Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆಯಲ್ಲೇ ಬಾಣಂತಿಯರ ನರಳಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆಯಲ್ಲೇ ಬಾಣಂತಿಯರ ನರಳಾಟ

Chitradurga

ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆಯಲ್ಲೇ ಬಾಣಂತಿಯರ ನರಳಾಟ

Public TV
Last updated: January 4, 2020 6:10 pm
Public TV
Share
2 Min Read
CTD Hospital
SHARE

– ಬೆಡ್ ಇಲ್ಲದೇ ನೆಲದ ಮೇಲೆ ಮಲಗುವ ಬಾಣಂತಿಯರು

ಚಿತ್ರದುರ್ಗ: ಗರ್ಭಿಣಿಯರಿಗೆ ಹೆರಿಗೆ ಸಮಯದಲ್ಲಿ ತೊಂದರೆ ಆಗಬಾರದು ಅಂತ 9 ತಿಂಗಳು ಕುಟುಂಬಸ್ಥರು ಮನೆಯಲ್ಲಿ ಎಷ್ಟೇ ಬಡತನವಿದ್ದರೂ ಸುರಕ್ಷಿತವಾಗಿ ನೋಡಿಕೊಂಡಿರುತ್ತಾರೆ. ಆದರೆ ಹೆರಿಗೆಗೆಂದು ಬರುವ ಮಹಿಳೆಯರಿಗೆ ಚಿತ್ರದುರ್ಗದ ಜಿಲ್ಲಾಸ್ಪತ್ರೆಯು ಕೇವಲ ಐದು ದಿನಗಳಲ್ಲೇ ನರಕ ದರ್ಶನವನ್ನು ಮಾಡಿಸುತ್ತದೆ.

ಜಿಲ್ಲಾಸ್ಪತ್ರೆಗೆ ಹೆರಿಗೆಗೆಂದು ಬರುವ ಗರ್ಭಿಣಿಯರು ಅವರೊಂದಿಗೆ ಪೋಷಕರನ್ನು ಕರೆತರಲೇಬೇಕಾದ ಸ್ಥಿತಿ ಇಲ್ಲಿ ನಿರ್ಮಾಣವಾಗಿದೆ. ಒಂದು ವೇಳೆ ಅನಿವಾರ್ಯವಾಗಿ ಒಬ್ಬರೆ ಬಂದರೆ ಆಸ್ಪತ್ರೆ ಆವರಣದಲ್ಲಿ ಪುಟ್ಟ ಪುಟ್ಟ ಕಂದಮ್ಮಗಳನ್ನು ತಮ್ಮ ತೊಡೆಯ ಮೇಲೆ ಮಲಗಿಸಿಕೊಂಡು ನೆಲದ ಮೇಲೆ ಬಾಣಂತಿಯರು ಕುಳಿತುಕೊಳ್ಳವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

CTD Hospital A

ಅದರಲ್ಲೂ ರಾತ್ರಿ ಹೆರಿಗೆಯಾದ ಬಾಣಂತಿಯರಿಗೆ ವಾರ್ಡ್ ಮುಂಭಾಗದಲ್ಲಿರುವ ಗ್ರಾನೈಟ್ ಕುರ್ಚಿಗಳ ಮೇಲೆ ಅವರನ್ನು ಮಲಗಿಸಲಾಗುತ್ತದೆ. ಆ ಜಾಗ ಸಿಗದಿದ್ದಾಗ ಸಿಕ್ಕ ಸಿಕ್ಕ ಜಾಗದಲ್ಲೇ ಅಥವಾ ನೆಲದಮೇಲೆ ಬಾಣಂತಿಯರ ನರಳುಡುತ್ತಾ ಮಲಗಬೇಕಾಗುತ್ತದೆ. ಇಷ್ಟೆಲ್ಲಾ ಮನಕಲುಕುವ ದೃಶ್ಯಗಳು ಕಣ್ಣಿಗೆ ಬಿದ್ದರೂ ಆರೋಗ್ಯ ಇಲಾಖೆ ಸಿಬ್ಬಂದಿಗೆ ಈ ದೃಶ್ಯಗಳು ಸಾಮಾನ್ಯವೆನಿಸಿವೆ ಎಂದು ಸಾರ್ವಜನಿಕರು ದೂರಿದ್ದಾರೆ.

