ಬೆಂಗಳೂರು: ರಾಮನಗರ (Ramanagara) ಜಿಲ್ಲೆಯ ಹೆಸರು ಬದಲಾವಣೆ ಮಾಡಿದರೆ ನಾನು ಅಮರಣಾಂತ ಉಪವಾಸ ಸತ್ಯಾಗ್ರಹ (Hunger Strike) ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಪ್ರತಿಜ್ಞೆ ಮಾಡಿದ್ದಾರೆ.
ರಾಮನಗರ ಜಿಲ್ಲೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಸವಾಲು ಸ್ವೀಕರಿಸುತ್ತೇನೆ. ನನ್ನ ಆರೋಗ್ಯ ಲೆಕ್ಕಿಸದೇ ಉಪವಾಸ ಸತ್ಯಾಗ್ರಹ ಮಾಡುತ್ತೇನೆ. ಡಿಕೆ ಶಿವಕುಮಾರ್ ಬೆಂಗಳೂರು ಮೂಲದವರಲ್ಲ. ಬೆಂಗಳೂರು ಇಡೀ ಕರ್ನಾಟಕ ರಾಜ್ಯದ ಭಾಗ. ಬೆಂಗಳೂರಿನ ಆರ್ಥಿಕ ಶಕ್ತಿ ಇಡೀ ಕರ್ನಾಟಕ ಅಭಿವೃದ್ಧಿಗೆ ಕಾರಣ ಎಂದು ವಾಗ್ದಾಳಿ ನಡೆಸಿದರು.
- Advertisement -
- Advertisement -
ಎಷ್ಟೆಲ್ಲಾ ಕೆರೆ-ಕಟ್ಟೆ ನುಂಗಿ ಹಾಕಿದ್ದೀರಾ? ಯಾವ್ ಯಾವ್ ಕೆರೆ ನುಂಗಿದ್ದೀರಾ ಪಟ್ಟಿ ಬೇಕಾ? ಯಾವ ಮುಖ ಇಟ್ಟುಕೊಂಡು ಕೆಂಪೇಗೌಡರ ಹೆಸರು ಹೇಳ್ತೀರಾ? ಈ ಬಗ್ಗೆ ಚರ್ಚೆ ನಡೆಸಲು ಪಾಪ ಅವರು ಬ್ಯುಸಿ ಇದ್ದಾರೆ. ಅವರು ಯಾವಾಗ ಬೇಕಾದರೂ ಸಮಯ ಫಿಕ್ಸ್ ಮಾಡಲಿ ಎಂದು ಡಿಕೆಶಿಗೆ ತಿರುಗೇಟು ನೀಡಿದರು.
- Advertisement -
- Advertisement -
ನಾನು ಹುಟ್ಟಿದ್ದು ಹಾಸನ ಆದರೂ ನನ್ನ ಜೀವನ ಅಂತ್ಯ ಆಗೋದು ರಾಮನಗರದಲ್ಲೇ. ನನ್ನ ಹೋರಾಟಕ್ಕೆ ರಾಮನಗರದ ಜನರ ಸಹಕಾರ ಕೇಳುತ್ತೇನೆ. ನಮ್ಮ ಸಮಾಜದವರು ಹೇಳಿದ್ರು ಅಂತ ಸುಮ್ಮನೆ ಇದ್ದೆ ಎನ್ನುವ ಡಿಕೆ ಹೇಳಿಕೆ ವಿಚಾರವನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಎಲ್ಲವು ಜನರೇ ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು. ಇದನ್ನೂ ಓದಿ: ಚರ್ಚೆಗೆ ಡೇಟ್, ಟೈಮ್ ಫಿಕ್ಸ್ ಮಾಡಿ: ಡಿ.ಕೆ ಶಿವಕುಮಾರ್
ಕನಕಪುರ ಸ್ಕೂಲ್ಗಳಲ್ಲಿ ಎಷ್ಟು ಟೀಚರ್ ಇಲ್ಲ ನೋಡಿ. ಭೂಮಿ ದಾನ ಕೊಟ್ಟಿದ್ದೇವೆ ಅಂತಾರೆ. ನಾನು ನೋಡಿದ್ದೇನೆ ಎಷ್ಟು ಕೊಟ್ಟಿದ್ದಾರೆ ಎನ್ನುವುದನ್ನು. ದಾಖಲಾತಿ ಹೇಗೆ ಮಾಡಿಕೊಂಡಿದ್ದೀರಾ ನಮಗೆ ಗೊತ್ತಿದೆ. ಕನಕಪುರದಲ್ಲಿ ಒಬ್ಬ ಟೀಚರ್ ಜಾಗದಲ್ಲಿ ಡಿಕೆ ಶಿವಕುಮಾರ್ ಪಟಾಲಂ ಇದ್ದ. 10 ವರ್ಷ ಆದರೂ ಬಿಡಿಸಲು ಆಗಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಕನಕಪುರ ಡೈರಿಗೆ ಜಾಗ ಕೊಟ್ಟ ರೈತರಿಗೆ ಎಷ್ಟು ಕೊಟ್ರಿ, ನಿಮ್ಮ ಪಟಾಲಂಗೆ ಎಷ್ಟು ಕೊಟ್ರಿ – ಡಿಕೆಶಿಗೆ ಹೆಚ್ಡಿಕೆ ಪ್ರಶ್ನೆ
Web Stories