Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರದ ಬೇಟಿ ಬಚಾವೋ, ಬೇಟಿ ಪಡಾವೋ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ: ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇಂದ್ರದ ಬೇಟಿ ಬಚಾವೋ, ಬೇಟಿ ಪಡಾವೋ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ: ಹೆಚ್‍ಡಿಕೆ

Bengaluru City

ಕೇಂದ್ರದ ಬೇಟಿ ಬಚಾವೋ, ಬೇಟಿ ಪಡಾವೋ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ: ಹೆಚ್‍ಡಿಕೆ

Public TV
Last updated: February 5, 2022 5:26 pm
Public TV
Share
3 Min Read
KUMARASWAMY
SHARE

– ಬಿಜೆಪಿಗೆ ಚುನಾವಣೆ ಮತ್ತು ಅಧಿಕಾರದ ಹುಚ್ಚು
– ಇಬ್ರಾಹಿಂ ಶೀಘ್ರವೇ ಒಳ್ಳೆ ನಿರ್ಧಾರ ಕೈಗೊಳ್ಳುತ್ತಾರೆ

ಬೆಂಗಳೂರು: ಕೇಂದ್ರ ಸರ್ಕಾರದ ಬೇಟಿ ಬಚಾವೋ ಬೇಟಿ ಪಡಾವೋ ಘೋಷಣೆ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

HIJAB

ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆಣ್ಣು ಮಕ್ಕಳ ಉದ್ಧಾರಕ್ಕಾಗಿ ಕೇಂದ್ರ ಸರ್ಕಾರ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತಂದಿದೆ. ಆದರೆ ಈಗ ರಾಜ್ಯ ಸರ್ಕಾರ ಅನಗತ್ಯವಾಗಿ ಹಿಜಬ್ ವಿಷಯವನ್ನು ವಿವಾದ ಮಾಡುವ ಮೂಲಕ ಭೇಟಿ ಹಠಾವೋ ಮಾಡಲು ಹೊರಟಿದೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಸರಿಯಾಗಿ ಶಾಲೆ ಕಾಲೇಜುಗಳು ನಡೆಯದೇ ವಿಧ್ಯಾರ್ಥಿಗಳು ಮತ್ತು ಪೋಷಕರು ಒದ್ದಾಡುತ್ತಿದ್ದಾರೆ. ಇಂಥ ಕಷ್ಟದ ಸಮಯದಲ್ಲಿ ಹಿಜಬ್ ವಿವಾದವನ್ನು ಸೃಷ್ಟಿ ಮಾಡಲಾಗಿದೆ. ಇದು ಅನಗತ್ಯವಾಗಿತ್ತು ಎಂದರು. ಇದನ್ನೂ ಓದಿ: ಮನಸ್ಸಿಗೆ ಬಂದಂತೆ ಮಾಡಲು ಇದು ಪಾಕಿಸ್ತಾನ ಅಲ್ಲ: ಆರ್. ಅಶೋಕ್

UDP HIJAB VS KESARI SHALYA

ಸರ್ಕಾರಗಳು ಬೇಟಿ ಪಡಾವ್, ಬೇಟಿ ಬಚಾವ್ ಅಂತಿದ್ದರು. ಈಗ ಬೇಟಿ ಹಠಾವ್ ಅನ್ನುವ ರೀತಿಯಲ್ಲಿ ವರ್ತಿಸುತ್ತಿವೆ. ರಾಜ್ಯದ ಸಾಮರಸ್ಯವನ್ನು ಹಾಳು ಮಾಡಲಾಗುತ್ತಿದೆ. ಶಾಂತಿಗೆ ಮತ್ತು ಪ್ರಗತಿಗೆ ಹೆಸರಾದ ರಾಜ್ಯದಲ್ಲಿ ಸಾಮರಸ್ಯ ನೆಲೆಸಬೇಕು ಎನ್ನುವ ಮನಸ್ಸಿದ್ದರೆ ರಾಷ್ಟ್ರೀಯ ಪಕ್ಷಗಳ ನಾಯಕರು ಹಿಜಾಬ್ ಮತ್ತು ಕೇಸರಿ ಶಾಲುಗಳ ವಿಷಯವನ್ನು ಇಲ್ಲಿಗೆ ಬಿಡಲಿ ಎಂದು ಕುಮಾರಸ್ವಾಮಿ ಅವರು ಕಿವಿಮಾತು ಹೇಳಿದರು.

