Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ವಿಕ್ರಂ ಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದ್ದೇ.. ಅವರೇ ಶ್ರೀಮನ್ ಸಿದ್ದರಾಮಣ್ಣ: ಹೆಚ್‌ಡಿಕೆ ಟಾಂಗ್‌

Public TV
Last updated: January 6, 2024 8:12 pm
Public TV
Share
3 Min Read
hdk
SHARE

ಬೆಂಗಳೂರು: ಸಂಸದ ಪ್ರತಾಪ್ ಸಿಂಹ (Pratap Simha) ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ ಇದು. ಇಡೀ ವಿಕ್ರಂ ಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದ್ದೇ, ಅವರೇ ಶ್ರೀಮನ್ ಸಿದ್ದರಾಮಣ್ಣ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರು ಟಾಂಗ್‌ಕೊಟ್ಟಿದ್ದಾರೆ.

ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ (Vikram Simha) ಅವರ ಪ್ರಕರಣಕ್ಕೆ ಸಂಬಂಧಿಸಿ ತಾವು ನೀಡಿದ್ದ ಹೇಳಿಕೆಯ ಬಗ್ಗೆ, ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದ ಸಚಿವರಿಬ್ಬರಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

Pratap Simha and Vikram Simha

ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಹಾಗೂ ಸಹಕಾರ ಸಚಿವ ಕೆ.ಎನ್ ರಾಜಣ್ಣ (KN Rajanna) ಅವರ ಹೇಳಿಕೆಗಳಿಗೆ ಪ್ರತ್ಯುತ್ತರ ನೀಡಿರುವ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ‘ನೀರೋ’ ಎಂದು ಜರೆದಿದ್ದಾರೆ. ಅಲ್ಲದೇ, ದಾಖಲೆ ಇಟ್ಟುಕೊಂಡೇ ವಿಕ್ರಂ ಸಿಂಹ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಬೇಕಿದ್ದರೆ ದಾಖಲೆಗಳನ್ನು ನಾನೇ ತಂದುಕೊಡುತ್ತೇನೆ. ಆಮೇಲೆ ಕ್ರಮ ಜರುಗಿಸುವ ದಮ್ಮು, ತಾಕತ್ತು ಹಾಗೂ ಸತ್ಯದ ಪರ ನಿಲ್ಲುವ ಗಂಡಸ್ತನ ಇದೆಯಾ? ಎಂದು ಅವರು ಪ್ರಶ್ನಿಸಿದ್ದಾರೆ.

ಕರ್ನಾಟಕದ ‘ನೀರೋ’ಗೆ ರಾಜಕೀಯ ಊಳಿಗ ಮಾಡುತ್ತಿರುವ ಗೃಹಮಂತ್ರಿ ಪರಮೇಶ್ವರ್ ಮತ್ತು ಸಿದ್ದಹಸ್ತರು ಹೇಳಿದ್ದಕ್ಕೆಲ್ಲ ‘ಪರಿಪೂರ್ಣ ಸಹಕಾರ’ ಕೊಡುವ ಹಾಸನ ಜಿಲ್ಲಾ ಉಸ್ತುವಾರಿ ಕೆ.ಎನ್ ರಾಜಣ್ಣ ಅವರು ಸಂಸದ ಪ್ರತಾಪ್ ಸಿಂಹ ಅವರ ಸಹೋದರನ ಪ್ರಕರಣಕ್ಕೆ ಸಂಬಂಧಿಸಿ ನಾನು ಕೊಟ್ಟಿರುವ ಹೇಳಿಕೆಗಳಿಗೆ ನೀಡಿದ ಪ್ರತಿಕ್ರಿಯೆ ಗಮನಿಸಿದ್ದೇನೆ. ಇದನ್ನೂ ಓದಿ: 9 ದಿನಗಳ ಬಳಿಕ ಶ್ರೀಕಾಂತ್‌ ಪೂಜಾರಿ ಜೈಲಿನಿಂದ ಬಿಡುಗಡೆ – ‘ಭಾರತ್‌ ಮಾತಾ ಕೀ ಜೈ’ ಎಂದ ಕಾರ್ಯಕರ್ತರು

