Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಿನ್ನಲು ಕಹಿಯಾದ್ರು ಆರೋಗ್ಯಕ್ಕೆ ಸಿಹಿಯಾದ ಬೇವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Health | ತಿನ್ನಲು ಕಹಿಯಾದ್ರು ಆರೋಗ್ಯಕ್ಕೆ ಸಿಹಿಯಾದ ಬೇವು

Health

ತಿನ್ನಲು ಕಹಿಯಾದ್ರು ಆರೋಗ್ಯಕ್ಕೆ ಸಿಹಿಯಾದ ಬೇವು

Public TV
Last updated: February 17, 2020 1:37 pm
Public TV
Share
3 Min Read
neem
SHARE

ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ.

neem leaves 500x500 1

ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ ಒಳ್ಳೆದು ಎನ್ನಲಾಗುತ್ತೆ. ಅಷ್ಟೇ ಅಲ್ಲದೇ ಬೇವಿನ ಎಲೆಗಳನ್ನು ಅರೆದು ಅದನ್ನು ಗಾಯಗಳಿಗೆ ಹಚ್ಚಿದರೆ ಗಾಯ ಬೇಗನೇ ಮಾಗುತ್ತವೆ.

neem juice 500x500 1

ಸಿಡುಬು (chicken pox), ಅಮ್ಮ (small pox), ದದ್ದು, ಕಾಲಿನ ಮೊಳೆ ಮೊದಲಾದ ತೊಂದರೆಗಳು ಬೇವಿನಿಂದ ಬೇಗನೇ ನಿವಾರಣೆಯಾಗುತ್ತದೆ. ಸುಲಭವಾಗಿ ಬಗ್ಗದ ಹರ್ಪೆಸ್ ವೈರಸ್ (herpes virus) ಕೂಡ ಬೇವು ನಾಶ ಮಾಡುತ್ತದೆ. ಕಹಿ ಬೇವನ್ನು ತಿನ್ನುವುದರ ಲಾಭವೇನು? ಯಾವೆಲ್ಲ ಸಮಸ್ಯೆಗೆ ಇದು ಮದ್ದು ಎನ್ನುವ ಮಾಹಿತಿ ಇಲ್ಲಿದೆ.

Neem Skincare Benefits

ಬೇವಿನ ಆರೋಗ್ಯಕರ ಲಾಭವೇನು?

ಲಿವರ್ ಸಮಸ್ಯೆಗೆ ಮದ್ದು:
ಬೇವಿನ ಎಲೆಗಳನ್ನು ಸೇವಿಸುವುದರಿಂದ ಲೀವರ್ ಕ್ಷಮತೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚುತ್ತದೆ. ಅಲ್ಲದೇ ರಕ್ತದಿಂದ ವಿಷಕಾರಿ ಅಂಶವನ್ನು ಹೊರಹಾಕಲು ನೆರವಾಗುತ್ತದೆ. ಜೊತೆಗೆ ಜೀರ್ಣ ಮತ್ತು ಶ್ವಾಸಕೋಶದ ವ್ಯವಸ್ಥೆಯನ್ನು ಇದು ಉತ್ತಮಗೊಳಿಸುತ್ತದೆ. ಅಲ್ಲದೇ ಬೇವಿನ ಎಣ್ಣೆ ಮತ್ತು ಬೇವಿನ ರಸಗಳನ್ನು ಸೇವಿಸುವುದರಿಂದ ದೇಹದಲ್ಲಿದ್ದ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶವಾಗುತ್ತದೆ.

neem plant and essential oil

ಚರ್ಮದ ಸಮಸ್ಯೆಗೆ:
ಬೇವಿನ ಎಣ್ಣೆಯನ್ನು ಬಿಸಿ ನೀರಿನಲ್ಲಿ ಸೇರಿಸಿ ಸ್ನಾನ ಮಾಡುವುದರಿಂದ ವಿವಿಧ ಚರ್ಮರೋಗಗಳು, ತುರಿಕೆ, ಹುಳಕಡ್ಡಿ ಮೊದಲಾದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಶೀತ ಮತ್ತು ಎಕ್ಸಿಮಾದಂತಹ ಚರ್ಮರೋಗವೂ ಕೂಡ ಇದರಿಂದ ವಾಸಿಯಾಗುತ್ತದೆ.