ಈ ಸಮಸ್ಯೆ ತಲೆದೂರಿರೋದು ಕೂಡ ಆರೋಗ್ಯ ಸಚಿವ ಶ್ರೀರಾಮುಲು ಅವರ ತವರು ಜಿಲ್ಲೆಯಾದ ಚಿತ್ರದುರ್ಗದ ಸರ್ಕಾರಿ ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡನಲ್ಲಿ ಎನ್ನುವುದು ಕೂಡ ವಿಪರ್ಯಾಸವೇ ಸರಿ. ನೋಡುವುದಕ್ಕೆ ಅಷ್ಟೇ ಇದು ಚಿತ್ರದುರ್ಗ ಜಿಲ್ಲಾಸ್ಪತ್ರೆ. ಆದರೆ ಯಾವುದೇ ಮೂಲ ಸೌಕರ್ಯಗಳು ಈ ಆಸ್ಪತ್ರೆಯಲ್ಲಿಲ್ಲ. ಒಂದು ವಾರ ಬಾಣಂತಿಯರು ಕಂದಮ್ಮಗಳ ಜೊತೆಗೆ ನೆಲದ ಮೇಲೆ ಮಲಗುವ ಪರಿಸ್ಥಿತಿ ಇಲ್ಲಿದೆ. ಯಾವಾಗಲೂ ಫುಲ್ ಆಗಿರುವ ಆಸ್ಪತ್ರೆಯಲ್ಲಿ ಕೆಲ ಹಾಸಿಗೆಗಳು ರಾಜಕಾರಣಿಗಳ ಬೆಂಬಲಿಗರ ಕಡೆಯವರಿಗೆ ಮಾತ್ರ ಮೀಸಲಾಗಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

CTD Hospital B

ಬಡವರು, ನಿರ್ಗತಿಕ ಬಾಣಂತಿಯರು ಹೆರಿಗೆಯಾದಾಗ ಬೆಡ್ ಕೇಳಿದರೆ ಇಲ್ಲಿ ಬೆಡ್ ಖಾಲಿ ಇಲ್ಲ. ಚಿಕಿತ್ಸೆ ಬೇಕಂದ್ರೆ ನೆಲದ ಮೇಲೆ ವಾಸ್ತವ್ಯ ಹೂಡಿ ಅಂತ ಸಿಬ್ಬಂದಿ ದಬಾಯಿಸುತ್ತಾರೆ. ಅಷ್ಟೇ ಅಲ್ಲದೆ ಸಿಜೇರಿಯನ್ ಆಗಿ ಹೆರಿಗೆಯಾದ ತಾಯಿಯೇ ಒಂದು ಕಡೆ ಇದ್ದರೆ, ಗಂಭೀರ ಸ್ಥಿತಿಯಲ್ಲಿರುವ ಶಿಶು ಒಂದು ಕಡೆ ಇರುವ ಪರಿಸ್ಥಿತಿ ಕೂಡ ನಿರ್ಮಾಣವಾಗಿದೆ. ಕೆಲವು ಸಂದರ್ಭದಲ್ಲಿ ಮಗು ಕೂಡ ಅದಲು ಬದಲಾಗುವ ಆತಂಕ ಸಹ ಬಾಣಂತಿಯರನ್ನು ಕಾಡುತ್ತಿದೆ. ಹೀಗಾಗಿ ಸಮೀಪದಲ್ಲೇ ಇರುವ ವಾರ್ಡ್ ನಲ್ಲಿ ಅವಕಾಶ ಕೇಳಿದರೆ ಸಿಬ್ಬಂದಿ ಸ್ಪಂದಿಸುವುದಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