Forest Department

ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದಾರೆ ಈ ಸಚಿವರಿಬ್ಬರು. ‘ಸಚಿವಗಿರಿ ಎಂದರೆ ಚಮಚಾಗಿರಿ ಅಲ್ಲ’ ಅನ್ನುವುದನ್ನು ಇವರು ಅರ್ಥ ಮಾಡಿಕೊಳ್ಳಬೇಕು. ತಪ್ಪಿದರೆ, ಸತ್ಯದ ಪರ ನಿಲ್ಲುವ ಗಂಡಸ್ತನ ನಮಗಿಲ್ಲ ಎಂಬುದನ್ನು ಒಪ್ಪಿಕೊಳ್ಳುವ ನೈತಿಕತೆಯನ್ನಾದರೂ ತೋರಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸರ್ಕಾರಿ ಬಸ್‍ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಜೆಡಿಎಸ್ ಕಚೇರಿಯಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ನಾನು ಹೇಳಿದ್ದೆಲ್ಲವೂ ಸತ್ಯ, ಅಪ್ಪಟ ಸತ್ಯ. ದಾಖಲೆ ಇಟ್ಟುಕೊಂಡೇ ಹೇಳಿದ್ದೇನೆ. ಆ ದಾಖಲೆಗಳನ್ನು ತೆಗೆದುಕೊಂಡು ಎಲ್ಲಿಗೆ ಬರಲಿ, ಆಗ ಕ್ರಮ ಜರುಗಿಸುವ ದಮ್ಮು, ತಾಕತ್ತನ್ನು ತೋರುವಿರಾ? ಅಥವಾ ಪಲಾಯನ ಮಾಡುವಿರಾ ಹೇಳಿ? ಬಹಿರಂಗ ಚರ್ಚೆಗೂ ನಾನು ತಯಾರು. ನೀವು ಸಿದ್ಧವೇ? ಎಲ್ಲಿ? ಯಾವಾಗ? ಎಷ್ಟೊತ್ತಿಗೆ? ನೀವು ಫಿಕ್ಸ್ ಮಾಡ್ತೀರಾ? ನಾನು ಫಿಕ್ಸ್ ಮಾಡ್ಲಾ? ಅಲ್ಲಿ ನಾನು ಹೇಳಿದ್ದೇನು ಎಂಬ ಬಗ್ಗೆ ಚರ್ಚಿಸೋಣ ಎಂದು ಸಚಿವರಿಬ್ಬರಿಗೆ ಸವಾಲು ಹಾಕಿದ್ದಾರೆ.

BJP MP Pratap Simhas Brother Vikram Simha Granted Bail

ಸರಿ, ವಿಕ್ರಂಸಿಂಹ ಮರ ಕಡಿದಿದ್ದರೇ FIR ನಲ್ಲಿ ಅವರ ಹೆಸರಿಲ್ಲ, ಯಾಕೆ? ಆ FIR ಪ್ರತಿ ಲಗತ್ತಿಸಿದ್ದೇನೆ. ಅದನ್ನು ನೋಡಿ, ಆಮೇಲೆ ಮಾತನಾಡಿ, ಎಂದು ಎಕ್ಸ್ ಜಾಲತಾಣದಲ್ಲಿ ತಾವು ಮಾಡಿರುವ ಪೋಸ್ಟ್ ಜೊತೆ FIR ಪ್ರತಿಯನ್ನು ಅವರು ಟ್ಯಾಗ್ ಮಾಡಿದ್ದಾರೆ.

ದಲಿತರ ಹೆಸರಿನಲ್ಲಿ ರಾಜಕೀಯ ಬಾಳು ಕಟ್ಟಿಕೊಂಡ ಪರಮೇಶ್ವರ್, ರಾಜಣ್ಣನವರೇ.. ನಿಮ್ಮ ರೋಷಾವೇಷ ಆ ದಲಿತ ಅಧಿಕಾರಿಯನ್ನು ಅಮಾನತು ಮಾಡುವ ಕ್ಷಣದಲ್ಲಿ ಯಾರ ಬೂಟಿನ ಕೆಳಗೆ ಬಿದ್ದು ಹೊರಳಾಡುತ್ತಿತ್ತು? ಒಬ್ಬ ಗಾರ್ಡ್ ಅಮಾನತಿಗೂ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯೇ ಆದೇಶ ಹೊರಡಿಸಬೇಕೆ? ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಘೋಷವಾಕ್ಯ, ಲೋಗೋ ಅನಾವರಣ

