Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೊಮ್ಮಾಯಿ ಭಾವನಾತ್ಮಕ ಹೇಳಿಕೆ ಹೃದಯ ಇದ್ದವರಿಗೆ ಮಾತ್ರ ಅರ್ಥವಾಗುತ್ತದೆ: ಎಚ್‍ಡಿಕೆ

Public TV
Last updated: December 20, 2021 5:20 pm
Public TV
Share
4 Min Read
HD KUMARASWAMY
SHARE

-ಐದು ದಿನ ಕಲಾಪದಲ್ಲಿ ಮೌಲ್ಯಾಧಾರಿತ ಚರ್ಚೆ ಆಗಿದೆಯಾ?
-ರಾಯಣ್ಣ ಪ್ರತಿಮೆ ವಿರೂಪ ಮಾಡಿದ ಕನ್ನಡ ದ್ರೋಹಿಗಳನ್ನು ಗಡೀಪಾರು ಮಾಡಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವಿಯಲ್ಲಿ ಅವರು ನಾಲ್ಕು ಚುನಾವಣೆಗಳನ್ನು ಸತತವಾಗಿ ಗೆದ್ದಿದ್ದಾರೆ. ಜನ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ಆ ಭಾವನೆಗಳು ಸಹಜ. ಹೃದಯ ಇದ್ದವರಿಗೆ ಮಾತ್ರ ಅವರ ಭಾವನೆ ಅರ್ಥವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸಿಎಂ ಪರ ಬ್ಯಾಟ್ ಬೀಸಿದ್ದಾರೆ.

c m bommai 1

ಸಿಎಂ ಭಾವನಾತ್ಮಕ ಹೇಳಿಕೆ ತಪ್ಪೇನಿಲ್ಲ:
ಬೆಂಗಳೂರಿನಲ್ಲಿ ಇಂದು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೊಮ್ಮಾಯಿ ಅವರು ತಮ್ಮ ತವರು ಕ್ಷೇತ್ರದಲ್ಲಿ ತಮ್ಮ ಅಧಿಕಾರದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿರುವ ಬಗ್ಗೆ ನಾನು ವ್ಯಾಖ್ಯಾನ ಮಾಡಲು ಹೋಗುವುದಿಲ್ಲ. ಆ ಸ್ಥಾನಕ್ಕೆ ಅವರು ಬರಬೇಕಾದರೆ ಆ ಕ್ಷೇತ್ರದ ಜನರೇ ಕಾರಣ. ಹೀಗಾಗಿ ಸಿಎಂ ಅವರು ಭಾವನಾತ್ಮಕವಾಗಿ ಮಾತನಾಡಿರಬಹುದು. ಅದರಲ್ಲಿ ತಪ್ಪೇನಿಲ್ಲ. ಅವರ ಮಾತುಗಳು ತಾಯಿ ಹೃದಯ ಇರುವವರಿಗೆ ಮಾತ್ರ ಅರ್ಥವಾಗುತ್ತವೆ. ಬೇರೆಯವರಿಗೆ ಅದು ಅರ್ಥ ಆಗಲ್ಲ. ನನ್ನ ಬಗ್ಗೆಯೂ ಕೆಲವರು ಮಾತನಾಡಿದ್ದಾರೆ. ನಾನು ಅನೇಕ ಸಲ ಹೇಳಿದ್ದೇನೆ, ನನಗೆ ರಾಜಕೀಯ ಜನ್ಮ ಕೊಟ್ಟವರು ರಾಮನಗರದ ಜನ ಅಂತ. ಅವರ ಬಗ್ಗೆ ಹೇಳುವಾಗ ನಾನೂ ಭಾವುಕನಾಗಿದ್ದೇನೆ. ಇದು ಮನುಷ್ಯ ಸಹಜ ಗುಣ ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಈ ಬದುಕು ಶಾಶ್ವತವಲ್ಲ, ನಾವು ಎಷ್ಟು ದಿನ ಇರ್ತೇವೆ ಅದು ಗೊತ್ತಿಲ್ಲ: ಸಿಎಂ ವೈರಾಗ್ಯದ ಮಾತು

