯ್ಯ ಅವರಿಂದ ನಾನು ಮುಖ್ಯಮಂತ್ರಿ ಆಗಿಲ್ಲ. ರಾಮನಗರದ ಜನ ನನ್ನನ್ನು ಬೆಳೆಸಿರುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ಮುಂದುವರಿಸಿದ್ದಾರೆ.

ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ವಿಚಾರ ಸಂಬಂಧ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದನ್ನು ಸಿದ್ದರಾಮಯ್ಯನವರು ಎಷ್ಟರಮಟ್ಟಿಗೆ ಸಹಿಸಿಕೊಂಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಅವರ ಪಕ್ಷದ ಶಾಸಕರ ಬಳಿಯೇ, ಪಾರ್ಲಿಮೆಂಟ್ ಚುನಾವಣೆಯ ನಂತರ ಈ ಸರ್ಕಾರ ಒಂದು ಸೆಕೆಂಡ್ ಇರಲು ಬಿಡಲ್ಲ ಎಂದು ಅವರೇ ಹೇಳಿಕೊಂಡಿದ್ದಾರೆ ಎಂದು ಕಿಡಿಕಾರಿದರು.

ಹೌದು, @hd_kumaraswamy ಅವರೇ,
ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು,
ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು.
ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ?@INCKarnataka

— Siddaramaiah (@siddaramaiah) September 24, 2019

ಸಿದ್ದರಾಮಯ್ಯ ಅವರ ಗಿಣಿ ಕಥೆ, ಸಿದ್ದರಾಮಯ್ಯ ಮತ್ತು ಅವರಂತಹ ನೂರಾರು ಗಿಣಿಗಳನ್ನು ಸಾಕಿದಂತಹ ದೇವೇಗೌಡರಿಗೆ ಸಿದ್ದರಾಮಯ್ಯ ಸೇರಿದಂತೆ ಯಾರೆಲ್ಲ ಕುಕ್ಕಿದ್ದಾರೆ ಎಂಬುದು ಗೊತ್ತಿದೆ. ಆ ಬಗ್ಗೆ ಇತಿಹಾಸ ಬರೆಯುವವರು ಒಂದು ದಿನ ಬರೆಯುತ್ತಾರೆ ಎಂದು ಗುಡುಗಿದರು.

ಸಿದ್ದರಾಮಯ್ಯ ಅವರಿಂದ ನಾನು ಮುಖ್ಯಮಂತ್ರಿಯಾಗಿಲ್ಲ. ಕಾಂಗ್ರೆಸ್ಸಿನ ಹೈಕಮಾಂಡ್ ಅವರು ತೀರ್ಮಾನ ತೆಗೆದುಕೊಂಡರು. ಅವರು ತೆಗೆದುಕೊಂಡ ತೀರ್ಮಾನವನ್ನು ಸಿದ್ದರಾಮಯ್ಯರು ಸಹಿಸಿಕೊಂಡಿಲ್ಲ. ಇಲ್ಲದಿದ್ದರೆ ಈ ಸರ್ಕಾರ ಹೋಗುತ್ತಿತ್ತಾ, ಹೋಗೋದಕ್ಕೆ ಕಾರಣ ಯಾರು, ಯಾರು ಯಾರು ಏನೇನು ಚರ್ಚೆ ಮಾಡಿದ್ದಾರೆ ಎಂದು ನನಗೆ ಗೊತ್ತಿಲ್ವೆ ಎಂದು ಪ್ರಶ್ನಿಸಿದ ಅವರು, ನಾನು ಸಿದ್ದರಾಮಯ್ಯ ಸಾಕಿದ ಗಿಣಿ ಅಲ್ಲ. ನನ್ನನ್ನು ಈ ರಾಮನಗರ ಜಿಲ್ಲೆಯ ಜನರು ಸಾಕಿದ್ದಾರೆ. ಈ ಜಿಲ್ಲೆಯ ಜನ ಕೊಟ್ಟಿರುವಂತಹ ಶಕ್ತಿ ಉಪಯೋಗಿಸಿ ಕೊಂಡು ಈ ರಾಜ್ಯದ ರಾಜಕಾರಣದಲ್ಲಿ ಬೆಳೆದಿದ್ದೇನೆ ಎಂದರು.

ಸನ್ಮಾನ್ಯ @hd_kumaraswamy ಅವರೇ, ನಿಮ್ಮನ್ನು ನಾನು ಸಾಕಿದ್ದೇನೆ ಎಂದು ಎಲ್ಲಿ ಹೇಳಿದ್ದೆ?

ನಿಮ್ಮನ್ನು ಸಾಕಿದ್ದು ದೇವೇಗೌಡರು (@H_D_Devegowda), ಬಳಸಿಕೊಂಡದ್ದು ಮಾತ್ರ ನಮ್ಮಂತಹವರನ್ನು.

ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ.
ಈ ಬಗ್ಗೆ @BSYBJP ಅವರನ್ನು ಕೇಳಿ,ಹೇಳ್ತಾರೆ.
3/1

— Siddaramaiah (@siddaramaiah) September 24, 2019

ಸಿದ್ದರಾಮಯ್ಯರ ನೆರಳಲ್ಲಿ ಬೆಳೆದಿಲ್ಲ. ಸಿದ್ದರಾಮಯ್ಯ ಬೆಳೆಸಿಲ್ಲ ಈ ತಾಲೂಕಿನ ಜನ ನನ್ನನ್ನು ಬೆಳೆಸಿದ್ದಾರೆ ಎಂದು ಮತ್ತೆ ಮತ್ತೆ ಪ್ರಸ್ತಾಪ ಮಾಡುವ ಮೂಲಕ ಸಿದ್ದರಾಮಯ್ಯ ವಿರುದ್ಧ ಹೆಚ್‍ಡಿಕೆ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಟ್ವೀಟ್‍ನಲ್ಲೇನಿದೆ..?
ಹೌದು ಕುಮಾರಸ್ವಾಮಿಯವರೇ ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು, ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು, ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ? ಎಂದು ಬರೆದು ಹೆಚ್ ಡಿ ಕುಮಾರಸ್ವಾಮಿ ಹಾಗೂ ಐಎನ್‍ಸಿ ಕರ್ನಾಟಕಕ್ಕೆ ಟ್ಯಾಗ್ ಮಾಡಿದ್ದಾರೆ.

ಸನ್ಮಾನ್ಯ @hd_kumaraswamy ಅವರೇ, ನನ್ನನ್ನು ಕೂಡಾ ಬೆಳೆಸಿದ್ದು ರಾಜ್ಯದ ಜನತೆ.ನಮ್ಮ ಪಕ್ಷಕ್ಕೆ ಜನ ನೀಡಿದ ಆಶೀರ್ವಾದದ ಬಲದಿಂದ ನಾನು 5 ವರ್ಷ ಮುಖ್ಯಮಂತ್ರಿಯಾಗಿದ್ದೇ ಹೊರತು ಯಾವುದೇ ಹದ್ದು-ಗಿಣಿಗಳ ಹಂಗಿನಿಂದಲ್ಲ. @INCKarnataka
2/3

— Siddaramaiah (@siddaramaiah) September 24, 2019

ರಮೇಶ್ ಕುಮಾರ್, ಹೆಚ್‍ಡಿಕೆ ಹೇಳಿದ್ದೇನು?
ಶನಿವಾರ ಹೊಸಕೋಟೆಯಲ್ಲಿ ಮಾತನಾಡಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ತಾವು ಸಾಕಿದ ಗಿಣಿಗಳೇ ಸಿದ್ದರಾಮಯ್ಯ ಅವರನ್ನು ಹದ್ದಾಗಿ ಕುಕ್ಕಿದರು ಎಂದು ಹೇಳಿದ್ದರು. ಇದಕ್ಕೆ ಟಾಂಗ್ ಕೊಟ್ಟ ಕುಮಾರಸ್ವಾಮಿ, ಈಗ ಕಾಂಗ್ರೆಸ್ ನಾಯಕರು ನಾಟಕವಾಡುತ್ತಿದ್ದಾರೆ. ಸಿದ್ದರಾಮಯ್ಯ ಸಾಕಿದ ಗಿಣಿಗಳೇ ಹದ್ದಾಗಿ ನಮ್ಮ ಸರ್ಕಾರವನ್ನು ಕುಕ್ಕಿದವು ಎಂದು ಹೇಳಿದ್ದರು.

TAGGED:congresshd kumaraswamyjdsPublic TVramanagarsiddaramaiahಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿರಾಮನಗರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

Honnavara
Crime

ಹೊನ್ನಾವರ ಸೂಳೆಮುರ್ಕಿ ಬಳಿ ಇಬ್ಬರು ಸಜೀವ ದಹನ ಕೇಸ್‌ – ಹಣಕ್ಕಾಗಿ ನಡೆದಿತ್ತು ಕೊಲೆ!

Public TV
By Public TV
2 minutes ago
REPUBLIC DAY
Karnataka

77ನೇ ಗಣರಾಜ್ಯೋತ್ಸವ ಸಂಭ್ರಮ – ಈ ಬಾರಿಯ ವಿಶೇಷತೆಗಳೇನು?

Public TV
By Public TV
18 minutes ago
Suryakumar Yadav
Cricket

ಒಂದೇ ಓವರ್‌ನಲ್ಲಿ 24 ರನ್‌ ಚಚ್ಚಿ 24 ಇನ್ನಿಂಗ್ಸ್‌ ಬಳಿಕ ಫಿಫ್ಟಿ ಹೊಡೆದ ಸ್ಕೈ

Public TV
By Public TV
8 hours ago
01 22
Big Bulletin

ಬಿಗ್‌ ಬುಲೆಟಿನ್‌ 23 January 2026 ಭಾಗ-1

Public TV
By Public TV
8 hours ago
02 19
Big Bulletin

ಬಿಗ್‌ ಬುಲೆಟಿನ್‌ 23 January 2026 ಭಾಗ-2

Public TV
By Public TV
8 hours ago
03 16
Big Bulletin

ಬಿಗ್‌ ಬುಲೆಟಿನ್‌ 23 January 2026 ಭಾಗ-3

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?