Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡೇ ಬಂದ ವೃದ್ಧೆ; ಸರ್ಕಾರಕ್ಕೆ ಹೆಚ್‍ಡಿಕೆ ತರಾಟೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡೇ ಬಂದ ವೃದ್ಧೆ; ಸರ್ಕಾರಕ್ಕೆ ಹೆಚ್‍ಡಿಕೆ ತರಾಟೆ

Bengaluru City

ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡೇ ಬಂದ ವೃದ್ಧೆ; ಸರ್ಕಾರಕ್ಕೆ ಹೆಚ್‍ಡಿಕೆ ತರಾಟೆ

Public TV
Last updated: January 14, 2024 4:03 pm
Public TV
Share
2 Min Read
HDKumaraswamy
SHARE

ಬೆಂಗಳೂರು: ಮಾಸಾಶನಕ್ಕಾಗಿ (Pension) 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ದಾವಣಗೆರೆ (Davanagere) ಜಿಲ್ಲೆಯ ಅಜ್ಜಿಯೊಬ್ಬರು ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು (H.D.Kumaraswamy) ಆಘಾತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಇಂಥ ಅಶಕ್ತರನ್ನು ಸರ್ಕಾರ ನಿರ್ಲಕ್ಷ್ಯ ಮಾಡಬಾರದು. ನಿಯಮಿತವಾಗಿ ಮಾಸಾಶನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಕಾಂಗ್ರೆಸ್ (Congress) ಸರ್ಕಾರ ಗ್ಯಾರಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ, ಆದರೆ ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ ಈ ದೃಶ್ಯವೇ ಜೀವಂತ ಸಾಕ್ಷಿ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಿಲಿಂದ್ ದಿಯೋರಾ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ: ಏಕನಾಥ್‌ ಶಿಂಧೆ

ರಾಜ್ಯ @INCKarnataka ಸರಕಾರದವರು ಗ್ಯಾರೆಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ.. ಆದರೆ, ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ ಈ ದೃಶ್ಯವೇ ಜೀವಂತ ಸಾಕ್ಷಿ.
**
ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ… pic.twitter.com/cGqhQO6GMp

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 14, 2024

ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ. ಈ ಘಟನೆ ಸರ್ಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ ಗ್ರಾಮದವರು. ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ ಅಜ್ಜಿಯ ದುಸ್ಥಿತಿಯನ್ನು ಕಂಡು ನನಗೆ ತೀವ್ರ ದುಃಖವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದಾಗ ವೃದ್ಧರು, ವಿಕಲಚೇತನರು, ವಿಧವೆಯರು, ದೇವದಾಸಿಯರು ಸೇರಿ ಸಮಾಜದ ವಿವಿಧ ದುರ್ಬಲ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟಿದ್ದೇನೆ. ಅವರ ಆರ್ಥಿಕ ಸಬಲೀಕರಣಕ್ಕೆ ಕ್ರಮ ವಹಿಸಿದ್ದೆ. ವೃದ್ಧಾಪ್ಯ ವೇತನ ಹಾಗೂ ವಿಕಲಚೇತನರ ಮಾಸಾಶನವನ್ನು ಏರಿಕೆ ಮಾಡಿದ್ದೆ. ಕಷ್ಟದಲ್ಲಿರುವವರಿಗೆ ಆಸರೆ ಕೊಡುವುದು ಆಡಳಿತ ನಡೆಸುವವರ ಕರ್ತವ್ಯವಾಗಿದೆ. ಗೃಹಲಕ್ಷ್ಮಿಯರಿಗೆ 2000 ರೂ. ಕೊಡುತ್ತೀರಿ ಸರಿ. ಆದರೆ ಇಂತಹ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರ್ಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ, ಸಂತೋಷ. ಆದರೆ ಬಡ, ಅಶಕ್ತ ಮಹಿಳೆಯರಿಗೆ ನೆರವಾಗುವ ವೃದ್ಧಾಪ್ಯ ವೇತನ, ವಿಧವಾ ವೇತನವನ್ನು ಸಕಾಲಕ್ಕೆ ಮತ್ತು ನಿಯಮಿತವಾಗಿ ಬಿಡುಗಡೆ ಮಾಡಬೇಕು. ಮಾಸಾಶನಕ್ಕಾಗಿ ಈ ಅಜ್ಜಿ 5 ಕಿ.ಮೀ. ತೆವಳಿಕೊಂಡು ಬಂದ ದೃಶ್ಯಗಳು ಪುನರಾವರ್ತನೆ ಆಗಬಾರದು. ಕೂಡಲೇ ಆ ತಾಯಿಗೆ ಸರ್ಕಾರ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು. ಇಂತಹದ್ದನ್ನೂ ಕಾಂಗ್ರೆಸ್ ಸರ್ಕಾರ ಕಣ್ತೆರೆದು ನೋಡಲಿ ಎಂದು ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅನಂತ್‌ ಕುಮಾರ್‌, ಸಿದ್ದರಾಮಯ್ಯ ಕಾಲಿನ ಧೂಳಿಗೂ ಸಮನಲ್ಲ: ತಂಗಡಗಿ ವಾಗ್ದಾಳಿ

TAGGED:congressdavanagereh d kumaraswamyjdsPensionsiddaramaiahಕಾಂಗ್ರೆಸ್ಜೆಡಿಎಸ್ದಾವಣಗೆರೆಮಾಸಾಶನಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Alexander Leonov
Latest

ಬ್ರಹ್ಮೋಸ್ ಕ್ಷಿಪಣಿ ಅಭಿವೃದ್ಧಿಪಡಿಸಿದ್ದ ರಷ್ಯಾದ ಅಲೆಕ್ಸಾಂಡರ್ ಲಿಯೊನೊವ್ ನಿಧನ

Public TV
By Public TV
1 hour ago
rcb
Bengaluru City

ತವರಲ್ಲಿ ಅಬ್ಬರಿಸಿ ಬೊಬ್ಬಿರಿದ RCB – ಚೆನ್ನೈ ವಿರುದ್ಧ 43 ರನ್‌ಗಳ ಭರ್ಜರಿ ಜಯ – ಪಾಯಿಂಟ್‌ ಪಟ್ಟಿಯಲ್ಲಿ ನಂ.1

Public TV
By Public TV
1 hour ago
SHARANYA 1
Districts

ನಾನು ಇದಕ್ಕಿಂತಲೂ ಕಠಿಣ ಟ್ರಕ್ಕಿಂಗ್‌ನಲ್ಲಿ ಭಾಗಿಯಾಗಿದ್ದೆ, ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿದ್ದೆ: ಶರಣ್ಯ

Public TV
By Public TV
2 hours ago
Weather
Districts

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ಆರ್ಭಟ – ಆರೋಗ್ಯ ಇಲಾಖೆ ಅಲರ್ಟ್

Public TV
By Public TV
2 hours ago
siddu bommai
Bagalkot

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬೊಮ್ಮಾಯಿ

Public TV
By Public TV
3 hours ago
Boeing 787 air india dreamliner
Latest

ಮೇ 31 ರವರೆಗೆ ಇಸ್ರೇಲ್‌ಗೆ ಏರ್ ಇಂಡಿಯಾ ವಿಮಾನ ಹಾರಾಟ ಸ್ಥಗಿತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?