Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಪಕ್ಷ ಬಿಜೆಪಿಯ ಬಿ ಟೀಮೋ ಅಥವಾ ಸಿ ಟೀಮೋ?: ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಪಕ್ಷ ಬಿಜೆಪಿಯ ಬಿ ಟೀಮೋ ಅಥವಾ ಸಿ ಟೀಮೋ?: ಹೆಚ್‍ಡಿಕೆ

Bengaluru City

ಕಾಂಗ್ರೆಸ್ ಪಕ್ಷ ಬಿಜೆಪಿಯ ಬಿ ಟೀಮೋ ಅಥವಾ ಸಿ ಟೀಮೋ?: ಹೆಚ್‍ಡಿಕೆ

Public TV
Last updated: November 23, 2021 9:44 pm
Public TV
Share
4 Min Read
KUMARASWAMY
SHARE

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಬಿಜೆಪಿ ಬಿ ಟೀಮ್ ಎಂದು ಕುಹಕ ಆಡುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಈಗ ಬಿಜೆಪಿಯ ಬಿ – ಟೀಮ್ ಹಾಗೂ ಸಿ – ಟೀಮ್ ಯಾವ ಪಕ್ಷ ಎನ್ನುವುದು ಜನರಿಗೆ ಈಗ ಚೆನ್ನಾಗಿ ಅರ್ಥವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

HD KUMARASWAMY

ದೇವನಹಳ್ಳಿಯಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ ರಮೇಶ್ ಗೌಡ ಅವರು ನಾಮಪತ್ರ ಸಲ್ಲಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿಜವಾದ ಎ ಟೀಮ್, ಬಿ ಟೀಮ್ ಮತ್ತು ಸಿ ಟೀಮ್ ಯಾವುದು ಎನ್ನುವುದು ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯಲ್ಲಿಯೇ ಗೊತ್ತಾಗುತ್ತದೆ. ಹಾಸನದಲ್ಲಿ ತಂದೆ (ಎ.ಮಂಜು) ಬಿಜೆಪಿ ಅಭ್ಯರ್ಥಿ. ಕೊಡಗಿನಲ್ಲಿ ಅವರ ಪುತ್ರನೇ ಕಾಂಗ್ರೆಸ್ ಪಕ್ಷದ ಉಮೇದುವಾರ. ಬಿಜೆಪಿ ಸರ್ಕಾರದಲ್ಲಿ ಸಚಿವರಿಗೆ ಪಿಎ ಆಗಿದ್ದ ವ್ಯಕ್ತಿ ಈಗ ಮಂಡ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ. ಇದು ಏನನ್ನು ಸೂಚಿಸುತ್ತದೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ಕುರುಡು ಕುದುರೆಗಳಂತೆ ಕಣ್ಣಿಗೆ ಪಟ್ಟಿ ಕಟ್ಕೊಂಡು ರಾಜಕಾರಣ ಮಾಡ್ತಿವೆ: ಶ್ರೀರಾಮುಲು

congress logo 1

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಮುಖಂಡನನ್ನು ಬಿಜೆಪಿಗೆ ಕಳುಹಿಸಿ ಅಭ್ಯರ್ಥಿ ಮಾಡಿತ್ತು. ಈಗ ಅದೇ ಬಿಜೆಪಿಯು ತನ್ನ ನಾಯಕನ ಮಗನನ್ನು ಕಾಂಗ್ರೆಸ್ ಪಕ್ಷಕ್ಕೆ ಕಳುಹಿಸಿ ಕೊಡಗಿನ ಅಭ್ಯರ್ಥಿ ಮಾಡಿದೆ. ಇದು ರಾಷ್ಟ್ರೀಯ ಪಕ್ಷಗಳ ಅಡ್ಜೆಸ್‍ಮೆಂಟ್ ರಾಜಕೀಯ. ಈಗ ಕಾಂಗ್ರೆಸ್ ಪಕ್ಷದ ನಿಜವಾದ ಬಣ್ಣ ಕಳಚಿ ಬಿದ್ದಿದೆ. ಜನರಿಗೂ ಆ ಪಕ್ಷದ ಅಸಲಿ ಸ್ವರೂಪ ಗೊತ್ತಾಗಿದೆ. ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದ ಕಾಂಗ್ರೆಸ್ ಪಕ್ಷದ ನಾಯಕರು ಈಗ ಏನು ಹೇಳುತ್ತಾರೆ? ಯಾವ ನಾಲಗೆಯಲ್ಲಿ ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುತ್ತಾರೆ. ನಾವು ಏಳು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದೇವೆ. ಆ ಪೈಕಿ ಕೊನೆಪಕ್ಷ ಆರು ಕಡೆಯಾದರೂ ಗೆಲ್ಲುತ್ತೇವೆ. ಈಗ ನಮ್ಮ ಪಕ್ಷ ಕಷ್ಟದ ಪರಿಸ್ಥಿತಿಯಲ್ಲಿದೆ. ಹೀಗಾಗಿ ನಾವು ಕಣಕ್ಕಿಳಿದಿರುವ ಕಡೆ ಗೆಲ್ಲಲೇಬೇಕು. ಅದಕ್ಕೆ ಏನೆಲ್ಲಾ ಮಾಡಬೇಕೋ ಅದನ್ನು ಮಾಡುತ್ತೇವೆ ಎಂದರು.

