Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಅವರೇ ಪ್ಲ್ಯಾನ್ ಮಾಡಿ ವಿಕ್ರಂ ಸಿಂಹರನ್ನ ಬಂಧಿಸಿದ್ದಾರೆ – ಪ್ರತಾಪ್‌ ಸಿಂಹ ಪರ ಹೆಚ್‌ಡಿಕೆ ಬ್ಯಾಟಿಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಿದ್ದರಾಮಯ್ಯ ಅವರೇ ಪ್ಲ್ಯಾನ್ ಮಾಡಿ ವಿಕ್ರಂ ಸಿಂಹರನ್ನ ಬಂಧಿಸಿದ್ದಾರೆ – ಪ್ರತಾಪ್‌ ಸಿಂಹ ಪರ ಹೆಚ್‌ಡಿಕೆ ಬ್ಯಾಟಿಂಗ್‌

Latest

ಸಿದ್ದರಾಮಯ್ಯ ಅವರೇ ಪ್ಲ್ಯಾನ್ ಮಾಡಿ ವಿಕ್ರಂ ಸಿಂಹರನ್ನ ಬಂಧಿಸಿದ್ದಾರೆ – ಪ್ರತಾಪ್‌ ಸಿಂಹ ಪರ ಹೆಚ್‌ಡಿಕೆ ಬ್ಯಾಟಿಂಗ್‌

Public TV
Last updated: January 5, 2024 3:35 pm
Public TV
Share
4 Min Read
HDKumaraswamy
SHARE

ಬೆಂಗಳೂರು: ಸಂಸದ ಪ್ರತಾಪ್ ಸಿಂಹರ ವಿರುದ್ಧ ಸೇಡು ತೀರಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ (Siddaramaiah) ಅವರೇ ಪ್ಲ್ಯಾನ್ ಮಾಡಿ ವಿಕ್ರಂ ಸಿಂಹರನ್ನ ಬಂಧನ ಮಾಡಿಸಿದ್ದಾರೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದಾರೆ.

ಜೆ.ಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಾಗ ಯಾರದ್ದೋ ಮರ ಕಡಿದದ್ದು ಯಾರೋ. ಆದ್ರೆ ಬಂಧನ ಆಗಿದ್ದು ಸಂಸದ ಪ್ರತಾಪ್ ಸಿಂಹ (Pratap Simha) ಸಹೋದರ ವಿಕ್ರಂ ಸಿಂಹ (Vikram Simha). ವಿರೋಧಿಗಳ ಧ್ವನಿ ಅಡಗಿಸೋಕೆ ಕಾಂಗ್ರೆಸ್ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ ಅಂತ ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಆಪ್‌ ಸರ್ಕಾರದ ಬಹುನಿರೀಕ್ಷಿತ ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಅಕ್ರಮ – ಸಿಬಿಐ ತನಿಖೆಗೆ ಆದೇಶ

Pratap Simha and Vikram Simha

ಪ್ರತಾಪ್ ಸಿಂಹ ಸಹೋದರನ ಮೇಲೆ ಕೇಸ್ ಹಾಕಿ ಜೈಲಿಗೆ ಹಾಕಿದ್ದಾರೆ. ಇದರ ಸತ್ಯಾಸತ್ಯತೆ ಏನಿದೆ? ಕಾಂಗ್ರೆಸ್ ಅವರು ವಿರೋಧಿಗಳ ಧ್ವನಿ ಅಡಗಿಸೋಕೆ ಅಧಿಕಾರ ದುರ್ಬಳಕೆ ಮಾಡಿಕೊಳ್ತಿದ್ದಾರೆ. 5 ಜನ ಅರಣ್ಯಾಧಿಕಾರಿಗಳನ್ನ (Forest Officers) ಅಮಾನತು ಮಾಡಿದ್ದಾರೆ. ಅಮಾನತುಗೊಳಿಸಲು ಕಾರಣವೇನು? ಹೇಳಿ ಅಂತ ಪ್ರಶ್ನೆ ಮಾಡಿದ್ರು. ಬೇಲೂರಿನ ಒಂದು ಗ್ರಾಮದಲ್ಲಿ ಪೂರ್ವ ಅನುಮತಿ ಇಲ್ಲದೇ ಮರ ಕಡಿದಿರೋ‌ ಹಿನ್ನೆಲೆಯಲ್ಲಿ ವರದಿ ಹೋಗಿದೆ. ವರದಿಯಲ್ಲಿ ಸರ್ಕಾರದ ಭೂಮಿಯಲ್ಲಿ ಕಟ್ಟಿರೋ ಮನೆಗಳ ಸಕ್ರಮೀಕರಣ ಮಾಡೋಕೆ ಮನೆಗಳ ಬಗ್ಗೆ ವರದಿ ತಹಶಿಲ್ದಾರರಿಗೆ ಕೊಟ್ಟಿದ್ದರು. 40 ಎಕರೆ ಭೂಮಿಯನ್ನ 16 ಜನಕ್ಕೆ ಹಕ್ಕುಪತ್ರಗಳನ್ನ ಕೊಟ್ಟಿದ್ದಾರೆ. ಉಳಿದ ‌ 4 ಎಕರೆ 12 ಗುಂಟೆ ಗೋಮಾಳ ಆಗಿದೆ. 16ನೇ ವ್ಯಕ್ತಿ ರಾಕೇಶ್ ಶೆಟ್ಟಿಗೆ ಸರ್ಕಾರದಿಂದಲೇ 4 ಎಕರೆ ಭೂಮಿ ಕೊಟ್ಟಿದ್ದಾರೆ. ಅವರ ಮಗಳು ಜಯಮ್ಮ ವಿಕ್ರಮ ಸಿಂಹಗೆ ಶುಂಠಿ ಬೆಳೆಯೋಕೆ ಲೀಸ್ ಕೊಟ್ಟಿದ್ದಾರೆ‌ .ಲೀಸ್ ಪ್ರಾರಂಭ ಆಗೋದು 2024 ಜನವರಿಯಿಂದ. ಜಯಮ್ಮ ಮತ್ತು ರವಿ ಅನ್ನೋರು ಈ ಮಧ್ಯೆ ಮರ ಕಡಿದಿದ್ದಾರೆ. ಇದಕ್ಕೆ ವಿಕ್ರಂ ಸಿಂಹ ಕಾರಣ ಅಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮರಗಳ್ಳತನ ಕೇಸ್;‌ ಸಂಸದ ಪ್ರತಾಪ್‌ ಸಿಂಹ ಸಹೋದರನಿಗೆ ಜಾಮೀನು ಮಂಜೂರು