ಮುಖ್ಯಮಂತ್ರಿ ಬದಲಾವಣೆ ಆಗುತ್ತೆ ಅಂತ ಬೊಮ್ಮಾಯಿ ಅವರು ಹೀಗೆ ಮಾತನಾಡಿದ್ದಾರೆ ಎನ್ನುವುದನ್ನು ನಾನು ಒಪ್ಪಲು ತಯಾರಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು. ಇದನ್ನೂ ಓದಿ: ಪ್ರತಿಮೆ ಭಗ್ನ ಮಾಡೋರು ನೀವೇ, ಗೌರವ ಸಲ್ಲಿಸೋರು ನೀವೇ – ಸಿದ್ದು ವಿರುದ್ಧ ಬಿಜೆಪಿ ಕಿಡಿ

ಮಧ್ಯರಾತ್ರಿಯಲ್ಲಿ ಬಂದು ಕನ್ನಡಿಗರ ಹೆಮ್ಮೆಯ ಪುತ್ರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ ಮಾಡಿರುವ, ವಾಹನಗಳ ಮೇಲೆ ಕಲ್ಲು ಹೊಡೆದು ಬೆಂಕಿ ಇಟ್ಟಿರುವ ನಾಡದ್ರೋಹಿಗಳನ್ನು ರಾಜ್ಯದಿಂದ ಗಡೀಪಾರು ಮಾಡಬೇಕು, ಘಟನೆಯಲ್ಲಿ ಭಾಗಿಯಾಗಿರುವ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.

ಕಿಡಿಗೇಡಿಗಳನ್ನು ಸುಮ್ಮನೆ ಬಿಡಬಾರದು:
ಮಧ್ಯರಾತ್ರಿ ಬಂದು ರಾಯಣ್ಣ ಪ್ರತಿಮೆಯನ್ನು ಹಾಳು ಮಾಡಿರುವುದು ಹೇಡಿತನ. ಭಾಷಾ ಸಾಮರಸ್ಯ ಹಾಳು ಮಾಡುವ ಇಂಥ ಕಿಡಿಗೇಡಿಗಳನ್ನು ಸುಮ್ಮನೆ ಬಿಡಬಾರದು. ಸ್ವಾತಂತ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪ ಮಾಡಿರುವುದು ಹೇಯ ಕೃತ್ಯ. ಇದು ವಿಕೃತವಲ್ಲದೇ ಮತ್ತೇನು ಅಲ್ಲ. ಈ ಮೂಲಕ ಕಿಡಿಗೇಡಿಗಳು ಕನ್ನಡಿಗರಿಗೆ ಮಾತ್ರವಲ್ಲ ಮರಾಠಿಗರಿಗೆ ಕೂಡ ದ್ರೋಹ ಎಸಗಿದ್ದಾರೆ. ಓರ್ವ ರಾಷ್ಟ್ರಪ್ರೇಮಿ, ಮಹಾನ್ ಯೋಧನಿಗೆ ಆಗಿರುವ ಈ ಅಪಚಾರದಿಂದ ಎಲ್ಲರೂ ತಲೆತಗ್ಗಿಸುವಂತೆ ಆಗಿದೆ. ಈ ಕೃತ್ಯದಲ್ಲಿ ಯಾವುದೇ ಸಂಘಟನೆಗಳು ಭಾಗಿಯಾಗಿದ್ದರೂ ಅವುಗಳನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು ಹಾಗೂ ತಪ್ಪಿತಸ್ಥರನ್ನು ರಾಜ್ಯದಿಂದ ಗಡೀಪಾರು ಮಾಡಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು. ಇದನ್ನೂ ಓದಿ: ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶ – ಕೈ ವಿರುದ್ಧ ಬಿಜೆಪಿ ಟ್ವೀಟ್ ದಾಳಿ

