Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏ.16ರಿಂದ ಮಂಡ್ಯದಲ್ಲಿ ಹೆಚ್‌ಡಿಕೆ ಪ್ರಚಾರ – ʻಕೈʼ ಕಟ್ಟಿಹಾಕಲು ದಳಪತಿ ಪ್ಲ್ಯಾನ್‌ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಏ.16ರಿಂದ ಮಂಡ್ಯದಲ್ಲಿ ಹೆಚ್‌ಡಿಕೆ ಪ್ರಚಾರ – ʻಕೈʼ ಕಟ್ಟಿಹಾಕಲು ದಳಪತಿ ಪ್ಲ್ಯಾನ್‌ ಏನು?

Districts

ಏ.16ರಿಂದ ಮಂಡ್ಯದಲ್ಲಿ ಹೆಚ್‌ಡಿಕೆ ಪ್ರಚಾರ – ʻಕೈʼ ಕಟ್ಟಿಹಾಕಲು ದಳಪತಿ ಪ್ಲ್ಯಾನ್‌ ಏನು?

Public TV
Last updated: April 12, 2024 11:08 am
Public TV
Share
2 Min Read
HDK
SHARE

ಮಂಡ್ಯ: ರಣ ಬಿಸಿಲಿನ ಕಾವು ಹೆಚ್ಚಾದ್ದಂತೆ ಮಂಡ್ಯ ಲೋಕ ಅಖಾಡದ ಕಾವು ಜೋರಾಗ್ತಿದೆ. ಮೈತ್ರಿ ಅಭ್ಯರ್ಥಿಯನ್ನ ಸೋಲಿಸಲೇಬೇಕೆಂದು ಪಣ ತೊಟ್ಟಿರುವ ʻಕೈʼಪಡೆ ಹಳ್ಳಿ ಹಳ್ಳಿಗಳಲ್ಲಿ ಭರ್ಜರಿ ಪ್ರಚಾರ ನಡೆಸ್ತಿದೆ. ಕಾಂಗ್ರೆಸ್ ನ ಕ್ಯಾಂಪೇನ್ (Congress Election Campaign) ಸ್ಪೀಡ್ ಹೆಚ್ಚಾಗ್ತಿದ್ದಂತೆ ಅಲರ್ಟ್ ಆಗಿರುವ ಮೈತ್ರಿ ಅಭ್ಯರ್ಥಿ ದೋಸ್ತಿ ನಾಯಕರೊಂದಿಗೆ ಮತ್ತೆ ಮಂಡ್ಯ ಪ್ರಚಾರ ಅಖಾಡಕ್ಕೆ ಧುಮುಕಲು ರೆಡಿಯಾಗಿದ್ದಾರೆ‌. ಆ ಮೂಲಕ ಕೈ ಅಭ್ಯರ್ಥಿ ಮಣಿಸುವ ಪ್ಲ್ಯಾನ್‌ ಮಾಡಿದ್ದಾರೆ.

HDK 2

ಮಂಡ್ಯ ಲೋಕಸಭಾ ಅಖಾಡ ದಿನೇ ದಿನೇ ರಂಗೇರುತ್ತಿದೆ. ಅದರಲ್ಲಿಯೂ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಮೈತ್ರಿ ಅಭ್ಯರ್ಥಿಯಾಗಿ ಅಖಾಡಕ್ಕೆ ಧುಮುಕಿರುವುದರಿಂದ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕೈ ಪಡೆ, ಹೆಚ್ಡಿಕೆ ಸೋಲಿಸಿ ಮಣ್ಣು ಮುಕ್ಕಿಸಲೇಬೇಕೆಂದು ಪಣ ತೊಟ್ಟಿದೆ. ಜಿಲ್ಲೆಯಾದ್ಯಂತ ಭರ್ಜರಿ ಕ್ಯಾಂಪೇನ್ ನಡೆಸುತ್ತಿರುವ ಕೈ ಅಭ್ಯರ್ಥಿ ಸ್ಟಾರ್ ಚಂದ್ರು (Star Chandru) ಈಗಾಗಲೇ 3ನೇ ಸುತ್ತಿನ ಪ್ರಚಾರ ಆರಂಭಿಸಿದ್ದಾರೆ. ಮತ್ತೊಂದೆಡೆ ಸಚಿವರು, ಶಾಸಕರು ಸೇರಿದಂತೆ ಕೈ ನಾಯಕರು ಕ್ಯಾಂಪೇನ್ ನಲ್ಲಿ ತೊಡಗಿದ್ದಾರೆ. ಇದೀಗ ಕೈ ಪಡೆಯ ಪ್ರಚಾರದ ವೇಗ ಅರಿತಿರುವ ದೋಸ್ತಿ ಅಭ್ಯರ್ಥಿ ಹೆಚ್‌ಡಿಕೆ ಖುದ್ದು ತಾವೇ ಕ್ಯಾಂಪೇನ್ (Election Campaign) ಅಖಾಡಕ್ಕೆ ಧುಮುಕಲು ಸಜ್ಜಾಗಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 8 ದಿನ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮಿಂಚಿನ ವೇಗದಲ್ಲಿ ಪ್ರಚಾರ ನಡೆಸಲು ಡೇಟ್ ಕೂಡ ಫಿಕ್ಸ್ ಮಾಡಿಕೊಂಡಿದ್ದಾರೆ.