Siddaramaiah 13

ಪ್ರಕರಣದ A1 ಜಯಮ್ಮ, A2 ರಾಕೇಶ್ ಶೆಟ್ಟಿ, A3 ಇರಲಿಲ್ಲ. ಅಲ್ಲಿರೋ ಒಬ್ಬ ಪುಡಾರಿ ಸಿಎಂಗೆ ಮಾಹಿತಿ ಕೊಟ್ಟು ಪ್ರತಾಪ್‌ ಸಿಂಹಗೆ ಪಾಠ ಕಲಿಸೋಕೆ ಅಂತ ಸಿಎಂಗೆ ತಲೆ ತಿಂದ. ಆಗ ಸಿಎಂ ಅಧಿಕಾರಿಗಳಿಗೆ ಕರೆ ಮಾಡಿ ಬೀಟೆ ಮರ ಕಡಿದು ಅ ಜಾಗದಲ್ಲಿ ಹಾಕುವಂತೆ ಹೇಳಿದ್ದರು ಎಂದು ಸಿಎಂ ಮೇಲೆ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಬೇಕಿದ್ದರೇ ಸಿಎಂ ಫೋನ್‌ಕಾಲ್‌ ಲೀಸ್ಟ್ ತೆಗೆಯಿರಿ ಸತ್ಯ ಗೊತ್ತಾಗುತ್ತದೆ. ಎ1, ಎ2ಗೆ ಅರಣ್ಯಾಧಿಕಾರಿಗಳೇ ಬೇಲ್ ಕೊಟ್ಟರು. ಆದರೆ ವಿಕ್ರಂ ಸಿಂಹರ ಬಂಧನ ಮಾಡಿದರು. ಎ1, ಎ2ಗೆ ಕಚೇರಿಯಲ್ಲಿ ಬೇಲ್ ಕೊಟ್ಟು ಇವರನ್ನು ಯಾಕೆ ಅರೆಸ್ಟ್ ಮಾಡಿದಿರಿ? ಎಂದು ಸರ್ಕಾರಕ್ಕೆ ಮ್ಯಾಜಿಸ್ಟ್ರೇಟ್ ಉಗಿದರು ಆಗ ಕೋರ್ಟ್ ಬೇಲ್ ಕೊಟ್ಟರು. ಲೀಸ್ ಅಷ್ಟೇ ವಿಕ್ರಂ ತೆಗೆದುಕೊಂಡಿದ್ದ. ಮರ ಕಡಿದಿದ್ದು ಜಯಮ್ಮ ಮತ್ತು ರವಿ ಆದರೆ ಬೀಟೆ ಮರ ಇಲ್ಲಿ ತಂದು ಹಾಕಿ ಅಂದಿದ್ದು ಸರ್ಕಾರ. ಸಿಎಂ ಅವರೇ ಮರ ಕಡಿದು ಹಾಕಿ ಅಂತ ಹೇಳಿ ಬೀಟೆ ಮರ ಹಾಕಿಸಿದ್ದಾರೆ. ಬೀಟೆ ಮರವನ್ನ ಗೆಂಡೆಕೆರೆಯಿಂದ ಕಟ್ ಮಾಡಿಕೊಂಡು ಬಂದು ಇಲ್ಲಿ ಹಾಕಿದ್ದಾರೆ. ಪ್ರತಾಪ್ ಸಿಂಹನ ತಮ್ಮ ಮರ ಕಡಿದಿಲ್ಲ ಆದರೂ ಪ್ರತಾಪ್ ಸಿಂಹನ ಹೆದರಿಸೋಕೆ ಹೀಗೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Forest Department

ಮಂಡ್ಯದಲ್ಲಿ ಪರಿಷತ್ ಸದಸ್ಯರೊಬ್ಬರು ಮರ ಕಡಿದರು. ಅವರ ಮೇಲೆ ಯಾಕೆ ಕ್ರಮ ಆಗಿಲ್ಲ? ಸಿಎಂ, ಗೃಹ ಸಚಿವರೇ ಇದಕ್ಕೆ ಉತ್ತರ ಕೊಡಿ. ಅಮಾನತು ಆಗಿರೋ ಡಿಎಫ್ಓ ದಲಿತ ಸಮುದಾಯ ವ್ಯಕ್ತಿ. ಯಾಕೆ ಅಧಿಕಾರಿ ಅಮಾನತು ಮಾಡಿದ್ರಿ? ಪ್ರಾಮಾಣಿಕ ದಲಿತ ಅಧಿಕಾರಿ. ಅವನ ಮೇಲೆ ಯಾಕೆ ಕ್ರಮ ಆಯ್ತು‌? ಹಾಸನಕ್ಕೆ ಯಾರ ಶಿಫಾರಸು ಮಾಡಿ ಅವನನ್ನ ಹಾಕಿದ್ರಿ? ಆತನನ್ನ ಹಾಸನಕ್ಕೆ ವರ್ಗಾವಣೆ ಮಾಡಿಸಲು ಯಾವ ಎಂಎಲ್ಎ ಕುಳಿತಿದ್ದ? ಎಷ್ಟು ಹಣ ಎಂಎಲ್ಎ ತೆಗೆದುಕೊಂಡ? ಯಶವಂತಪುರದಲ್ಲಿ ಹಣದ ವ್ಯವಹಾರ ಆಗಿದೆ. ಹಾಸನಕ್ಕೆ ಡಿಎಫ್ಓ ನೇಮಕದಲ್ಲಿ ಶಾಸಕ ಹಣ ಪಡೆದಿದ್ದಾನೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಜೈಲು ಸೇರಿರುವ ಸಂಜಯ್ ಸಿಂಗ್‍ಗೆ ಎಂಪಿಯಾಗಿ ಮುಂದುವರಿಸಲು ಆಪ್ ನಿರ್ಧಾರ

