ಬೆಂಗಳೂರು: ಒಂದು ಬಾರಿ ಜೆಡಿಎಸ್ ಗೆ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣವನ್ನ ಮುಕ್ತ ಮಾಡುತ್ತೇನೆ ಅಂತ ಕೇಂದ್ರ ಸಚಿವ ಕುಮಾರಸ್ವಾಮಿ (HD kumaraswamy) ಶಪಥ ಮಾಡಿದ್ದಾರೆ.
ಜೆಡಿಎಸ್ ಗೆ (JDS) 25 ವರ್ಷ ತುಂಬಿದ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಬೆಂಗಳೂರಿನ ಕೊಮ್ಮಘಟ್ಟದ ಬಳಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮಾವೇಶದಲ್ಲಿ 1 ಲಕ್ಷ ಹೆಚ್ಚು ಜನ ಭಾಗಿಯಾಗಿದ್ರು. ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿ ಪಕ್ಷ ಹಾಲಿ, ಮಾಜಿ, ಶಾಸಕರು, ಸಂಸದರು ಭಾಗಿಯಾಗಿದ್ದರು.
ಯಾವುದೇ ರಾಜಕೀಯ ಪಕ್ಷಕ್ಕೆ 25 ವರ್ಷದ ಸುಧೀರ್ಘ ಪಯಣ ಸಣ್ಣದಲ್ಲ. ಅನೇಕ ಸವಾಲು, ಏಳುಬೀಳುಗಳ ನಡುವೆ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ @JanataDal_S ಪಕ್ಷವು ಯಾವುದೇ ರಾಷ್ಟ್ರೀಯ ಪಕ್ಷಕ್ಕೆ ಕಡಿಮೆ ಇಲ್ಲದಂತೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ತನ್ನ ಛಾಪನ್ನು ಮೂಡಿಸಿದೆ. ಪಕ್ಷವನ್ನು ಸ್ಥಾಪಿಸಿ ತಪಸ್ಸಿನಂತೆ ಸಂಘಟನೆಯನ್ನು ಕಟ್ಟಿದ ಪಕ್ಷದ… pic.twitter.com/qHQp7FKe0T
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 11, 2026
ಕಾರ್ಯಕ್ರಮದಲ್ಲಿ ಮಾತನಾಡಿದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬೆಂಗಳೂರಿಗೆ ಕಾಂಗ್ರೆಸ್ ಸರ್ಕಾರದ ಕೊಡುಗೆ ಏನು ಇಲ್ಲ. ದೇವೇಗೌಡರು, ಕುಮಾರಸ್ವಾಮಿ ಕಾಲದಲ್ಲಿ ಬೆಂಗಳೂರಿಗೆ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನ ಕೊಟ್ಟರು ಅಂತ ತಿಳಿಸಿದರು. ಇದನ್ನೂ ಓದಿ: ಮೋದಿ ಅವ್ರನ್ನ ನೋಡಿ ಸಿದ್ದರಾಮಯ್ಯ ಕಲಿಯಬೇಕು: ಸಿಎಂಗೆ ತಿವಿದ ದೊಡ್ಡಗೌಡರು
ಕಾವೇರಿ ನೀರು ಕೊಟ್ಟವರು ದೇವೇಗೌಡ, IT-BT ಕ್ಷೇತ್ರ ಬೆಳೆಸಿದ್ದ ದೇವೇಗೌಡ ಅಂತ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು. ಬಿಬಿಎಂಪಿ ಮಾಡಿದ್ದು ಕುಮಾರಸ್ವಾಮಿ, ಕಾಂಗ್ರೆಸ್ ಅದನ್ನ ಜಿಬಿಎ ಅಂತ ಹೆಸರು ಬದಲಾವಣೆ ಮಾಡಿದ್ದೇ ಸಾಧನೆ. ಕಾಂಗ್ರೆಸ್ ಆಡಳಿತದಲ್ಲಿ ಬೆಂಗಳೂರು ಅಭಿವೃದ್ಧಿ ಕುಸಿದು ಹೋಗಿದೆ ಅಂತ ಕಿಡಿಕಾರಿದರು.
ಕನ್ನಡಿಗರ ಏಕೈಕ ಪ್ರಾದೇಶಿಕ ರಾಜಕೀಯ ಶಕ್ತಿ @JanataDal_S ಪಕ್ಷದ ಜನತಾ ಸಮಾವೇಶ ಹಾಗೂ ಬೆಳ್ಳಿಹಬ್ಬದಲ್ಲಿ ಅತ್ಯಂತ ಸಂತೋಷ ಮತ್ತು ಸಂಭ್ರಮದಿಂದ ಪಾಲ್ಗೊಳ್ಳಲಾಯಿತು. ಬೆಂಗಳೂರು ನಗರವು ಸೇರಿದಂತೆ ರಾಜ್ಯದ ಎಲ್ಲೆಡೆಯಿಂದ ಆಗಮಿಸಿದ್ದ ಕಾರ್ಯಕರ್ತರನ್ನು ಖುದ್ದು ಭೇಟಿಯಾಗಿದ್ದು ನನ್ನ ಮನಸ್ಸಿಗೆ ಬಹಳಷ್ಟು ಆನಂದ ಉಂಟು ಮಾಡಿತು.