ಮಂಡ್ಯದಲ್ಲಿ ಯಾವಾಗ-ಎಲ್ಲಿಲ್ಲಿ ಪ್ರಚಾರ?
ಮಂಡ್ಯ ಲೋಕಸಭಾ ಕ್ಷೇತ್ರ 8 ವಿಧಾನಸಭಾ ಕ್ಷೇತ್ರಗಳನ್ನ ಒಳಗೊಂಡಿದ್ದು, 8 ಕ್ಷೇತ್ರದಲ್ಲಿಯೂ ಸಮಾವೇಶ ನಡೆಸಿ ಮತದಾರರ ಗಮನ ಸೆಳೆಯಲು, ಮತದಾರರ ಮನೆ, ಮನ ತಲುಪಲು ಹೆಚ್‌ಡಿಕೆ ಮುಂದಾಗಿದ್ದಾರೆ. ಆದ್ದರಿಂದ ಏ.16 ರಿಂದ ಏ.24ರ ವರೆಗೆ ಪ್ರಚಾರ ಸಮಾವೇಶ ನಡೆಸಲು ರೆಡಿಯಾಗಿದ್ದಾರೆ. ಏ.16 ಮಳವಳ್ಳಿ, 17 ಕೆ.ಆರ್ ಪೇಟೆ, 18 ಕೆ.ಆರ್ ನಗರ, 19 ಮೇಲುಕೋಟೆ, 21 ಶ್ರೀರಂಗಪಟ್ಟಣ, 22 ನಾಗಮಂಗಲ, 23 ಮದ್ದೂರು, 24 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಆ ಮೂಲಕ ಕೈ ಅಭ್ಯರ್ಥಿಗೆ ಸೋಲುಣಿಸಿ, ಕೈ ನಾಯಕರಿಗೆ ಟಕ್ಕರ್ ಕೊಡಲು ಮಾಜಿ ಸಿಎಂ ಕುಮಾರಸ್ವಾಮಿ ರೆಡಿಯಾಗಿದ್ದಾರೆ. ಹೆಚ್‌ಡಿಕೆ ಜೊತೆ ಬಿಜೆಪಿಯ ರಾಜ್ಯ ನಾಯಕರು ಸಮಾವೇಶದಲ್ಲಿ ಭಾಗಿಯಾಗಲಿದ್ದು, ದೋಸ್ತಿ ಪಡೆ ಒಟ್ಟಾಗಿ ಕಾಂಗ್ರೆಸ್ ಮಣಿಸಲು ತಯಾರಾಗಿದ್ದಾರೆ.