ತ್ವಚೆಯ ಕಲೆ ನಿವಾರಿಸುತ್ತದೆ:
ಗಾಯ ಮತ್ತು ಮೊಡವೆಗಳು ಮಾಗಿದ ಬಳಿಕ ಚರ್ಮದ ಮೇಲೆ ಕಲೆಗಳು ಉಳಿದು ಬಿಡುತ್ತದೆ. ಈ ಕಲೆಗಳನ್ನು ನಿವಾರಿಸಲು ಬೇವು ಸಹಕಾರಿಯಾಗಿದ್ದು, ಮುಖದಲ್ಲಿ ಮತ್ತೆ ಮೊಡವೆಗಳು ಆಗದಂತೆ ತಡೆಯುತ್ತದೆ.

winter skincare 3

ಚಿಕ್ಕಪುಟ್ಟ ಗಾಯಗಳಾದರೆ ಬೇವಿನ ಎಲೆಗಳ ರಸ ಅಥವಾ ಎಲೆಗಳನ್ನು ಅರೆದ ಹಚ್ಚಿದರೆ ಗಾಯಗಳು ಬೇಗ ಮಾಗುತ್ತದೆ. ಅಲ್ಲದೆ ಮೊಡವೆಗಳನ್ನು ನಿಯಂತ್ರಿಸಲು ನಿತ್ಯವೂ ಸ್ನಾನ ಮಾಡುವ ನೀರಿಗೆ ಬೇವಿನ ಎಣ್ಣೆಯ ಕೆಲವು ಹನಿಗಳನ್ನು ಸೇರಿಸಿದರೆ ತ್ವಚೆಯ ದುರ್ಗಂಧ, ಸೋಂಕುಗಳು ನಿವಾರಣೆಯಾಗುತ್ತದೆ ಹಾಗೂ ಚರ್ಮದಲ್ಲಿ ದದ್ದು, ಮೊಡವೆಗಳು ಆಗದಂತೆ ಇದು ನೋಡಿಕೊಳ್ಳುತ್ತದೆ.

ಮುಖದ ಕಾಂತಿ ಹೆಚ್ಚಿಸುತ್ತದೆ:
ಬೇವಿನ ಎಲೆಗಳನ್ನು ಹಾಕಿ ಕುದಿಸಿದ ನೀರಿನಲ್ಲಿ ಅದ್ದಿದ ಬಟ್ಟೆಯನ್ನು ಇಡೀ ರಾತ್ರಿ ಮುಖದ ಮೇಲೆ ಇಟ್ಟುಕೊಂಡು ಮಲಗಿದರೆ ಮುಖದ ಕಾಂತಿ ಹೆಚ್ಚಾಗುತ್ತೆ. ಹಾಗೆಯೇ ಈ ನೀರನ್ನು ತಲೆಗೆ ಹಚ್ಚಿ ಸ್ನಾನ ಮಾಡಿದರೆ ಕೂಡಲು ಉದುರುವಿಕೆ, ತಲೆಹೊಟ್ಟಿನ ಸಮಸ್ಯೆ ನಿವಾರಣೆ ಆಗುತ್ತದೆ.

