Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಜೊತೆ ಜಗಳಕ್ಕೆ ಹೋಗಲು ನನಗೆ ಬೇರೆ ಕೆಲಸ ಇಲ್ಲವೇ?: ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿದ್ದರಾಮಯ್ಯ ಜೊತೆ ಜಗಳಕ್ಕೆ ಹೋಗಲು ನನಗೆ ಬೇರೆ ಕೆಲಸ ಇಲ್ಲವೇ?: ಹೆಚ್‍ಡಿಕೆ

Districts

ಸಿದ್ದರಾಮಯ್ಯ ಜೊತೆ ಜಗಳಕ್ಕೆ ಹೋಗಲು ನನಗೆ ಬೇರೆ ಕೆಲಸ ಇಲ್ಲವೇ?: ಹೆಚ್‍ಡಿಕೆ

Public TV
Last updated: October 19, 2021 3:25 pm
Public TV
Share
3 Min Read
SIDDU HDK
SHARE

– ಮುಸ್ಲಿಂ ಅಭ್ಯರ್ಥಿ ವಿವಾದ ಆರಂಭಿಸಿದ್ದೇ ಸಿದ್ದರಾಮಯ್ಯ

ಕಲಬುರಗಿ: ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಕಾಲು ಕೆರೆದುಕೊಂಡು ಜಗಳಕ್ಕೆ ಹೋಗಲು ನನಗೇನು ಬೇರೆ ಕೆಲಸ ಇಲ್ಲವೇ? ಮುಸ್ಲಿಂ ಅಭ್ಯರ್ಥಿಗಳ ರಾಜಕೀಯ ವಿವಾದ ಶುರು ಮಾಡಿದ್ದು ಯಾರು? ಅವರೇ ಅಲ್ಲವೇ ಎಂದು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದರು.

Contents
  • – ಮುಸ್ಲಿಂ ಅಭ್ಯರ್ಥಿ ವಿವಾದ ಆರಂಭಿಸಿದ್ದೇ ಸಿದ್ದರಾಮಯ್ಯ
  • ನೀರಾವರಿ ಯೋಜನೆ

ಸಿಂಧಗಿ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ತೆರಳಲು ಇಂದು ಬೆಳಗ್ಗೆ ಕಲಬುರಗಿಗೆ ಆಗಮಿಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಹಾನಗಲ್ ಮತ್ತು ಸಿಂಧಗಿಯಲ್ಲಿ ಜೆಡಿಎಸ್ ಪಕ್ಷ ಇಬ್ಬರು ಸುಶಿಕ್ಷಿತ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ಆದರೆ, ಜೆಡಿಎಸ್ ಸೆಕ್ಯುಲರ್ ಮತಗಳನ್ನು ವಿಭಜಿಸಿ ಬಿಜೆಪಿಗೆ ಗೆಲ್ಲಲು ಅವಕಾಶ ಮಾಡಿಕೊಡಲು ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ ಎಂದು ಸಿದ್ದರಾಮಯ್ಯ ಮೊದಲು ಹುಯಿಲೆಬ್ಬಿಸಿದರು. ಅನಗತ್ಯ ವಿವಾದವನ್ನು ಸೃಷ್ಟಿಸಿ ಗೊಂದಲ ಆರಂಭ ಮಾಡಿದ್ದಾರೆ. ಬಹುಶಃ ಅದಕ್ಕೆ ನಾನೇ ಅಂತ್ಯ ಹಾಡಬೇಕಾಗುತ್ತದೆ. ಅಂತಹ ಸ್ಥಿತಿಗೆ ನನ್ನನ್ನು ದೂಡಿದ್ದಾರೆ ಎಂದು ಮಾರ್ಮಿಕವಾಗಿ ತಿಳಿಸಿದರು. ಇದನ್ನೂ ಓದಿ: ಕಾಲಿನಿಂದ ತಲೆವರೆಗೂ ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ರಣದೀಪ್ ಸಿಂಗ್ ಸುರ್ಜೇವಾಲಾ