ಈ ಘಟನೆಯ ಹಿಂದೆ ಯಾರಿದ್ದಾರೆ ಎನ್ನುವುದನ್ನು ಹೊರಗೆಳೆದು, ಷಡ್ಯಂತ್ರ ನಡೆಸಿದ ಎಲ್ಲರಿಗೂ ತಕ್ಕ ಶಾಸ್ತಿ ಮಾಡಬೇಕು ಎನ್ನುವುದು ನನ್ನ ಒತ್ತಾಯವಾಗಿದೆ. ಎಂಇಎಸ್ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಮೃದು ಧೋರಣೆ ಅನುಸರಿಸುತ್ತಿವೆ ಎಂದು ಜನ ದೂರುತ್ತಿದ್ದಾರಲ್ಲ ಎಂದು ಮಾಧ್ಯಮಗಳು ಗಮನ ಸೆಳೆದಾಗ. ಯಾರ ಮೇಲೆ ಯಾರಿಗೆ ಮೃದು ಧೋರಣೆ ಇದೆ ಎನ್ನುವುದಕ್ಕಿಂತ ನಮ್ಮ ನೆಲದಲ್ಲೇ ಇದ್ದು, ಇಲ್ಲಿನ ನೀರು ಗಾಳಿ ಅನ್ನ ಸೇವಿಸುತ್ತಾ ನಮ್ಮ ನಾಡಿನ ಬಗ್ಗೆ ದ್ರೋಹ ಚಿಂತನೆ ಮಾಡುವುದು ಘೋರ ಅಪರಾಧ. ಇದಕ್ಕೆ ಕ್ಷಮೆ ಇಲ್ಲ ಎಂದು ಕಿಡಿಕಾರಿದರು.

ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ನಾನು ಹೇಳುವುದು ಇಷ್ಟೇ, ಎರಡು ರಾಜ್ಯಗಳ ನಡುವೆ ದ್ವೇಷವನ್ನು ಬಿತ್ತಿ ಸಾಮರಸ್ಯ ಹಾಳು ಮಾಡುವಂತ ವಿಚ್ಛಿದ್ರ ಶಕ್ತಿಗಳಿಗೆ ಬೆಂಬಲ ಕೊಟ್ಟು ನಿಮ್ಮ ರಾಜಕೀಯ ಶಕ್ತಿ ವೃದ್ಧಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾವು ಪರಸ್ಪರ ಸಹೋದರ ಭಾವದಿಂದ ಕೆಲಸ ಮಾಡಬೇಕು. ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡುವಂತ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡುವ ಬಗ್ಗೆ ಸರ್ಕಾರವೇ ಕಾನೂನು ವ್ಯಾಪ್ತಿಯಲ್ಲಿ ಆಲೋಚನೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಒತ್ತಾಯ ಮಾಡಿದರು. ಇದನ್ನೂ ಓದಿ: ಇಂದೇ ಎಂಇಎಸ್‍ಗೆ ನಿಷೇಧ ಹೇರಿ ಇಲ್ಲದಿದ್ದರೆ ಕರ್ನಾಟಕ ಬಂದ್‍ಗೆ ಕರೆ: ವಾಟಾಳ್ ನಾಗರಾಜ್

ಅಧಿವೇಶನ ಕಲಾಪ ಕಥೆ ಏನಾಗಿದೆ?
ವಿಧಾನ ಮಂಡಲ ಕಲಾಪಕ್ಕೆ ಹೋಗಿ ಏನು ಮಾಡಲಿ. ಐದು ದಿನ ಕಲಾಪ ನಡೆದಿದೆ. ಟಿಎ, ಡಿಎ ಬಿಲ್ ಕ್ಲೈಮ್ ಮಾಡಿಕೊಳ್ಳಲು ಹೋಗಬೇಕು ಅಷ್ಟೇ. ಈ ಐದು ದಿನಗಳ ಕಲಾಪ ಅದೆಷ್ಟು ಮೌಲ್ಯಾಧಾರಿತವಾಗಿತ್ತು? ಒಂದು ದಿನ ಬೈರತಿ ಬಸವರಾಜ್ ಪ್ರಕರಣ ಇಟ್ಟುಕೊಂಡು ಬಾವಿಗೆ ಇಳಿದರು. ಇನ್ನೊಂದು ದಿನ ಸಂಡೂರು ತಹಸೀಲ್ದಾರ್ ವಿಷಯ ಇಟ್ಟುಕೊಂಡು ಒಂದು ದಿನದ ಕಲಾಪವನ್ನು ವ್ಯರ್ಥ ಮಾಡಿದರು. ಇನ್ನೊಂದು ದಿನ ಮಾಜಿ ಸ್ಪೀಕರ್ ಹೇಳಿಕೆಗೆ ಕಲಾಪ ಬಲಿ ಆಯಿತು. ಕಲಾಪದಲ್ಲಿ ಏನು ಚರ್ಚೆ ಆಯಿತು? ಇದನ್ನೆಲ್ಲ ಕೇಳಲು, ನೋಡಲು ಹೋಗಬೇಕಿತ್ತ ನಾನು? ಎಂದು ಪ್ರಶ್ನಿಸಿದರು.

