ಚಿಕ್ಕಮಗಳೂರು/ಬೆಂಗಳೂರು: ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (CT Ravi) ಅವರ ಆಪ್ತ ಹೆಚ್ಡಿ ತಮ್ಮಯ್ಯ (HD Tammaiah) ಕಾಂಗ್ರೆಸ್ಗೆ (Congress) ಸೇರ್ಪಡೆಯಾಗಿದ್ದಾರೆ. ಆಪ್ತನನ್ನೇ ಆಪರೇಷನ್ ಮಾಡಿ ರವಿ ವಿರುದ್ಧ ಚುನಾವಣೆಗೆ ಇಳಿಸಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ.
ತಮ್ಮಯ್ಯ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತರೂ ಆಗಿದ್ದು, ಚಿಕ್ಕಮಗಳೂರು ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ. ಇದೀಗ ಕಾಂಗ್ರೆಸ್ ಚಿಕ್ಕಮಗಳೂರಿನಲ್ಲಿ ತಮಗೆ ಪ್ರಬಲ ಅಭ್ಯರ್ಥಿ ಇಲ್ಲ ಎಂಬ ಕಾರಣಕ್ಕೆ ನಿರಾತಂಕದಲ್ಲಿರುವ ಸಿಟಿ ರವಿಗೆ ಶಾಕ್ ಕೊಡಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ.
ಭಾನುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಹೆಚ್ಡಿ ತಮ್ಮಯ್ಯ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ತಮ್ಮಯ್ಯ ಜೊತೆ 300ಕ್ಕೂ ಹೆಚ್ಚು ಬೆಂಬಲಿಗರು ಡಿಕೆ ಶಿವಕುಮಾರ್ ಹಾಗೂ ಬಿಎಲ್ ಶಂಕರ್ ನೇತೃತ್ವದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿರುವ ತಮ್ಮಯ್ಯ, ನಾನು ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆ ಆಗುತ್ತಿದ್ದೇನೆ. ಬಿಜೆಪಿಯಲ್ಲಿ 17-18 ವರ್ಷಗಳ ಕಾಲ ಇದ್ದೆ. ಈಗ ಕಾಂಗ್ರೆಸ್ ಪಕ್ಷಕ್ಕೆ ಸಂತೋಷದಿಂದ ಸೇರಿದ್ದೇನೆ. ಡಿಕೆಶಿ ಅಧ್ಯಕ್ಷರಾದ ಮೇಲೆ ಇಡೀ ರಾಜ್ಯದಲ್ಲಿ ಒಂದು ಸಂಚಲನ ಮೂಡಿದೆ. ಸಿದ್ದರಾಮಯ್ಯ ಕೂಡಾ ಹಲವು ಜನಪರ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. ಇವರಿಬ್ಬರ ನೇತೃತ್ವ ಒಪ್ಪಿ ತುಂಬಾ ಜನರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಡಿಕೆಶಿ ಭೇಟಿಯಾದ ಜೆಡಿಎಸ್ ಶಾಸಕ ಶಿವಲಿಂಗೇಗೌಡ – ಕಾಂಗ್ರೆಸ್ ಸೇರಲು ಸಿದ್ಧತೆ
ನಾವು ಯಾವುದೇ ಒತ್ತಡ ಇಲ್ಲದೇ ಕಾಂಗ್ರೆಸ್ ಸೇರಿದ್ದೇವೆ. ಚುನಾವಣೆಯಲ್ಲಿ ಯಾವ ಅಭ್ಯರ್ಥಿಗೆ ಟಿಕೆಟ್ ಕೊಟ್ಟರೂ, ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಅನ್ನು ಗೆಲ್ಲಿಸುತ್ತೇವೆ. ಈಗಾಗಲೇ ಪಕ್ಷದಿಂದ ಸರ್ವೆ ಕೂಡಾ ಮಾಡಿಸುತ್ತಿದ್ದಾರೆ. ಸರ್ವೆಯಲ್ಲಿ ಗೆಲ್ಲುವಂತವರಿಗೆ ಯಾರಿಗೇ ಕೊಟ್ಟರೂ ಒಟ್ಟಾಗಿ ಕೆಲಸ ಮಾಡಿ ಎದುರಾಳಿ ಯಾರೇ ಆಗಿದ್ದರೂ ಎದೆಗುಂದದೆ ಕಾಂಗ್ರೆಸ್ ಅನ್ನು ಗೆಲ್ಲಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಭಿನ್ನಮತ ಸ್ಫೋಟ – ಬಿಜೆಪಿಗೆ ಮಾಜಿ ಶಾಸಕ ಕಿರಣ್ ಕುಮಾರ್ ಗುಡ್ಬೈ
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k