ramanagar hdk

ಕಾಂಗ್ರೆಸ್ ಪಕ್ಷವೇ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬಹುದಾಗಿತ್ತಲ್ಲವೇ? ಅದನ್ನು ಮಾಡದೇ ಜೆಡಿಎಸ್ ಟಿಕೆಟ್ ಕೊಟ್ಟಿತು ಅಂತ ಕೊರಗುವುದು ಏಕೆ? ಎಂದು ಪ್ರಶ್ನಿಸಿದ ಅವರು, ಸಿಂಧಗಿಯಲ್ಲಿ ನಮ್ಮ ಪಕ್ಷದ ನಿಷ್ಠಾವಂತ ಕುಟುಂಬಕ್ಕೆ ಟಿಕೆಟ್ ಕೊಟ್ಟಿದ್ದೇವೆ. ಪಕ್ಷದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾಗ ಮರಣ ಹೊಂದಿದ ನಾಯಕರ ಕುಟುಂಬದ ಹೆಣ್ಣು ಮಗಳು ನಾಜಿಯಾ ಶಕೀಲಾ ಅಂಗಡಿ ಅವರಿಗೆ ಟಿಕೆಟ್ ನೀಡಿದ್ದೇವೆ ಎಂದು ತಿಳಿಸಿದರು

ಟಿಕೆಟ್ ಬಗ್ಗೆ ಕಾಂಗ್ರೆಸ್‍ಗೆ ಸಂಕಟವೇಕೆ? ಕ್ಷೇತ್ರದಲ್ಲಿ ಪೈಪೋಟಿ ಇರುವುದು ಜೆಡಿಎಸ್-ಬಿಜೆಪಿ ನಡುವೆ ಮಾತ್ರ. ಯಾವ ಚುನಾವಣೆಯ್ಲಲೂ ಕಾಂಗ್ರೆಸ್ ಎರಡನೇ ಸ್ಥಾನಕ್ಕೂ ಬಂದಿರಲಿಲ್ಲ. ಹಾಗಿದ್ದ ಮೇಲೆ ಜೆಡಿಎಸ್ ವಿರುದ್ಧ ಅಪಪ್ರಚಾರ ಮಾಡುವುದೇಕೆ? ಎಂದು ಕಿಡಿಕಾರಿದರು.

Congress JDS BJP

ನಾನು ಯಾವುದೇ ಕಾರಣಕ್ಕೂ ಅವರ ತಂಟೆಗೆ ಹೋಗುವುದಿಲ್ಲ, ಅವರೇ ಪದೇಪದೇ ನಮ್ಮ ಸುದ್ದಿಗೆ ಬರುತ್ತಿದ್ದಾರೆ. ನಮಗೆ ಮಾಡಲು ಸಾಕಷ್ಟು ಕೆಲಸಗಳಿವೆ, ಹೇಳಲು ಅನೇಕ ವಿಚಾರಗಳಿವೆ. ಜನರ ಬಳಿ ಮತ ಕೇಳಲು ನಮ್ಮಲ್ಲಿ ಜನರಿಗಾಗಿ ಮಾಡಿದ ಸೇವೆ ಇದೆ. ಕಾಂಗ್ರೆಸ್ ಪಕ್ಷದ ಹೆಸರೇಳಿಕೊಂಡು ಮತ ಕೇಳಬೇಕಾದ ಕರ್ಮ ನಮಗಿಲ್ಲ. ಆದರೆ ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಹೆಸರೇಳಿಕೊಂಡೇ ಮತಯಾಚನೆ ಮಾಡುತ್ತಿದ್ದಾರೆಂದು ತರಾಟೆಗೆ ತೆಗೆದುಕೊಂಡರು.

