Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರ ಒಂದೇ ವರ್ಷದಲ್ಲಿ ನೀರು ಕೊಟ್ಟರೆ ತಲೆ ಬೋಳಿಸಿಕೊಳ್ತೀನಿ ಎಂದಿದ್ದೆ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರ ಒಂದೇ ವರ್ಷದಲ್ಲಿ ನೀರು ಕೊಟ್ಟರೆ ತಲೆ ಬೋಳಿಸಿಕೊಳ್ತೀನಿ ಎಂದಿದ್ದೆ: ಎಚ್‍ಡಿಕೆ

Bengaluru City

ಸರ್ಕಾರ ಒಂದೇ ವರ್ಷದಲ್ಲಿ ನೀರು ಕೊಟ್ಟರೆ ತಲೆ ಬೋಳಿಸಿಕೊಳ್ತೀನಿ ಎಂದಿದ್ದೆ: ಎಚ್‍ಡಿಕೆ

Public TV
Last updated: March 9, 2022 7:06 pm
Public TV
Share
3 Min Read
HD KUMARSWAMY
SHARE

ಬೆಂಗಳೂರು: ಎತ್ತಿನಹೊಳೆ ಯೋಜನೆಯ ಭಾಗವಾಗಿ ಚಿಕ್ಕಬಳ್ಳಾಪುರದಲ್ಲಿ ಅಡಿಗಲ್ಲು ಹಾಕಿದಾಗ ಒಂದೇ ವರ್ಷದಲ್ಲಿ ನೀರು ಕೊದಲಾಗುವುದು ಎಂದು ಸರ್ಕಾರ ಹೇಳಿತ್ತು. ಅವತ್ತೇ ನಾನು ಕೋಲಾರದಲ್ಲಿ ಹೇಳಿದ್ದೆ, ಒಂದೇ ವರ್ಷದಲ್ಲಿ ನೀರು ಕೊಟ್ಟರೆ ತಲೆ ಬೋಳಿಸಿಕೊಳ್ತೀನಿ ಎಂದಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

SESSION SIDDARAMAIAIH

ವಿಧಾನಸಭೆಯಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚಿಕ್ಕಬಳ್ಳಾಪುರದಲ್ಲಿ ಅಡಿಗಲ್ಲು ಹಾಕಿದಾಗ ಒಂದೇ ವರ್ಷದಲ್ಲಿ ನೀರು ಕೊದಲಾಗುವುದು ಎಂದು ಸರ್ಕಾರ ಹೇಳಿತ್ತು. ಅವತ್ತೇ ನಾನು ಕೋಲಾರದಲ್ಲಿ ಹೇಳಿದ್ದೆ, ಒಂದೇ ವರ್ಷದಲ್ಲಿ ನೀರು ಕೊಟ್ಟರೆ ತಲೆ ಬೋಳಿಸಿಕೊಳ್ತೀನಿ ಅಂತ. ಆಗ ನನಗೆ ಸ್ವಲ್ಪ ಕೂದಲಿತ್ತು. ಹೇ.. ಅವನಿಗೆ ಕೂದಲೇ ಇಲ್ಲ, ಅವನೆಲ್ಲಿ ತಲೆ ಬೋಳಿಸ್ಕೋತಾನೆ ಅಂದಿದ್ರು, ನನಗೆ ನೆನಪಿದೆ ಎಂದು ಎತ್ತಿನಹೊಳೆಯ ಹಣೆಬರಹವನ್ನು ಸದನದ ಗಮನಕ್ಕೆ ತಂದರು. ಎತ್ತಿನಹೊಳೆ ಯೋಜನೆಯ ಎಲ್ಲ ವಿವರಗಳನ್ನು, ಕಷ್ಟ ನಷ್ಟಗಳನ್ನು ಸವಿಸ್ತಾರವಾಗಿ ಹೇಳಿದರು. ಇದನ್ನೂ ಓದಿ: ಕನ್ನಡದಲ್ಲಿ ಮಾತಾಡೋಕೆ ಹೇಳಿ, ನಮಗೆ ಏನೂ ಅರ್ಥ ಆಗ್ತಿಲ್ಲ: ಪರಿಷತ್‌ ಕಲಾಪದಲ್ಲಿ ಗಲಾಟೆ

