Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರ ಕೂಡಲೇ ಶಾಲೆ, ಕಾಲೇಜುಗಳಿಗೆ 15-20 ದಿನ ರಜೆ ಘೋಷಿಸಬೇಕು: ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸರ್ಕಾರ ಕೂಡಲೇ ಶಾಲೆ, ಕಾಲೇಜುಗಳಿಗೆ 15-20 ದಿನ ರಜೆ ಘೋಷಿಸಬೇಕು: ಹೆಚ್‍ಡಿಕೆ

Districts

ಸರ್ಕಾರ ಕೂಡಲೇ ಶಾಲೆ, ಕಾಲೇಜುಗಳಿಗೆ 15-20 ದಿನ ರಜೆ ಘೋಷಿಸಬೇಕು: ಹೆಚ್‍ಡಿಕೆ

Public TV
Last updated: January 20, 2022 7:47 pm
Public TV
Share
3 Min Read
HDK
SHARE

– ವೀಕೆಂಡ್ ಕರ್ಫ್ಯೂ ಬಗ್ಗೆ ಬಿಜೆಪಿ ನಾಯಕರಲ್ಲಿ ಗೊಂದಲ ನಿಂತಿಲ್ಲ

ಹಾಸನ: ‘ಶಾಲೆ, ಕಾಲೇಜು ಹಾಗೂ ಹಾಸ್ಟೆಲ್’ಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬರುತ್ತಿದ್ದು, ಸರ್ಕಾರ ಕೂಡಲೇ ಶಾಲಾ-ಕಾಲೇಜುಗಳಿಗೆ ಕೊನೆಪಕ್ಷ 15 ರಿಂದ 20 ದಿನ ರಜೆ ಘೋಷಣೆ ಮಾಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ.

ಚನ್ನಪಟ್ಟಣದ ಹೊಂಗನೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಸತಿ ಶಾಲೆಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಸೋಂಕಿತರಾಗಿದ್ದಾರೆ. ಹೀಗಾಗಿ ಇಂಥ ಶಾಲೆಗಳನ್ನು ತಕ್ಷಣವೇ ಬಂದ್ ಮಾಡಿಸಬೇಕು ಎಂದರು. ಇದನ್ನೂ ಓದಿ:  ಜಾರ್ಖಂಡ್ ಮೂಲದ ಮೂವರು ಸೋಂಕಿತರು ಮಡಿಕೇರಿಯಿಂದ ಪರಾರಿ

corona hubballi school

ತಜ್ಞರಲ್ಲಿ ಕೆಲವರು ಶಾಲೆಗಳನ್ನು ತೆರೆಯುವಂತೆ ಘೋಷಿಸುವುದಕ್ಕೆ ಪರ-ವಿರೋಧ ಇದೆ ಎಂಬುದರ ಕುರಿತು ಮಾತನಾಡಿದ ಅವರು, ತಜ್ಞರು ಪರ ಅಥವಾ ವಿರೋಧ ಎನ್ನುವ ಮಾತು ಬೇರೆ. ಆದರೆ, ಸರ್ಕಾರದ ಮುಂದೆ ಕೋವಿಡ್ ಸ್ಥಿತಿಗತಿಗಳ ಬಗ್ಗೆ ವಾಸ್ತವಾಂಶಗಳಿವೆ. ಆ ಮಾಹಿತಿಗಳ ಆಧಾರದ ಮೇಲೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಮೊನ್ನೆಯಷ್ಟೇ ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ 163 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ. ತುಮಕೂರಿನಲ್ಲಿ ಒಂದೇ ಕಾಲೇಜಿನ 600 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ಈ ಎಲ್ಲ ಅಂಕಿ ಅಂಶಗಳೇ ಎಲ್ಲವನ್ನೂ ಹೇಳುತ್ತಿವೆ ಎಂದು ವಿವರಿಸಿದರು.

