Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ್ಯಾಯಯುತವಾಗಿ ಚನ್ನಪಟ್ಟಣ ಟಿಕೆಟ್‌ ನಮಗೇ ಬರಬೇಕು: ಹೆಚ್‌ಡಿಕೆ ಪಟ್ಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನ್ಯಾಯಯುತವಾಗಿ ಚನ್ನಪಟ್ಟಣ ಟಿಕೆಟ್‌ ನಮಗೇ ಬರಬೇಕು: ಹೆಚ್‌ಡಿಕೆ ಪಟ್ಟು

Districts

ನ್ಯಾಯಯುತವಾಗಿ ಚನ್ನಪಟ್ಟಣ ಟಿಕೆಟ್‌ ನಮಗೇ ಬರಬೇಕು: ಹೆಚ್‌ಡಿಕೆ ಪಟ್ಟು

Public TV
Last updated: October 20, 2024 4:22 pm
Public TV
Share
3 Min Read
HD Kumaraswamy 2 1
SHARE

ಮಂಡ್ಯ: ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಚನ್ನಪಟ್ಟಣ (Channapatna) ಜೆಡಿಎಸ್‌ ಭದ್ರಕೋಟೆ ಅನ್ನೋದು ದೆಹಲಿ ಮಟ್ಟದಲ್ಲೂ ಗೊತ್ತಿದೆ. ನ್ಯಾಯಯುತವಾಗಿ ಚರ್ಚೆ ಮಾಡೋದಾದ್ರೆ ಚನ್ನಪಟ್ಟಣ ಟಿಕೆಟ್‌ ನಮಗೆ ಬರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದರು.

ಮಂಡ್ಯದ (Mandya) ಪಾಂಡವಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಟಿಕೆಟ್ ವಿಚಾರದಲ್ಲಿ ಗೊಂದಲ ಏನು ಇಲ್ಲ. ಯೋಗೇಶ್ವರ್ ಸಹ ನಿಲ್ಲಬೇಕು ಅಂತಾ ಹೇಳ್ತಾರೆ. ನ್ಯಾಯಯುತವಾಗಿ ಚರ್ಚೆ ಮಾಡೋದಾದ್ರೆ ಚನ್ನಪಟ್ಟಣ ನಮಗೆ ಬರಬೇಕು. ಮೂರು ಕ್ಷೇತ್ರಗಳ ಪೈಕಿ 2 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ (BJP Candidate) ಘೋಷಣೆ ಮಾಡಿದ್ದಾರೆ. ಚನ್ನಪಟ್ಟಣ ವಿಚಾರದಲ್ಲಿ ನಮ್ಮ ಪಕ್ಷದ ಪರವಾಗಿ ನಿರ್ಧಾರ ಮಾಡಬೇಕು. ಅದೇ ನಿಟ್ಟಿನಲ್ಲಿ ಚರ್ಚೆಯಾಗುತ್ತಿದೆ. ಇಂದು ಈ ಬಗ್ಗೆ ಸಭೆ ಇದೆ. ಇಂದೇ ಅಭ್ಯರ್ಥಿ ಘೋಷಣೆ ಆಗುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: ಹಲವು ವರ್ಷಗಳ ಬಳಿಕ ಒಟ್ಟಿಗೆ ಕಾಣಿಸಿಕೊಂಡ ರೆಡ್ಡಿ-ರಾಮುಲು

ಚನ್ನಪಟ್ಟಣ ಜೆಡಿಎಸ್‌ ಭದ್ರಕೋಟೆ:
ದೆಹಲಿ ಮಟ್ಟದಲ್ಲಿ ಚನ್ನಪಟ್ಟಣ ಟಿಕೆಟ್ ಸಮಸ್ಯೆ ಇಲ್ಲ. ಕಳೆದ ಎರಡು ಬಾರಿ ಚನ್ನಪಟ್ಟಣದಲ್ಲಿ ನಾನು ಪ್ರತಿನಿಧಿಸಿದ್ದೇನೆ. ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಅನ್ನೋದು ದೆಹಲಿ ಮಟ್ಟದಲ್ಲಿ ಗೊತ್ತಿದೆ. ಮೂರು ಉಪಚುನಾವಣೆ ಕ್ಷೇತ್ರಗಳ ಪೈಕಿ ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಪಡೆ ಇದೆ. ಗೆಲ್ಲುವ ದೃಷ್ಟಿಯಿಂದ ಬಿಜೆಪಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಟ್ಟುಕೊಟ್ಟೆವು. ನಮ್ಮ ಕುಟುಂಬದವರನ್ನೇ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಿಸಿದ್ದೇವೆ. ಆ ರೀತಿ ಔದಾರ್ಯ ಅವರ ಕಡೆಯಿಂದಲೂ ಬರಬೇಕು ಎನ್ನುತ್ತಾ ಪರೋಕ್ಷವಾಗಿ ಸಿಪಿವೈ ಜೆಡಿಎಸ್ ಚಿಹ್ನೆಯಡಿ ನಿಲ್ಲಲಿ ಎಂದು ಕುಮಾರಸ್ವಾಮಿ ಹೇಳಿದರು. ಇದನ್ನೂ ಓದಿ: ಸರೋಜಕ್ಕ ಸಾಕ್ಷಾತ್ ಅನ್ನಪೂರ್ಣೇಶ್ವರಿ ಆಗಿದ್ದರು: ನಟ ಸುದೀಪ್ ತಾಯಿ ನಿಧನಕ್ಕೆ ಬೊಮ್ಮಾಯಿ ಸಂತಾಪ

