Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಳ್ಳಾರಿಯಲ್ಲಿ ಡಿಸಿಎಂ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ಯಾಕೆ? – ರಾಜ್ಯದಲ್ಲಿರೋದು ಹೆಬ್ಬೆಟ್ಟು ಗೃಹ ಸಚಿವರಾ?: HDK ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಳ್ಳಾರಿಯಲ್ಲಿ ಡಿಸಿಎಂ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ಯಾಕೆ? – ರಾಜ್ಯದಲ್ಲಿರೋದು ಹೆಬ್ಬೆಟ್ಟು ಗೃಹ ಸಚಿವರಾ?: HDK ಪ್ರಶ್ನೆ

Latest

ಬಳ್ಳಾರಿಯಲ್ಲಿ ಡಿಸಿಎಂ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ಯಾಕೆ? – ರಾಜ್ಯದಲ್ಲಿರೋದು ಹೆಬ್ಬೆಟ್ಟು ಗೃಹ ಸಚಿವರಾ?: HDK ಪ್ರಶ್ನೆ

Public TV
Last updated: January 7, 2026 4:58 pm
Public TV
Share
4 Min Read
HD Kumaraswamy
SHARE

ನವದೆಹಲಿ: ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸುವುದಕ್ಕೆ ಡಿಸಿಎಂ ಯಾರು? ಅವರಿಗೆ ಆ ಅಧಿಕಾರ ಯಾರು ಕೊಟ್ಟರು? ರಾಜ್ಯದಲ್ಲಿ ಇರೋದು ಹೆಬ್ಬೆಟ್ಟು ಗೃಹ ಸಚಿವರಾ? ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಆಕ್ರೋಶ ವ್ಯಕ್ತಪಡಿಸಿದರು.

ನವದೆಹಲಿಯ (Newdelhi) ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತಾಡಿದ ಅವರು, ಡಿಸಿಎಂ ಅವರು ಮಂಗಳವಾರ (ಜ.6) ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಅದಕ್ಕೆ ಗೃಹ ಸಚಿವರು ಇಲ್ಲವೇ? ರಾಜ್ಯದಲ್ಲಿ ಇರುವ ಗೃಹ ಸಚಿವರು ಹೆಬ್ಬೆಟ್ಟು ಸಚಿವರಾ? ಎಂದು ಖಾರವಾಗಿ ಪ್ರಶ್ನಿಸಿದರು. ಇದನ್ನೂ ಓದಿ: ಬೆಳಗಾವಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ – ಇಬ್ಬರು ಕಾರ್ಮಿಕರು ಸಾವು, 6 ಮಂದಿ ಗಂಭೀರ

