Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಾಪ ಹಾಳು ಮಾಡುತ್ತಿರುವವರನ್ನು ಸದನದಿಂದ ಹೊರಹಾಕಿ: ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಲಾಪ ಹಾಳು ಮಾಡುತ್ತಿರುವವರನ್ನು ಸದನದಿಂದ ಹೊರಹಾಕಿ: ಹೆಚ್‍ಡಿಕೆ

Bengaluru City

ಕಲಾಪ ಹಾಳು ಮಾಡುತ್ತಿರುವವರನ್ನು ಸದನದಿಂದ ಹೊರಹಾಕಿ: ಹೆಚ್‍ಡಿಕೆ

Public TV
Last updated: February 17, 2022 8:21 pm
Public TV
Share
3 Min Read
KUMARASWAMY
SHARE

ಬೆಂಗಳೂರು: ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಹಾಗೂ ಕಲಾಪವನ್ನು ಹಾಳು ಮಾಡುತ್ತಿರುವವರನ್ನು ಕೂಡಲೇ ಸದನದಿಂದ ಹೊರಹಾಕಿ ಇಲ್ಲವೇ ಕಲಾಪವನ್ನು ನಡೆಸುವ ಶಕ್ತಿ ಸರ್ಕಾರಕ್ಕೆ ಇಲ್ಲದಿದ್ದರೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದರು.

ವಿಧಾನಸಭೆ ಕಲಾಪವನ್ನು ಸಭಾಧ್ಯಕ್ಷರು ಮುಂದೂಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಲಾಪವನ್ನು ಹಾಳು ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Congress

ಜನರ ನಿರೀಕ್ಷೆಗಳಿಗೆ ಅವಹೇಳನ: ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಹಾಗೂ ರೈತರು, ಕಾರ್ಮಿಕರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಚರ್ಚೆ ಮಾಡುವುದು ಬಿಟ್ಟು ಕೇಸರಿ ಬಾವುಟದ ವಿಷಯ ಇಟ್ಟುಕೊಂಡು ಎರಡು ದಿನಗಳ ಕಲಾಪವನ್ನು ಕಾಂಗ್ರೆಸ್‍ನವರು ಹಾಳು ಮಾಡಿದರು. ಸಚಿವರೊಬ್ಬರ ರಾಜೀನಾಮೆ ಪಡೆಯಬೇಕು ಎಂಬುದನ್ನೇ ಪ್ರತಿಷ್ಠೆ ಮಾಡಿಕೊಂಡು ಜನರ ನಿರೀಕ್ಷೆಗಳನ್ನು ಅವಹೇಳನ ಮಾಡುತ್ತಿದ್ದಾರೆ ಎಂದು ಗುಡುಗಿದರು.

ESHWARAPPA 4

ಹತ್ತು ನಿಮಿಷ ಧರಣಿ ಮಾಡುವುದು, ಆಮೇಲೆ ಸದನವನ್ನು ಮುಂದಕ್ಕೆ ಹಾಕುವುದು, ಕಲಾಪ ನಡೆಸುವ ರೀತಿ ಇದಲ್ಲ. ಯಾವ ಪುರುಷಾರ್ಥಕ್ಕೆ ಅಧಿವೇಶನವನ್ನು ಕರೆದಿದ್ದೀರಿ. ಸರ್ಕಾರಕ್ಕೆ ಸದನವನ್ನು ಸಕ್ರಮವಾಗಿ ನಡೆಸುವ ಶಕ್ತಿ ಮತ್ತು ಬದ್ಧತೆ ಇಲ್ಲದಿದ್ದರೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದಕ್ಕೆ ಹಾಕಿ. ಸುಖಾಸುಮ್ಮನೆ ದಿನಕ್ಕೆ 1.5 ಯಿಂದ 2 ಕೋಟಿ ರೂ.ನಷ್ಟು ಜನರ ತೆರಿಗೆಯನ್ನು ಯಾಕೆ ಪೋಲು ಮಾಡುತ್ತೀರಿ. ಕೇವಲ ಟಿಎ, ಡಿಎ ಪಡೆಯಲು ಕಲಾಪ ನಡೆಸಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಹೂಡಿಕೆ ಮಾಡಲು ತೈವಾನ್ ಕಂಪನಿಗಳಿಗೆ ನಿರಾಣಿ ಆಹ್ವಾನ

ಶಿಕ್ಷಣ ಸಂಸ್ಥೆಗಳಲ್ಲಿ ಸಂಘರ್ಷದ ವಾತಾವರಣ: ಹಿಜಾಬ್ ಮತ್ತು ಕೇಸರಿ ಶಾಲುಗಳ ವಿವಾದದಿಂದ ಶಿಕ್ಷಣ ವ್ಯವಸ್ಥೆ ಹಾಳಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಮಕ್ಕಳು ಹೊಡೆದಾಡಿಕೊಳ್ಳುವ ಸನ್ನಿವೇಶ ಉಂಟಾಗಿದೆ. ಈ ವಿಷಯವನ್ನು ಸದನದಲ್ಲಿ ಚರ್ಚೆ ನಡೆಸಬೇಕಿತ್ತು ಎಂದರು.

hijab 1 6

ಬೇಸಿಗೆ ಬರುವುದಕ್ಕೆ ಮುನ್ನವೇ ರಾಜ್ಯದಲ್ಲಿ ದಿನಕ್ಕೆ ಎರಡೂವರೆ ಗಂಟೆ ಕಾಲ ಲೋಡ್ ಶೆಡ್ಡಿಂಗ್ ಶುರುವಾಗಿದೆ. ವಿದ್ಯುತ್ ಕಡಿತದಿಂದ ರೈತರು ಬೆಳೆಗಳಿಗೆ ರಾತ್ರಿ ಹೊತ್ತು ನೀರು ಹರಿಸಬೇಕಾದ ಕಷ್ಟದ ಸ್ಥಿತಿ ಎದುರಾಗಿದೆ. ಆಡಳಿತಾರೂಢ ಪಕ್ಷಕ್ಕೆ ಮತ್ತು ಅಧಿಕೃತ ವಿರೋಧ ಪಕ್ಷಕ್ಕೆ ಇದರ ಬಗ್ಗೆ ಕಾಳಜಿ ಇಲ್ಲ. ಎರಡು ರಾಷ್ಟ್ರೀಯ ಪಕ್ಷಗಳು ಕಲಾಪವನ್ನು ಹಾಳು ಮಾಡಿ ಜನರ ನಿರೀಕ್ಷೆಗಳನ್ನು ಕಾಲ ಕಸದಂತೆ ನೋಡುತ್ತಿವೆ. ಈ ವಿಷಯಗಳನ್ನು ಪ್ರಸ್ತಾಪ ಮಾಡಲು ಉದ್ದೇಶಿಸಿದ್ದೇನೆ. ಆದರೆ ಅವಕಾಶ ಸಿಗಲಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಮಲೆಮಹದೇಶ್ವರ ಜಾತ್ರಾಮಹೋತ್ಸವ – ಪೂರ್ವಸಿದ್ಧತೆಗಳ ಕುರಿತಂತೆ ಸಭೆ ನಡೆಸಿದ ಸೋಮಣ್ಣ

UDP HIJAB VS KESARI SHALYA

ಕೇಸರಿ ಪವಿತ್ರ ವಸ್ತ್ರ: ಹಿಂದೂಗಳ ಪಾಲಿಗೆ ಕೇಸರಿ ಪವಿತ್ರ ವಸ್ತ್ರವಾಗಿದ್ದು, ಅದರ ಪಾವಿತ್ರ್ಯತೆಯನ್ನು ಯಾರು ಕೂಡ ಹಾಳು ಮಾಡಬಾರದು. ಹಿಂದೂ ಸಂಸ್ಕೃತಿ, ಪರಂಪರೆಯಲ್ಲಿ ಕೇಸರಿ ಬಣ್ಣ ಹಾಗೂ ಕೇಸರಿ ವಸ್ತ್ರಕ್ಕೆ ಪೂಜ್ಯ ಸ್ಥಾನವಿದೆ. ನಮ್ಮ ಪೂರ್ವಿಕರ ಕಾಲದಿಂದ ಇದು ನಡೆದುಕೊಂಡು ಬಂದಿದೆ. ಸರ್ವಸಂಗ ಪರಿತ್ಯಾಗಿಗಳು, ಸಂತರು, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಮಾಡುತ್ತಿರುವ ಪೂಜ್ಯರು ಕೇಸರಿ ವಸ್ತ್ರಗಳನ್ನು ಧರಿಸುತ್ತಾರೆ. ಆದರೆ ಬಿಜೆಪಿ, ಆರ್‍ಎಸ್‍ಎಸ್ ಮತ್ತದರ ಸಹ ಸಂಘಟನೆಗಳು ಕೇಸರಿ ಬಾವುಟವನ್ನು ಇಟ್ಟುಕೊಂಡೇ ಹೋರಾಟ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದರು.

kesari shalya

ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು ಎನ್ನುವುದು ಆ ಸಂಘಟನೆಗಳ ಮಹದಾಸೆ. ಅವರ ಅಜೆಂಡಾ ಕೂಡ ಅದೇ. ಆ ಹಿನ್ನೆಲೆಯೊಳಗೆ ಸಚಿವ ಈಶ್ವರಪ್ಪ ಅವರು ಮುಂದೊಂದು ದಿನ ಕೆಂಪುಕೋಟೆ ಮೇಲೂ ಕೇಸರಿ ಬಾವುಟವನ್ನು ಯಾರಾದರೂ ಹಾರಿಸಬಹುದು ಎಂದು ಹೇಳಿದ್ದರು. ನಾನೇ ಹಾರಿಸುತ್ತೇನೆ ಎಂದು ಅವರೇನೂ ಹೇಳಿಲ್ಲ. ಹೀಗಿದ್ದರೂ ಕಾಂಗ್ರೆಸ್ ಪ್ರತಿಷ್ಠೆಗೆ ಬಿದ್ದು ಕಲಾಪವನ್ನು ಹಾಳು ಮಾಡುತ್ತಿದೆ ಎಂದು ಹೇಳಿದರು.

