ಮೈಸೂರು: ಒಂಚೂರು ಸುಳಿವು ನೀಡದೇ ಯಮರಾಯ ಎರಗಿ ಬರ್ತಾನೆ. ಸಾವು ಯಾವಾಗ ಹೇಗೆ ಬರುತ್ತೆ ಅಂತ ಗೊತ್ತಾಗಲ್ಲ. ಮೈಸೂರಿನಲ್ಲಿ (Mysuru) ಆಗಿದ್ದು ಅದೇ. ಬೈಕ್ ಓಡಿಸುತ್ತಿರುವಾಗಲೇ ಸವಾರನಿಗೆ ಹೃದಯಾಘಾತವಾಗಿದೆ.
- Advertisement -
ಹೃದಯಾಘಾತ (Heart Attack) ಆಗ್ತಿದ್ದಂತೆ ಪ್ರಜ್ಞೆ ತಪ್ಪಿ ತಡೆಗೋಡೆಗೆ ಗುದ್ದಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಈ ಘಟನೆ ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ನಂಜೆದೇವನಪುರ ಗ್ರಾಮದ 40 ವರ್ಷದ ರವಿ ಮೃತ ವ್ಯಕ್ತಿ. ಇದನ್ನೂ ಓದಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸರಣಿ ಸಾವು – ಮೃತ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ
- Advertisement -
ಇತ್ತ ಮುಂಬೈ ಪುಣೆ ಎಕ್ಸ್ಪ್ರೆಸ್ವೇನಲ್ಲಿ ಶನಿವಾರ ಡಿ.7) ಸಂಜೆ ಭಯಾನಕ ರಸ್ತೆ ಅಪಘಾತ ನಡೆದಿದೆ. ಪಾರ್ಕಿಂಗ್ ಮಾಡಿದ್ದ ಕಾರಿನ ಮೇಲೆ ಯಮದೂತ ಗೂಡ್ಸ್ ಲಾರಿ ಎರಗಿ ಬಂದಿದೆ. ಘಟನೆಯಲ್ಲಿ ಮೂರು ಕಾರುಗಳು ಜಖಂಗೊಂಡಿವೆ.
- Advertisement -
- Advertisement -
ಪ್ರಾಣ ಉಳಿಸಿಕೊಳ್ಳಲು ಜನ ದಿಕ್ಕೆಟ್ಟು ಓಡಿದ್ದಾರೆ. ಎರಡೂ ಘಟನಾವಳಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ನಕಲಿ ಅಡ್ರೆಸ್ ಕೊಟ್ಟು ಮಾದಕ ವಸ್ತು ಕೊರಿಯರ್ – 2 ತಿಂಗಳಾದ್ರೂ ಪತ್ತೆಯಾಗಿಲ್ಲ ವಿಳಾಸ