ಅಹಿಂದ ಅಹಿಂದ ಎಂದು ಬೆಳಗೆದ್ದರೆ ಭಜನೆ ಮಾಡುವ ನೀವು, ಆ ಅಧಿಕಾರಿಯಿಂದ 50 ಲಕ್ಷ ರೂ. ಕಿತ್ತ ನಿಮ್ಮ ನೀತಿಗೆಟ್ಟ ಹೊಲಸು ಶಾಸಕನ ಬಗ್ಗೆ ನಿಮ್ಮ ಮೌನ ಅಸಹ್ಯ. ನಿಮ್ಮದೇ ಲಜ್ಜೆಗೆಟ್ಟ ಸರ್ಕಾರ ಎಸಗಿದ ತಪ್ಪಿಗೆ ದಲಿತ ಅಧಿಕಾರಿಗೆ ಶಿಕ್ಷೆಯೇ? ಇದೆಲ್ಲದರ ಚಿದಂಬರ ರಹಸ್ಯ ಯಶವಂತಪುರ ಫ್ಲಾಟ್ ನಲ್ಲಿ ಅಡಗಿದೆ. ಯಾವ ತನಿಖೆ ಮಾಡುತ್ತೀರಿ? ಎಂದು ಅವರು ಸಚಿವರನ್ನು ಕೇಳಿದ್ದಾರೆ.

ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ ಇದು. ಅದರ ಹಿಂದಿರುವ ಸಿದ್ಧಸೂತ್ರದಾರನ ಕಳ್ಳಹೆಜ್ಜೆಗಳನ್ನು ನಾನು ಕಾಣದವನೇನೂ ಅಲ್ಲ. ಇಡೀ ವಿಕ್ರಂ ಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದ್ದೇ, ಅವರೇ ಶ್ರೀಮನ್ ಸಿದ್ದರಾಮಣ್ಣ ಎಂದು ಸಿಎಂ ಅವರಿಗೆ ಟಾಂಗ್ ನೀಡಿದ್ದಾರೆ.

TAGGED:Forest Treehd kumaraswamypratap simhasiddaramaiahVikram Simhaಅರಣ್ಯ ಇಲಾಖೆಪ್ರತಾಪ್ ಸಿಂಹವಿಕ್ರಂ ಸಿಂಹಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema News

Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories

You Might Also Like

yellow line metro 1
Bengaluru City

ಈಚೆಗಷ್ಟೇ ಆರಂಭವಾದ ಯೆಲ್ಲೋ ಲೈನ್‌ ಮೆಟ್ರೋ – ರೈಲು ಮಿಸ್‌ ಮಾಡಿಕೊಂಡ ಪ್ರಯಾಣಿಕನಿಗೆ ಬಿತ್ತು ದಂಡ!

Public TV
By Public TV
15 minutes ago
Chitradurga Auto Driver Murder Arrest
Crime

ಆಟೋ ಚಾಲಕನ ಕೊಲೆಗೈದು ಮೂಟೆ ಕಟ್ಟಿ ಎಸೆದ ಪ್ರಕರಣ – ಆರೋಪಿ ಪತ್ನಿ, ಪುತ್ರ, ಪ್ರಿಯಕರ ಅರೆಸ್ಟ್

Public TV
By Public TV
24 minutes ago
Byrati Basavaraj 1
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

Public TV
By Public TV
34 minutes ago
Dharwad Suspend
Dharwad

ಕರ್ತವ್ಯ ಲೋಪ; ಧಾರವಾಡ ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಅಮಾನತು

Public TV
By Public TV
51 minutes ago
ramalinga reddy
Bengaluru City

ಮುಜರಾಯಿ ದೇವಾಲಯಗಳಲ್ಲಿ ಕನ್ನಡ ಶ್ಲೋಕ ಹೇಳಲು ಕಲಿಕೆಗೆ ಸೂಚನೆ: ರಾಮಲಿಂಗಾರೆಡ್ಡಿ

Public TV
By Public TV
60 minutes ago
ramalingareddy
Bengaluru City

ಹೈಕೋರ್ಟ್ ಆದೇಶದಂತೆ ಬೈಕ್ ಟ್ಯಾಕ್ಸಿ ಸೇವೆ ಬಗ್ಗೆ ತೀರ್ಮಾನ – ರಾಮಲಿಂಗಾ ರೆಡ್ಡಿ

Public TV
By Public TV
60 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?