ವಾಕಿಂಗ್ ಮಾಡುವಾಗ ಹೃದಯಾಘಾತ – ನರ್ಸಿಂಗ್ ಹೋಮ್ ಮಾಲೀಕ ಸಾವು

Public TV
1 Min Read
Ramanagara Heart Attack copy 1

ರಾಮನಗರ: ವಾಕಿಂಗ್ (Walking) ಮಾಡುವಾಗ ಹೃದಯಾಘಾತಕ್ಕೆ (Heart Attack) ನರ್ಸಿಂಗ್ ಹೋಮ್ (Nursing Home) ಮಾಲೀಕನೋರ್ವ ಬಲಿಯಾಗಿರುವ ಘಟನೆ ಕನಕಪುರ (Kanakapura) ನಗರದಲ್ಲಿ ನಡೆದಿದೆ.

ಮಂಜುನಾಥ್ (50) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ಕನಕಪುರದ ಗಣೇಶ್ ನರ್ಸಿಂಗ್ ಹೋಮ್ ಹಾಗೂ ಗಣೇಶ್ ಮೆಡಿಕಲ್ ಮಾಲೀಕ ಮಂಜುನಾಥ್, ಇಂದು ಬೆಳಗ್ಗೆ ವಾಕಿಂಗ್‌ಗೆ ತೆರಳುವ ವೇಳೆ ಕುಸಿದುಬಿದ್ದಿದ್ದಾರೆ. ಕೂಡಲೇ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮಂಜುನಾಥ್ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಪೊಲೀಸರ ವಿರುದ್ಧ ಎಫ್‌ಐಆರ್‌ಗೆ ಶಿಫಾರಸು

ಕನಕಪುರ ತಾಲೂಕು ಗ್ರಾಹಕರ ವೇದಿಕೆ ಅಧ್ಯಕ್ಷ ಹಾಗೂ ಔಷಧಿ ಮಾರಾಟಗಾರರ ಸಂಘದ ಅಧ್ಯಕ್ಷರೂ ಆಗಿದ್ದ ಮಂಜುನಾಥ್ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ದುಪ್ಪಟ್ಟು ಹಣ ವಸೂಲಿ – ಒಂದೇ ವಾರದಲ್ಲಿ ಸಾವಿರಕ್ಕೂ ಹೆಚ್ಚು ಆಟೋ ಸೀಜ್

Share This Article