Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಳಿ ಕೂದಲು, ಬೊಜ್ಜು ಸೇರಿ ಹಲವು ರೋಗಗಳಿಗೆ ಕರಿಬೇವಿನಲ್ಲಿದೆ ಪರಿಹಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Health | ಬಿಳಿ ಕೂದಲು, ಬೊಜ್ಜು ಸೇರಿ ಹಲವು ರೋಗಗಳಿಗೆ ಕರಿಬೇವಿನಲ್ಲಿದೆ ಪರಿಹಾರ

Health

ಬಿಳಿ ಕೂದಲು, ಬೊಜ್ಜು ಸೇರಿ ಹಲವು ರೋಗಗಳಿಗೆ ಕರಿಬೇವಿನಲ್ಲಿದೆ ಪರಿಹಾರ

Public TV
Last updated: June 25, 2022 11:41 am
Public TV
Share
2 Min Read
curry leaves3
SHARE

ಕರಿಬೇವು ಎಂದಾಕ್ಷಣ ಒಗ್ಗರಣೆಯ ನೆನಪಾಗುತ್ತದೆ. ಇದನ್ನು ಒಗ್ಗರಣೆ ಸೊಪ್ಪು ಎಂದು ಕೂಡ ಕರೆಯುತ್ತಾರೆ. ಕರಿಬೇವನ್ನು ಆಹಾರ ಪದಾರ್ಥಗಳಲ್ಲಿ ಹೆಚ್ಚಾಗಿ ಉಪಯೋಗಿಸದಿದ್ದರೆ ರುಚಿಯೇ ಬರುವುದಿಲ್ಲ. ಸಾಂಬಾರಿಗೆ ಒಗ್ಗರಣೆ ಹಾಕಲು, ಬಜೆ ಮಾಡಲು, ಚಟ್ನಿ ಮಾಡಲು, ಪಲ್ಯ ಮಾಡುವಾಗ ಇದರ ಬಳಕೆ ಹೆಚ್ಚು. ಕರಿಬೇವು ಇಲ್ಲದ ಅಡುಗೆ ರುಚಿಹೀನ ಎನ್ನಬಹುದು. ಈ ಕರಿಬೇವು ಅಡುಗೆಗೆ ಮಾತ್ರ ಸೀಮಿತವಾಗಿಲ್ಲ. ಇದನ್ನು ಸೌಂದರ್ಯ ವರ್ಧಕವಾಗಿಯೂ ಉಪಯೋಗಿಸುತ್ತಾರೆ. ಅಷ್ಟೆ ಅಲ್ಲದೆ ಕರಿಬೇವಿನಲ್ಲಿ ಕಾರ್ಬೋಹೈಡ್ರೇಟ್, ಫೈಬರ್, ಕ್ಯಾಲ್ಸಿಯಂ, ಕಬ್ಬಿಣ, ವಿಟಮಿನ್ ಸಿ, ಬಿ, ಎ ಪೋಷಕಾಂಶಗಳು ಇದ್ದು ಔಷಧೀಯ ಗುಣವನ್ನು ಹೊಂದಿದೆ.

Curry tree

ಬಿಳಿ ಕೂದಲು ಕಡಿಮೆ: ಬಿಳಿ ಕೂದಲ ಸಮಸ್ಯೆಯನ್ನು ಕರಿಬೇವು ದೂರ ಮಾಡುತ್ತದೆ. ದೇಹದಲ್ಲಿ ಪೋಷಕಾಂಶದ ಕೊರತೆಯಾದಾಗ ಮಕ್ಕಳಿಗೆ ಕೂದಲು ಬೇಗ ಬಿಳಿಯಾಗುತ್ತದೆ. ಇಂತಹ ಸಮಸ್ಯೆಗೆ ಕರಿಬೇವು ತುಂಬಾ ಸಹಕಾರಿಯಾಗಿದೆ. ಹಾಗೂ ಕೂದಲ ಬೆಳವಣಿಗೆಗೂ ಉಪಯುಕ್ತವಾಗಿದೆ. ಕರಿಬೇವಿನ ಎಲೆಗಳನ್ನು ಒಣಗಿಸಿ, ಅದನ್ನು ಕೊಬ್ಬರಿ ಎಣ್ಣೆಯಲ್ಲಿ, ಎಣ್ಣೆ ಹಸಿರು ಬಣ್ಣಕ್ಕೆ ಬರುವವರೆಗೂ ಕುದಿಸಬೇಕು. ನಂತರ ತಣಿಸಿ ಕೂದಲಿಗೆ ಪ್ರತಿ ವಾರಕೊಮ್ಮೆ ಹಚ್ಚುವುದರಿಂದ ಕೂದಲು ಬಿಳಿಯಾಗುವುದನ್ನು ತಡೆಯಬಹುದು.