ಪಕ್ಷದ… pic.twitter.com/hLaHWfSkDo
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 11, 2026
ಜಿಬಿಎ ಅಂದರೆ ಗಾರ್ಬೇಜ್, ಬ್ಯಾಡ್ ರೋಡ್, ಎ ಖಾತೆ ಸ್ಕ್ಯಾಮ್ ಅಂತ ಕಿಡಿಕಾರಿದರು. ಜನರ ಜೊತೆ ಇರೋರಿಗೆ, ಜನರ ಸಮಸ್ಯೆ ಪರಿಹಾರ ಮಾಡೋರಿಗೆ ಜಿಬಿಎ ಟಿಕೆಟ್ ಕೊಡುವ ಘೋಷಣೆ ಮಾಡಿದ್ರು. ಮಾಜಿ ಪ್ರಧಾನಿ ದೇವೇಗೌಡ ಮಾತಾಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದಾವಣಗೆರೆ ಕಾಂಗ್ರೆಸ್ನಲ್ಲಿ ಬಿರುಗಾಳಿ – ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ
ಕುಮಾರಸ್ವಾಮಿ ದೇಶದಲ್ಲಿ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದರು. ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಆರ್ಥಿಕ ಸಹಾಯ ಮಾಡಿದ್ರು. ಆದ್ರೆ ಸಿದ್ದರಾಮಯ್ಯ ಯಾವುದೇ ಸಹಾಯ ಮಾಡಿಲ್ಲ ಅಂತ ಕಿಡಿಕಾರಿದರು. ನಾನು ಸಿಎಂ ಆಗಿದ್ದಾಗ 33% ಮಹಿಳಾ ಮೀಸಲಾತಿ ಕೊಟ್ಟರೆ ಅಂತ ತಿಳಿಸಿದರು. ಜೆಡಿಎಸ್ ದೇವೇಗೌಡ ಮತ್ತು ಅವರ ಕುಟುಂಬಕ್ಕೆ ಇರೋ ಪಕ್ಷ ಅಲ್ಲ. ಸಾಮಾಜಿಕ ನ್ಯಾಯದ ಬಗ್ಗೆ ಚರ್ಚೆ ಮಾಡೋಕೆ ಎಲ್ಲಿ ಬೇಕಾದ್ರು ನಾನು ಸಿದ್ದ ಅಂತ ಸವಾಲ್ ಹಾಕಿದ್ರು. ನನ್ನ ರಾಜಕೀಯ ಇತಿಹಾಸದಲ್ಲಿ ಕಂಡ ಅತ್ಯಂತ ಕೆಟ್ಟ ಸರ್ಕಾರ ಅಂತ ಸಿದ್ದರಾಮಯ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ಕೇಂದ್ರ ಸಚಿವ ಕುಮಾರಸ್ವಾಮಿ ಮಾತಾಡಿ, ಕರ್ನಾಟಕಕ್ಕೆ ಹಿಡಿದಿರೋ ಗ್ರಹಣ ಮುಕ್ತಿಗಾಗಿ ಜೆಡಿಎಸ್ ಗೆ ಒಂದು ಬಾರಿ ಅವಕಾಶ ಕೊಡಿ ಅಂತ ಮನವಿ ಮಾಡಿದ್ರು. ಬೆಂಗಳೂರಿಗೆ ಮೆಟ್ರೋ ಯೋಜನೆ ಸೇರಿ ಅನೇಕ ಯೋಜನೆ ಕೊಟ್ಟವನು ನಾನು ಅಂತ ತಿಳಿಸಿದ ಕುಮಾರಸ್ವಾಮಿ, ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಚದರ ಅಡಿಗೆ 100 ರೂ. ಫಿಕ್ಸ್ ಮಾಡಿದೆ ಅಂತ ಆರೋಪ ಮಾಡಿದ್ರು. ಎರಡು ಬಾರಿ ಜನರ ಆಶೀರ್ವಾದದಿಂದ ಸಿಎಂ ಆಗಿಲ್ಲ ಅಂತ ತಿಳಿಸಿದ ಕುಮಾರಸ್ವಾಮಿ ಒಂದು ಬಾರಿ ಜೆಡಿಎಸ್ ಅಧಿಕಾರ ಕೊಡಿ ಅಂತ ಮನವಿ ಮಾಡಿದ್ರು. ಇದನ್ನೂ ಓದಿ: 40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನಕ್ಕೆ ಸಿಎಂ ಚಾಲನೆ