ಸಿಎಂ ಸರಿಯಾಗಿ ನಿಭಾಯಿಸಬೇಕು:
ಯಾವುದೇ ಅಸೂಯೆ, ದ್ವೇಷ ಇಲ್ಲ ನಿರ್ಮಲ ಮನಸಿನ ಮಕ್ಕಳಲ್ಲಿ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ವಿಷ ತುಂಬುವುದು ಬೇಡ. ಕಳೆದ ಹದಿನೈದು ದಿನಗಳಿಂದ ಕೇಳಿ ಬರುತ್ತಿರುವ ಈ ವಿಷಯವನ್ನು ಇಲ್ಲಿಗೇ ಬಿಡುವುದು ಉತ್ತಮ. ಇಂಥ ಸೂಕ್ಷ್ಮ ವಿಷಯಗಳನ್ನು ಬೆಳೆಯಲು ಬಿಡದೇ ಸರಿಯಾಗಿ ನಿಭಾಯಿಸಬೇಕು. ಯಾವುದೇ ಕಾರಣಕ್ಕೂ ಸಮಾಜದ ವಾತಾವರಣ ಕಲುಷಿತ ಆಗದ ರೀತಿ ನೋಡಿಕೊಳ್ಳಬೇಕು. ಕರಾವಳಿ ಪ್ರದೇಶದಲ್ಲಿ ಕೆಲ ಕಡೆ ಈ ರೀತಿಯ ಹಿಜಬ್ ವ್ಯವಸ್ಥೆ ಇತ್ತು ಅನ್ನುವುದು ನನ್ನ ಗಮನಕ್ಕೆ ಬಂದಿದೆ. ಸೂಕ್ಷ್ಮವಾದ ಇಂಥ ನಂಬಿಕೆಗಳ ಬಗ್ಗೆ ಯಾರೂ ಕೆರಳಿಸುವ ರೀತಿಯಲ್ಲಿ ವರ್ತಿಸಬಾರದು. ಯಾವ ಶಾಲೆಯಲ್ಲಿ ಹಿಜಬ್‍ಗೆ ಅನುಮತಿ ಕೊಟ್ಟಿದ್ದಾರೋ ಅವರು ಮುಂದುವರೆಸಿಕೊಂಡು ಹೋಗಲಿ. ಹೊಸದಾಗಿ ಈಗ ಕೆಲವರು ಇಂಥವಕ್ಕೆ ಯಾಕೆ ಅನುಮತಿ ಕೊಟ್ಟರು? ಹಿಂದು-ಮುಸ್ಲಿಮ್ ಅನ್ನುವುದಕ್ಕಿಂತ ಹೆಚ್ಚಾಗಿ ಮಕ್ಕಳಲ್ಲಿ ಇಂತ ಸಂಕುಚಿತ ಭಾವನೆ ಬೆಳೆಯಲು ಯಾರೂ ಅವಕಾಶ ಕೊಡಬಾರದು ಎಂದು ಅವರು ಆಗ್ರಹಸಿದರು. ಇದನ್ನೂ ಓದಿ: ಬೊಮ್ಮಾಯಿನೇ ಹಿಜಬ್ ಹಾಕಿದ್ದಾರೆ: ಸಿಎಂ ಇಬ್ರಾಹಿಂ

BASAVARJ BOMMAI 6

ರಾಷ್ಟ್ರೀಯ ಪಕ್ಷಗಳಿಗೆ ಶೋಭೆಯಲ್ಲ:
ಒಂದೆಡೆ ಕೋವಿಡ್, ನಿರುದ್ಯೋಗ, ಬೆಲೆ ಏರಿಕೆ ಇತ್ಯಾದಿ ಸಮಸ್ಯೆಗಳಿಂದ ಜನರು ನರಳುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಭಯದ ವಾತಾವರಣ ಉಂಟು ಮಾಡುವುದು ಬೇಡ. ರಾಷ್ಟ್ರೀಯ ಪಕ್ಷಗಳಿಗೆ ಶೋಭೆ ತರುವ ಕೆಲಸ ಇದಲ್ಲ. ಹಿಂದಿನಿಂದ ಶಾಲೆಗಳು ಯಾವ ರೀತಿ ನಡೆಯುತ್ತಿದ್ದವೋ ಹಾಗೆ ನಡೆಯಲಿ. ಇರುವ ಉತ್ತಮ ವ್ಯವಸ್ಥೆಯನ್ನು ಯಾರು ಹಾಳು ಮಾಡುವುದು ಬೇಡ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಹಿಜಬ್ ವಿವಾದದಲ್ಲಿ ಕಾಂಗ್ರೆಸ್ ಕೈವಾಡ- ಬಿಜೆಪಿ ಆರೋಪ