white hair

ಎಸಿಡಿಟಿ ಕಡಿಮೆ: ಕರಿಬೇವಿನ ಮರದ ತೊಗಟೆಯನ್ನು ಒಣಗಿಸಿ, ಪುಡಿ ಮಾಡಿಕೊಂಡು, ಒಂದು ಚಮಚ ಆ ಪುಡಿಯನ್ನು ನೀರಲ್ಲಿ ಬೆರಸಿ ಸೇವಿಸದರೆ ಎಸಿಡಿಟಿ ಕಡಿಮೆಯಾಗುತ್ತದೆ. ಕರಿಬೇವಿಗೆ ಸಕ್ಕರೆ ಮತ್ತು ನಿಂಬೆ ರಸವನ್ನು ಸೇರಿಸಿ ಕಡಿಯುವುದರಿಂದ ಎಸಿಡಿಟಿ ಕಡಿಮೆ ಆಗುತ್ತದೆ. ಇದನ್ನೂ ಓದಿ: ಬೇಸಿಗೆಯಲ್ಲಿ ಕಾಮಕಸ್ತೂರಿ ಬೀಜ ಬಲು ಆರೋಗ್ಯಕಾರಿ

ಬೇಧಿ, ಆಮಶಂಕೆ ನಿವಾರಣೆ: ಎಳೆಯದಾದ ಕರಿಬೇವಿನ ಎಲೆಯನ್ನು ಜೇನು ತುಪ್ಪದೊಂದಿಗೆ ತಿನ್ನುವುದು, ಅಥವಾ ಕರಿಬೇವಿನ ಎಲೆಯನ್ನು ಚೆನ್ನಾಗಿ ಅರೆದು ಮಜ್ಜಿಗೆಯೊಂದಿಗೆ ಸ್ವಲ್ಪ ಶುಂಠಿ ಸೇರಿಸಿ ಕುಡಿಯುವುದರಿಂದ ಬೇಧಿ, ಆಮಶಂಕೆಯನ್ನು ನಿವಾರಿಸಬಹುದು.

curry leaves4

ಬೊಜ್ಜು ಕರಗಿಸಲು ಕರಿಬೇವು: ಕೆಲವರಿಗೆ ದೇಹದ ತೂಕ ಕಡಿಮೆ ಮಾಡುವುದು ಹೇಗೆ ಎಂಬುದೇ ದೊಡ್ಡ ಚಿಂತೆಯಾಗಿರುತ್ತದೆ. ಕರಿಬೇವು ದೇಹದಲ್ಲಿನ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಮೂಲಕ ದೇಹದ ತೂಕವನ್ನು ಕಡಿಮೆಗೊಳಿಸುತ್ತದೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಗೆ 8 ರಿಂದ 10 ತಾಜಾ ಕರಿಬೇವಿನ ಎಲೆಗಳನ್ನು ಜಗಿದು ತಿನ್ನುವುದರಿಂದ ದೇಹದ ತೂಕ ಕಡಿಮೆ ಮಾಡಬಹುದು. ಇದನ್ನೂ ಓದಿ: ನೋಡಲು ಪುಟ್ಟದಾಗಿರುವ ನೆಲನೆಲ್ಲಿಯಿಂದ ಬೆಟ್ಟದಷ್ಟು ಪ್ರಯೋಜನ

