‘ನಿಮ್ಮ ಜೊತೆ ನಾವಿದ್ದೇವೆ’- ಡಿಕೆಶಿ ತಾಯಿಗೆ ಧೈರ್ಯ ತುಂಬಿದ ಎಚ್‍ಡಿಕೆ

Public TV
2 Min Read
HDK RMG

ರಾಮನಗರ: ಜಾರಿ ನಿರ್ದೇಶನಾಲಯದ ಬಂಧನದಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಇಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಭೇಟಿ ನೀಡಿದ್ದರು. ಈ ವೇಳೆ ಮಗನ ಬಂಧನದ ನೋವಿನಲ್ಲಿರುವ ಡಿಕೆಶಿ ಅವರ ತಾಯಿ ಗೌರಮ್ಮ ಅವರಿಗೆ ಸಂತ್ವಾನ ಹೇಳಿದರು.

ರಾಮನಗರದ ದೊಡ್ಡಲಹಳ್ಳಿ ನಿವಾಸಕ್ಕೆ ಭೇಟಿ ನೀಡಿದ್ದ ಎಚ್‍ಡಿಕೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ಈ ಸಂದರ್ಭದಲ್ಲಿ ಡಿಕೆಶಿ ಅವರ ತಾಯಿಯ ಆರ್ಶೀವಾದವನ್ನು ಪಡೆದರು. ಕುಮಾರಸ್ವಾಮಿ ಅವರ ಎದುರು ತಮ್ಮ ನೋವನ್ನು ಹಂಚಿಕೊಂಡ ಡಿಕೆಶಿ ಅವರ ತಾಯಿ ಅವರು ಕೈ ಮುಗಿದು ಕಣ್ಣೀರಿಟ್ಟರು. ಈ ಸಂದರ್ಭದಲ್ಲಿ ಎಚ್‍ಡಿಕೆ ಅವರು ಧೈರ್ಯ ಹೇಳಿ, ನಿಮ್ಮೊಂದಿಗೆ ನಾವು ಇದ್ದೇವೆ ಎಂದರು.

HDK RMG a

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್‍ಡಿಕೆ ಅವರು, ಪ್ರಸ್ತುತ ಉಂಟಾಗಿರುವ ಸನ್ನಿವೇಶ ನಿನ್ನೆ, ಮೊನ್ನೆಯಿಂದ ಆರಂಭವಾಗಿಲ್ಲ. ಗುಜರಾತ್ ರಾಜ್ಯಸಭಾ ಚುನಾವಣೆಯ ವೇಳೆ ಪಕ್ಷದ ನಿಷ್ಠಾವಂತ ವ್ಯಕ್ತಿಯಾಗಿ ಶಾಸಕರನ್ನು ರಕ್ಷಣೆ ಮಾಡಿದ್ದರು. ಆ ವೇಳೆ ಡಿಕೆ ಶಿವಕುಮಾರ್ ಅವರಿಗೆ ಫೋನ್ ಕರೆ ಮಾಡಿದ್ದ ಸಂಗತಿ ಎಲ್ಲರಿಗೂ ತಿಳಿದಿದೆ. ಆದರೆ ಅವರು ಪಕ್ಷದ ಕಾರ್ಯವನ್ನು ಮಾಡಿದ್ದರಿಂದ ಬಿಜೆಪಿಗೆ ರಾಜ್ಯಸಭೆಯ ಚುನಾವಣೆಯಲ್ಲಿ ಹಿನ್ನಡೆಯಾಗಿತ್ತು. ಅದಕ್ಕಾಗಿಯೇ ಅವರನ್ನು ಟಾರ್ಗೆಟ್ ಮಾಡಿ ಕೇಂದ್ರ ಸರ್ಕಾರದ ಅಡಿ ಇರುವ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಈ ರೀತಿ ಮಾಡಿದ್ದಾರೆ ಎಂದರು.