Surprising beauty secrets using natural ingredients

ರಕ್ತ ಶುದ್ಧೀಕರಣಗೊಳಿಸುತ್ತೆ:
ಬೇವನ್ನು ತಿಂದರೆ ರಕ್ತ ಶುದ್ಧೀಕರಣಗೊಳ್ಳುತ್ತದೆ ಹಾಗೂ ರಕ್ತದೊತ್ತಡ ಕಡಿಮೆಯಾಗುತ್ತದೆ. ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರ ಹಾಕಿ, ರಕ್ತಸಂಚಾರ ಉತ್ತಮಗೊಳ್ಳುತ್ತದೆ. ವೃದ್ಧಾಪ್ಯ ಬೇಗನೇ ಆವರಿಸಲು ಕಾರಣವಾಗುವ free radical ಎಂಬ ಕಣಗಳನ್ನು ಬೇವು ಕೊಲ್ಲುವುದರಿಂದ ತಾರುಣ್ಯ ಬಹುಕಾಲ ಉಳಿಯುತ್ತದೆ. ಅಲ್ಲದೇ ಬೇವನ್ನು ಸೇರಿಸಿದರೆ ರಕ್ತನಾಳಗಳಲ್ಲಿ ಸಂಗ್ರಹವಾಗಿದ್ದ ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆಯಾಗಿ, ದೇಹದಲ್ಲಿ ರಕ್ತಸಂಚಾರ ಸುಗಮಗೊಳ್ಳುತ್ತದೆ. ಇದರಿಂದ ಹೃದಯದ ಮೇಲೆ ಬೀಳುವ ಒತ್ತಡ ಕಡಿಮೆಯಾಗುತ್ತದೆ.

Mosquito 2

ಮಲೇರಿಯಾ ಜ್ವರಕ್ಕೆ:
ಬೇವಿನಲ್ಲಿರುವ ಜೆಡ್ಯುನಿನ್ (Gedunin) ಎಂಬ ರಾಸಾಯನಿಕ ಮಲೇರಿಯಾ ಜ್ವರವನ್ನು ಕಡಿಮೆಗೊಳಿಸಲು ನೆರವಾಗುತ್ತದೆ. ಬೇವಿನ ಎಲೆಗಳನ್ನು ಜಜ್ಜಿ ಮನೆಯ ಸುತ್ತ ಮುತ್ತ ಹರಡುವುದರಿಂದ ಆ ವಾಸನೆಗೆ ಸೊಳ್ಳೆಗಳು ಕಡಿಮೆ ಆಗುತ್ತದೆ. ಅಲ್ಲದೆ ಬೇವಿನ ಎಲೆಗಳನ್ನು ತಿಂದರೆ ಅಥವಾ ಅದರ ರಸವನ್ನು ಕುಡಿದರೆ ಮಲೇರಿಯಾ ಜ್ವರ ಕಡಿಮೆ ಆಗುತ್ತದೆ.

ಕ್ಯಾನ್ಸರ್ ನಿಯಂತ್ರಿಸಲು:
ನಿಯಮಿತವಾಗಿ ಬೇವಿನ ಎಲೆಗಳನ್ನು ಹಸಿಯಾಗಿ ಸೇವಿಸುವವರಲ್ಲಿ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಳ್ಳು ಸಾಧ್ಯತೆ ಕಡಿಮೆ. ಬೇವಿನ ಮರದ ತೊಗಟೆಯಲ್ಲಿ ಕಂಡುಬರುವ Limonoids ಮತ್ತು polysaccharides ಎಂಬ ರಾಸಾಯನಿಕಗಳು ದೇಹದಲ್ಲಿ ಕ್ಯಾನ್ಸರ್ ಮತ್ತು ಗಡ್ಡೆಯುಂಟಾಗುವುದನ್ನು ತಡೆಯುತ್ತದೆ.

CANCER CELLS

ಸಂಧಿವಾತಕ್ಕೆ:
ಸಂಧಿವಾತ ಸಮಸ್ಯೆಗೆ ಬೇವಿನ ಎಲೆ ಮತ್ತು ಬೇವಿನ ತೊಗಟೆಯನ್ನು ಅರೆದು ತಯಾರಿಸಿದ ಲೇಪನ ಉತ್ತಮ ಪರಿಹಾರ ನೀಡುತ್ತದೆ. ಇದರಿಂದ ಸಂದುಗಳಲ್ಲಿ ಬಾವು, ನೋವು ಕೂಡ ಕಡಿಮೆಯಾಗುತ್ತದೆ.