ನೀರಾವರಿ ಯೋಜನೆ

ನಾಗಠಾಣ ಮತ್ತು ಇಂಡಿ ವಿಧಾನಸಭೆ ಕ್ಷೇತ್ರದ ಸುಮಾರು 28,000 ಹೆಕ್ಟೇರ್ ಭೂಮಿಗೆ ನೀರೊದಗಿಸುವ ಯೋಜನೆಗೆ ನಾನು ಸಿಎಂ ಆಗಿದ್ದಾಗ ರೇವಣಸಿದ್ದೇಶ್ವರ ವೃದ್ಧಿ ಯೋಜನೆ ಅಡಿಯಲ್ಲಿ ಬಜೆಟ್ ಮೂಲಕವೇ 250 ಕೋಟಿ ರೂ.ಗಳನ್ನು ಮೀಸಲಿರಿಸಿದ್ದೆ. ಆದರೆ, ಬಿಜೆಪಿ ಸರ್ಕಾರ ಅದಕ್ಕೆ ತಡೆಯೊಡ್ಡಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ತಿಂಡಿ ಪ್ರಿಯರಿಗೆ ಹೊಸದಾಗಿ ಸೇರ್ಪಡೆಯಾಯಿತು ಬಾಹುಬಲಿ ಗೋಲ್ಡ್ ಮೊಮೊ

SIDDU 5 medium

ಯೋಜನೆಗೆ ಬಿಜೆಪಿ ಸರ್ಕಾರ ತಡೆಯೊಡ್ಡಿದ್ದನ್ನು ಪ್ರತಿಭಟಿಸಿ ಆ ಭಾಗದ ರೈತರು ಕಳೆದ 40 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಕೆಲ ದಿನದ ಹಿಂದೆ ಮಾಜಿ ಪ್ರಧಾನಮಂತ್ರಿಗಳಾದ ಹೆಚ್ ಡಿ ದೇವೇಗೌಡರು ಅಲ್ಲಿನ ರೈತರನ್ನು ಭೇಟಿಯಾಗಿ ಅವರ ಬೇಡಿಕೆಗೆ ದನಿಗೂಡಿಸಿದ್ದಾರೆ. ನಿಮ್ಮ ಪ್ರತಿಭಟನೆಯನ್ನು ನಿಲ್ಲಿಸಿ ಎಂದು ಮನವಿ ಮಾಡಿದ್ದಾರೆ. ಅಲ್ಲದೆ, ಯೋಜನೆ ಕಾರ್ಯಗತ ಮಾಡುವ ನಿಟ್ಟಿನಲ್ಲಿ ನಿಮ್ಮ ಜತೆ ನಿಂತು ಹೋರಾಟ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಯಲ್ಲಿ ಮಾತನಾಡಲು ವಿಷಯವೇ ಇಲ್ಲ. ನಮಗೆ ಆ ರೀತಿಯ ಕೊರತೆ ಇಲ್ಲ. ಸಿಂಧಗಿ ವಿಧಾನಸಭೆ ಕ್ಷೇತ್ರಕ್ಕೆ ನಾನು ಮತ್ತು ನಮ್ಮ ತಂದೆಯವರು ಕೊಟ್ಟ ನೀರಾವರಿ ಯೋಜನೆಗಳು ಇನ್ನಿತರೆ ಕಾರ್ಯಕ್ರಮಗಳ ಮೂಲಕ ಜನರ ಮುಂದೆ ಹೋಗುತ್ತೇವೆ ಎಂದು ಹೇಳಿದರು.

TAGGED:hd kumaraswamyIrrigation ProjectKalaburagiPublic TVsiddaramaiahSindagi Assemblyಕಲಬುರಗಿನೀರಾವರಿ ಯೋಜನೆಪಬ್ಲಿಕ್ ಟಿವಿಸಿದ್ದರಾಮಯ್ಯಸಿಂಧಗಿ ವಿಧಾನಸಭೆಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
5 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
10 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
38 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
1 hour ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
2 hours ago
kalaburagi police
Kalaburagi

ಕಲಬುರಗಿ| ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?