ಈಗಾಗಲೇ ಹಿರಿಯ ಐಎಎಸ್ ಅಧಿಕಾರಿ ವಿಠಾಲ್ ಅವರು 2012 ಇಸವಿಯಲ್ಲೇ ಕೇಂದ್ರದಲ್ಲಿ ಇರುವ ಸರ್ಕಾರಗಳು ಯಾವ ರೀತಿ ಇಡಿ, ಸಿಬಿಐ ಸೇರಿದಂತೆ ಇತರೆ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬ ಬಗ್ಗೆ ಪುಸ್ತಕವನ್ನೇ ಬರೆದಿದ್ದಾರೆ. ಆದರೆ ಇದನ್ನೇ ಬಿಜೆಪಿ ಮುಂದುವರಿಸಿದರೆ ಅವರಿಗೂ ಇದೇ ಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಕೆ ನೀಡಿದರು.

dk shivakumar family

ಆಪರೇಷನ್ ಕಮಲ: ಸಮ್ಮಿಶ್ರ ಸರ್ಕಾರದ ಶಾಸಕರನ್ನು ಖರೀದಿ ಮಾಡಲು ಬಿಜೆಪಿ ಅವರು ಏನು ಮಾಡಿದ್ದಾರೆ ಎಂಬುವುದು ಎಲ್ಲರಿಗೂ ತಿಳಿದಿದೆ. ಆದರೆ ಈ ಬಗ್ಗೆ ಯಾವ ಕ್ರಮವನ್ನು ಕೈಗೊಂಡಿಲ್ಲ. ಆದರೆ ವಿಚಾರಣೆಗೆ ಸಹಕಾರ ನೀಡುತ್ತಿದ್ದರು ಕೂಡ, ಹಿರಿಯರಿಗೆ ಪೂಜೆ ಕೂಡ ಮಾಡಲು ಬಿಡದಂತೆ ವಶಕ್ಕೆ ಪಡೆದಿರುವ ಇಡಿ ಅಧಿಕಾರಿಗಳ ಕ್ರಮ ಸರಿಯಲ್ಲ. ಈಗಾಗಲೇ ಎಲ್ಲಾ ಮಾಹಿತಿ ಪಡೆದಿದ್ದರು ಕೂಡ ಅವರನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಬಿಜೆಪಿ ಅವರು ದೇಶದ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ಪಕ್ಷಗಳ ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ. ಇದಕ್ಕೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭ ಎದುರಾಗಿದೆ. ನಾನು ಅಧಿಕಾರದಲ್ಲಿ ಇದ್ದ ವೇಳೆ ಆಡಿಯೋ ಪ್ರಕರಣದ ಬಗ್ಗೆ ಅಧಿಕಾರ ದುರುಪಯೋಗ ಪಡಿಸಿಕೊಂಡು ಏನಾದರೂ ಮಾಡಬಹುದಿತ್ತು. ಆದರೆ ನಾನು ಆ ರೀತಿ ಮಾಡಿಲ್ಲ ಎಂದರು.

ನನ್ನ ವಿರುದ್ಧವೂ ಕೂಡ ಹಲವು ಮಾಧ್ಯಮಗಳು ವರದಿ ಮಾಡಿದೆ. ಆದರೆ ಈ ಬಗ್ಗೆ ಅವರಿಗೆ ಮಾಹಿತಿಯೇ ಇಲ್ಲ. ನಾನು ಶುದ್ಧವಾಗಿದ್ದು, ಐಎಂಎ ಪ್ರಕರಣದಲ್ಲಿ ನನ್ನ ಹೆಸರನ್ನು ತರುತ್ತಿದ್ದಾರೆ. ಆದರೆ ಪ್ರಕರಣದ ಮುಖ್ಯ ಆರೋಪಿಯನ್ನು ಬಂಧಿಸಲು ನಮ್ಮ ಸರ್ಕಾರವೇ ಕಾರಣ. ಸದ್ಯ ನಾನು ಡಿಕೆಶಿ ಕುಟುಂಬ ಬೆಂಬಲಕ್ಕೆ ಇದ್ದು, ಕಾನೂನು ಹೋರಾಟಕ್ಕೂ ಬೇಗದ ಬೆಂಬಲ ನೀಡುತ್ತೇವೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *