ಬೆಂಗಳೂರು: ಲೋಸಕಭಾ ಚುನಾವಣೆಯ ಗದ್ದಲದ ಬಳಿಕ ಇದೀಗ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು (H.D Kumaraswamy) ತಮ್ಮ ಕುಟುಂಬದ ಜೊತೆಗೆ ವಿಶ್ರಾಂತಿಗೆ ತೆರಳಿದ್ದಾರೆ.
ರಾಜ್ಯದ ರೆಸಾರ್ಟ್ ಒಂದರಲ್ಲಿ ಹೆಚ್ಡಿಕೆಯವರು ತಮ್ಮ ಕುಟುಂಬ ಸಮೇತ ವಿಶ್ರಾಂತಿ ಪಡೆಯುತ್ತಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ರೇವತಿ ಅವರು ಹಾಗೂ ಮೊಮ್ಮಗ ಚಿ.ಅವ್ಯಾನ್ ದೇವ್ ಮಾಜಿ ಮುಖ್ಯಮಂತ್ರಿಗಳ ಜೊತೆಯಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸ್ಥಳೀಯರ ಯೋಗಕ್ಷೇಮ ವಿಚಾರಿಸಿದರು.
ಎರಡು ತಿಂಗಳ ಹಿಂದೆ ಹೃದಯದ ಶಸ್ತ್ರಚಿಕಿತ್ಸೆಗಾಗಿ ಹೆಚ್ಡಿಕೆಯವರು ಅಪೋಲೋ ಆಸ್ಪತ್ರೆಗೆ (Apollo Hospital) ದಾಖಲಾಗಿ ಡಿಸ್ಚಾರ್ಜ್ ಆಗಿದ್ದರು. ಆ ಬಳಿಕ ವೈದ್ಯರ ಸಲಹೆಯ ಮೇರೆಗೆ ಒಂದೆರಡು ದಿನ ಮನೆಯಲ್ಲಿಯೇ ವಿಶ್ರಾಂತಿ ಪಡೆದು ನಂತರ ಮತ್ತೆ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಧುಮಕಿದ್ದರು. ಇದನ್ನೂ ಓದಿ: ಬೆಂಗಳೂರಿನತ್ತ ಪ್ರಜ್ವಲ್ ರೇವಣ್ಣ- ಏರ್ಪೋರ್ಟ್ನಲ್ಲಿ ಹೈಅಲರ್ಟ್