Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಬಡವರ ಪಕ್ಷವಲ್ಲ: ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಜೆಪಿ ಬಡವರ ಪಕ್ಷವಲ್ಲ: ಹೆಚ್‍ಡಿಕೆ

Districts

ಬಿಜೆಪಿ ಬಡವರ ಪಕ್ಷವಲ್ಲ: ಹೆಚ್‍ಡಿಕೆ

Public TV
Last updated: April 3, 2022 12:30 pm
Public TV
Share
5 Min Read
HD KUMASWAMY
SHARE

ಬೆಂಗಳೂರು: ಸತತ 13 ದಿನಗಳಿಂದ ತೈಲ ಬೆಲೆ ಏರಿಕೆ ಆಗುತ್ತಿರುವುದರ ವಿರುದ್ಧ ಸರಣಿ ಟ್ವೀಟ್ ಮಾಡಿ, ಕೇಂದ್ರ, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು, ಬಿಜೆಪಿ ಬಡವರ ಪಕ್ಷವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ಹಲಾಲ್ ಹಾಲಾಹಲದ ನಡುವೆಯೇ ಇಂದು ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ. ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ 13 ದಿನಗಳಲ್ಲಿ 8 ರೂ. ಜಿಗಿತ. ಇದಪ್ಪಾ ಬಹುಜನ ಹಿತಾಯ, ಬಹುಜನ ಸುಖಾಯ ಎಂದು ಭಾಷಣ ಬಿಗಿಯುವ ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್ ಎಂದು ಲೇವಡಿ ಮಾಡಿದ್ದಾರೆ.

ಹಲಾಲ್ ಹಾಲಾಹಲದ ನಡುವೆಯೇ ಇಂದು ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ.

ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ; 13 ದಿನಗಳಲ್ಲಿ 8 ರೂ. ಜಿಗಿತ!

ಇದಪ್ಪಾ ʼಬಹುಜನ ಹಿತಾಯ, ಬಹುಜನ ಸುಖಾಯʼ ಎಂದು ಭಾಷಣ ಬಿಗಿಯುವ ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್!! 1/10

— H D Kumaraswamy (@hd_kumaraswamy) April 3, 2022

13 ದಿನದಿಂದ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿದೆ. ಎರಡೂ ತೈಲಗಳ ಬೆಲೆ 8 ರೂ. ಹೆಚ್ಚಳ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 108.99 ರೂ. (ಇಂದಿನ ಹೆಚ್ಚಳ: 88 ಪೈಸೆ) ಡೀಸೆಲ್ ಬೆಲೆ ಲೀಟರಿಗೆ 92.83 ರೂ.(ಇಂದಿನ ಹೆಚ್ಚಳ: 78 ಪೈಸೆ) ಜಿಗಿದಿದೆ. ಖಜಾನೆ ಭರ್ತಿಗೆ ಷೇರು ಸೂಚ್ಯಂಕವನ್ನು ಕುಣಿಸಿದಂತೆ, ಬೆಲೆ ಸೂಚ್ಯಂಕದ ಕರಡಿ ಕುಣಿತವೂ ಭರ್ಜರಿ.

13 ದಿನದಿಂದ ಬೆಲೆ ಏರಿಕೆ ನಿರಂತರ. ಎರಡೂ ತೈಲಗಳ ಬೆಲೆ 8 ರೂ. ಹೆಚ್ಚಳ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 108.99 ರೂ., (ಇಂದಿನ ಹೆಚ್ಚಳ:88 ಪೈಸೆ) ಡೀಸೆಲ್ ಬೆಲೆ ಲೀಟರಿಗೆ 92.83 ರೂ.(ಇಂದಿನ ಹೆಚ್ಚಳ:78 ಪೈಸೆ) ಜಿಗಿದಿದೆ. ಖಜಾನೆ ಭರ್ತಿಗೆ ಷೇರು ಸೂಚ್ಯಂಕವನ್ನು ಕುಣಿಸಿದಂತೆ, ಬೆಲೆ ಸೂಚ್ಯಂಕದ ಕರಡಿ ಕುಣಿತವೂ ಭರ್ಜರಿ. 2/10