ತಜ್ಞರ ವರದಿಗಿಂತ ಸರ್ಕಾರದ ಜವಾಬ್ದಾರಿ ಹೆಚ್ಚು. ಸರ್ಕಾರವು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕೆಲಸ ಮಾಡಲಿ. ಮಕ್ಕಳು, ಪೋಷಕರು ಆತಂಕಕ್ಕೆ ಒಳಗಾಗುವುದಕ್ಕೆ ಅವಕಾಶ ನೀಡಬಾರದು. ಸರ್ಕಾರ ಈ ನಿಟ್ಟಿನಲ್ಲಿ ಚಿಂತಸಲಿ ಎಂದು ಸಲಹೆ ಮಾಡಿದರು.

BJP Flag Final 6

ಬಿಜೆಪಿ ನಾಯಕರಲ್ಲೇ ಗೊಂದಲವಿದೆ!
ವೀಕೆಂಡ್ ಕರ್ಫ್ಯೂ ವಿಚಾರದಲ್ಲಿ ಎಲ್ಲ ಕಡೆ ಗೊಂದಲವಿದೆ. ಅದರಲ್ಲೂ ಬಿಜೆಪಿ ಪಕ್ಷದ ನಾಯಕರಲ್ಲೇ ಗೊಂದಲಗಳಿವೆ. ಮೊದಲು ಇದನ್ನು ಅವರು ಸರಿಪಡಿಸಿಕೊಳ್ಳಲಿ ಎಂದು ವ್ಯಂಗ್ಯವಾಡಿದರು.

ಕೂಲಿ ಕಾರ್ಮಿಕರು, ಸಣ್ಣಪುಟ್ಟ ವ್ಯಾಪಾರಸ್ಥರು ಕಷ್ಟದಲ್ಲಿದ್ದಾರೆ. ವೀಕೆಂಡ್ ಕರ್ಫ್ಯೂನಿಂದ ಅವರಿಗೆ ಜೀವನ ನಿರ್ವಹಣೆ ಕಷ್ಟ. ದಿನನಿತ್ಯದ ಆದಾಯದಲ್ಲಿ ಕುಟುಂಬ ನಿರ್ವಹಿಸಬೇಕಿದೆ. ಇಂತಹ ಕುಟುಂಬಗಳ ಬದುಕು ಕಟ್ಟಿ ಕೊಡಬೇಕು. ಬದುಕು ಕಟ್ಟಿ ಕೊಡುವ ಜವಾಬ್ದಾರಿ ಸರ್ಕಾರದ್ದು. ವಿರೋಧ ಪಕ್ಷದವರು ಸುಲಭವಾಗಿ ಹೇಳುತ್ತಾರೆ ಅಂತಾರೆ ಅಂತ ಲಘುವಾಗಿ ಮಾತನಾಡುವುದು ಬೇಡ ಎಂದರು.

ನಾವು ಸರ್ಕಾರ ನಡೆಸಿದ್ದೇವೆ. ಆ ಕಷ್ಟ ನಷ್ಟ ನನಗೂ ಗೊತ್ತಿದೆ. ಪ್ರತಿಯೊಬ್ಬ ನಾಗರಿಕರ ಹಿತ ಕಾಪಾಡೋದು ಸರ್ಕಾರದ ಜವಾಬ್ದಾರಿ. ಜನರ ಬದುಕು ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸೋದು ಸರ್ಕಾರದ ಕರ್ತವ್ಯ. ನಾನು ಸರ್ಕಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಲು ಹೀಗೆ ಹೇಳುತ್ತಿಲ್ಲ. ನಾಡಿನ ಜನರು ನೀಡುವ ತೆರಿಗೆ ಹಣವನ್ನೇ ಬಳಸಿ ಬಡ ವರ್ಗದ ಜನರ ನೆರವಿಗೆ ಸರ್ಕಾರ ಧಾವಿಸಲಿ ಎಂದು ಹೇಳಿದರು.