ನಮ್ಮಲ್ಲಿ ಒಡಕು ಮೂಡಲಿ ಅಂತ ಕಾಂಗ್ರೆಸ್‌ ಭಕಪಕ್ಷಿ ರೀತಿ ಕಾಯ್ತಿದೆ:
ಸಿ.ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸುತ್ತಿರುವ ವಿಚಾರ ಕುರಿತು ಮಾತನಾಡಿದ ಹೆಚ್‌ಡಿಕೆ, ನಾಮಪತ್ರ ಸಲ್ಲಿಸುವ ವಿಚಾರ ನನ್ನೊಂದಿಗೆ ಚರ್ಚೆಯಾಗಿಲ್ಲ. ನನ್ನ ಮುಂದೆ ಆ ಕುರಿತು ಪ್ರಸ್ತಾಪವೂ ಬಂದಿಲ್ಲ. ಮಾಧ್ಯಮಗಳಲ್ಲಿ ವರದಿ ಬಂದಿರುವುದನ್ನು ನೋಡಿದ್ದೇನೆ. ಕಾಂಗ್ರೆಸ್ ನಾಯಕರನ್ನ ಭೇಟಿ ಮಾಡಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗ್ತಾರೆ ಎಂಬ ವಿಚಾರ 15 ದಿವಸದಿಂದ ಓಡಾಡ್ತಿದೆ. ಕಾಂಗ್ರೆಸ್ ನವರು ತಮ್ಮ ಪಕ್ಷಕ್ಕೆ ಕರೆದುಕೊಂಡು ಹೋಗಿ ನಿಲ್ಲಿಸಲು ಕಾಯ್ತಿದ್ದಾರೆ. ನಮ್ಮಲ್ಲಿ ಒಡಕು ಮೂಡಲಿ ಎಂದು ಭಕಪಕ್ಷಿ ರೀತಿ ಕಾಯ್ತಿದ್ದಾರೆ. ಸ್ವತಂತ್ರವಾಗಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಿಲ್ಲ. ಅದಕ್ಕಾಗಿ ಒಡಕು ತರಲು ಶ್ರಮ ಹಾಕ್ತಿದ್ದಾರೆ. ಅಂತಹ ಅವಕಾಶ ಕಲ್ಪಿಸಬಾರದೆಂದು ತಾಳ್ಮೆಯಲ್ಲಿದ್ದೇನೆ. ಇನ್ನೂ 4 ದಿನ ಇದೆ, ಕೂತು ಚರ್ಚೆ ಮಾಡ್ತೇವೆ ಎಂದು ತಿಳಿಸಿದ್ದಾರೆ.

ಚನ್ನಪಟ್ಟಣವನ್ನು ಜೆಡಿಎಸ್ ಬಿಟ್ಟಿದೆ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾವು ಹೋರಾಟ ಮಾಡದೇ ಸನ್ಯಾಸತ್ವ ಸ್ವೀಕಾರ ಮಾಡಿದ್ದೀವಾ? ನಾವು ಚುನಾವಣೆ ಗೆಲ್ಲಲು ಏನು ನಿರ್ಧಾರ ಮಾಡಬೇಕು ಮಾಡ್ತೀನಿ ಎಂದು ಹೇಳಿದರು. ಇದನ್ನೂ ಓದಿ: 36 ವರ್ಷಗಳ ಬಳಿಕ ಭಾರತದ ನೆಲದಲ್ಲಿ ಟೆಸ್ಟ್‌ ಗೆದ್ದ ಕಿವೀಸ್‌ – ಟೀಂ ಇಂಡಿಯಾ ಸೋಲಿಗೆ ಕಾರಣಗಳೇನು?

ಮಾಜಿ ಸಂಸದ ಡಿ.ಕೆ.ಸುರೇಶ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಸುರೇಶ್ ಸಂಸ್ಕೃತಿಯ ಬಗ್ಗೆ ನಾನು ಮಾತಡಲ್ಲ. ಅವರು ಏನೇ ಚರ್ಚೆ ಮಾಡಿದ್ರೂ ನನಗೆ ಸಂಬಂಧ ಇಲ್ಲ. ಜನರು ಬಹುನಿರೀಕ್ಷೆ ಇಟ್ಟು ಕಾಂಗ್ರೆಸ್‌ಗೆ ಬಹುಮತ ನೀಡಿದ್ದಾರೆ. ಕಾಂಗ್ರೆಸ್‌ಗೆ 136 ಸೀಟ್‌ಗಳನ್ನು ಕೊಟ್ಟಿರೋದು ನಿಜ. ಈ ಕಾಂಗ್ರೆಸ್ ರಾಜ್ಯದಲ್ಲಿ ಯಾವ ರೀತಿ ಕೆಲಸ ಮಾಡ್ತಾ ಇದೆ. ದಿನವೂ ಒಂದೊಂದು ಅಕ್ರಮಗಳು ಬೆಳಕಿಗೆ ಬರ್ತಾ ಇವೆ. ಸಿಎಂ ನನಗೆ ಮಣ್ಣಿನ ಮೇಲೆ ಆಸೆ ಇಲ್ಲ ಅಂತಾ ಪದೇ ಪದೇ ಹೇಳ್ತಾರೆ. ಈಗ ಒಂದೊಂದೇ ಉದುರುತ್ತಿವೆ. ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ಮುಂದೆ ಏನು ಬೇಕಾದರೂ ಆಗಬಹುದಾಗಿದೆ ಎಂದು ಭವಿಷ್ಯ ನುಡಿದರು.

ನನಗೆ 5 ವರ್ಷದ ಪೂರ್ಣ ಬಹುಮತದ ಸರ್ಕಾರ ಜನರು ನೀಡಬಹುದು ಎಂಬ ವಿಶ್ವಾಸವಿದೆ. ನಾನು ವಿಶ್ವಾಸ ಇಟ್ಟುಕೊಳ್ಳಲು ಅವರ ಪರ್ಮಿಷನ್ ತಗೋ ಬೇಕಾ? 5 ವರ್ಷದ ಸರ್ಕಾರ ಬಂದ್ರೆ ನನದ್ದೇ ಆದ ಅಭಿವೃದ್ಧಿ ಕೆಲಸಗಳು ಇವೆ. ಜನರ ಸಮಸ್ಯೆ ಬಗೆಹರಿಸಲು ಕಾರ್ಯಕ್ರಮ ಹಾಕಿಕೊಂಡಿದ್ದೇನೆ. ನಮ್ಮ ರಾಜ್ಯದಲ್ಲಿ ಹಣದ ಕೊರತೆ ಇಲ್ಲ. ಕರ್ನಾಟಕ ಸಂಪದ್ಬರಿತವಾದ ರಾಜ್ಯ. ಆದ್ರೆ ಈಗ ಸರ್ಕಾರದ ದುಡ್ಡು ಪೋಲು ಮಾಡ್ತಾ ಇದ್ದಾರೆ. ಇದಕ್ಕೆ ಕಡಿವಾಣ ಹಾಕಿ ಜನರ ನೆಮ್ಮದಿ ಬದುಕಿಗಾಗಿ ನನಗೆ ಅವಕಾಶ ನೀಡುತ್ತಾರೆ ಎನ್ನೋದು ತಪ್ಪಾ? ನನ್ನ ಮಾತಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನನ್ನ ತೀರ್ಮಾನದಲ್ಲೂ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

TAGGED:bjpChannapatna By ElectionCP Yogeshwarhd kumaraswamyjdsಚನ್ನಪಟ್ಟಣ ಉಪಚುನಾವಣೆಜೆಡಿಎಸ್ಬಿಜೆಪಿಸಿ.ಪಿ.ಯೋಗೇಶ್ವರ್ಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

five arrested for trying to sell drugs in hassan
Crime

ಹಾಸನ | ಮಾದಕವಸ್ತು ಸಾಗಾಟ – ಐವರು ವಶಕ್ಕೆ

Public TV
By Public TV
15 minutes ago
Shivaratri 2
Districts

ಶಿವರಾತ್ರಿ ಸಂಭ್ರಮಕ್ಕೆ ಅರಮನೆ ಸಜ್ಜು – ತ್ರಿನೇಶ್ವರನ ಚಿನ್ನದ ಕೊಳಗ ಕಣ್ತುಂಬಿಕೊಳ್ಳಲು ಭಕ್ತರು ಕಾತರ

Public TV
By Public TV
18 minutes ago
Chamarajanagara
Chamarajanagar

16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಅಪರಾಧಿ ಅರೆಸ್ಟ್‌

Public TV
By Public TV
36 minutes ago
Lovers Day
Bengaluru City

Valentine’s Day | ಹೇ ಹುಡುಗಿ… ಎಳನೀರ ತೋಟಕ್ಕೆ ಕರೆದೊಯ್ದೆಯಲ್ಲ… ನೆನಪಿದೆಯಾ ನಿನ್ನ ಕಳ್ಳ ಮರೆವಿಗೆ!

Public TV
By Public TV
56 minutes ago
valentines day 3
Latest

Valentine’s Day – ಯಾರಿದು ಪ್ರೇಮ ಸಂತ ವ್ಯಾಲೆಂಟೈನ್?

Public TV
By Public TV
58 minutes ago
Pulwama Attack
Latest

ಪುಲ್ವಾಮಾ ದಾಳಿಗೆ 7 ವರ್ಷ – 2019ರ ಫೆ.14 ರಂದು ನಡೆದಿದ್ದು ಏನು?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?