Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಂತಿ ಮೇಲಿಂದನೇ ಪ್ರವಾಹ ಪೀಡಿತರ ಕಡೆಗೂ ನೋಡಿ: ಬಿಎಸ್‍ವೈಗೆ ಹೆಚ್‍ಡಿಕೆ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಂತಿ ಮೇಲಿಂದನೇ ಪ್ರವಾಹ ಪೀಡಿತರ ಕಡೆಗೂ ನೋಡಿ: ಬಿಎಸ್‍ವೈಗೆ ಹೆಚ್‍ಡಿಕೆ ಟಾಂಗ್

Bengaluru City

ತಂತಿ ಮೇಲಿಂದನೇ ಪ್ರವಾಹ ಪೀಡಿತರ ಕಡೆಗೂ ನೋಡಿ: ಬಿಎಸ್‍ವೈಗೆ ಹೆಚ್‍ಡಿಕೆ ಟಾಂಗ್

Public TV
Last updated: September 30, 2019 2:52 pm
Public TV
Share
2 Min Read
BSY HDK
SHARE

ಬೆಂಗಳೂರು: ತಂತಿ ಮೇಲಿಂದನೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೂ ನೋಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹಾಲಿ ಸಿಎಂ ಯಡಿಯೂರಪ್ಪ ಅವರ ಕಾಲೆಳೆದಿದ್ದಾರೆ.

ರಾಜ್ಯದ ಪ್ರವಾಹ ಪೀಡಿತರಿಗೆ ಸರಿಯಾಗಿ ನೆರವು ನೀಡಿದ ಸರ್ಕಾರವನ್ನು ಹೆಚ್‍ಡಿ ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಯಡಿಯೂರಪ್ಪನವರೇ ತಂತಿ ಮೇಲಿಂದನೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೂ ನೋಡಿ. ಜನರ ಸಮಸ್ಯೆ ಬಗೆಹರಿಸಲು ಆಗದಿದ್ದರೆ ಜನರೇ ನಿಮ್ಮನ್ನು ‘ತಂತಿ’ ಮೇಲಿನಿಂದ ಇಳಿಸುತ್ತಾರೆ ಎಂದು ಟಾಂಗ್ ಕೊಟ್ಟಿದ್ದಾರೆ.

ಅತೃಪ್ತ ಶಾಸಕರನ್ನು‌ ಅಡ್ಡ ದಾರಿಯಲ್ಲಿ ತೃಪ್ತಿಪಡಿಸಿ CM ‌ಪದವಿಗೆ ಏರಿದ ಯಡಿಯೂರಪ್ಪನವರೇ ತಂತಿ‌ ಮೇಲಿಂದನೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೂ ನೋಡಿ‌. ಮನೆ ಮಠ ಕಳೆದುಕೊಂಡು ‌ಬೀದಿಗೆ ಬಿದ್ದಿರುವ ಅವರ ಬದುಕನ್ನು ನಿಮ್ಮ ಸರ್ಕಾರಕ್ಕೆ ‌ಕಟ್ಟಿ ಕೊಡೋಕೆ ಸಾಧ್ಯವಾಗದಿದ್ದರೆ‌, ಜನರೇ ನಿಮ್ಮನ್ನು 'ತಂತಿ‌' ಮೇಲಿಂದ ಇಳಿಸುತ್ತಾರೆ.

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) September 30, 2019

ಟ್ವೀಟ್‍ನಲ್ಲಿ ಏನಿದೆ?
ಅತೃಪ್ತ ಶಾಸಕರನ್ನು ಅಡ್ಡ ದಾರಿಯಲ್ಲಿ ತೃಪ್ತಿಪಡಿಸಿ ಸಿಎಂ ಪದವಿಗೆ ಏರಿದ ಯಡಿಯೂರಪ್ಪನವರೇ ತಂತಿ ಮೇಲಿಂದನೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೂ ನೋಡಿ. ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದಿರುವ ಅವರ ಬದುಕನ್ನು ನಿಮ್ಮ ಸರ್ಕಾರಕ್ಕೆ ಕಟ್ಟಿ ಕೊಡೋಕೆ ಸಾಧ್ಯವಾಗದಿದ್ದರೆ, ಜನರೇ ನಿಮ್ಮನ್ನು ‘ತಂತಿ’ ಮೇಲಿಂದ ಇಳಿಸುತ್ತಾರೆ ಎಂದು ವ್ಯಂಗ್ಯವಾಗಿ ಬರೆದು ಟ್ವೀಟ್ ಮಾಡಿದ್ದಾರೆ.