ಬೇವಿನ ಎಣ್ಣೆಯ ಮಸಾಜ್:
ಬೇವಿನ ಎಣ್ಣೆ ಚರ್ಮಕ್ಕೆ ಒಳ್ಳೆದು. ಈ ಎಣ್ಣೆಯಲ್ಲಿ ಮೈಯನ್ನು ಮಸಾಜ್ ಮಾಡುವುದರಿಂದ ಕೆಳಬೆನ್ನಿನ ನೋವು, ಸಂಧಿವಾತ, ಸ್ನಾಯುಗಳಲ್ಲಿ ನೋವು ಹೀಗೆ ವಿವಿಧ ನೋವುಗಳು ಕಡಿಮೆಯಾಗುತ್ತವೆ.

neem yagi

TAGGED:healthHealth tipsNeemPublic TVಆರೋಗ್ಯಪಬ್ಲಿಕ್ ಟಿವಿಬೇವುಹೆಲ್ತ್ ಟಿಪ್ಸ್
Share This Article
Facebook Whatsapp Whatsapp Telegram

Cinema news

Kichcha Sudeep Mark
ತ್ರಿಶೂಲ ಹಿಡಿದು ಬಂದ ನಟ ಕಿಚ್ಚ ಸುದೀಪ್
Cinema Latest Sandalwood Top Stories
45 Movie
ಕರುನಾಡಲ್ಲಿ `45’ ಸಿನಿಮಾ ಅಬ್ಬರ: ಅಡ್ವಾನ್ಸ್‌ ಬುಕ್ಕಿಂಗ್ ಭರ್ಜರಿ ಜೋರು
Cinema Latest Sandalwood Top Stories
Vijay Deverakondas next titled Rowdy Janardhana
ವಿಜಯ್‌ ದೇವರಕೊಂಡ ನಟನೆಯ ರೌಡಿ ಜನಾರ್ದನ ಟೈಟಲ್ ಗ್ಲಿಂಪ್ಸ್ ರಿಲೀಸ್
Cinema Latest South cinema
prakash raj
ಜ.29-ಫೆ.6ರವರೆಗೆ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ – ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ
Bengaluru City Cinema Districts Karnataka Latest Sandalwood Top Stories

You Might Also Like

Winston Peters
Latest

Bad Deal – ಭಾರತದ ಜೊತೆಗಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ನ್ಯೂಜಿಲೆಂಡ್‌ ವಿದೇಶಾಂಗ ಸಚಿವ ಟೀಕೆ

Public TV
By Public TV
3 minutes ago
Delhi Airport weather
Latest

ಉತ್ತರ ಭಾರತದಾದ್ಯಂತ ಶೀತ ಗಾಳಿ – ದೆಹಲಿ ಏರ್‌ಪೋರ್ಟ್‌ನಲ್ಲಿ 100 ಮೀ.ಗಿಳಿದ ಗೋಚರತೆ

Public TV
By Public TV
32 minutes ago
trump maga
Latest

2.7 ಲಕ್ಷ ರೂ. ತಗೊಳ್ಳಿ, ಅಮೆರಿಕ ಬಿಟ್ಟು ಹೋಗಿ: ಅಕ್ರಮ ವಲಸಿಗರಿಗೆ ಟ್ರಂಪ್ ಕ್ರಿಸ್‌ಮಸ್ ಆಫರ್

Public TV
By Public TV
40 minutes ago
03 11
Latest

ಬಿಗ್‌ ಬುಲೆಟಿನ್‌ 22 December 2025 ಭಾಗ-3

Public TV
By Public TV
40 minutes ago
virat kohli 4
Bengaluru City

ಬೆಂಗಳೂರಿನಲ್ಲೇ ಕೊಹ್ಲಿ ಆಡಲಿದ್ದಾರೆ, ಆದ್ರೆ ಚಿನ್ನಸ್ವಾಮಿಯಲ್ಲಿ ಅಲ್ಲ!

Public TV
By Public TV
56 minutes ago
rahul gandhi kn rajanna
Bengaluru City

ರಾಹುಲ್ ಗಾಂಧಿಗೆ ಕೆ.ಎನ್.ರಾಜಣ್ಣ ಪತ್ರ – ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?