CORONA 6

ರಾಮನಗರದಲ್ಲಿ ಹೆಚ್ಚಿದ ಸೋಂಕು!
ರಾಮನಗರದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ. ಇದು ಕಾಂಗ್ರೆಸ್ ಪಾದಯಾತ್ರೆಯಿಂದ ಹೆಚ್ಚಾಯಿತೋ ಅಥವಾ ಬೇರೆ ಯಾವುದೇ ಕಾರಣದಿಂದ ಹೆಚ್ಚಾಯಿತೋ ಎಂದು ನಾನು ಚರ್ಚೆ ಮಾಡಲ್ಲ. ಜಿಲ್ಲೆಯ ಅಧಿಕಾರಿಗಳು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸವನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕಿದೆ ಎಂದು ತಿಳಿಸಿದರು.

ಚನ್ನಪಟ್ಟಣದ ಸಮಗ್ರ ಅಭಿವೃದ್ಧಿ
ಚನ್ನಪಟ್ಟಣ ಸಮಗ್ರ ಅಭಿವೃದ್ಧಿಗೆ ನನ್ನ ಎಲ್ಲ ಶ್ರಮ ಹಾಕುತ್ತಿದ್ದೇನೆ. ಇಲ್ಲಿಯವರೆಗೆ ಕೆರೆ ತುಂಬಿಸುವ ಕೆಲಸ ಆಯಿತು. ಈಗ ಸೇತುವೆ ಬೇಕು ಎಂಬ ಸಮಸ್ಯೆ ಶುರುವಾಗಿದೆ. ನಾನು ಸಿಎಂ ಆಗಿದ್ದಾಗ ಅನೇಕ ಅಭಿವೃದ್ಧಿ ಮಾಡಿದ್ದೇನೆ. ನಾನು ಮೂರುವರೆ ವರ್ಷದಲ್ಲಿ ಏನು ಮಾಡಿದ್ದೇನೆ. 25 ವರ್ಷದಿಂದ ಬೇರೆಯವರು ಏನು ಮಾಡಿದ್ದಾರೆ ಎನ್ನುವುದನ್ನು ಜನ ಗಮನಿಸಬೇಕು ಎಂದು ಕೇಳಿಕೊಂಡರು. ಇದನ್ನೂ ಓದಿ: ಆನಂದ್ ಮಹೀಂದ್ರಾ ಥ್ರೋಬ್ಯಾಕ್ ಫೋಟೋ ವೈರಲ್

ಕಳೆದ ಮೂರೂವರೆ ವರ್ಷದಲ್ಲಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ. ಕ್ಷೇತ್ರದ ಜನರಿಗೆ ನನ್ನ ಅಭಿವೃದ್ಧಿ ಕಾರ್ಯ ತಿಳಿದಿದೆ. ಕೆಲವರು ಚಿಲ್ಲರೆ ರಾಜಕಾರಣ ಮಾಡೋದನ್ನ ಬಿಡಬೇಕು. ಜನರನ್ನು ತಪ್ಪು ದಾರಿಗೆಳೆಯಬೇಡಿ. ಇಷ್ಟೆಲ್ಲಾ ಕೆಲಸಗಳು ವ್ಯರ್ಥವಾಗುತ್ತದೆ ಎಂದು ಟಾಂಗ್ ಕೊಟ್ಟರು.

TAGGED:bjpChannapatnachildrengovthassanhd kumaraswamyjdsWeekend Curfewಚನ್ನಪಟ್ಟಣಜೆಡಿಎಸ್ಬಿಜೆಪಿಮಕ್ಕಳುವೀಕೆಂಡ್ ಕರ್ಫ್ಯೂಸರ್ಕಾರಹಾಸನಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Assam CM Himanta Biswa Sarma
Latest

Today’s Chanakya Exit Polls | ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು

Public TV
By Public TV
3 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
42 minutes ago
AMIT SHAH NARENDRA MODI
Latest

Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!

Public TV
By Public TV
48 minutes ago
Dharmendra Pradhan
Bengaluru City

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಖಚಿತ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

Public TV
By Public TV
58 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
1 hour ago
pinarayi vijayan
Latest

Today’s Chanakya Exit Polls | ಕೇರಳದಲ್ಲಿ ನೇರ ಪೈಪೋಟಿ – ಪಿಣರಾಯಿ ಹ್ಯಾಟ್ರಿಕ್‌ ಕನಸಿಗೆ UDF ಅಡ್ಡಗಾಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?