— H D Kumaraswamy (@hd_kumaraswamy) April 3, 2022

2018ರಲ್ಲಿ ನಾನು ಸಿಎಂ ಆಗಿದ್ದಾಗ ಸಾಲ ಮನ್ನಾಕ್ಕಾಗಿ ಪೆಟ್ರೋಲ್ ಲೀಟರಿಗೆ 1.12 ಪೈಸೆ, ಮತ್ತು ಡೀಸೆಲ್ ಬೆಲೆಯಲ್ಲಿ ಲೀಟರಿಗೆ 1.14 ಪೈಸೆ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿ ನಾಯಕರು ಕೂಗಾಡಿ ಗಲಾಟೆ ಎಬ್ಬಿಸಿದ್ದರು. ಬೆಲೆ ಹೆಚ್ಚಳದ ಈ ಹಣ ರೈತರಿಗೆ ಹೋಗಿಬಿಡುತ್ತದಲ್ಲ ಎಂದು ಅವರ ಹೊಟ್ಟೆ ಉರಿದುಹೋಯಿತು. ಇದನ್ನೂ ಓದಿ: ದೃಢಸಂಕಲ್ಪ, ಜಾಣ್ಮೆ, ತಾಳ್ಮೆ ಇವು ಯಶಸ್ಸಿನ ಸೂತ್ರಗಳು: ಆನಂದ್ ಮಹೀಂದ್ರಾ

2018ರಲ್ಲಿ ನಾನು ಸಿಎಂ ಆಗಿದ್ದಾಗ ಸಾಲ ಮನ್ನಾಕ್ಕಾಗಿ ಪೆಟ್ರೋಲ್ ಲೀಟರಿಗೆ 1.12 ಪೈಸೆ, & ಡೀಸೆಲ್ ಬೆಲೆಯಲ್ಲಿ ಲೀಟರಿಗೆ 1.14 ಪೈಸೆ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿ ನಾಯಕರು ಕೂಗಾಡಿ ಗಲಾಟೆ ಎಬ್ಬಿಸಿದ್ದರು. ಬೆಲೆ ಹೆಚ್ಚಳದ ಈ ಹಣ ರೈತರಿಗೆ ಹೋಗಿಬಿಡುತ್ತದಲ್ಲ ಎಂದು ಅವರ ಹೊಟ್ಟೆ ಉರಿದುಹೋಯಿತು. 3/10

— H D Kumaraswamy (@hd_kumaraswamy) April 3, 2022

ಹಾದಿಬೀದಿಯಲ್ಲಿ ಖಾಲಿ ಸಿಲಿಂಡರ್‌ಗಳನ್ನು ಹೊತ್ತ ಬಿಜೆಪಿಗರು ಈಗೇಕೆ ಮೌನಕ್ಕೆ ಶರಣಗಾಗಿದ್ದಾರೆ? ಬೆಲೆ ಏರಿಕೆಯಿಂದ ಬಡವರ ಹೊಟ್ಟೆ ಉರಿದರೆ ನಿಮಗೆ ಖುಷಿಯಾ. ಬನ್ನಿ, ಬೀದಿಗೆ ಬಂದು ಪ್ರತಿಭಟನೆ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಎಂದರು. ಇದನ್ನೂ ಓದಿ: ಪಾಕಿಸ್ತಾದ ಮಾಜಿ ಪ್ರಧಾನಿ ನವಾಜ್ ಶರೀಫ್ ಮೇಲೆ ದಾಳಿ

ಹಾದಿಬೀದಿಯಲ್ಲಿ ಖಾಲಿ ಸಿಲಿಂಡರುಗಳನ್ನು ಹೊತ್ತ ಬಿಜೆಪಿಗರು ಈಗೇಕೆ ಮೌನಕ್ಕೆ ಶರಣಗಾಗಿದ್ದಾರೆ? ಬೆಲೆ ಏರಿಕೆಯಿಂದ ಬಡವರ ಹೊಟ್ಟೆ ಉರಿದರೆ ನಿಮಗೆ ಖುಷಿಯಾ?
ಬನ್ನಿ, ಬೀದಿಗೆ ಬಂದು ಪ್ರತಿಭಟನೆ ಮಾಡಿ, ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿ. 4/10