ನನಗೆ ಹಲವು ಮಾಹಿತಿಗಳು, ನೈಜ ಘಟನೆಗಳ ಬಗ್ಗೆ ಮಾಹಿತಿ ಕೊಡುವವರು ಇದ್ದಾರೆ. ಅದರ ಸತ್ಯಾಸತ್ಯತೆ ಪರಿಶೀಲಿಸಿ ಆ ಬಳಿಕ ನಾನು ಮಾಧ್ಯಮಗಳಿಗೆ ವಿವರಿಸಿದ್ದೇನೆ. ಜನತೆಗೆ ಸತ್ಯ ತಿಳಿಯಬೇಕಲ್ಲವೇ? ಡಿಸಿಎಂ ಅವರು ಯಾವ ಅಧಿಕಾರದ ಮೇಲೆ ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ? ಗೃಹ ಇಲಾಖೆಯಲ್ಲಿ ಇವರ ಹಸ್ತಕ್ಷೇಪ ಯಾಕೆ? ಡಿಸಿಎಂ ಎಂದರೆ ಅವರು ಮಂತ್ರಿ ಅಷ್ಟೇ. ಕಾಂಗ್ರೆಸ್ ಸತ್ಯಶೋಧನಾ ಸಮಿತಿಗೆ ಅಧಿಕಾರಿಗಳು ಯಾವ ಮಾಹಿತಿ ಕೊಡುತ್ತಾರೆ? ಕಾರ್ಯಕರ್ತರು, ಕಾಂಗ್ರೆಸ್ ನಾಯಕರು ಘಟನೆಗೆ ಕಾರಣರಾದ ಶಾಸಕರ ವಿರುದ್ಧವೇ ಸತ್ಯಶೋಧನೆ ಸಮಿತಿಯ ಮುಂದೆ ದೂರು ನೀಡಿದ್ದಾರೆ. ಹಾಗಾದರೆ ನಿಮ್ಮ ತನಿಖೆಯ ಹಣೆಬರಹ ಏನು ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ಪ್ರಕರಣ ಮುಚ್ಚಿ ಹಾಕಲು ಪ್ರಯತ್ನ:
ಬಳ್ಳಾರಿ ನಗರದಲ್ಲಿ ನಡೆದ ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಸರ್ಕಾರ ತರಾತುರಿಯಲ್ಲಿ ಕೆಲಸ ಮಾಡುತ್ತಿದೆ. ಕೇವಲ ಬ್ಯಾನರ್ ಕಟ್ಟುವ ವಿಚಾರಕ್ಕೆ ಬೀದಿಯಲ್ಲಿ ಗುಂಡು ಹಾರಿಸ್ತಾರಾ? ಮರಣೋತ್ತರ ಪರೀಕ್ಷೆ ನಡೆದ ನಂತರ ಕೊಲೆಯಾದ ಕಾರ್ಯಕರ್ತನ ಮೃತದೇಹವನ್ನು ತರಾತುರಿಯಲ್ಲಿ ಸುಟ್ಟು ಹಾಕಿದ್ದು ಯಾಕೆ? ಕುಟುಂಬದವರಿಗೆ ಅಂತಿಮ ವಿಧಿವಿಧಾನ ನಡೆಸುವುದಕ್ಕೆ ಅವಕಾಶವನ್ನೂ ನೀಡದೇ ಸುಟ್ಟಿದ್ದು ಯಾಕೆ? ಇದಕ್ಕೆಲ್ಲಾ ಸರ್ಕಾರ ಉತ್ತರ ಕೊಡಬೇಕಲ್ಲವೇ? ಎಂದು ಒತ್ತಾಯಿಸಿದರು.

ಸತ್ಯಶೋಧನಾ ಸಮಿತಿ ಸತ್ಯ ಹೇಳಲಿ:
ಬಳ್ಳಾರಿಯಲ್ಲಿ ನಡೆದದ್ದು ಅಹಿತರ ಘಟನೆ, ಸಾವು ಪ್ರಕರಣ ಎಲ್ಲರಿಗೂ ನೋವು ತರುತ್ತದೆ. ಕಳೆದ ಒಂದು ವಾರದಿಂದ ಹಲವು ನಾಯಕರು ಬಳ್ಳಾರಿಗೆ ಭೇಟಿ ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರು ಸತ್ಯಶೋಧನೆ ಮಾಡುತ್ತೇವೆ ಎಂದು ಹೋಗಿದ್ದರು. ಅಲ್ಲಿ ಅವರೇನು ಸತ್ಯ ಶೋಧನೆ ಮಾಡಿದರು ಎಂಬುದನ್ನು ಜನರ ಮುಂದೆ ಹೇಳಲಿ. ಯಾಕೆಂದರೆ ಕಾಂಗ್ರೆಸ್ಸಿಗರು ಸತ್ಯ ಬಿಟ್ಟು ಬೇರೇನು ಹೇಳುವುದಿಲ್ಲ. ಹಾಗಿದ್ದ ಮೇಲೆ ಈ ಸಮಿತಿ ಸತ್ಯವನ್ನೇ ಹೇಳಲಿ ಎಂದು ವ್ಯಂಗ್ಯವಾಡಿದರು.

ನನ್ನ ಮತ್ತು ಜನಾರ್ದನ ರೆಡ್ಡಿ ನಡುವೆ ನಡೆದ ಗಲಾಟೆ ಹಳೆಯ ಕಥೆ. ಅದನ್ನು ಈಗ ಮುಂದೆ ತಂದು ಅವರು ಏನು ಮಾಡಲು ಸಾಧ್ಯ? ನಾನು ಯಾವುದೋ ರಾಗದ್ವೇಷ ಇಲ್ಲದೇ ಮಾಧ್ಯಮಗಳ ಮುಂದೆ ಸತ್ಯ ಹೇಳಿದ್ದೇನೆ. ಕಾಂಗ್ರೆಸ್ ಜೊತೆ ಕೂಡ ಸರ್ಕಾರ ಮಾಡಿದ್ದೇನೆ. ಆಗ ಬಂಡೆ ತರ ನಿಂತಿದ್ದು ಇವರೇ ತಾನೇ. ಎಲ್ಲರೂ ಜೋಡೆತ್ತು ಎಂದರು. ಆಮೇಲೆ ಆಗಿದ್ದು ಏನು? ಬೆನ್ನಿಗೆ ಚೂರಿ ಹಾಕಿ ವಿಶ್ವಾಸ ದ್ರೋಹ ಎಸಗಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದನ್ನೂ ಓದಿ: ರೆಕಾರ್ಡ್ ಮಾಡಿ ಸಿದ್ದರಾಮಯ್ಯ ನಾಟೌಟ್ – ವಾಟ್ ನೆಕ್ಸ್ಟ್‌?