ettina hole 1

ಪ್ರಸಕ್ತ ಬಜೆಟ್‍ನಲ್ಲಿ ಈ ಯೋಜನೆಗೆ 3,000 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಹಾಗೆ ನೋಡಿದರೆ ಮೊದಲಿಗೆ ಇವೆರಡೂ ಜಿಲ್ಲೆಗಳಿಗೆ ನೀರು ತರುವ ನಿರ್ಧಾರ ಮಾಡಿದ್ದು 2011-12ರಲ್ಲಿ. ಆಗ ಜಲ ಸಂಪನ್ಮೂಲ ಸಚಿವರಾಗಿದ್ದವರು ಈಗಿನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು. ಆದರೆ ಎತ್ತಿನಹೊಳೆಯ ನೀರಿನ ಮೂಲ ಯಾವುದು? ನೀರಿನ ಲಭ್ಯತೆಯ ಖಾತರಿ ಇಲ್ಲದೆ ಲೋಕಸಭೆ ಚುನಾವಣೆ ಘೋಷಣೆ ಆದಾಗ ಚಿಕ್ಕಬಳ್ಳಾಪುರದಲ್ಲಿ ತರಾತುರಿಯಲ್ಲಿ ಕಾರ್ಯಕ್ರಮ ಮಾಡಿ ಶಂಕುಸ್ಥಾಪನೆ ಮಾಡಲಾಯಿತು. ಈಗ ನೀರು ಯಾವಾಗ ಬರುತ್ತದೆ ಎಂದು ಅವರು ಕೇಳಿದರು.

SESSION 1

ನೇತ್ರಾವತಿ ನದಿಯಿಂದ ಮೂರು ಹಂತಗಳಲ್ಲಿ ನೀರನ್ನು ಬರಪೀಡಿತ ಜಿಲ್ಲೆಗಳಿಗೆ 24 ಟಿಎಂಸಿ ನೀರನ್ನು ಹರಿಸುವ ಈ ಯೋಜನೆಗೆ 2013ರಲ್ಲಿ 8,323 ಕೋಟಿ, 2014ರಲ್ಲಿ 12,912ಕೋಟಿಗೆ ಎಸ್ಟಿಮೇಟ್ ಮಾಡಲಾಯಿತು. ಆದರೆ ಹತ್ತು ವರ್ಷ ಆದರೂ ಯೋಜನೆ ಇನ್ನೂ ಆಗುತ್ತಲೇ ಇದೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಇದನ್ನೂ ಓದಿ: ವಿಧಾನಸಭೆ ಕಲಾಪಕ್ಕೆ ಸಚಿವರು ಗೈರು – ಸ್ಪೀಕರ್ ಗರಂ

Ettinahole Project 5

ಇಷ್ಟು ದಿನವಾದರೂ ಕೇವಲ ಲೈನ್ ಎಸ್ಟಿಮೇಟ್ ಮೂಲಕವೇ ಕಾಮಗಾರಿ ಮಾಡಲಾಗುತ್ತಿದೆ. ಇಷ್ಟಾದರೂ ಇಂದು ಹೊಸದಾಗಿ 3000 ಕೋಟಿ ಹಣ ಇಟ್ಟಿದ್ದು, ಅದು ಬಳಕೆ ಆಗಬೇಕು ಎನ್ನುವುದು ನನ್ನ ಆಶಯ ಎಂದರು ಅವರು.

ತುಮಕೂರಿನ ದೇವರಾಯನ ದುರ್ಗದಲ್ಲಿ 10 ಟಿಎಂಸಿ ನೀರು ಸಂಗ್ರಹಿಸಲು ಜಲಾಶಯ ಕಟ್ಟಬೇಕು ಅಂತ ಹೊರಟ ಸರ್ಕಾರ, ಕ್ರಮೇಣ ಅದನ್ನು ಕೈಬಿಟ್ಟು ಮಧುಗಿರಿಯ ಬೈರಗೊಂಡ್ಲು ಬಳಿ 5.7 ಟಿಎಂಸಿ ಜಲಾಶಯ ಕಟ್ಟಲು ಹೊರಡುತ್ತಾರೆ. ಆದರೆ, ಅಲ್ಲಿ ಅರಣ್ಯ ಪ್ರದೇಶ ಮುಳುಗಡೆ ಆಗುತ್ತದೆ ಎನ್ನುವ ಕಾರಣಕ್ಕೆ ಆ ಜಲಾಶಯದ ನೀರು ಸಂಗ್ರಹಣೆ ಪ್ರಮಾಣವನ್ನು ಕಡಿಮೆ ಮಾಡಲು ತೀರ್ಮಾನಿಸಲಾಗಿದೆ. ಹೀಗಾದರೆ ಹೇಗೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಅಲ್ಲಿ ಭೂ ಸ್ವಾಧೀನ ದೊಡ್ಡ ಬಿಕ್ಕಟ್ಟಾಗಿದೆ. ದೊಡ್ಡಬಳ್ಳಾಪುರದಲ್ಲಿ ಏಕೆರೆಗೆ 32 ಲಕ್ಷ ಬೇಕೆಂದು ರೈತರು ಕೇಳುತ್ತಿದ್ದಾರೆ. ಕೊರಟಗೆರೆಗೆ 8 ಲಕ್ಷ ಗೈಡ್ ಲೈನ್ಸ್ ವ್ಯಾಲ್ಯೂ ನಿಗದಿ ಮಾಡಿದ್ದು, ಅವರೂ ಈಗ 32 ಲಕ್ಷ ರೂ. ಕೇಳುತ್ತಿದ್ದಾರೆ. ಹೀಗೆ ವೆಚ್ಚ ಏರುತ್ತಾ ಹೋಗಿ ಈಗ 25ಸಾವಿರ ಕೋಟಿ ಮರು ಅಂದಾಜಿಗೆ ಬಂದು ನಿಂತಿದೆ ಎಂದು ಯೋಜನೆಯ ಕಗ್ಗಂಟುಗಳನ್ನು ಮಾಜಿ ಮುಖ್ಯಮಂತ್ರಿಗಳು ಬಿಡಿಸಿಟ್ಟರು. ಇದನ್ನೂ ಓದಿ: ಸದನ ಬೀಗರ ಮನೆಯಲ್ಲ – ಸಚಿವರ ಗೈರಿಗೆ ಸಭಾಪತಿಗಳು ಗರಂ