— H D Kumaraswamy (@hd_kumaraswamy) April 3, 2022

ಸಿಮೆಂಟ್, ಕಬ್ಬಿಣ, ಆಹಾರ ಪದಾರ್ಥ ಸೇರಿ ಸಾಮಾನ್ಯ ವ್ಯಕ್ತಿ ಬಳಸುವ ಪ್ರತಿ ವಸ್ತುವಿನ ಬೆಲೆ ನಿತ್ಯವೂ ಜಿಗಿಯುತ್ತಿದೆ. ಶ್ರೀಸಾಮಾನ್ಯನು ಮನೆ ಕಟ್ಟುವ ಕನಸು ಇನ್ನು ಬರೀ ಕನಸೇ. ಅವನ ಜೇಬು ಖಾಲಿಯಾಗುತ್ತಿದೆ, ಕೆಲವರ ಜೇಬು ತುಂಬುತ್ತಿದೆ. ಬಿಜೆಪಿ ಭಾರತದಲ್ಲಿ ಉದ್ಯಮಿಗಳು ಜಗತ್ತಿನ ಟಾಪ್ ಶ್ರೀಮಂತರಾಗುತ್ತಿದ್ದಾರೆ.

ಸಿಮೆಂಟ್, ಕಬ್ಬಿಣ, ಆಹಾರ ಪದಾರ್ಥ ಸೇರಿ ಸಾಮಾನ್ಯ ವ್ಯಕ್ತಿ ಬಳಸುವ ಪ್ರತಿ ವಸ್ತುವಿನ ಬೆಲೆ ನಿತ್ಯವೂ ಜಿಗಿಯುತ್ತಿದೆ. ಶ್ರೀಸಾಮಾನ್ಯನು ಮನೆ ಕಟ್ಟುವ ಕನಸು ಇನ್ನು ಬರೀ ಕನಸೇ. ಅವನ ಜೇಬು ಖಾಲಿಯಾಗುತ್ತಿದೆ, ಕೆಲವರ ಜೇಬು ತುಂಬುತ್ತಿದೆ!! ಬಿಜೆಪಿ ಭಾರತದಲ್ಲಿ ಉದ್ಯಮಿಗಳು ಜಗತ್ತಿನ ಟಾಪ್ ಶ್ರೀಮಂತರಾಗುತ್ತಿದ್ದಾರೆ!! 5/10

— H D Kumaraswamy (@hd_kumaraswamy) April 3, 2022

ಹಿಜಾಬ್, ಕೇಸರಿ ಶಾಲು, ಟಿಪ್ಪು ಪಠ್ಯ, ಮುಸ್ಲಿಂ ವರ್ತಕರಿಗೆ ನಿಷೇಧ, ಹಲಾಲ್ ಕಟ್ ಬಗ್ಗೆ ಅಬ್ಬರಿಸಿ ಬೊಬ್ಬಿರಿಯುವ ಶ್ರೀಮಂತರ ಪಕ್ಷ ಬಿಜೆಪಿಯು ಬೆಲೆ ಏರಿಕೆ ಬಗ್ಗೆ ಮಾತ್ರ ಮೌನವಾಗಿದೆ. ರಾಜ್ಯ ಸರ್ಕಾರವೂ ಮೌನ. ಮುಖ್ಯಮಂತ್ರಿಗಳೂ ಮೌನ. ಮೌನಂ ಶರಣಂ ಗಚ್ಛಾಮಿ. ಮೌನಿ ಪಕ್ಷ. ಮೌನಿ ಸರ್ಕಾರ. ಮೌನಿ ಮುಖ್ಯಮಂತ್ರಿ.