ನಾಳೆ ನಾನು ಕಲಾಪಕ್ಕೆ ಹೋಗುತ್ತೇನೆ. ಸದನಕ್ಕೆ ಬೇಕಿಲ್ಲದ ವಿಷಯಗಳಿಗೆ ಮಹತ್ವ ಕೊಡುವ ವ್ಯಕ್ತಿ ನಾನಲ್ಲ. ಕಳೆದ ಬಾರಿ ಬೆಂಗಳೂರಿನಲ್ಲಿ ನಡೆದ ಅಧಿವೇಶನದಲ್ಲಿ ಕೊರೊನಾ ಬಗ್ಗೆ ಸರ್ಕಾರಕ್ಕೆ ಗುಣಾತ್ಮಕ ಸಲಹೆ ನೀಡಿದ್ದೆ. ಅದು ಎಷ್ಟರ ಮಟ್ಟಿಗೆ ಜಾರಿ ಆಗಿದೆಯೋ ಗೊತ್ತಿಲ್ಲ. ಮಂಗಳವಾರ ಮತ್ತು ಬುಧವಾರ ನಾನು ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳು ಮತ್ತು ಸಮಸ್ಯೆಗಳ ಮಾತನಾಡಲಿದ್ದೇನೆ. ಗುರುವಾರ ಮತ್ತೆ ನಾನು ಬಿಡದಿಗೆ ವಾಪಸ್ ಬರಬೇಕಿದೆ. ಅಲ್ಲಿ ಪಟ್ಟಣ ಪಂಚಾಯತ್ ಚುನಾವಣೆ ಇದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್ ಇದೆ – ಡಿಕೆಶಿ ವಿರುದ್ಧ ಸಿ.ಟಿ.ರವಿ ಆಕ್ರೋಶ

TAGGED:basavaj bommaibjpcongresshd kumaraswamyjdsಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಜೆಡಿಎಸ್ಬಿಜೆಪಿ
Share This Article
Facebook Whatsapp Whatsapp Telegram

You Might Also Like

Himachal Pradesh
Latest

ಹಿಮಾಚಲ ಪ್ರದೇಶ | 24 ಗಂಟೆಯಲ್ಲಿ 5 ಕಡೆ ಮೇಘಸ್ಫೋಟ – ಸಾವಿನ ಸಂಖ್ಯೆ ಐದಕ್ಕೆ ಏರಿಕೆ

Public TV
By Public TV
21 minutes ago
R Ashok 5
Bengaluru City

ಹುಲಿಗಳ ಸಾವು ಪ್ರಕರಣ | ಗಂಧದಗುಡಿಯನ್ನ ಕಸಾಯಿಖಾನೆ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ – ಆರ್‌. ಅಶೋಕ್‌

Public TV
By Public TV
34 minutes ago
Shubhanshu Shukla 5
Latest

ಇಲ್ಲಿಂದ ಭೂಮಿಯನ್ನು ನೋಡುವುದೇ ಸೌಭಾಗ್ಯ – ಬಾಹ್ಯಾಕಾಶ ನಿಲ್ದಾಣದಿಂದ ಶುಭಾಂಶು ಮೊದಲ ಸಂದೇಶ!

Public TV
By Public TV
57 minutes ago
Mangaluru Forum Mall White Cat
Dakshina Kannada

ಬೀಡಾಡಿ ಬೆಕ್ಕಿಗೊಂದು ಸುಂದರ ಮನೆ – ಮಂಗಳೂರಿನ ಮಾಲ್‌ಗೆ ಬರೋರ ಕಣ್ಮಣಿಯಾದ ವೈಟ್ ಕ್ಯಾಟ್

Public TV
By Public TV
1 hour ago
Amulya
Cinema

ಮತ್ತೆ ಬಣ್ಣಕ್ಕೆ ಮರಳುವ ಸುಳಿವು ಕೊಟ್ಟರಾ ನಟಿ ಅಮೂಲ್ಯ ?

Public TV
By Public TV
2 hours ago
Allu Arjun atlee 4
Cinema

ಅಟ್ಲಿ-ಅಲ್ಲು ಸಿನಿಮಾ ವಿಎಫ್‌ಎಕ್ಸ್‌ಗೆ ಬರೋಬ್ಬರಿ 350 ಕೋಟಿ ಖರ್ಚು !

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?