Ettinahole Project 8

ಓಪನ್ ಕೆನಾಲ್ ಗ್ರಾವಿಟಿಯಲ್ಲಿ, 15 ಡೆಲಿವರಿ ಪಾಯಿಂಟ್ ಮೂಲಕ ತುಮಕೂರು, ರಾಮನಗರ, ಚಿಕ್ಕಮಗಳೂರು, ಹಾಸನ ಜಿಲ್ಲೆಗೆ ನೀರು ಕೊಡೋದಕ್ಕೆ ಪಾಯಿಂಟ್‍ಗಳನ್ನು ಮಾಡಿದ್ದಾರೆ. ಇಷ್ಟಕ್ಕೆ 14 ಟಿಎಂಸಿ ನೀರು ಅಗತ್ಯ. ಆದರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ 10 ಟಿಎಂಸಿ ನೀರು ಬೇಕು. ಅಷ್ಟು ನೀರನ್ನು ಎಲ್ಲಿಂದ ತರುತ್ತಾರೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

TAGGED:Basvarj Bommaihd kumaraswamykarnataka assembly sessionyettinahole projectಎಚ್‍ಡಿ ಕುಮಾರಸ್ವಾಮಿಎತ್ತಿನಹೊಳೆಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿಯಿಂದ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Mantralaya Hundi Counting
Districts

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 2.48 ಕೋಟಿ ರೂ. ಕಾಣಿಕೆ ಸಂಗ್ರಹ

Public TV
By Public TV
27 minutes ago
Census
Bengaluru City

ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ

Public TV
By Public TV
46 minutes ago
Raichur
Districts

ರಾಯಚೂರಿನಲ್ಲಿ ರೊಟ್ಟಿ ಕೇಂದ್ರಗಳಿಗೆ ತಟ್ಟಿದ ಗ್ಯಾಸ್ ಸಿಲಿಂಡರ್ ಬಿಸಿ

Public TV
By Public TV
1 hour ago
Tourist Killed 6 Others Injured In Terrorist Attack In Jammu and Kashmir Pahalgam
Latest

ಆಪರೇಷನ್ ಅರಹಮಾ | ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಪಾಕ್‌ ಉಗ್ರನ ಹತ್ಯೆ

Public TV
By Public TV
2 hours ago
Shell Petrol Bunk
Bengaluru City

ಮತ್ತೆ ಶಾಕ್ ಕೊಟ್ಟ ಶೆಲ್ ಪೆಟ್ರೋಲ್ ಬಂಕ್ – ಪೆಟ್ರೋಲ್ 7 ರೂ., ಡೀಸೆಲ್ 25 ರೂ. ಹೆಚ್ಚಳ

Public TV
By Public TV
2 hours ago
Train Ticket Cancel Refund Policy
Latest

ರೈಲು ಹೊರಡುವ 8 ಗಂಟೆಯೊಳಗೆ ಟಿಕೆಟ್‌ ರದ್ದು ಮಾಡಿದ್ರೆ ಸಿಗಲ್ಲ ಹಣ – ಇಂದಿನಿಂದ ಹೊಸ ನಿಯಮ ಜಾರಿ, ಏನೇನು ಬದಲಾವಣೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?