kesari shalya 1

ಕರ್ನಾಟಕ ಸೇರಿದಂತೆ ದಕ್ಷಿಣದ ಎಲ್ಲಾ ರಾಜ್ಯಗಳಲ್ಲಿಯೂ ಧ್ವಜ ಸ್ತಂಭಗಳನ್ನು ನೆಡುವ, ಅವುಗಳಲ್ಲಿ ತಮ್ಮ ಸಂಘಟನೆಗಳ ಬಾವುಟ ಹಾರಿಸುವುದು ಇದೆ. ನಮ್ಮಲ್ಲೂ ಕನ್ನಡ ಸಂಘಟನೆಗಳು ಕನ್ನಡ ಬಾವುಟವನ್ನು ಹಾರಿಸುತ್ತವೆ. ತಮಿಳುನಾಡಿನಲ್ಲಿಯೂ ಇಂಥ ದೃಶ್ಯಗಳನ್ನು ಕಾಣಬಹುದು. ಖಾಲಿ ಇರುವ ಧ್ವಜ ಸ್ತಂಭಗಳಲ್ಲಿ ಕೇಸರಿ ಬಾವುಟ ಹಾರಿಸುವುದನ್ನು ನೋಡಿದ್ದೇವೆ. ಈ ವಿಷಯವನ್ನು ದೊಡ್ಡದು ಮಾಡಿ ಸದನದ ಕಲಾಪವನ್ನು ಹಾಳು ಮಾಡುವುದು ಎಷ್ಟು ಸರಿ? ಎಂದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳು ಜನರ ಹಿತ ಮರೆತು ವರ್ತಿಸುತ್ತಿವೆ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಪಕ್ಷದ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ವೆಂಕಟರಾವ್ ನಾಡಗೌಡ ಹಾಜರಿದ್ದರು.

TAGGED:assemblybengalurubjpcongresshd kumaraswamysessionvidhansoudaಅಧಿವೇಶನಕಲಾಪಕಾಂಗ್ರೆಸ್ಬಿಜೆಪಿಬೆಂಗಳೂರುವಿಧಾನಸೌಧಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows

You Might Also Like

bengaluru roadside parking
Bengaluru City

ಬೆಂಗಳೂರು ವಾಹನ ಸವಾರರಿಗೆ ಶಾಕ್ – ಇನ್ಮುಂದೆ ರಸ್ತೆಬದಿ ಗಾಡಿ ನಿಲ್ಲಿಸೋಕೆ ಕಟ್ಬೇಕು ದುಡ್ಡು!

Public TV
By Public TV
4 minutes ago
Punjab Man Shoots Wife 2 Daughters Then Kills Self. House Help Finds Bodies
Crime

ಪಂಜಾಬ್‌ | ಪತ್ನಿ, ಇಬ್ಬರು ಹೆಣ್ಣುಮಕ್ಕಳನ್ನು ಗುಂಡಿಕ್ಕಿ ಕೊಂದು, ಆತ್ಮಹತ್ಯೆಗೆ ಶರಣಾದ ವ್ಯಕ್ತಿ

Public TV
By Public TV
14 minutes ago
Nirmala Sitharaman Union Budget 1
Latest

Union Budget: ಫೆ.1ರ ಭಾನುವಾರವೇ ಕೇಂದ್ರ ಬಜೆಟ್‌ ಮಂಡನೆ

Public TV
By Public TV
39 minutes ago
HASSAN DC CAR
Court

ರೈತನಿಗೆ ಪರಿಹಾರ ವಿಳಂಬ – ಜಿಲ್ಲಾಧಿಕಾರಿ ಕಾರು ಜಪ್ತಿ

Public TV
By Public TV
1 hour ago
Thawar Chand Gehlot
Bengaluru City

ರಾಜ್ಯ ಸರ್ಕಾರ ಕಳಿಸಿದ್ದ 22 ಮಸೂದೆಗಳ ಪೈಕಿ 19ಕ್ಕೆ ರಾಜ್ಯಪಾಲರ ಅಂಕಿತ

Public TV
By Public TV
1 hour ago
Himachal Pradesh Accident Bus Accident
Crime

ಹಿಮಾಚಲ ಪ್ರದೇಶ | ಪ್ರಪಾತಕ್ಕೆ ಉರುಳಿದ ಬಸ್‌ – 8 ಪ್ರಯಾಣಿಕರು ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?