ಮೊದಲು ಗುರುಮಠಕಲ್ ಕ್ಷೇತ್ರದತ್ತ ನೋಡಿ: ಪ್ರಿಯಾಂಕ್ ಖರ್ಗೆಗೆ ತಿರುಗೇಟು
ತಮ್ಮ ಹೇಳಿಕೆ ಬಗ್ಗೆ ಲಘುವಾಗಿ ಮಾತಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವರು, ಮೊದಲು ಗುರುಮಠಕಲ್ ಕ್ಷೇತ್ರಕ್ಕೆ ನಿಮ್ಮ ಹಾಗೂ ನಿಮ್ಮ ತಂದೆ ಕೊಡುಗೆ ಏನು ಅಂತ ಹೇಳಿ. ಕಲ್ಯಾಣ ಕರ್ನಾಟಕ ಬಿಡಿ, ನಿಮ್ಮ ಕ್ಷೇತ್ರ ನೋಡಿದರೆ ನೀವು ಮಾಡಿದ ಅಭಿವೃದ್ಧಿ ಏನು, ಎಂತದ್ದು ಎಂಬುದು ಗೊತ್ತಾಗುತ್ತದೆ. ಬಳಕೆಯಲ್ಲಿ ಯಾವ ತನಿಖೆ ನಡೆಸ್ತಿರಿ? ಪೋಸ್ಟ್ ಮಾರ್ಟಂಗೆ ಇಬ್ಬರು ವೈದ್ಯರನ್ನು ಕರೆಸಿದ್ದು ಯಾಕೆ? ಇದು ಇಲ್ಲಿರುವ ಪ್ರಶ್ನೆ? ಹಾಲಿ ಒಬ್ಬ ವೈದ್ಯರು ಪೋಸ್ಟ್ ಮಾರ್ಟಂ ಮಾಡುತ್ತಿದ್ದರೆ ಎರಡನೇ ವೈದ್ಯರನ್ನು ಪೂಜೆ ಮಾಡಲು ಕರೆಸಿದಿರಾ? ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಈಗ ನಡೆಯುತ್ತಿರುವುದು ಡಿಜಿಟಲ್ ಯುಗ. ಕುಳಿತಿರುವ ಕಡೆ ಮಾಹಿತಿ ಪಡೆಯಬಹುದು. ಈ ಪ್ರಕರಣದ ಸರಿಯಾದ ತನಿಖೆ ನಡೆದರೆ ಯಾರ ಯಾರ ತಲೆ ಉರುಳುತ್ತೋ ಗೊತ್ತಿಲ್ಲ ಎಂದು ಪೊಲೀಸ್ ಅಧಿಕಾರಿಗಳೇ ಮಾತಾಡುತ್ತಿದ್ದಾರೆ. ನಾನು ಗೊತ್ತಿದ್ದೇ ಮಾತನಾಡಿದ್ದೇನೆ. ನಾನು ನಾಲಿಗೆ ತೀಟೆ ತೀರಿಸಿಕೊಳ್ಳಲು ನಾನು ಮಾತಾಡಲ್ಲ. ಕರ್ನಾಟಕವನ್ನು ಜಂಗಲ್ ರಾಜ್ಯ ಮಾಡಲಾಗುತ್ತಿದೆ. ಇದು ಅತ್ಯಂತ ಗಂಭೀರ ಪ್ರಕರಣ. ಮುಖ್ಯಮಂತ್ರಿ ಈ ಬಗ್ಗೆ ಬಾಯಿ ಬಿಡುತ್ತಿಲ್ಲ ಯಾಕೆ? ನಿಮ್ಮ ಶಾಸಕರೇ ಕೊಲೆ ಮಾಡಿಸಿದರೂ ಯಾರು ಕೇಳುವಂತಿಲ್ಲ ಎನ್ನುವಂತೆ ಆಗಿದೆ. ನನ್ನ ಬಗ್ಗೆ ನೀವು ಲಘುವಾಗಿ ಮಾತಾಡುವುದು ಬೇಡ ಅಂಥ ನಿಮ್ಮ ಗೃಹ ಸಚಿವರಿಗೆ, ಇನ್ನೊಬ್ಬರಿಗೆ ಹೇಳಿ ಎಂದು ಕಿಡಿಕಾರಿದರು.

