ಬೆಂಗಳೂರು: ಅಧಿಕಾರವೂ ತಪ್ಪಬಾರದು, ಅಭಿವೃದ್ಧಿಯೂ ಆಗಬಾರದು ಎಂದು ನಾನು ಭಾವಿಸಿದ್ದಿದ್ದರೆ ನೀವು ಮಲ್ಲೇಶ್ವರಂನಲ್ಲಿ ಶಾಸಕರೇ ಆಗುತ್ತಿರಲಿಲ್ಲ. ಆ ದಿನಗಳನ್ನು ಒಮ್ಮೆ ನೆನಪು ಮಾಡಿಕೊಳ್ಳಿ ಎಂದು ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ (H.D.Kumaraswamy) ಸರಣಿ ಟ್ವೀಟ್ಗಳ ಮೂಲಕ ಸಚಿವ ಅಶ್ವಥ್ನಾರಾಯಣ (Dr. Ashwathnarayan) ವಿರುದ್ಧ ಕೆಂಡಕಾರಿದ್ದಾರೆ.
ಟ್ವೀಟ್ನಲ್ಲಿ ಏನಿದೆ?
ಅಭಿವೃದ್ಧಿ ಕೆಲಸ ಎಂದರೇನು ಅಶ್ವಥ್ನಾರಾಯಣ ಅವರೇ? ವಾಮಮಾರ್ಗ ಎಂದರೆ ಯಾವುದು? ಇವೆರಡರಲ್ಲೂ ತಮಗೆ ಒಳ್ಳೇ ಅನುಭವವೇ ಇದೆ. ಅಧಿಕಾರಿಗಳನ್ನು ಬುಟ್ಟಿಗೆ ಹಾಕಿಕೊಂಡು ‘ಕಳ್ಳಮಾರ್ಗ’ದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲು ಹೊರಟಿದ್ದು, ಕ್ಷೇತ್ರದ ಶಾಸಕರನ್ನೇ ಕತ್ತಲೆಯಲ್ಲಿ ಇಟ್ಟಿದ್ದನ್ನು ಏನೆಂದು ಕರೆಯಬೇಕು? ಇದೇನಾ ನೀವು ಹೇಳುವ ‘ರಾಜಮಾರ್ಗ’? ‘ಅಧಿಕಾರವೂ ತಪ್ಪಬಾರದು, ಅಭಿವೃದ್ಧಿಯೂ ಆಗಬಾರದು’ ಎಂದು ನಾನು ಭಾವಿಸಿದ್ದಿದ್ದರೆ ನೀವು ಮಲ್ಲೇಶ್ವರಂನಲ್ಲಿ ಶಾಸಕರೇ ಆಗುತ್ತಿರಲಿಲ್ಲ. ಆ ದಿನಗಳನ್ನು ಒಮ್ಮೆ ನೆನಪು ಮಾಡಿಕೊಳ್ಳಿ. ಇದನ್ನೂ ಓದಿ: ನಾನು ಬ್ಲ್ಯಾಕ್ ಇದ್ದೇನೆ, ಆದ್ರೆ ಬ್ಲ್ಯಾಕ್ ಮೇಲರ್ ಅಲ್ಲ: ಹೆಚ್ಡಿಕೆ ಪಂಚ್
ಅಭಿವೃದ್ಧಿ ಬಗ್ಗೆ ಉಪದೇಶ ಮಾಡಿದ್ದೀರಿ, ನಿಮ್ಮ ಮಾದರಿಯಲ್ಲಿ ಅಭಿವೃದ್ಧಿ ಮಾಡಿಕೊಳ್ಳುವುದು ನನಗೆ ಗೊತ್ತಿಲ್ಲ, ನನ್ನಿಂದ ಆಗುವುದೂ ಇಲ್ಲ. ಅಶ್ವಥ್ನಾರಾಯಣ ಅವರೇ, ಅಧಿಕಾರ ಬರುತ್ತದೆ, ಹೋಗುತ್ತದೆ ಎಂದು ವೇದಾಂತ ಹೇಳಿದ್ದೀರಿ. ಹೌದು, ಇಂಥ ಉದಾತ್ತ, ಆದರ್ಶ ಚಿಂತನೆಯ, ವಿಶಾಲ ಹೃದಯ ವೈಶಾಲ್ಯವುಳ್ಳ ನಿಮ್ಮಂಥ ಪ್ರಾಜ್ಞರೇ ಆಪರೇಶನ್ ಕಮಲ ಎಂಬ ಪಾಪ ಎಸಗಿದ್ದೇಕೆ? ನಮ್ಮ ಶಾಸಕರ ಮನೆಯಲ್ಲಿ ಹಣ ಇಟ್ಟು ಬಂದ್ದಿದ್ದು ಯಾಕೆ? ಅಧಿಕಾರ ಬೇಕಿದ್ದರೆ ನೀವು ಚುನಾವಣೆಯಲ್ಲಿ ಪೂರ್ಣ ಬಹುಮತ ಸಿಗುವವರೆಗೂ ಕಾಯಬಹುದಿತ್ತಲ್ಲವೇ? ಆದರೆ, ಹಪಾಹಪಿಯಿಂದ ‘ಅಡ್ಡಮಾರ್ಗ’ ಹಿಡಿದಿದ್ದು ಏಕೆ? ಅಕ್ಕಪಕ್ಕದ ಪಕ್ಷಗಳ ಶಾಸಕರನ್ನು ಅಪಹರಿಸಿ ಆಪರೇಷನ್ ಕಮಲದ ಸರ್ಕಾರ ಮಾಡಿದ್ದು ಯಾಕೆ? ಇದು ವಾಮಮಾರ್ಗವೋ? ಸನ್ಮಾರ್ಗವೋ? ಸ್ಪಲ್ಪ ಹೇಳಿ ಅಶ್ವಥ್ನಾರಾಯಣ ಅವರೇ. ಇದನ್ನೂ ಓದಿ: BMS ಟ್ರಸ್ಟ್ ಖಾಸಗಿಗೆ ವಹಿಸಿದ್ರಾ ಅಶ್ವಥ್ ನಾರಾಯಣ್?- ಹೆಚ್ಡಿಕೆ ದಾಖಲೆ ರಿಲೀಸ್
ಅಭಿವೃದ್ಧಿ ಕೆಲಸ ಎಂದರೇನು @drashwathcn ? ವಾಮಮಾರ್ಗ ಎಂದರೆ ಯಾವುದು? ಇವೆರಡರಲ್ಲೂ ತಮಗೆ ಒಳ್ಳೇ ಅನುಭವವೇ ಇದೆ. ಅಧಿಕಾರಿಗಳನ್ನು ಬುಟ್ಟಿಗೆ ಹಾಕಿಕೊಂಡು ʼಕಳ್ಳಮಾರ್ಗʼದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲು ಹೊರಟಿದ್ದು, ಕ್ಷೇತ್ರದ ಶಾಸಕರನ್ನೇ ಕತ್ತಲೆಯಲ್ಲಿ ಇಟ್ಟಿದ್ದನ್ನು ಏನೆಂದು ಕರೆಯಬೇಕು? ಇದೇನಾ ನೀವು ಹೇಳುವ ʼರಾಜಮಾರ್ಗʼ? 1/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 2, 2022
ಬಿಜೆಪಿ (BJP) ಸರ್ಕಾರ ಬಂದ ಮೇಲೆ ರಾಮನಗರ ಜಿಲ್ಲೆಯಲ್ಲಿ ಎಷ್ಟು ಅಭಿವೃದ್ಧಿ ಆಗಿದೆ ಎಂಬುದನ್ನು ಬಹಿರಂಗ ಚರ್ಚೆ ಮಾಡೋಣ ಬನ್ನಿ. ಆಗ ಯಾರ ಆತ್ಮಸಾಕ್ಷಿ ಏನು ಎಂಬುದು ಜನರಿಗೂ ತಿಳಿಯುತ್ತದೆ. ‘ಎಂಎಲ್ಸಿ ಕೋರಿಕೆ ಮೇರೆಗೆ..’ ಎಂದು ಬಿಡುಗಡೆ ಮಾಡಿದ 50 ಕೋಟಿ ರೂ. ಒಳಗುಟ್ಟಿನ ಬಗ್ಗೆಯೂ ಚರ್ಚಿಸೋಣ ಬನ್ನಿ. ನಾನು ತಯಾರಿದ್ದೇನೆ ಎಂದು ಟ್ವೀಟ್ ಮೂಲಕ ಆಹ್ವಾನ ನೀಡಿದ್ದಾರೆ.