ಬೆಳಗಾವಿ: ಕೆ.ಆರ್ ಪೇಟೆ ಕ್ಷೇತ್ರದಲ್ಲಿ ನಡೆದ ಗಲಾಟೆ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಕುಮಾರಸ್ವಾಮಿಯವರು, ಆಪಾದನೆಗಳಿಗೆ ನಾನ್ಯಾಕೆ ಉತ್ತರ ಕೊಡಲಿ, ಅದರ ಅವಶ್ಯಕತೆ ನಮಗಿಲ್ಲ ಎಂದು ಖಡಕ್ ಹೇಳಿಕೆ ಕೊಟ್ಟಿದ್ದಾರೆ.
ಗೋಕಾಕ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ನಾಮಪತ್ರ ಸಲ್ಲಿಕೆ ಹಿನ್ನೆಲೆ ಹೊರಗಡೆ ಇರುವುದರಿಂದ ನನ್ನ ಗಮನಕ್ಕೆ ಈ ವಿಚಾರ ಬಂದಿಲ್ಲ. ಅವರ ಆಪಾದನೆಗಳಿಗೆ ನಾನ್ಯಾಕೆ ಉತ್ತರ ಕೊಡಲಿ, ಅದರ ಅವಶ್ಯಕತೆ ನಮಗಿಲ್ಲ ಎಂದು ಬಿಜೆಪಿ ಅಭ್ಯರ್ಥಿ ನಾರಾಯಣಗೌಡರ ಆರೋಪಕ್ಕೆ ತಿರುಗೇಟು ಕೊಟ್ಟರು. ಇದನ್ನೂ ಓದಿ:ನಾರಾಯಣಗೌಡರು ಸಿಂಪತಿ ಗಿಟ್ಟಿಸಿಕೊಳ್ಳಲು ಚಪ್ಪಲಿಯಲ್ಲಿ ಹೊಡೆದ್ರು ಅಂತಿದ್ದಾರೆ: ದೇವರಾಜು ಕಿಡಿ
ಇದೇ ವೇಳೆ ಗೋಕಾಕ್ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ಅವರ ಬಗ್ಗೆ ಮಾತನಾಡಿ, ನಮ್ಮ ಕೆಲ ಲೋಪದೋಷಗಳಿಂದ 2008ರಲ್ಲಿ ಅಶೋಕ್ ಪೂಜಾರಿ ಚುನಾವಣೆ ಸೋತಿದ್ದರು. ಅಶೋಕ್ ನಾನು ಹಳೆ ಸ್ನೇಹಿತರು. ಅಶೋಕ್ ಮತ್ತೆ ತನ್ನ ಮನೆಗೆ ವಾಪಸ್ ಬಂದಿದ್ದಾರೆ. ಈ ಬಾರಿ ಅವರು ಗೆಲುವು ಸಾಧಿಸ್ತಾರೆ. ಚುನಾವಣೆಯಲ್ಲಿ ಸೋಲು, ಗೆಲುವು ಒಂದು ಪ್ರಕ್ರಿಯೆ, ನಮ್ಮ ಕುಟುಂಬ ಹಲವರು ಚುನಾವಣೆ ಸೋತಿದ್ದಾರೆ. ಇಷ್ಟು ದಿನ ರಮೇಶ್ ಜಾರಕಿಹೋಳಿ ಈ ಕ್ಷೇತ್ರದಲ್ಲಿ ಗೆದ್ದು ಬಂದಿದ್ದಾರೆ. ಈ ಬಾರಿ ಜನರು ಅವರಿಗೆ ಸೋಲಿನ ರುಚಿ ತೋರಿಸ್ತಾರೆ, ಸ್ವಲ್ಪ ಕಾದು ನೋಡಲಿ ಎಂದು ಬಿಜೆಪಿ ಅಭ್ಯರ್ಥಿಗೆ ಟಾಂಗ್ ಕೊಟ್ಟರು. ಇದನ್ನೂ ಓದಿ:ಎಕ್ಕಡದಲ್ಲಿ ಹೊಡೆದ್ರು, ದೇವರಾಜು ಅದನ್ನ ಅನುಭವಿಸಲೇ ಬೇಕು: ನಾರಾಯಣಗೌಡ ಆಕ್ರೋಶ
ಇವತ್ತು ಚುನಾವಣೆ ಅವಶ್ಯಕತೆ ಇರಲಿಲ್ಲ. ಯಾಕೆಂದರೆ ಜನರು ಸಂಕಷ್ಟದಲ್ಲಿದ್ದಾರೆ, ಆದರೆ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ. ಕೊಡಗು ಮಾದರಿಯಲ್ಲಿ ಇಲ್ಲಿ ಕೂಡಾ ಅಭಿವೃದ್ಧಿ ಆಗಬೇಕಿದೆ. ಪ್ರವಾಹಕ್ಕೆ ಬೆಳೆ ನಾಶವಾಗಿದೆ. ಅದಕ್ಕೆ ನೆರವು ಕೊಡಿಸುವ ಕಲ್ಪನೆ ಇಟ್ಟುಕೊಂಡಿದ್ದು, ಕ್ಷೇತ್ರದ ಅಭಿವೃದ್ಧಿ ಮಾಡುತ್ತೇವೆ ಎಂದು ಭರವಸೆ ನೀಡಿದರು.