HD KUMARASWAMY 2

ಬ್ರೈನ್ ವಾಶ್ ಮಾಡುತ್ತಿದ್ದಾರೆ:
ಮೈತ್ರಿ ಸರ್ಕಾರವನ್ನು ಪತನ ಮಾಡಿದ ನಂತರ ನಮ್ಮ ಪಕ್ಷವನ್ನು ಮುಗಿಸಲು ಕೆಲವರು ಹೊಂಚು ಹಾಕಿ ಕೂತಿದ್ದಾರೆ. ನಮ್ಮ ನಾಯಕರ ಬ್ರೈನ್ ವಾಶ್ ಮಾಡಿ ಅವರನ್ನು ತಮ್ಮ ಪಕ್ಷಕ್ಕೆ ಸೆಳೆದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪರಿಷತ್ ಚುನಾವಣೆ ಬಂದಿದೆ. ನಾವು ಕಾರ್ಯಕರ್ತರನ್ನು ನಂಬಿ ಹೋರಾಟ ಮಾಡುತ್ತಿದ್ದೇವೆ. ಪಕ್ಷದಿಂದ ಬೆಳೆದವರು ಪಕ್ಷದ ಬೆನ್ನು ಇರಿದರು. ತುಮಕೂರಿನಲ್ಲಿ ದೇವೇಗೌಡರನ್ನು ಸೋಲಿಸಿದರು. ಕಾಂಗ್ರೆಸ್ ಪಕ್ಷದ ನಾಯಕರೇ ಕುತಂತ್ರ ನಡೆಸಿ ಮಾಜಿ ಪ್ರಧಾನಿಗಳ ಸೋಲಿಗೆ ಕಾರಣರಾದರು. ತಡರಾತ್ರಿ 1.30ಕ್ಕೆ ಅಭ್ಯರ್ಥಿಗಳನ್ನು ಅಂತಿಮ ಮಾಡಲಾಗಿದೆ. ನಮ್ಮ ಪಕ್ಷದ ಶಕ್ತಿಗೆ ತಕ್ಕಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ. ಬಿಜೆಪಿಗೆ ಅನುಕೂಲ ಮಾಡಿಕೊಡಲು ದೇವೇಗೌಡರನ್ನು ಕಾಂಗ್ರೆಸ್ ನಾಯಕರು ತುಮಕೂರಿನಲ್ಲಿ ಸೋಲಿಸಿದರು. ಯಾವ ಕುತಂತ್ರಕ್ಕೆ ಅಂದು ನಾವು ಬಲಿಯಾದೇವೂ ಅದನ್ನೆ ಈಗ ತೋರಿಸುತ್ತೇವೆ. ಪರಿಷತ್ ಚುನಾವಣೆಯಲ್ಲಿ ನಮ್ಮ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ ಎಂದು ಕಾಂಗ್ರೆಸ್ ಪಕ್ಷಕ್ಕೆ ನೇರ ಸವಾಲು ಹಾಕಿದರು. ಇದನ್ನೂ ಓದಿ:   ಕಾಂಗ್ರೆಸ್ ಪಕ್ಷ ಬರ್ಬಾದ್ ಆಗಿ ಹೋಗಿದೆ: ಅಶ್ವತ್ಥ್‌ ನಾರಾಯಣ್