ಹಿಜಾಬ್, ಕೇಸರಿ ಶಾಲು, ಟಿಪ್ಪು ಪಠ್ಯ, ಮುಸ್ಲಿಂ ವರ್ತಕರಿಗೆ ನಿಷೇಧ, ಹಲಾಲ್ ಕಟ್ ಬಗ್ಗೆ ಅಬ್ಬರಿಸಿ ಬೊಬ್ಬಿರಿಯುವ ʼಶ್ರೀಮಂತರ ಪಕ್ಷ ಬಿಜೆಪಿʼಯು ಬೆಲೆ ಏರಿಕೆ ಬಗ್ಗೆ ಮಾತ್ರ ಮೌನವಾಗಿದೆ!
ರಾಜ್ಯ ಸರಕಾರವೂ ಮೌನ!!
ಮುಖ್ಯಮಂತ್ರಿಗಳೂ ಮೌನ!!!
ಮೌನಂ ಶರಣಂ ಗಚ್ಛಾಮಿ. 6/10

— H D Kumaraswamy (@hd_kumaraswamy) April 3, 2022

ಡಾ. ಮನಮೋಹನ್ ಸಿಂಗ್ ಅವರನ್ನು ಮೌನಿ ಪ್ರಧಾನಿ ಎಂದ ಇವರ ಅಬ್ಬರ ಎಲ್ಲಿ ಉಡುಗಿ ಹೋಗಿದೆ. ದನಿಯೆತ್ತಿ ಬೆಲೆ ಏರಿಕೆ ವಿರುದ್ಧ ಇದು ನನ್ನ ಆಗ್ರಹ ಎಂದರು.

ಮೌನಿ ಪಕ್ಷ!
ಮೌನಿ ಸರಕಾರ!!
ಮೌನಿ ಮುಖ್ಯಮಂತ್ರಿ!!!

ಡಾ.ಮನಮೋಹನ್ ಸಿಂಗ್ ಅವರನ್ನು ʼಮೌನಿ ಪ್ರಧಾನಿʼ ಎಂದ ಇವರ ಅಬ್ಬರ ಎಲ್ಲಿ ಉಡುಗಿ ಹೋಗಿದೆ? ದನಿಯೆತ್ತಿ ಬೆಲೆ ಏರಿಕೆ ವಿರುದ್ಧ. ಇದು ನನ್ನ ಆಗ್ರಹ. 7/10

— H D Kumaraswamy (@hd_kumaraswamy) April 3, 2022

ಬೆಲೆ ಏರಿಕೆ ಬಗ್ಗೆ ಜನರ ಆಕ್ರೋಶ ಎಲ್ಲಿ ಆಸ್ಫೋಟಗೊಂಡು ಬಿಜೆಪಿ ಬುಡಕ್ಕೆಲ್ಲಿ ಬೆಂಕಿ ಬೀಳುತ್ತದೋ ಎಂಬ ಭಯದಿಂದ ಆ ಮುಗ್ಧಜನರ ಮನಸ್ಸನ್ನು ಸೂಕ್ಷ್ಮ ವಿಷಯಗಳ ಕಡೆ ಹೊರಳುವಂತೆ ಮಾಡಲಾಗಿದೆ. 150 ಸೀಟಿನ ರೋಡ್ ಮ್ಯಾಪ್ ಎಲ್ಲಿ ಮಣ್ಣುಪಾಲಾಗುತ್ತದೋ? ಎಂದು ಹಿಂದುತ್ವದ ವಿನಾಶಕ್ಕೆ ಹಿಂಸಾಚಾರದ ಶಂಖ ಊದಲಾಗಿದೆ.

ಬೆಲೆ ಏರಿಕೆ ಬಗ್ಗೆ ಜನರ ಆಕ್ರೋಶ ಎಲ್ಲಿ ಆಸ್ಫೋಟಗೊಂಡು ಬಿಜೆಪಿ ಬುಡಕ್ಕೆಲ್ಲಿ ಬೆಂಕಿ ಬೀಳುತ್ತದೋ ಎಂಬ ಭಯದಿಂದ ಆ ಮುಗ್ಧಜನರ ಮನಸ್ಸನ್ನು ಸೂಕ್ಷ್ಮ ವಿಷಯಗಳ ಕಡೆ ಹೊರಳುವಂತೆ ಮಾಡಲಾಗಿದೆ. ʼ150 ಸೀಟಿನ ರೋಡ್ ಮ್ಯಾಪ್ ಎಲ್ಲಿ ಮಣ್ಣುಪಾಲಾಗುತ್ತದೋʼ ಎಂದು ಹಿಂದುತ್ವದ ವಿನಾಶಕ್ಕೆ ಹಿಂಸಾಚಾರದ ಶಂಖ ಊದಲಾಗಿದೆ. 8/10