ಸಿದ್ದರಾಮಯ್ಯ, ಡಿಕೆಶಿಗೆ ಸಿಎಂ ಆಗುವ ಹುಚ್ಚು:
ಕಾಂಗ್ರೆಸ್ ಪಕ್ಷದ ಸೂಕ್ಷ್ಮ ವಿಚಾರಗಳಲ್ಲಿ ರಾಜಕೀಯ ಮಾಡುವುದನ್ನು ಬಿಡಬೇಕು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಬ್ಬರಿಗೂ ಮುಖ್ಯಮಂತ್ರಿ ಆಗುವ ಹುಚ್ಚು. ಇಬ್ಬರಿಗೂ ವೋಟು ಪಡೆಯುವ ಹುಚ್ಚು ಹತ್ತಿಕೊಂಡಿದೆ. ಸಮಾಜಕ್ಕೆ ಒಳ್ಳೆಯದಾಗಲಿ ಅನ್ನುವುದು ಅವರಿಗಿಲ್ಲ. ಬಿಜೆಪಿಯವರಿಗೆ ಕೂಡ ಮತ ಪಡೆಯುವ ಹುಚ್ಚು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಟೀಕಾಪ್ರಹಾರ ನಡೆಸಿದರು.

DKSHIVAKUMAR SIDDARAMAIAH 1

ಕಾಂಗ್ರೆಸ್ ಪಕ್ಷದಲ್ಲಿ ಒಬ್ಬೊಬ್ಬರು ಒಂದೊಂದು ಮಾತು ಹೇಳುತ್ತಾರೆ. ಸಿದ್ದರಾಮಯ್ಯ ಒಂದು ಮಾತು ಹೇಳಿದರೆ, ಡಿಕೆಶಿ ಒಂದು ಮಾತು ಹೇಳುತ್ತಾರೆ. ಇವರಲ್ಲಿ ಒಬ್ಬರಿಗೆ ಮುಸ್ಲಿಮರ ಮತಗಳನ್ನು ಪಡೆಯುವ ಉಮೇದು. ಮತ್ತೊಬ್ಬರಿಗೆ ಮುಸ್ಲಿಮರ ಪರ ಮಾತಾಡಿದರೆ ಏನು ಹೆಚ್ಚು ಕಡಿಮೆ ಆಗುತ್ತದೋ ಎಂಬ ಭಯ ಎಂದು ಕುಟುಕಿದರು.

CM IBRAHIM 1

ಮಹದಾಯಿ ಬಗ್ಗೆ ಕಾಂಗ್ರೆಸ್ ಪಕ್ಷದ್ದು ಎರಡು ನಾಲಿಗೆ:
ಮಹದಾಯಿ ನದಿ ನೀರಿನ ವಿವಾದದ ಬಗ್ಗೆ ಕಾಂಗ್ರೆಸ್ ಎರಡು ನಾಲಿಗೆ ನೀತಿ ಅನುಸರಿಸುತ್ತಿವೆ. ಮಹದಾಯಿ ಬಗ್ಗೆ ಆ ಪಕ್ಷದ ಸತೀಶ್ ಜಾರಕಿಹೊಳಿ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳುತ್ತಾರೆ. ಆದರೆ, ನಿನ್ನೆ ರಾಹುಲ್ ಗಾಂಧಿ ಅವರು ಬಿಡುಗಡೆ ಮಾಡಿದ ಗೋವಾ ಚುನಾವಣೆ ಪ್ರಣಾಳಿಕೆಯಲ್ಲಿ ಯಾವುದೇ ಕಾರಣಕ್ಕೂ ಮಹದಾಯಿ ನೀರನ್ನು ಗೋವಾದಿಂದ ಬಿಟ್ಟು ಕೊಡಲ್ಲ ಅಂತ ಹೇಳಿಕೊಂಡಿದಾರೆ. ಇದು ಅವರ ದ್ವಿಮುಖ ನೀತಿ ತೋರಿಸುತ್ತದೆ ಎಂದರು. ಇದನ್ನೂ ಓದಿ: ನೀವು ಹಿಜಬ್ ಬೇಡ ಅಂದ್ರೆ, ನಾವು ಕುಂಕುಮ ಬೇಡ, ಹೂ ಬೇಡ ಎಂದರೆ ಪರಿಸ್ಥಿತಿ ಏನಾಗುತ್ತೆ?: ತನ್ವೀರ್ ಸೇಠ್