HD KUMARASWAMY 1

ಕೂಡಲೇ ರೈತರಿಗೆ ನರವಾಗಬೇಕು:
ಈಗಾಗಲೇ ಸತತ ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್ ಅನ್ನು ಬದಿಗಿಟ್ಟು ರೈತರನ್ನು ಉಳಿಸುವ ಕೆಲಸ ಮಾಡಬೇಕು. ಐವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಕೂಡ ಒಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದು ದೊಡ್ಡದಾಗುವ ಮೊದಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಮಳೆ ನೆರೆಗೆ ಸರ್ಕಾರಗಳೇ ಹೊಣೆ:
ರಾಜಕಾಲುವೆಗಳ ಅಸಮರ್ಪಕ ನಿರ್ವಹಣೆ ಹಾಗೂ ಒತ್ತುವರಿಯಿಂದ ಬೆಂಗಳೂರಿನಲ್ಲಿ ಮಳೆ ಅನಾಹುತ ಹೆಚ್ಚಾಗಿದೆ. ಇದುವರೆಗೂ ಬೆಂಗಳೂರಿನಲ್ಲಿ ಕಾಂಗ್ರೆಸ್, ಬಿಜೆಪಿ ಪಕ್ಷಗಳು ಆಡಳಿತ ನಡೆಸಿವೆ. ಕೆಂಪೇಗೌಡರು ಕಟ್ಟಿದ ಬೆಂಗಳೂರಲ್ಲಿ ಹಣಕ್ಕಾಗಿ ಕೆರೆ ಕಟ್ಟೆಗಳನ್ನೇ ನುಂಗಿದರು. ರಾಜಕಾಲುವೆಗಳನ್ನು ನುಂಗಲು ಬೆಂಬಲ ನೀಡಿದವರೇ ಈಗಿನ ಅನಾಹುತಗಳಿಗೆ ಹೊಣೆ ಹೊರಬೇಕು. ಅನೇಕ ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಸಿಎಂ, ಸಚಿವರು ಒಂದೊಂದು ರೀತಿ ಹೇಳಿಕೆ ನೀಡುತ್ತಿದ್ದಾರೆ. ಸಿಎಂ ಹತ್ತು ಲಕ್ಷ ಹೆಕ್ಟೇರ್ ಬೆಳೆ ನಾಶ ಎನ್ನುತ್ತಿದ್ದಾರೆ. ಕೃಷಿ ಸಚಿವರು ಐದು ಲಕ್ಷ ಹೆಕ್ಟೇರ್ ಭೂಮಿ ಬೆಳೆ ನಾಶ ಎನ್ನುತ್ತಿದ್ದಾರೆ. ಯಾರ ಮಾತನ್ನು ನಂಬಬೇಕು. ಸರ್ಕಾರ ಇಂಥ ಹೇಳಿಕೆಗಳನ್ನು ಬಿಟ್ಟು ಕೂಡಲೇ ಬೆಳೆ ನಷ್ಟ ಮಾಡಿಕೊಂಡಿರುವ ರೈತರಿಗೆ ನೆರವಾಗಬೇಕು ಎಂದು ಕುಮಾರಸ್ವಾಮಿ ಆಗ್ರಹಪಡಿಸಿದರು. ಇದನ್ನೂ ಓದಿ: ಬಿಜೆಪಿಗೆ ಹೆದರಿ ಪಟೇಲರ ಫೋಟೋಯಿಟ್ಟ ಕಾಂಗ್ರೆಸ್ – ಸಿದ್ದು, ಡಿಕೆ ಗುಸುಗುಸು ಫುಲ್ ವೈರಲ್