ನಾನು ಒಂದು ರೀತಿ ತಂತಿ ಮೇಲೆ ನಡೆಯುತ್ತಿದ್ದೇನೆ, ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕಾದಲ್ಲಿ ಹತ್ತಾರು ಸಲ ವಿಚಾರ ಮಾಡಬೇಕಾಗಿದೆ. ನಿರ್ಧಾರ ತೆಗೆದುಕೊಳ್ಳುವಾಗ ಅದು ಬೇರೆ ಸಮಾಜದ ಮೇಲೆ ಹೇಗೆ ಪರಿಣಾಮ ಎನಾಗುತ್ತದೆ ಎಂಬುದನ್ನೂ ಚಿಂತನೆ ಮಾಡಬೇಕಾಗಿದೆ ಎಂದು ದಾವಣಗೆರೆಯಲ್ಲಿ ಭಾನುವಾರ ಯಡಿಯೂರಪ್ಪ ಭಾವನಾತ್ಮಕವಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸದ್ಯ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ವಿಪಕ್ಷ ನಾಯಕರು ತಾ ಮುಂದು, ನಾ ಮುಂದು ಎಂದು ಬಿಎಸ್‍ವೈ ಹೇಳಿಕೆಗೆ ಟೀಕಿಸುತ್ತಿದ್ದಾರೆ.

ಪ್ರವಾಹದಿಂದ ಅತಿ ಹೆಚ್ಚು ಹಾನಿಗೀಡಾಗಿರುವುದು ಬೆಳಗಾವಿ ಜಿಲ್ಲೆ, ನಂತರ ಬಾಗಲಕೋಟೆ, ರಾಯಚೂರು, ಗದಗ ಹೀಗೆ ಸಾಕಷ್ಟು ನಷ್ಟಕ್ಕೆ ಈಡಾಗಿವೆ ಪ್ರತಿ ತಿಂಗಳು ಸಂತ್ರಸ್ತರಿಗೆ ಮನೆ ಬಾಡಿಗೆ ರೂಪದಲ್ಲಿ ರೂ.5000 ಕೊಡಲಾಗುತ್ತಿದೆ. ಹಳ್ಳಿಗಳಲ್ಲಿ ಮನೆ ಬಾಡಿಗೆಗೆ ಸಿಗುತ್ತದೆಯೇ? ಮನೆ ಕಳೆದುಕೊಂಡವರು ಮುಂದಿನ ಹತ್ತು ತಿಂಗಳು ಎಲ್ಲಿ ವಾಸಿಸಬೇಕು?

— Siddaramaiah (@siddaramaiah) September 30, 2019

ಬಿಎಸ್‍ವೈ ಹೇಳಿಕೆ ಸಿದ್ದರಾಮಯ್ಯ ಅವರು ಕೂಡ ಟಾಂಗ್ ಕೊಟ್ಟಿದ್ದರು, ಸಿಎಂ ಯಡಿಯೂರಪ್ಪ ತಂತಿ ಮೇಲೆ ಯಾಕೆ ನಡೆಯಬೇಕು. ರಾಜಿನಾಮೆ ಕೊಟ್ಟು ಸಿಎಂ ಸ್ಥಾನದಿಂದ ಕೆಳಗೆ ಇಳಿಯಲಿ. ತಂತಿ ಮೇಲೆ ನಡೆದು ಬಿದ್ದುಬಿಟ್ಟಾರು. ಯಡಿಯೂರಪ್ಪ ವೀಕ್ ಚೀಫ್‍ಮಿನಿಸ್ಟರ್, ಯಡಿಯೂರಪ್ಪ ಅವರಿಗೆ ಪಕ್ಷದವರೇ ತುಂಬಾ ತೊಂದರೆ ಕೊಡುತ್ತಿದ್ದಾರೆ. ಅವರು ರೆಕ್ಕೆ ಪುಕ್ಕಗಳು ಕಟ್ ಮಾಡಿದ್ದಾರೆ. ಅಮಿತ್ ಶಾ, ಮೋದಿ ಬಳಿ ಯಡಿಯೂರಪ್ಪಗೆ ಮಾತನಾಡುವ ಶಕ್ತಿಯಿಲ್ಲ. ನೆರೆ ಪ್ರವಾಹ ಪರಿಹಾರ ಕೇಂದ್ರದಲ್ಲಿ ಕೇಳಲು ಧೈರ್ಯವಿಲ್ಲ. ಬಿಜೆಪಿಗೆ 103 ಸೀಟ್‍ಗಳು ಇವೆ. ಹೀಗಾಗಿ ಬಿಜೆಪಿ ಸರ್ಕಾರ ಪತನವಾಗುತ್ತೆ. ನಮ್ಮ ಶಾಸಕರಿಗೆ ಆಸೆ ತೋರಿಸಿ ಅಧಿಕಾರಕ್ಕೆ ಬಂದಿದ್ದಾರೆ. ಮಧ್ಯಂತರ ಚುನಾವಣೆ ಬರುತ್ತೆ ಆದರೆ ಜೆಡಿಎಸ್ ಬಿಜೆಪಿ ಜೊತೆಗೆ ಹೋಗುವುದಿಲ್ಲ ಎಂದು ಮಾತಿನ ಚಾಟಿ ಬೀಸಿದ್ದರು.