ಇಬ್ರಾಹಿಂ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತಾರೆ:
ಕಾಂಗ್ರೆಸ್ ತೊರೆದಿರುವ ಸಿಎಂ ಇಬ್ರಾಹಿಂ ಅವರು ಒಳ್ಳೆಯ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಇಬ್ರಾಹಿಂ ಮೊದಲಿನಿಂದಲೂ ಜೆಡಿಎಸ್ ಜೊತೆ ಗುರುತಿಸಿಕೊಂಡವರು. ನಡುವೆ ಕೆಲ ವ್ಯತ್ಯಾಸಗಳು ಆಗಿದ್ದವು. ಈಗ ಮತ್ತೆ ಜೆಡಿಎಸ್ ಜೊತೆ ಸೇರಿ ಮತ್ತೊಂದು ರಂಗ ರಚನೆ ಬಗ್ಗೆ ಅವರು ಮುಂದಾದರೆ ಸ್ವಾಗತ ಮಾಡುತ್ತೇನೆ.

TAGGED:DK Shivakumarhd kumaraswamyHijabsiddaramaiahಕುಮಾರಸ್ವಾಮಿಡಿಕೆ ಶಿವಕುಮಾರ್ಸಿಎಂ ಇಬ್ರಾಹಿಂಸಿದ್ದರಾಮಯ್ಯಹಿಜಬ್
Share This Article
Facebook Whatsapp Whatsapp Telegram

Cinema news

Kavya
BBK 12 | ಧ್ರುವಂತ್‌ ಔಟ್‌ – Top 6 ಸ್ಪರ್ಧಿಯಾಗಿ ಕಾವ್ಯ ಸೇಫ್‌
Cinema Latest Main Post TV Shows
Shri Mahadev
ಅಮೂಲ್ಯ ನಟನೆಯ ಪೀಕಬೂ ಚಿತ್ರಕ್ಕೆ ಶ್ರೀರಾಮ್ ಹೀರೋ
Cinema Latest Sandalwood Top Stories
bigg boss 1
Bigg Boss: ಇಂದು ಮಿಡ್‌ ವೀಕ್‌ ಎಲಿಮಿನೇಷನ್‌ – ಮನೆಯಿಂದ ಹೊರ ಹೋಗೋದ್ಯಾರು?
Cinema Latest Top Stories TV Shows
Mango Pachcha Movie
ಮ್ಯಾಂಗೋ ಪಚ್ಚ ಸಿನಿಮಾದ ಅರಗಿಣಿಯೇ ಹಾಡಿಗೆ ಕಿಚ್ಚನ ಪುತ್ರಿಯ ಧ್ವನಿ
Cinema Latest Sandalwood Top Stories

You Might Also Like

Shakuntala Nataraj 3
Court

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

Public TV
By Public TV
5 hours ago
Mandya
Districts

ನಾಗಮಂಗಲ | ಬಗರ್‌ ಹುಕುಂನಲ್ಲಿ ಕೋಟಿ‌ ಕೋಟಿ ಅವ್ಯವಹಾರ; 11 ಅಧಿಕಾರಿಗಳ ವಿರುದ್ಧ FIR

Public TV
By Public TV
5 hours ago
Delhi Capitals
Cricket

ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ -‌ 2 ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಡೆಲ್ಲಿ ಕ್ಯಾಪಿಟಲ್ಸ್

Public TV
By Public TV
6 hours ago
S Jaishankar
Latest

ಜೈಶಂಕರ್‌ ಜೊತೆಗೆ ಇರಾನ್‌ ವಿದೇಶಾಂಗ ಸುದೀರ್ಘ ಮಾತುಕತೆ – ಭಾರತದ ಸಲಹೆ ಆಲಿಸಿದ ಅಬ್ಬಾಸ್‌!

Public TV
By Public TV
6 hours ago
chinnaswamy stadium
Bengaluru City

ಚಿನ್ನಸ್ವಾಮಿಯಲ್ಲಿ ಮತ್ತೆ ನಡೆಯುತ್ತಾ ಐಪಿಎಲ್‌? – ಮಾರ್ಗಸೂಚಿಗಳ ಚರ್ಚೆ ಬಳಿಕ ನಿರ್ಧಾರ: ಕೆಎಸ್‌ಸಿಎ

Public TV
By Public TV
7 hours ago
MP Ramesh Jigajinagi
Districts

ದೀಪ ಆರುವ ಮುನ್ನ ಜಾಸ್ತಿ ಉರಿಯುತ್ತೆ, ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಇರಲ್ಲ ಸತ್ಯನಾಶವಾಗಲಿದೆ – ರಮೇಶ ಜಿಗಜಿಣಗಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?