ಇನ್ನೂ ಹೆಚ್‌ಡಿಕೆ ಒಂದು ಕಡೆ ತಾಲೂಕು ಮಟ್ಟದಲ್ಲಿ ಬೃಹತ್ ಸಮಾವೇಶದ ಮೂಲಕ ಕ್ಯಾಂಪೇನ್ ಮಾಡಿದ್ರೆ, ಇತ್ತ ಪುತ್ರ ನಿಖಿಲ್ ತಂದೆ ಗೆಲುವಿಗಾಗಿ ಜಿಲ್ಲೆಯ ಎಲ್ಲ ಕ್ಷೇತ್ರದಲ್ಲಿಯೂ ಹೋಬಳಿವಾರು ಸಭೆ, ರೋಡ್ ಶೋಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಶನಿವಾರದಿಂದಲೇ ನಿಖಿಲ್ ಅಖಾಡಕ್ಕೆ ಧುಮುಕಲಿದ್ದಾರೆ. ಅದರ ಜೊತೆ ಆಯಾ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಶಾಸಕರು ಸ್ಥಳೀಯ ಮೈತ್ರಿ ನಾಯಕರು, ಕಾರ್ಯಕರ್ತರೊಂದಿಗೆ ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಇಂದಿನಿಂದಲೇ ಶಾಸಕ, ಮಾಜಿ ಶಾಸಕರು ತಮ್ಮ ನಾಯಕ, ಮೈತ್ರಿ ಅಭ್ಯರ್ಥಿ ಹೆಚ್ಡಿಕೆ ಪರ ಕ್ಯಾಂಪೇನ್ ನಲ್ಲಿ ತೊಡಗುತ್ತಿದ್ದಾರೆ.

ಕೈ‌ ಪಡೆಯ ಕ್ಯಾಂಪೇನ್ ಸ್ಪೀಡ್ ಕಂಡ ದೋಸ್ತಿ ಪಡೆ ಹೈ ಅಲರ್ಟ್ ಆಗಿದೆ. ಖುದ್ದು ತಾವು ಅಖಾಡಕ್ಕೆ ಧುಮುಕುವ ಮೂಲಕ ಕೈ ಪಡೆಗೆ ಸೋಲಿಣಿಸಲು ಸರ್ವ ಪ್ರಯತ್ನ ಮಾಡಲು ಪ್ಲ್ಯಾನ್‌ ಮಾಡಿಕೊಂಡಿದೆ. ಆದ್ರೆ ಮತದಾರರು ಯಾರಿಗೆ ಜೈ ಅಂತಾನೆ, ಯಾರಿಗೆ ಕೈ ಕೊಡ್ತಾನೆ ಎಂದು ಚುನಾವಣೆ ನಡೆದು ಫಲಿತಾಂಶ ಬರುವವರೆಗೂ ಕಾಯಬೇಕಿದೆ.

TAGGED:BJP-JDS Allianceelection campaignGeneral Elections 2024hd kumaraswamyIndia Elections 2024ಚುನಾವಣಾ ಪ್ರಚಾರಬಿಜೆಪಿ-ಜೆಡಿಎಸ್‌ ಮೈತ್ರಿಮಂಡ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

KSRTC
Bengaluru City

ಸಾರಿಗೆ ನೌಕರರಿಂದ ಮುಷ್ಕರ – ನಾಳೆ ಸಂಜೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಸ್ಥಗಿತ?

Public TV
By Public TV
30 minutes ago
Kunigal Ranganath
Bengaluru City

ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕು – ಸರ್ಕಾರಕ್ಕೆ ಶಾಸಕ ಕುಣಿಗಲ್ ರಂಗನಾಥ್ ಮನವಿ

Public TV
By Public TV
31 minutes ago
CRIME
Bengaluru City

ಹೆಂಡತಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ

Public TV
By Public TV
41 minutes ago
Team India 2
Cricket

T20 World Cup | ಟೀಂ ಇಂಡಿಯಾದ ‘ಸೂಪರ್-8’ ಸಂಗ್ರಾಮ – ಹೀಗಿದೆ ವೇಳಾಪಟ್ಟಿ

Public TV
By Public TV
58 minutes ago
HISTORIC After Lok Sabha Rajya Sabha Passes Womens Reservation Bill With Majority Votes
Latest

Rajya Sabha Elections: 10 ರಾಜ್ಯಗಳ 37 ಸ್ಥಾನಗಳಿಗೆ ಮಾ.16 ರಂದು ಮತದಾನ

Public TV
By Public TV
1 hour ago
GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಕಾಂಗ್ರೆಸ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?