ಗೃಹ ಸಚಿವ ಪರಮೇಶ್ವರ್ ಅವರಿಗೆ ತರಾಟೆಗೆ ತೆಗೆದುಕೊಂಡ ಸಚಿವರು, ನಕಲಿ ಶಾಮನ ಮಾತು ನಿಲ್ಲಿಸಿ ಗೃಹ ಸಚಿವರೇ.. ಮೊದಲು ಬಳ್ಳಾರಿ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಿ. ಯಾರ ಯಾರ ತಲೆ ಉರುಳುತ್ತದೆ ಎನ್ನುವುದು ನಿಮಗೆ ಗೊತ್ತಾಗುತ್ತದೆ ಎಂದು ಟಾಂಗ್ ಕೊಟ್ಟರು.

ಬಳ್ಳಾರಿ ಬಿಮ್ಸ್ ನಿರ್ದೇಶಕರೇ ಹೇಳುವಂತೆ ಡಾ. ಯೋಗೀಶ್ ಎಂಬುವರು ಮೊದಲು ಮರಣೋತ್ತರ ಪರೀಕ್ಷೆ ಶುರು ಮಾಡಿದರು. ಅವರ ಪರೀಕ್ಷೆ ತಡವಾಯಿತು ಎಂದು ಇನ್ನೊಬ್ಬ ವೈದ್ಯ ಡಾ.ಚೇತನ್ ಎನ್ನುವರನ್ನು ಕರೆಸಿದ್ದಾರೆ. ಆ ವೈದ್ಯರನ್ನು ಕರೆಸಿದ್ದು ಯಾಕೆ? ಯಾರ ಆದೇಶದಂತೆ ಅವರನ್ನು ಕರೆಸಲಾಯಿತು? ಇತಿಹಾಸದಲ್ಲಿ ಮೊದಲ ಬಾರಿಗೆ ಮರಣೋತ್ತರ ಪರೀಕ್ಷೆಗೆ ಇಬ್ಬರು ವೈದ್ಯರನ್ನು ಕರೆಸಿ ಮಾಡಿಸಿದ್ದಾರೆ. ಇದು ಯಾಕಾಯಿತು? ಯಾರು ಒತ್ತಡ ಹೇರಿದರು? ಯಾರನ್ನು ರಕ್ಷಣೆ ಮಾಡಲಿಕ್ಕೆ ಇದೆಲ್ಲವನ್ನೂ ಮಾಡಿದಿರಿ ಎಂಬುದನ್ನು ಜನರಿಗೆ ಹೇಳಬೇಕಲ್ಲವೇ ಎಂದು ಡಿಸಿಎಂ ಡಿಕೆಶಿ ಮಿಸ್ ಗೈಡ್ ಹೇಳಿಕೆಗೆ ತಿರುಗೇಟು ಕೊಟ್ಟರು.

ನಾನು ಯಾವುದೇ ವಿಷಯವನ್ನು ದಾಖಲೆಗಳು ಇಲ್ಲದೇ ಮಾತಾಡಲ್ಲ. ನೀವೆಲ್ಲಾ ಯಾರನ್ನು ತಪ್ಪಿತಸ್ಥರನ್ನಾಗಿ ಮಾಡಲು ಹೊರಟಿದ್ದೀರಿ ಎನ್ನುವುದು ಗೊತ್ತಿದೆ. ಜನಾರ್ದನ ರೆಡ್ಡಿ ಮನೆ ಮೇಲೆ ದಾಳಿ ನಡೆಸುತ್ತಿದ್ದ ಗುಂಪನ್ನು ಕೇವಲ ಐದು ನಿಮಿಷದಲ್ಲಿ ಚದುರಿಸಬಹುದಿತ್ತು. ಯಾಕೆ ಚದುರಿಸಲಿಲ್ಲ? ಪೊಲೀಸರ ಕೈ ಯಾರು ಕಟ್ಟಿ ಹಾಕಿದರು? ಖಾಸಗಿ ಗನ್‌ಮ್ಯಾನ್‌ಗಳು ಮನಸೋ ಇಚ್ಚೆ ಫೈರಿಂಗ್ ಮಾಡುತ್ತಿದ್ದರೂ ಪೊಲೀಸರು ಸುಮ್ಮನೆ ಇದ್ದರು ಯಾಕೆ? ಎಂದು ಪ್ರಶ್ನೆ ಮಾಡಿದರು.ಇದನ್ನೂ ಓದಿ: ಬಳ್ಳಾರಿ ಗಲಭೆಗೆ ಭರತ್ ರೆಡ್ಡಿ, ಸತೀಶ್ ರೆಡ್ಡಿ ಕಾರಣ – ಕೂಡಲೇ ಬಂಧಿಸಿ: ಶ್ರೀರಾಮುಲು ಆಗ್ರಹ

TAGGED:Ballarycongresshd kumaraswamynewdelhiಕಾಂಗ್ರೆಸ್ಜೆಡಿಎಸ್ನವದೆಹಲಿಬಳ್ಳಾರಿ ಗಲಾಟೆಬಿಜೆಪಿಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post

You Might Also Like

ajit pawar plane crash flight attendant
Latest

ಅಪ್ಪ.. ನಾನು ಅಜಿತ್‌ ಪವಾರ್‌ ಅವ್ರ ವಿಮಾನದಲ್ಲಿ ಹೋಗ್ತಿದ್ದೇನೆ, ನಾಳೆ ಊರಿಗೆ ಬರ್ತೀನಿ: ತಂದೆ ಜೊತೆ ಫ್ಲೈಟ್‌ ಅಟೆಂಡೆಂಟ್‌ ಕೊನೆ ಮಾತು

Public TV
By Public TV
22 minutes ago
Tumakuru Siddaganga Mutt Drinking Water
Districts

ಸಿದ್ದಗಂಗಾ ಮಠಕ್ಕೆ ಎದುರಾಗುತ್ತಾ ನೀರಿನ ಹಾಹಾಕಾರ? – 10 ಸಾವಿರ ಮಕ್ಕಳು, ಭಕ್ತಾದಿಗಳಿಗೆ ನೀರು ನೀಡಲು ಲೆಕ್ಕಾಚಾರ

Public TV
By Public TV
49 minutes ago
Colombian Lawmaker
Latest

ಕೊಲಂಬಿಯಾದ ಗಡಿಯಲ್ಲಿ ವಿಮಾನ ಪತನ; ಸಂಸದ ಸೇರಿ 15 ಮಂದಿ ದುರ್ಮರಣ

Public TV
By Public TV
2 hours ago
Bengaluru Poster Removed From BMTC KSRTC
Bengaluru City

ತಂಬಾಕು ಜಾಹೀರಾತುಗಳ ವಿರುದ್ಧ ಕನ್ನಡಿಗರ ಸಮರ – ಸಾರಿಗೆ ಬಸ್‌ಗಳ ಮೇಲೆ ಅಂಟಿಸಿದ್ದ ಪೋಸ್ಟರ್ ತೆರವು

Public TV
By Public TV
2 hours ago
siddaramaiah 1 3
Bengaluru City

Video | ನರೇಗಾ ಬಗ್ಗೆ ಚರ್ಚೆಗಾಗಿ ವಿಧಾನಮಂಡಲ ಅಧಿವೇಶನ 2 ದಿನ ವಿಸ್ತರಣೆ – ಸಿಎಂ

Public TV
By Public TV
10 hours ago
KN RAJANNA
Bengaluru City

ಅಪೆಕ್ಸ್‌ ಬ್ಯಾಂಕ್‌ ಚುನಾವಣಾ ಸಭೆ; ಸಿಎಂ ಎದುರೇ ಕೆ.ಎನ್‌ ರಾಜಣ್ಣ – ಸಚಿವ ಸುಧಾಕರ್ ನಡ್ವೆ ಜಟಾಪಟಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?