Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ, ಕಾಂಗ್ರೆಸ್ ಅಮಾಯಕ ಮಕ್ಕಳ ಜೀವನದ ಜೊತೆ ಚೆಲ್ಲಾಟ ಆಡುತ್ತಿವೆ: ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಜೆಪಿ, ಕಾಂಗ್ರೆಸ್ ಅಮಾಯಕ ಮಕ್ಕಳ ಜೀವನದ ಜೊತೆ ಚೆಲ್ಲಾಟ ಆಡುತ್ತಿವೆ: ಹೆಚ್‍ಡಿಕೆ

Districts

ಬಿಜೆಪಿ, ಕಾಂಗ್ರೆಸ್ ಅಮಾಯಕ ಮಕ್ಕಳ ಜೀವನದ ಜೊತೆ ಚೆಲ್ಲಾಟ ಆಡುತ್ತಿವೆ: ಹೆಚ್‍ಡಿಕೆ

Public TV
Last updated: February 10, 2022 3:08 pm
Public TV
Share
3 Min Read
KUMARASWAMY
SHARE

ರಾಮನಗರ: ಹಿಜಾಬ್ ಪ್ರಕರಣದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್, ಅಮಾಯಕ ಮಕ್ಕಳ ಬದುಕಿನ ಜೊತೆಗೆ ಚೆಲ್ಲಾಟ ಆಡುತ್ತಿವೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಬ್ ಗಲಾಟೆ ಹಲವಾರು ದೇಶಗಳಲ್ಲಿ ಚರ್ಚೆ ಮಾಡುವ ಹಂತಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಈ ಸಂಘರ್ಷ ದೊಡ್ಡ ದೊಡ್ಡ ಖಾಸಗಿ ಶಾಲೆಗಳಲ್ಲಿ ನಡೆಯುತ್ತಿದೆಯಾ ಎಂದು ಪ್ರಶ್ನಿಸಿದ ಅವರು, ಬಿಜೆಪಿ, ಕಾಂಗ್ರೆಸ್ ಹಾಗೂ ಸಂಘಟನೆಗಳ ನಾಯಕರ ಮಕ್ಕಳು ಯಾರೂ ಸರ್ಕಾರಿ ಶಾಲೆಯಲ್ಲಿ ಅವರ ಮಕ್ಕಳನ್ನು ಓದಿಸುತ್ತಿಲ್ಲ. ಅವರೆಲ್ಲರೂ ಸಹ ಖಾಸಗಿ ಶಾಲೆಗಳಲ್ಲಿ ಓದಿಸುತ್ತಿದ್ದಾರೆ. ಬಿಜೆಪಿ ನಾಯಕರು ಅವರು ಜನ್ಮಕೊಟ್ಟ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡುತ್ತಿಲ್ಲ. ಬದಲಿಗೆ ಅಮಾಯಕ, ಬಡ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡಿಸುತ್ತಿದ್ದಾರೆ ಎಂದು ಕಿಡಿಕಾರಿದರು.

bjp - congress

ಇನ್ನೊಂದು ಗುಂಪು ಹಿಜಾಬ್ ಹೆಸರಿನಲ್ಲಿ ಹೋರಾಟ ಮಾಡಿಸಿ ಅವರು ಹೊರಟಿದ್ದಾರೆ. ಇಲ್ಲಿ ಅಮಾಯಕ ಮಕ್ಕಳು ಖಾಸಗಿ ಶಾಲೆಯಲ್ಲಿ ಓದಿಸಲಾಗದೇ ಸರ್ಕಾರಿ ಶಾಲೆಯಲ್ಲಿ ಓದಿಸುತ್ತಿದ್ದಾರೆ. ಈ ಪ್ರಕರಣ ನಡೆಯುತ್ತಿರುವುದು ಕೇವಲ ಸರ್ಕಾರಿ ಶಾಲೆಯಲ್ಲಿ ಆಗಿದೆ. ಕಂಡವರ ಮಕ್ಕಳನು ಬಾವಿಗೆ ತಳ್ಳೋದನ್ನು ಮಾಡುತ್ತಿರುವುದು ಈ ರಾಜ್ಯದಲ್ಲಿ ಇದು ನಡೆಯುತ್ತಿದೆ. ಇದನ್ನ ಮಕ್ಕಳ ಪೋಷಕರು ಸಹ ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

UDP HIJAB 1 1 780x450 1

ಈಗಾಗಲೇ ಪ್ರತಿಭಟನೆ ಮಾಡುತ್ತಿರುವ ಮಕ್ಕಳ ವೀಡಿಯೋ ಚಿತ್ರೀಕರಣ ಮಾಡಿದ್ದಾರೆ. ತಮ್ಮ ರಾಜಕೀಯಕ್ಕಾಗಿ ಈ ಪಕ್ಷಗಳು, ಸಂಘಟನೆಗಳು ಮಕ್ಕಳನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಮುಂದೆ ಮಕ್ಕಳ ವೀಡಿಯೋ ಇಟ್ಟುಕೊಂಡು ಕೋರ್ಟ್ ಕಚೇರಿಗೆ ಹೋಗುವಂತೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಜ್ಯದ ಶಾಂತಿಗೆ ಭಂಗ ತರುವ ಕೆಲಸವಾಗದಿರಲಿ: ಬೊಮ್ಮಾಯಿ