2023ಕ್ಕೆ ಸ್ವತಂತ್ರ ಸರ್ಕಾರ:
2023ಕ್ಕೆ ಸ್ವತಂತ್ರವಾಗಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವ ಗುರಿಯೊಂದಿಗೆ ನಾವು ಕೆಲಸ ಮಾಡುತ್ತಿದ್ದೇವೆ. ಆದರೆ ನಮ್ಮ ಪ್ರಯತ್ನದ ಬಗ್ಗೆ ಕೆಲವರು ತುಂಬಾ ಹಗುರವಾಗಿ ಮಾತಮಾಡುತ್ತಿದ್ದಾರೆ. ಯಾರು ಏನೇ ಹೇಳಲಿ, ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕಿದೆ. ಯಾವುದೇ ಪಕ್ಷಗಳ ಹಂಗಿಲ್ಲದೆ ಅಧಿಕಾರಕ್ಕೆ ತರಬೇಕಿದೆ. ನಮಗೆ ದೊಡ್ಡ ಮಟ್ಟದ ನಾಯಕರಿಲ್ಲ. ಕಾರ್ಯಕರ್ತರೇ ನಮಗೆ ದೊಡ್ಡ ಶಕ್ತಿ. ಅದೇ ನಮಗೆ ಆತ್ಮವಿಶ್ವಾಸ. ಈ ಚುನಾವಣೆಯಲ್ಲಿ ನಾವು ಗೆಲ್ಲುವ ಮೂಲಕ ಸಂದೇಶ ಕೊಡಬೇಕಿದೆ ಎಂದು ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದು ನುಡಿದರು.

TAGGED:bjpcongresshd kumaraswamyVidhan Parishad Electionಎಚ್‍ಡಿ ಕುಮಾರಸ್ವಾಮಿಕಾಂಗ್ರೆಸ್ಬಿಜೆಪಿವಿಧಾನ ಪರಿಷತ್ ಚುನಾವಣೆ
Share This Article
Facebook Whatsapp Whatsapp Telegram

Cinema news

PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood

You Might Also Like

man quits a Rs 40000 job in Bengaluru and works as a areca nut tree climber in his hometown Kalasa 1
Districts

ಬೆಂಗಳೂರಿನಲ್ಲಿ 40 ಸಾವಿರದ ಉದ್ಯೋಗಕ್ಕೆ ಗುಡ್‌ಬೈ – ಊರಿನಲ್ಲಿ ಅಡಿಕೆ ಕೊನೆಕಾರನ ಕೆಲಸಕ್ಕೆ ಜೈ

Public TV
By Public TV
3 minutes ago
Gadag 4 1
Districts

ಐತಿಹಾಸಿಕ ಲಕ್ಕುಂಡಿಯಲ್ಲಿ ಅಪರೂಪದ ತ್ರಿಮುಖ ನಾಗಶಿಲೆ ಪತ್ತೆ

Public TV
By Public TV
5 minutes ago
Tractor catches fire after touching electric wire while transporting sugarcane leaves jamkhandi
Bagalkot

ಕಬ್ಬಿನ ಹುಲ್ಲು ಸಾಗಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶ – ಧಗ ಧಗ ಹೊತ್ತಿ ಉರಿದ ಟ್ರ್ಯಾಕ್ಟರ್‌

Public TV
By Public TV
40 minutes ago
Sunetra Pawar Ajit Pawar
Latest

ಮಹಾರಾಷ್ಟ್ರ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್‌ ಪತ್ನಿ ಸುನೇತ್ರಾ ಹೆಸರು ಪ್ರಸ್ತಾಪಿಸಲು ಎನ್‌ಸಿಪಿ ಚಿಂತನೆ

Public TV
By Public TV
1 hour ago
KJ George 1
Bengaluru City

ನಾನು ರಾಜೀನಾಮೆ ನೀಡಿಲ್ಲ, ಆ ಪ್ರಶ್ನೆಯೇ ಉದ್ಭವ ಆಗಿಲ್ಲ: ಕೆ.ಜೆ ಜಾರ್ಜ್ ಸ್ಪಷ್ಟನೆ

Public TV
By Public TV
1 hour ago
India EU Trade Deal 1 1
Explainer

PublicTV Explainer: ಭಾರತ-ಇಯು ಡೀಲ್; ಐಷಾರಾಮಿ ಕಾರುಗಳು, ಬಿಯರ್‌, ವೈನ್‌, ಮೆಡಿಸಿನ್‌ – ಯಾವ್ಯಾವುದರ ಬೆಲೆ ಇಳಿಕೆ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?