— H D Kumaraswamy (@hd_kumaraswamy) April 3, 2022

ಘನವೇತ್ತ ಮಾಜಿ ಸಿಎಂ ಮಾಜಿ ಕೇಂದ್ರಮಂತ್ರಿಗಳೂ ಡಿ.ವಿ.ಸದಾನಂದಗೌಡರು, ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರ್ಕಾರ ಕಾರಣ ಎಂದಿದ್ದಾರೆ. 8 ವರ್ಷವಾದರೂ ಯುಪಿಎ ಮಾಡಿದ ತಪ್ಪು ಸರಿ ಮಾಡಲಿಲ್ಲ, ಏಕೆ ಅಡುಗೆ ಮನೆಗಳಲ್ಲಿ ತಾಯಂದಿರು, ಬೆಲೆ ಏರಿಕೆ ಬೆಂಕಿಯಲ್ಲಿ ಬೇಯುತ್ತಿದ್ದರೆ ನಿಮಗೆ ರಾಜಕೀಯ ಮುಖ್ಯವಾಗಿದೆ. ನಾಚಿಕೆಯಾಗಬೇಕು.

ಬಿಜೆಪಿ ಎಂದರೆ ಭಾರತೀಯ ಜನತಾ ಪಕ್ಷವಲ್ಲ, ಬಡವರ ರಕ್ತಹೀರಿ ಸಿರಿವಂತರ ಖಜಾನೆ ಭರ್ತಿ ಮಾಡುವ ʼಬಲ್ಲಿದ ಜನರ ಪಕ್ಷʼ. ಬೆಲೆ ಶೂಲದಿಂದ ಬಡಜನರನ್ನು ಬರ್ಬಾದ್ ಮಾಡುತ್ತಿರುವ ಪಕ್ಷ. 10/10#ಕರ್ನಾಟಕ_ಸರ್ವ_ಜನಾಂಗದ_ಶಾಂತಿಯ_ತೋಟ#ಬಡವರ_ಪಕ್ಷವಲ್ಲ_ಬಿಜೆಪಿ#PetrolDieselPriceHike

— H D Kumaraswamy (@hd_kumaraswamy) April 3, 2022

ಬಿಜೆಪಿ ಎಂದರೆ ಭಾರತೀಯ ಜನತಾ ಪಕ್ಷವಲ್ಲ, ಬಡವರ ರಕ್ತಹೀರಿ ಸಿರಿವಂತರ ಖಜಾನೆ ಭರ್ತಿ ಮಾಡುವ ಬಲ್ಲಿದ ಜನರ ಪಕ್ಷ. ಬೆಲೆ ಶೂಲದಿಂದ ಬಡಜನರನ್ನು ಬರ್ಬಾದ್ ಮಾಡುತ್ತಿರುವ ಪಕ್ಷ. ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ. ಬಡವರ ಪಕ್ಷವಲ್ಲ ಬಿಜೆಪಿ ಎಂದು ಕಿಡಿಕಾರಿದ್ದಾರೆ.

TAGGED:bjpdieselhd kumaraswamypetrolPricesಡೀಸೆಲ್ಪೆಟ್ರೋಲ್ಬಿಜೆಪಿಬೆಲೆ ಏರಿಕೆಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories

You Might Also Like

Effie Defrin Mojtaba Khamenei
Latest

ಇಸ್ರೇಲ್‌ಗೆ ಬೆದರಿಕೆ ಹಾಕುವ ಯಾರನ್ನೂ ಬಿಡಲ್ಲ – ಮಿಲಿಟರಿ ವಕ್ತಾರ ಎಫಿ ಡೆಫ್ರಿನ್ ಶಪಥ

Public TV
By Public TV
29 minutes ago
tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
9 hours ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
10 hours ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
10 hours ago
Kalaburagi Dharwad Benches of the High Court
Districts

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ – ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Public TV
By Public TV
10 hours ago
HD Devegowda Mallikarjun Kharge
Bengaluru City

ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?