ಮೋದಿಯನ್ನು ಜನ ಹುಚ್ಚು ಮೋದಿ ಅಂತಿದ್ದಾರೆ- ಮತ್ತೆ ನಾಲಗೆ ಹರಿಬಿಟ್ಟ ಕೈ ನಾಯಕ ಅಧೀರ್

Public TV
1 Min Read
MODI ADHIR

ಕೋಲ್ಕತ್ತಾ: ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಹಾಗೂ ಸಂಸದ ಅಧೀರ್ ರಂಜನ್ ಚೌಧರಿ (Adhir Ranjan Chowdhury) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ನಾಲಗೆ ಹರಿಬಿಟ್ಟಿದ್ದಾರೆ. ಪ್ರಧಾನಿಯನ್ನು ಟೀಕಿಸುವ ಭರದಲ್ಲಿ ಪಗ್ಲಾ ಮೋದಿ (ಹುಚ್ಚ ಮೋದಿ) ಎಂದು ನಿಂದಿಸುವ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ತಮ್ಮ ಹೇಳಿಕೆ ವಿವಾದವಾಗುತ್ತಿದ್ದಂತೆಯೇ ಅಧೀರ್ ಸ್ಪಷ್ಟನೆ ನೀಡಿದ್ದು, ನಾನು ಸಾರ್ವಜನಿಕರಲ್ಲಿ 2 ಸಾವಿರ ರೂ. ನೋಟು ಹಿಂತೆಗೆದುಕೊಳ್ಳುವ ನಿರ್ಧಾರಕ್ಕೆ ಯಾವ ಭಾವನೆ ಇದೆ ಎನ್ನುವುದನ್ನು ತಿಳಿಸಲು ಪ್ರಯತ್ನಿಸಿದೆ ಅಷ್ಟೇ. ಬೇರೆ ಯಾವುದೇ ಉದ್ದೇಶವಿರಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲೂ ಜನ ಮೋದಿಯನ್ನು ಇಷ್ಟಪಡುತ್ತಾರೆ: ಅನೂಪ್ ಜಲೋಟಾ

ADHIR CONGRESS

ಅಧೀರ್ ಹೇಳಿದ್ದೇನು..?: 2,000 ಮುಖಬೆಲೆಯ ನೋಟುಗಳು ಹಿಂಪಡೆದ ವಿಷಯವಾಗಿ ಮಾತನಾಡುತ್ತಿದ್ದ ವೇಳೆ ಕೈ ನಾಯಕ ಈ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರ ಬಗ್ಗೆ ದೇಶದ ನಾಗರಿಕರಲ್ಲಿ ಹತಾಶೆ ಹೆಚ್ಚುತ್ತಿದೆ. ಜನರು ಮೋದಿ ಅವರನ್ನು ಹುಚ್ಚು (ಪಗ್ಲಾ) ಮೋದಿ ಎಂದು ಕರೆಯುತ್ತಿದ್ದಾರೆ. ಸಾರ್ವಜನಿಕರ ಭಾವನೆಗಳು ಮೋದಿ ವಿರುದ್ಧ ಇವೆ ಎಂದು ಹೇಳಿದ್ದರು.

ಅಧೀರ್ ಅವರ ಹೇಳಿಕೆಗೆ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಮಾಮ್ ಕಿಡಿಕಾರಿದ್ದು, ಅಧೀರ್ ಅವರು ಪದೇ ಪದೇ ಪ್ರಧಾನಿ ಮೋದಿ ಅವರ ವಿರುದ್ಧ ನಿಂದನೀಯ ಭಾಷೆಯನ್ನು ಬಳಸುತ್ತಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಕೂಡಲೇ ಅವರು ಈ ಹೇಳಿಕೆ ಬಗ್ಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

Share This Article