ಬಳ್ಳಾರಿ: ನವದಂಪತಿಗಳು ತಮ್ಮ ಮುಂದಿನ ಭವಿಷ್ಯದ ಬಗ್ಗೆ ತಮ್ಮದೇ ಆದ ಕನಸ್ಸು ಕಟ್ಟಿಕೊಂಡಿದ್ದರು. ಆದರೆ ಇವರ ಕನಸು ಏಕೋ ಜವರಾಯನಿಗೆ ಇಷ್ಟವಾಗಲಿಲ್ಲ ಅನಿಸುತ್ತದೆ. ಮದುವೆ ಆರತಕ್ಷತೆ ವೇಳೆ ದಿಢೀರನೇ ಎದೆನೋವು ಕಾಣಿಸಿಕೊಂಡು ವರ ಸಾವನ್ನಪ್ಪಿದ್ದಾನೆ. ಮದುವೆ ದಿನವೇ ವರ ಮರಣ ಹೊಂದಿದ್ದು ಕುಟುಂಬಸ್ಥರಿಗೆ ಬರಸಿಡಿಲು ಬಡಿದಂತಾಗಿದೆ.
ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಲಿನ ಪಾಪಿನಾಯಕನ ಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತ ದುರ್ದೈವಿಯನ್ನು ಹೊನ್ನೂರ ಸ್ವಾಮಿ ಎಂದು ಗುರುತಿಸಲಾಗಿದೆ. ಬುಧವಾರ ಗ್ರಾಮದ ಸುಡುಗಾಡಪ್ಪನ ದೇವಸ್ಥಾನದಲ್ಲಿ ಹೊನ್ನೂರಸ್ವಾಮಿ ವಿವಾಹವಾಗಿದ್ದರು. ನಂತರ ನಡೆದ ಆರತಕ್ಷತೆ ವೇಳೆ ಹೊನ್ನೂರ ಸ್ವಾಮಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ಎದೆ ನೋವು ತಾಳಲಾರದೇ ವೇದಿಕೆ ತುಂಬೆಲ್ಲಾ ಹೊನ್ನೂರಸ್ವಾಮಿ ಒದ್ದಾಡುತ್ತಿರುತ್ತಾರೆ. ಇದನ್ನು ಕಂಡು ಸಂಬಂಧಿಕರು ಹಾಗೂ ಸ್ನೇಹಿತರು ಹೀಗ್ಯಾಕೆ ಆಡುತ್ತಿದ್ದೀಯಾ ಸುಮ್ನೆ ಒಂದು ಕಡೆ ಇರಲು ಆಗುವುದಿಲ್ವಾ ಎಂದು ಬೈದಿದ್ದಾರೆ. ಆಗ ಹೊನ್ನೂರಸ್ವಾಮಿ ತನ್ನ ತಮ್ಮನ ಬಳಿ, ನನಗ್ಯಾಕೋ ಪುನೀತ್ ರಾಜಕುಮಾರ್ ಅವರಿಗೆ ಆದ ಹಾಗೇ ಆಗುತ್ತಿದೆ ಎಂದಿದ್ದಾನೆ. ಇದನ್ನೂ ಓದಿ: ಸಿದ್ದರಾಮಯ್ಯ ನನ್ನನ್ನು ಕಾಂಗ್ರೆಸ್ಗೆ ಕರೆದಿಲ್ಲ, ಬಿಜೆಪಿಗೆ ಹೋಗಬೇಡ ಅಂದಿದ್ದಾರೆ: ಜಿಟಿಡಿ
ಕೂಡಲೇ ಅಲ್ಲಿದ್ದವರು ಕುಡಿಯುವುದಕ್ಕೆಂದು ಸೋಡಾ ತಂದು ಕೊಟ್ಟಿದ್ದಾರೆ. ಕುಡಿದ ಸೋಡಾ ಕೂಡ ವಾಂತಿಯಾಗಿದೆ. ಅಲ್ಲಿದ್ದವರು ಸಮೀಪದಲ್ಲಿಯೇ ಇರುವ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾರೆ. ಅದಾಗಲೇ ಹೊನ್ನೂರ ಸ್ವಾಮಿಗೆ ಲೋ ಬಿಪಿಯಾಗಿದ್ದು, ಎಚ್ಚರ ತಪ್ಪಿದ್ದಾರೆ. ಅವರನ್ನು ಪರೀಕ್ಷೆ ಮಾಡಿದ ವೈದ್ಯರು ಹೊಸಪೇಟೆಯಲ್ಲಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಸಲಹೆ ನೀಡಿದ್ದಾರೆ. ಆದರೆ ಅಲ್ಲಿಗೆ ಹೋಗುವಷ್ಟರಲ್ಲಿ ಹೊನ್ನೂರ ಸ್ವಾಮಿ ಅವರ ಪ್ರಾಣಪಕ್ಷಿ ಹಾರಿಹೋಗಿದೆ. ಇದನ್ನೂ ಓದಿ: ಇಡಿ ವಿರುದ್ಧ ಆಕ್ರೋಶ – ಎರಡು ಕಾರುಗಳಿಗೆ ಬೆಂಕಿ ಹಚ್ಚಿದ ಕೈ ಕಾರ್ಯಕರ್ತರು