CTD Hospital C

ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಅವರು ಗೆದ್ದಂತಹ ಜಿಲ್ಲೆಯಲ್ಲೇ ಇಂತಹ ದುಸ್ಥಿತಿ ಇದ್ದರೆ ಬೇರೆ ಜಿಲ್ಲಾಸ್ಪತ್ರೆಗಳ ಪಾಡೇನು ಎಂಬ ಪ್ರಶ್ನೆ ನಮಗೆ ಮೂಡುತ್ತಿದೆ ಎಂದು ಸಾರ್ವಜನರಿಕರು ಅಸಮಾಧಾನ ಹೊರಹಾಕಿದ್ದಾರೆ. ಈ ಪರಿಸ್ಥಿತಿಯ ಬಗ್ಗೆ ಜಿಲ್ಲಾಸ್ಪತ್ರೆಯ ಆರೋಗ್ಯಾಧಿಕಾರಿ ಬಸವರಾಜ್ ಪ್ರತಿಕ್ರಿಯಿಸಿದ್ದು, ಆಸ್ಪತ್ರೆಯಲ್ಲಿ ಕೇವಲ 50 ಬೆಡ್‍ಗಳ ವ್ಯವಸ್ಥೆಯಿಂದೆ. ಆದರೆ ಇಲ್ಲಿ ಒಂದು ದಿನಕ್ಕೆ 30ರಿಂದ 40 ಮಹಿಳೆಯರಿಗೆ ಹೆರಿಗೆ ಮಾಡಿಸಲಾಗುತ್ತದೆ. ಆದ್ದರಿಂದ ಈ ರೀತಿಯ ಸಮಸ್ಯೆ ಉಂಟಾಗುವುದು ಸಹಜ. ಹೀಗಾಗಿ ಹೆಚ್ಚಿನ ಬೆಡ್‍ಗಳ ಆಸ್ಪತ್ರೆ ಜಿಲ್ಲೆಗೆ ಅಗತ್ಯವಿದೆ. ಈಗಾಗಲೇ ನೂತನ ಕಟ್ಟಡಕ್ಕಾಗಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅತಿ ಶೀಘ್ರದಲ್ಲೇ ಈ ಸಮಸ್ಯೆ ಬಗೆಹರೆಯಲಿದೆ ಎಂದು ಹೇಳಿದ್ದಾರೆ.

TAGGED:B. SriramuluChitradurgadistrict hospitalhealth ministerNursing motherPublic TVಆರೋಗ್ಯ ಸಚಿವಚಿತ್ರದುರ್ಗಜಿಲ್ಲಾಸ್ಪತ್ರೆಪಬ್ಲಿಕ್ ಟಿವಿಬಾಣಂತಿಯರುಶ್ರೀರಾಮಲು
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Chikkamagaluru Rain
Chikkamagaluru

ಚಿಕ್ಕಮಗಳೂರಲ್ಲಿ ಭಾರೀ ಮಳೆ – ರಸ್ತೆಗುರುಳಿದ ಬೃಹತ್‌ ಮರ, 5 ಕಿಮೀ ಟ್ರಾಫಿಕ್‌ ಜಾಮ್‌!

Public TV
By Public TV
22 minutes ago
hardik pandyas new ferrari worth rs 12 cr all you need to know about the supercar
Automobile

ಗೆಳತಿ ಜೊತೆ 12 ಕೋಟಿ ಮೌಲ್ಯದ ಫೆರಾರಿಯಲ್ಲಿ ಪಾಂಡ್ಯ ಸುತ್ತಾಟ – ಕಾರಿನ ವಿಶೇಷತೆ ಏನು?

Public TV
By Public TV
43 minutes ago
padma awards
Latest

ನಿಮ್ಮ ನೆಚ್ಚಿನ ಸಾಧಕರನ್ನು ಪದ್ಮ ಪ್ರಶಸ್ತಿಗೆ ಶಿಫಾರಸು ಮಾಡಿ!

Public TV
By Public TV
1 hour ago
byelections for davangere south press meet by five bjp ticket aspirants
Davanagere

ದಾವಣಗೆರೆ | ಯಾರಿಗೆ ಟಿಕೆಟ್‌ ಕೊಟ್ಟರೂ ಬಿಜೆಪಿ ಗೆಲ್ಲಿಸ್ತೇವೆ – ಐವರು ಟಿಕೆಟ್ ಆಕಾಂಕ್ಷಿಗಳಿಂದ ಒಗ್ಗಟ್ಟು ಪ್ರದರ್ಶನ

Public TV
By Public TV
2 hours ago
LPG Gas Shortage
Explainer

PublicTV Explainer: ಪೈಪ್‌ಗಳು v/s ಸಿಲಿಂಡರ್‌ಗಳು – ಎಲ್‌ಪಿಜಿ ಬಿಕ್ಕಟ್ಟಿಗೆ ಪಿಎನ್‌ಜಿ ಪರಿಹಾರ?

Public TV
By Public TV
2 hours ago
ಸಾಂದರ್ಭಿಕ ಚಿತ್ರ
Latest

ಡಿಸಿಎಂ ಬಳಿಕ ಸಚಿವರಿಗೆ ಈಗ ಸಿಎಂ ಡಿನ್ನರ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?