ಚಂದ್ರಯಾನ-2 ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ದಿನ ಬೆಂಗಳೂರಿಗೆ ಆಗಮಿಸಿದ್ದ ನರೇಂದ್ರ ಮೋದಿಯವರನ್ನು ಭೇಟಿಯಾಗಲು ಅವಕಾಶ ನೀಡುವಂತೆ ಕಾಂಗ್ರೆಸ್ ಪಕ್ಷದ ವತಿಯಿಂದ ಪತ್ರ ಬರೆದಿದ್ದೆವು, ಆದರೆ ಭೇಟಿಗೆ ಅವಕಾಶ ನೀಡಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರಿಗೂ ಮೋದಿಯವರ ಬಳಿ ಮಾತನಾಡುವ ಧೈರ್ಯವಿಲ್ಲ.
ರಾಜ್ಯದ ಸಮಸ್ಯೆ ಬಗೆಹರಿಯುವುದು ಹೇಗೆ?

— Siddaramaiah (@siddaramaiah) September 30, 2019

ಈ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ ಅವರು, ತಂತಿ ಮೇಲಿನ ನಡಿಗೆ ಕುರಿತ ನನ್ನ ಹೇಳಿಕೆಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ. ಸೀಮಿತ ಸಂಪನ್ಮೂಲವನ್ನೆಲ್ಲಾ ಸಮಾಜ ಮತ್ತು ರಾಜ್ಯದ ಅಭಿವೃದ್ಧಿಗೆ ಬಳಸಬೇಕಿದೆ. ಹೀಗಾಗಿ ಹೆಚ್ಚಿನ ಅನುದಾನವನ್ನು ನೀಡುವುದು ಕಷ್ಟಸಾಧ್ಯ. ಅದನ್ನೇ ಹೇಳಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

TAGGED:bengaluruFlood victimsKumaraswamyPublic TVsiddaramaiahYediyurappaಕುಮಾರಸ್ವಾಮಿಪಬ್ಲಿಕ್ ಟಿವಿಪ್ರವಾಹ ಸಂತ್ರಸ್ತರುಬೆಂಗಳೂರುಯಡಿಯೂರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

Iran Israel America War Iran cheap drones High Impact
Latest

ಅಮೆರಿಕದ ದುಬಾರಿ ಶಸ್ತ್ರಾಸ್ತ್ರಗಳಿಗೆ ಇರಾನ್‌ನ ಅಗ್ಗದ ಡ್ರೋನ್‌ಗಳ ಸವಾಲು

Public TV
By Public TV
8 minutes ago
Andhra Pradesh Chittoor Accident
Crime

ಕಂಟೇನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಬೆಂಗಳೂರು ಮೂಲದ ಐವರು ದುರ್ಮರಣ

Public TV
By Public TV
15 minutes ago
Puneet MANGALURU
Crime

ಕಾಲ್, ಮೆಸೇಜ್‍ಗೆ ಪ್ರೇಯಸಿಯಿಂದ ನೋ ರಿಪ್ಲೈ – ಸೋಮೇಶ್ವರದ ಯುವಕ ಒಮನ್‍ನಲ್ಲಿ ಆತ್ಮಹತ್ಯೆ

Public TV
By Public TV
52 minutes ago
Donald Trump 2
Latest

ಹಾರ್ಮೂಜ್‌ ಬಿಕ್ಕಟ್ಟಿನ ಬಗ್ಗೆ ದೊಡ್ಡ ನಿರ್ಧಾರ – ತೈಲ ಟ್ಯಾಂಕರ್‌ಗಳಿಗೆ ರಕ್ಷಣೆ ನೀಡುವಂತೆ ಟ್ರಂಪ್‌ ಆದೇಶ

Public TV
By Public TV
2 hours ago
Madhu Bangarappa Birthday free flights for civil servants government school children
Districts

ಸಚಿವ ಮಧು ಬಂಗಾರಪ್ಪ ಜನ್ಮದಿನ – ಪೌರಕಾರ್ಮಿಕರು, ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ವಿಮಾನಯಾನ

Public TV
By Public TV
2 hours ago
Udupi Malpe Fishermen Leader Stabbed
Crime

ಪ್ರೇಮ ಪ್ರಕರಣ ರಾಜಿ ಪಂಚಾಯ್ತಿ ವೇಳೆ ಮಲ್ಪೆ ಮೀನುಗಾರರ ಮುಖಂಡನಿಗೆ ಚಾಕು ಇರಿತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?