Curry tree 2

ಕಾಮಾಲೆ ರೋಗಕ್ಕೆ ಕರಿಬೇವು ಮದ್ದು:  ಕರಿಬೇವು ಕಾಮಾಲೆ ರೋಗಕ್ಕೆ ರಾಮಮದ್ದು ಆಗಿದೆ. 10 ರಿಂದ 12 ಕರಿಬೇವಿನ ಎಲೆಗಳನ್ನ ನೀರಿನಲ್ಲಿ ಚೆನ್ನಾಗಿ ತೊಳೆಯಬೇಕು. ಏಕೆಂದರೆ ಎಲೆಗಳ ಮೇಲೆ ಸಣ್ಣ ಪುಟ್ಟ ಕಶ್ಮಲಗಳು ಅಥವಾ ಹುಳು ಹಪ್ಪಟೆಗಳು ಹರಿದಿರುವ ಸಾಧ್ಯತೆ ಇರುತ್ತದೆ. ನಂತರ ಎಲೆಗಳನ್ನು ಅರೆದು ಆ ಮಿಶ್ರಣವನ್ನು ಸುಮಾರು 60 ರಿಂದ 100 ಮಿ.ಲೀ ಎಳೆನೀರಿನೊಂದಿಗೆ ಕುಡಿಯುವುದರಿಂದ ಕಾಮಾಲೆ ರೋಗವನ್ನು ಹೋಗಲಾಡಿಸಬಹುದು.

Curry tree 1

ರಕ್ತಹೀನತೆ ನಿವಾರಣೆ: 1/2 ಚಮಚ ಕರಿಬೇವು ಸೊಪ್ಪಿನ ಪುಡಿಯನ್ನು, ಜೇನು ತುಪ್ಪದ ಜೊತೆ ಸಮ ಪ್ರಮಾಣದಲ್ಲಿ ಬೆರಸಿ ಸೇವಿಸುವುದರಿಂದ ಅದರಲ್ಲಿರುವ ಕಬ್ಬಿಣದ ಅಂಶ ರಕ್ತಹೀನತೆಯನ್ನು ನಿವಾರಿಸುತ್ತದೆ. ಕರಿಬೇವು ಅನೇಕ ರೋಗಗಳಿಗೆ ಸಹಕಾರಿಯಾಗಿದೆ. ಕರಿಬೇವಿನ ಕಷಾಯ ಕುಡಿಯುವುದರಿಂದ ದೇಹದಲ್ಲಿ ಉಷ್ಣತೆ ಕಡಿಮೆ ಮಾಡುವುದರ ಮೂಲಕ ಜ್ವರವನ್ನು ಕಡಿಮೆಮಾಡಬಹುದು. ಮತ್ತು ಕರಿಬೇವು ಮೂಗು ಕಟ್ಟುವುದು, ಶ್ವಾಸಕೋಶದ ಸಮಸ್ಯೆ, ಮತ್ತು ಹೃದಯ ರೋಗದ ಸಮಸ್ಯೆಗಳನ್ನೂ ಹೋಗಲಾಡಿಸುತ್ತದೆ. ಆಲ್ಕೋಹಾಲ್ ಸೇವಿಸುವವರು ಆಹಾರದಲ್ಲಿ ಕರಿಬೇವನ್ನು ಸೇವಿಸುವುದರಿಂದ ಲಿವರ್ ಸಂಬಂಧಿತ ಕಾಯಿಲೆಗಳಿಂದ ದೂರವಿರಬಹುದು. ಇದನ್ನೂ ಓದಿ: ಕಿಡ್ನಿ ಸ್ಟೋನ್‍ನಿಂದ ಬಳಲುತ್ತಿದ್ದೀರಾ..?- ಹಾಗಾದರೆ ಇಲ್ಲಿದೆ ಮನೆ ಮದ್ದು

Live Tv

TAGGED:Curry leaveshealthಆರೋಗ್ಯಕರಿಬೇವು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
4 minutes ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
39 minutes ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
51 minutes ago
Narendra Modi 1 2
Latest

ಕಾಂಗ್ರೆಸ್‌ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆ – ದೇಶದ ಮಹಿಳೆಯರಲ್ಲಿ ಕ್ಷಮೆ ಕೇಳಿದ ಮೋದಿ

Public TV
By Public TV
2 hours ago
Iranian Envoy
Latest

ಭಾರತದ 2 ತೈಲ ಟ್ಯಾಂಕರ್‌ ಮೇಲೆ ಗುಂಡಿನ ದಾಳಿ – ಇರಾನ್‌ ರಾಯಭಾರಿಗೆ ಭಾರತ ಸಮನ್ಸ್‌

Public TV
By Public TV
2 hours ago
fairoz pathan
Dharwad

ಕೈ ಯುವ ನಾಯಕ ಫೈರೋಜ್ ಹತ್ಯೆ| ಮತ್ತೆ ಮೂವರ ಬಂಧನ – ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?