Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಾವೇನು ಎಲೆ, ಅಡಿಕೆ ಕೊಟ್ಟು ಆಹ್ವಾನಿಸಿದ್ವಾ? ಬಂದು ಬೆಂಬಲದ ಭಿಕ್ಷೆ ಬೇಡಿದವರ್‍ಯಾರು? – ಸಿದ್ದು ವಿರುದ್ಧ ಹೆಚ್‍ಡಿಕೆ ಕಿಡಿ

Public TV
Last updated: December 13, 2021 9:30 am
Public TV
Share
4 Min Read
siddu hdk
SHARE

ಬೆಂಗಳೂರು: ನಿಮ್ಮನ್ನು ಕರೆದವರು ಯಾರು, ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟೆವಾ, ಬಂದು ಬೆಂಬಲದ ಭಿಕ್ಷೆ ಬೇಡಿದವರು ಯಾರು ಎಂದು ಪ್ರಶ್ನಿಸುವ ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

HDK

ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ದಾಳಿ ನಡೆಸಿದ್ದು, ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಹೇಳಿ ನಮ್ಮ ಮನೆ ಬಾಗಿಲಿಗೆ ಬಂದ ಕಾಂಗ್ರೆಸ್ ನಾಯಕರು ಸರ್ಕಾರದ ನೇತೃತ್ವ ವಹಿಸಿ ಎಂದರು. ಹಾಗಾದರೆ, ಪಕ್ಷದ ನಿರ್ಧಾರಕ್ಕೂ ನಿಮಗೂ ಸಂಬಂಧ ಇಲ್ಲವಾ ಮಿಸ್ಟರ್ ಸಿದ್ದಸೂತ್ರಧಾರ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿ ಜೈಲಿನಲ್ಲಿಯೇ ಆತ್ಮಹತ್ಯೆ

ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಹೇಳಿ ನಮ್ಮ ಮನೆ ಬಾಗಿಲಿಗೆ ಬಂದ ಕಾಂಗ್ರೆಸ್‌ ನಾಯಕರು ಸರಕಾರದ ನೇತೃತ್ವ ವಹಿಸಿ ಎಂದರು. ಹಾಗಾದರೆ, ಪಕ್ಷದ ನಿರ್ಧಾರಕ್ಕೂ ನಿಮಗೂ ಸಂಬಂಧ ಇಲ್ಲವಾ ಮಿಸ್ಟರ್ ಸಿದ್ದಸೂತ್ರಧಾರ?1/7

— H D Kumaraswamy (@hd_kumaraswamy) December 13, 2021

ನಾನು ಜೆಡಿಎಸ್‍ನವರ ಮನೆ ಬಾಗಿಲಿಗೆ ಹೋಗಿಲ್ಲ ಎನ್ನುತ್ತೀರಿ. ನಿಮ್ಮನ್ನು ಕರೆದವರು ಯಾರು, ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟೆವಾ, ಬಂದು ಬೆಂಬಲದ ಭಿಕ್ಷೆ ಬೇಡಿದವರು ಯಾರು, ದೆಹಲಿ ನಾಯಕರು ನಮ್ಮ ಮನೆ ಬಾಗಿಲಲ್ಲಿ ನಿಂತಿದ್ದಾಗಲೇ ಮೈತ್ರಿಗೆ ಕುಣಿಕೆ ಬಿಗಿಯಲು ಯತ್ನಿಸಿದವರು ಯಾರು ಮಿಸ್ಟರ್ ಟರ್ಮಿನೇಟರ್ ಎಂದು ಹರಿಹಾಯ್ದಿದ್ದಾರೆ.

ನಾನು ಜೆಡಿಎಸ್‌ʼನವರ ಮನೆ ಬಾಗಿಲಿಗೆ ಹೋಗಿಲ್ಲ ಎನ್ನುತ್ತೀರಿ, ನಿಮ್ಮನ್ನು ಕರೆದವರು ಯಾರು? ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟೆವಾ? ಬಂದು ಬೆಂಬಲದ ಭಿಕ್ಷೆ ಬೇಡಿದವರು ಯಾರು? ದೆಹಲಿ ನಾಯಕರು ನಮ್ಮ ಮನೆ ಬಾಗಿಲಲ್ಲಿ ನಿಂತಿದ್ದಾಗಲೇ ಮೈತ್ರಿಗೆ ಕುಣಿಕೆ ಬಿಗಿಯಲು ಯತ್ನಿಸಿದವರು ಯಾರು ಮಿಸ್ಟರ್‌ ಟರ್ಮಿನೇಟರ್?‌ 2/7

— H D Kumaraswamy (@hd_kumaraswamy) December 13, 2021

ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆದಿದೆ. ನನ್ನ ಹಂತದಲ್ಲಿ ಅಲ್ಲ ಅನ್ನುತ್ತೀರಾ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಮಾತಿಗೇ ನಿಮ್ಮಲ್ಲಿ ಕಿಮ್ಮತ್ತಿಲ್ಲಾ. ಹಾಗಾದರೆ, ಸಿಎಲ್‍ಪಿಯನ್ನೇ ಅಡ್ಡಡ್ಡ ಸೀಳಿ ಬೆಂಬಲಿಗ ಶಾಸಕರು ಬಿಜೆಪಿಗೆ ಹೋಗಲು ದುಷ್ಪ್ರೇರಣೆ ಕೊಟ್ಟವರು ಯಾರು ಕೆಂಡಕಾರಿದ್ದಾರೆ. ಇದನ್ನೂ ಓದಿ: ಆಫ್ರಿಕಾ ಪ್ರಜೆಯಿಂದಲೇ ಮತ್ತೊಬ್ಬ ಆಫ್ರಿಕಾ ಪ್ರಜೆಯ ಬರ್ಬರ ಹತ್ಯೆ

ನಾನು ಜೆಡಿಎಸ್‌ʼನವರ ಮನೆ ಬಾಗಿಲಿಗೆ ಹೋಗಿಲ್ಲ ಎನ್ನುತ್ತೀರಿ, ನಿಮ್ಮನ್ನು ಕರೆದವರು ಯಾರು? ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟೆವಾ? ಬಂದು ಬೆಂಬಲದ ಭಿಕ್ಷೆ ಬೇಡಿದವರು ಯಾರು? ದೆಹಲಿ ನಾಯಕರು ನಮ್ಮ ಮನೆ ಬಾಗಿಲಲ್ಲಿ ನಿಂತಿದ್ದಾಗಲೇ ಮೈತ್ರಿಗೆ ಕುಣಿಕೆ ಬಿಗಿಯಲು ಯತ್ನಿಸಿದವರು ಯಾರು ಮಿಸ್ಟರ್‌ ಟರ್ಮಿನೇಟರ್?‌ 2/7

— H D Kumaraswamy (@hd_kumaraswamy) December 13, 2021

ವರಿಷ್ಠರು ತಂದ ಸರ್ಕಾರವನ್ನೇ ತೆಗೆದಿರಿ, ಬಿಜೆಪಿ ಸರ್ಕಾರ ಬರಲು ಕಾರಣರಾದಿರಿ. ಈಗ ಸುಳ್ಳಿಗೆ ಸುಳ್ಳು ಪೋಣಿಸುತ್ತಿದ್ದೀರಿ. ಬಿಜೆಪಿ ಸರ್ಕಾರ ಬರಲು ಶಾಸಕರ ಟೀಂ ರೆಡಿ ಮಾಡಿದವರು ಯಾರು? ಇಷ್ಟೆಲ್ಲಾ ಸಿದ್ದಕಲೆ ಎಲ್ಲಿಂದ ಬಂತು ಮಿಸ್ಟರ್ ಸಿದ್ದ ಕಲಾ ನಿಪುಣಪ್ಪಾ ಎಂದಿದ್ದಾರೆ.

ವರಿಷ್ಠರು ತಂದ ಸರಕಾರವನ್ನೇ ತೆಗೆದಿರಿ, ಬಿಜೆಪಿ ಸರಕಾರ ಬರಲು ಕಾರಣರಾದಿರಿ. ಈಗ ಸುಳ್ಳಿಗೆ ಸುಳ್ಳು ಪೋಣಿಸುತ್ತಿದ್ದೀರಿ. ಬಿಜೆಪಿ ಸರಕಾರ ಬರಲು ಶಾಸಕರ ಟೀಂ ರೆಡಿ ಮಾಡಿದವರು ಯಾರು? ಇಷ್ಟೆಲ್ಲಾ ʼಸಿದ್ದಕಲೆʼ ಎಲ್ಲಿಂದ ಬಂತು ಮಿಸ್ಟರ್ ಸಿದ್ದಕಲಾನಿಪುಣಪ್ಪಾ!? 4/7

— H D Kumaraswamy (@hd_kumaraswamy) December 13, 2021

ಹೈಕಮಾಂಡ್ ನಿರ್ಧಾರಕ್ಕೂ ಗುನ್ನ, ಅಹಿಂದದ ಹೆಸರಿನಲ್ಲಿ ದಲಿತ ನಾಯಕರಾದ ಖರ್ಗೆ ಅವರಿಗೂ ಖೆಡ್ಡಾ, ಡಾ. ಪರಮೇಶ್ವರ್ ಅವರಿಗೆ ಸೋಲಿನ ಸುಳಿ, ಈಗ ನೋಡಿದರೆ ಬಂಡೆಯ ಕೆಳಗೂ ಡೈನಾಮೈಟ್ ಇಡುತ್ತಿದ್ದೀರಿ ಇಂಥ ಅನೈತಿಕ, ನೀಚ, ನಿಕೃಷ್ಟ, ಹೀನ ರಾಜಕಾರಣಕ್ಕೆ ನಾಂದಿ ಹಾಡಿರುವ ಪರಮಪಾತಕ ಪರಾಕಾಷ್ಠೆ ಯಾರು ಎಂದು ವಾಗ್ದಾಳಿ ನಡೆಸಿದ್ದಾರೆ.

ಹೈಕಮಾಂಡ್ ನಿರ್ಧಾರಕ್ಕೂ ಗುನ್ನ, ಅಹಿಂದದ ಹೆಸರಿನಲ್ಲಿ ದಲಿತ ನಾಯಕರಾದ ಖರ್ಗೆ ಅವರಿಗೂ ಖೆಡ್ಡಾ, ಡಾ,ಪರಮೇಶ್ವರ ಅವರಿಗೆ ಸೋಲಿನ ಸುಳಿ, ಈಗ ನೋಡಿದರೆ; ʼಬಂಡೆʼಯ ಕೆಳಗೂ ಡೈನಾಮೈಟ್ ಇಡುತ್ತಿರುವ ಅನೈತಿಕ, ನೀಚ, ನಿಕೃಷ್ಟ, ಹೀನ ರಾಜಕಾರಣಕ್ಕೆ ನಾಂದಿ ಹಾಡಿರುವ ʼಪರಮಪಾತಕ ಪರಾಕಾಷ್ಠೆ ಯಾರು? 5/7

— H D Kumaraswamy (@hd_kumaraswamy) December 13, 2021

ಜೆಡಿಎಸ್ ಬಿಜೆಪಿಯ ಬಿ ಟೀಂ ಅನ್ನುತ್ತೀರಿ ಹಾಗಾದರೆ ಆಡಳಿತ ಪಕ್ಷದಲ್ಲೇ ಕೂತು ವಿರೋಧಿಗಳೊಂದಿಗೆ ಕುಮ್ಮಕ್ಕಾಗಿ ಬೆನ್ನಿಗಿರಿದ ಬ್ರೂಟಸ್ ಯಾರು? ಮೈತ್ರಿ ಸರ್ಕಾರಕ್ಕೆ ಮೊದಲ ದಿನದಿಂದಲೇ ಮಹೂರ್ತ ಇಟ್ಟವರು ಯಾರು? ಸ್ವಯಂಘೋಷಿತ ಅಹಿಂದ ನಾಯಕರೇ ನಿಮ್ಮೊಳಗಿದೆ ಕಾರ್ಕೋಟಕ ವಿಷ. ಆ ವಿಷವೇ ನಿಮಗೆ ಮುಳುವು. ಇದನ್ನೂ ಓದಿ: ರಾಜ್ಯಾದ್ಯಂತ 3 ದಿನ ಮೋಡ ಕವಿದ ವಾತಾವರಣ – ಸಾಧಾರಣ ಮಳೆ ಸಾಧ್ಯತೆ

ಜೆಡಿಎಸ್‌ ಬಿಜೆಪಿಯ ಬಿ ಟೀಂ ಅನ್ನುತ್ತೀರಿ. ಹಾಗಾದರೆ; ಆಡಳಿತ ಪಕ್ಷದಲ್ಲೇ ಕೂತು ವಿರೋಧಿಗಳೊಂದಿಗೆ ಕುಮ್ಮಕ್ಕಾಗಿ ಬೆನ್ನಿಗಿರಿದ ʼಬ್ರೂಟಸ್‌ʼ ಯಾರು? ಮೈತ್ರಿ ಸರಕಾರಕ್ಕೆ ಮೊದಲ ದಿನದಿಂದಲೇ ಮಹೂರ್ತ ಇಟ್ಟವರು ಯಾರು? ಸ್ವಯಂಘೋಷಿತ ಅಹಿಂದ ನಾಯಕರೇ ನಿಮ್ಮೊಳಗಿದೆ ಕಾರ್ಕೋಟಕ ʼವಿಷʼ. ಆ ವಿಷವೇ ನಿಮಗೆ ಮುಳುವು. 6/7

— H D Kumaraswamy (@hd_kumaraswamy) December 13, 2021

ಅಹಾ.. ಕೋಲಾರದಲ್ಲಿ ಕಲರ್‍ಫುಲ್ ಸುಳ್ಳುಗಳ ಸರಮಾಲೆಯನ್ನೇ ಸೃಷ್ಟಿಸಿ ಕೃತಾರ್ಥರಾಗಿದ್ದೀರಿ. ಅಡ್ಜಸ್ಟ್‍ಮೆಂಟ್ ರಾಜಕಾರಣದ ಹರಿಕಾರರು ನೀವಲ್ಲವೇ, ವಿನಾಶಕಾಲೇ ವಿಪರೀತ ಸುಳ್ಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಹಾ!! ʼಕೋಲಾರದಲ್ಲಿ ಕಲರ್‌ಫುಲ್‌ ಸುಳ್ಳುಗಳ ಸರಮಾಲೆʼಯನ್ನೇ ಸೃಷ್ಟಿಸಿ ಕೃತಾರ್ಥರಾಗಿದ್ದೀರಿ. ʼಅಡ್ಜಸ್ಟ್‌ಮೆಂಟ್‌ ರಾಜಕಾರಣʼದ ಹರಿಕಾರರು ನೀವಲ್ಲವೇ?

ವಿನಾಶಕಾಲೇ ವಿಪರೀತ ಸುಳ್ಳು!! 7/7

— H D Kumaraswamy (@hd_kumaraswamy) December 13, 2021

TAGGED:bengaluruhd kumaraswamysiddaramaiahtweetಟ್ವೀಟ್ಬೆಂಗಳೂರುಸಿದ್ದರಾಮಯ್ಯಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

ranjani raghavan
ಗೆಳೆಯನ ಜೊತೆ ರಂಜನಿ ರಾಘವನ್ ಲಾಂಗ್ ಡ್ರೈವ್
10 minutes ago
hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
13 hours ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
16 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
17 hours ago

You Might Also Like

Abdul Rahim Murder
Crime

ಅಬ್ದುಲ್‌ ರಹಿಮಾನ್‌ ಹತ್ಯೆ ಕೇಸ್‌ | ಮತ್ತಿಬ್ಬರು ಆರೋಪಿಗಳು ಅರೆಸ್ಟ್‌ – ಹತ್ಯೆಗೆ ಕಾರಣವೇ ಇನ್ನೂ ಸಸ್ಪೆನ್ಸ್!‌

Public TV
By Public TV
47 minutes ago
Punjab Firecracker Factory 2
Crime

ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಐವರು ಸಾವು, 25 ಮಂದಿಗೆ ಗಾಯ

Public TV
By Public TV
1 hour ago
Bengaluru
Bengaluru City

ಸಲೂನ್‌ಗೆ ನುಗ್ಗಿ ಲೇಡಿ ರೌಡಿ ಗ್ಯಾಂಗ್‌ನಿಂದ ದಾಂಧಲೆ – ಮೂವರು ಅರೆಸ್ಟ್‌

Public TV
By Public TV
1 hour ago
Pakistan Spy 2
Crime

ಬೇಹುಗಾರಿಕೆಗಾಗಿ ಭಾರತೀಯ ಮೊಬೈಲ್‌ ಸಿಮ್‌ ಕಾರ್ಡ್‌ ಪೂರೈಸುತ್ತಿದ್ದ ಪಾಕ್‌ ಸ್ಪೈ ಅರೆಸ್ಟ್‌

Public TV
By Public TV
2 hours ago
KRS Dam
Districts

ನಾಲ್ಕೇ ದಿನಕ್ಕೆ KRSನಲ್ಲಿ 11 ಅಡಿ ನೀರು ಹೆಚ್ಚಳ – ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿ!

Public TV
By Public TV
2 hours ago
HS Venkata murty
Bengaluru City

ಕನ್ನಡದ ಖ್ಯಾತ ಕವಿ ಹೆಚ್.ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?