UDP HIJAB VS KESARI SHALYA

ಈಗಾಗಲೇ ಕೆಲವರ ಮೇಲೆ ಕೇಸ್ ಆಗಿದೆ. ಇದು ನಿರಂತರವಾಗಿ ನಡೆಯುತ್ತದೆ. ಆ ಮಕ್ಕಳಿಗೆ ಎರಡೊತ್ತಿನ ಊಟಕ್ಕೂ ಗತಿ ಇರಲ್ಲ. ಸಾವಿರಾರು ಜನ ಮಕ್ಕಳ ಮೇಲೆ ಕೇಸ್ ಬೀಳಲಿದೆ. ಇದನ್ನು ಮೊದಲು ರಾಜಕೀಯ ಪಕ್ಷಗಳು ನಿಲ್ಲಿಸಬೇಕು. ಇವತ್ತು ವಿಚಾರಣೆ ಮಧ್ಯಾಹ್ನ ನಡೆಯಲಿದೆ. ನಾವು ನ್ಯಾಯಾಯಲಗಳ ಮೇಲೆ ಒತ್ತಡ ಮಾಡಲು ಸಾಧ್ಯವಿಲ್ಲ. ನ್ಯಾಯಾಂಗ ಇದರಲ್ಲಿ ಮಧ್ಯಸ್ಥಿಕೆ ವಹಿಸಿ ಈ ಪ್ರಕರಣವನ್ನು ತಿಳಿಗೊಳಿಸಬೇಕಿದೆ ಎಂದು ಮನವಿ ಮಾಡಿದರು. ಇದನ್ನೂ ಓದಿ: ಸುಪ್ರೀಂ ಅಂಗಳಕ್ಕೆ ಹಿಜಬ್‌ ವಿವಾದ – ತುರ್ತು ವಿಚಾರಣೆ ಇಲ್ಲ

priyanka gandhi

ಪ್ರಿಯಾಂಕಾ ಗಾಂಧಿ ಟ್ವೀಟ್‌ಗೆ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಅದು ಅವರವರ ಭಾವನೆಗೆ ಅವರು ಹೇಳಿದ್ದಾರೆ. ಅದಕ್ಕೆ ನಾನು ಇನ್ವಾಲ್ವ್ ಆಗುವುದಿಲ್ಲ. ಜನಪ್ರತಿನಿಧಿಯಾಗಿ ಮಾತನಾಡಿದ್ದು ತಪ್ಪು. ಆದರೆ ಅವರು ಈಗ ಕ್ಷಮೆ ಕೋರಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಗೃಹ ಸಚಿವರು ಮತ್ತು ಸರ್ಕಾರದ ವೈಫಲ್ಯ ಈ ಪ್ರಕರಣದಲ್ಲಿ ಕಾಣುತ್ತಿದೆ. ಇದರಿಂದ ಅಮಾಯಕ ಮಕ್ಕಳ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದರು.

renukacharya 1

ಮಂಡ್ಯದಲ್ಲಿ ಘೋಷಣೆ ಕೂಗಿದ್ದ ಯುವತಿಗೆ ಕೆಲ ಸಂಘಟನೆ 5 ಲಕ್ಷ ಬಹುಮಾನ ಘೋಷಣೆ ವಿಚಾರವಾಗಿ ಮಾತನಾಡಿದ ಅವರು, ಈ ದೇಶವನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಇಂತಹ ವಿಚಾರಕ್ಕೆ ಪ್ರಚೋದನೆ ಮಾಡುವವರ ಮೇಲೆ ಪೋಷಕರು, ಶಾಲಾ ಮಕ್ಕಳು, ರಾಜ್ಯದ ಜನತೆಗೆ ಮನವಿ ಮಾಡುತ್ತೇನೆ. ಕುವೆಂಪುರವರ ಸರ್ವಜನಾಂಗದ ಶಾಂತಿಯ ತೋಟ ಅಂತಾ ಇದೆ. ಈ ನಾಡು ಶಾಂತಿಯ ಬೀಡು, ಹಾಗಾಗಿ ಇಂತಹದಕ್ಕೆ ಪ್ರೋತ್ಸಾಹ ಕೊಡಬೇಡಿ ಎಂದು ಮನವಿ ಮಾಡುತ್ತೇನೆ ಎಂದರು.

hijab mandya

ಬಿಜೆಪಿಯ ಸಚಿವರ ಮಗ ಓರ್ವ ಕೇಸರಿ ಶಾಲು ಹಂಚುತ್ತಿದ್ದಾರೆ ಎಂಬ ಡಿಕೆಶಿ ಹೇಳಿಕೆ ವಿಚಾರವಾಗಿ ಮಾತನಾಡಿ, ಅದು ಅವರ ಬಳಿ ಮಾಹಿತಿ ಇದ್ದು ಹೇಳಿದ್ದಾರೋ, ಮಾಹಿತಿ ಇಲ್ಲದೇ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಮಾಹಿತಿ ಇದ್ದರೆ ಸಾಕ್ಷಿ ಸಮೇತ ಜನತೆ ಮುಂದೆ ಇಟ್ಟರೆ ಒಪ್ಪುತ್ತಾರೆ. ಇಲ್ಲಾಂದ್ರೆ ಗಾಳಿಯಲ್ಲಿ ನಾನು ಒಂದು ಗುಂಡು ಹಾರಿಸುತ್ತೇನೆ ಎಂದು ಆಗುತ್ತದೆ ಎಂದು ಡಿಕೆಶಿಗೆ ಟಾಂಗ್ ನೀಡಿದರು.

TAGGED:bjpcongresshd kumarswamyHijabkesari shalyramanagaraಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಕೆಸರಿಶಾಲುಬಿಜೆಪಿರಾಮನಗರಹಿಜಬ್
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
6 hours ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
7 hours ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
7 hours ago
DK Shivakumar 2
Davanagere

ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Public TV
By Public TV
7 hours ago
India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
8 hours ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?