ಶಾಸಕರೇ ಹಣ ಡಿಮ್ಯಾಂಡ್ ಮಾಡಿ ಪಡೆದಿದ್ದಾನೆ. ಹಣ ಪಡೆದು ಡಿಎಫ್ಓ ಹಾಸನಕ್ಕೆ ನೇಮಕ ಮಾಡಿದ್ದಾರೆ. ಪಾಪ ಅವನು ಹಣಕೊಟ್ಟು ಈಗ ಅಮಾನತು ಆಗಿದ್ದಾನೆ. ವಿಕ್ರಂ ಸಿಂಹ ತಪ್ಪು ಮಾಡದೇ ಹೋದರು ಅರೆಸ್ಟ್ ಮಾಡುತ್ತೀರಾ? ಸಿಎಂ ಅವರೇ ಬೀಟೆ ಮರ ಕಟ್‌ಮಾಡಿ ಅಲ್ಲಿ ಹಾಕಿ ಅಂತ ಹೇಳಿದ್ದಾರೆ. ನನಗೆ ಅಧಿಕಾರಿಗಳೇ ಮಾಹಿತಿ ಕೊಟ್ಟಿದ್ದಾರೆ. ಬೇಕಿದ್ದರೆ ಕಾಲ್ ಲೀಸ್ಟ್ ತೆಗೆಸಿ. ಬೇಕಿದ್ರೆ ನಾಗಮೋಹನ್ ದಾಸ್ ಕಮಿಟಿಗೆ ತನಿಖೆ ಮಾಡಲು ಹೇಳಿ ಅಥವಾ ಹೊಸ ಆಯೋಗ ರಚಿಸಿ ಎನಿಖೆ ನಡೆಸಿ ಎಂದರು. ಹಾಸನದ ಶಾಸಕರು ಯಾರು ಇದ್ದಾರೆ ಯಾರು ಹಾಸನದಲ್ಲಿ ವರ್ಗಾವಣೆ ನೋಡಿಕೊಳ್ತಿದ್ದಾರೆ? ಅವರೇ ಇದನ್ನ ಮಾಡಿದ್ದಾರೆ. ಅವರೇ ಡಿಎಫ್ಓ ನಿಂದ ಹಣ ಪಡೆದಿದ್ದಾರೆ ಎಂದು ಹೆಸರು ಹೇಳದೇ ಶಿವಲಿಂಗೇಗೌಡ ಮೇಲೆ ಕುಮಾರಸ್ವಾಮಿ ಆರೋಪಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ನಾಯಕತ್ವದಲ್ಲಿ ಕರ್ನಾಟಕ ಕಾಂಗ್ರೆಸ್‌ ಅಂತ್ಯವಾಗುತ್ತೆ: ಹೆಚ್‌ಡಿಡಿ ಭವಿಷ್ಯ

TAGGED:bengaluruforesthd kumaraswamypratap simhasiddaramaiahVikram Simhaಅರಣ್ಯಪ್ರತಾಪ್ ಸಿಂಹಬೆಂಗಳೂರುಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Pakistan PM Shehbaz Sharif gets trolled over post on US Iran ceasefire Donald Trump
Latest

ಕದನ ವಿರಾಮ ಘೋಷಣೆಯಲ್ಲೂ ಎಡವಟ್ಟು – ಈಗ ಪಾಕ್‌ ಪ್ರಧಾನಿ ಫುಲ್‌ ಟ್ರೋಲ್‌

Public TV
By Public TV
3 minutes ago
Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
36 minutes ago
oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
1 hour ago
Lorry Accident Mysore Road Sattelite Bus Stand
Bengaluru City

ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ – ಚಾಲಕ ಸಾವು

Public TV
By Public TV
1 hour ago
Hormuz
Latest

ಕದನ ವಿರಾಮಕ್ಕೆ ಇರಾನ್‌ ವಿಧಿಸಿದ 10 ಷರತ್ತುಗಳು ಏನು?

Public TV
By Public TV
2 hours ago
WAR 1
Latest

ಇಸ್ರೇಲ್‌, ಇರಾನ್‌ ಯುದ್ಧ | ಯಾರಿಗೆ ಲಾಭ, ಯಾರಿಗೆ ನಷ್ಟ? – ವಿಶ್ವಬ್ಯಾಂಕ್‌ ಎಚ್ಚರಿಕೆ ಏನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?